< صَمُوئِيلَ ٱلْأَوَّلُ 11 >
وَصَعِدَ نَاحَاشُ ٱلْعَمُّونِيُّ وَنَزَلَ عَلَى يَابِيشِ جِلْعَادَ. فَقَالَ جَمِيعُ أَهْلِ يَابِيشَ لِنَاحَاشَ: «ٱقْطَعْ لَنَا عَهْدًا فَنُسْتَعْبَدَ لَكَ». | ١ 1 |
೧ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
فَقَالَ لَهُمْ نَاحَاشُ ٱلْعَمُّونِيُّ: «بِهَذَا أَقْطَعُ لَكُمْ. بِتَقْوِيرِ كُلِّ عَيْنٍ يُمْنَى لَكُمْ وَجَعْلِ ذَلِكَ عَارًا عَلَى جَمِيعِ إِسْرَائِيلَ». | ٢ 2 |
೨ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.
فَقَالَ لَهُ شُيُوخُ يَابِيشَ: «ٱتْرُكْنَا سَبْعَةَ أَيَّامٍ فَنُرْسِلَ رُسُلًا إِلَى جَمِيعِ تُخُومِ إِسْرَائِيلَ. فَإِنْ لَمْ يُوجَدْ مَنْ يُخَلِّصُنَا نَخْرُجْ إِلَيْكَ». | ٣ 3 |
೩ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
فَجَاءَ ٱلرُّسُلُ إِلَى جِبْعَةِ شَاوُلَ وَتَكَلَّمُوا بِهَذَا ٱلْكَلَامِ فِي آذَانِ ٱلشَّعْبِ، فَرَفَعَ كُلُّ ٱلشَّعْبِ أَصْوَاتَهُمْ وَبَكَوْا. | ٤ 4 |
೪ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
وَإِذَا بِشَاوُلَ آتٍ وَرَاءَ ٱلْبَقَرِ مِنَ ٱلْحَقْلِ، فَقَالَ شَاوُلُ: «مَا بَالُ ٱلشَّعْبِ يَبْكُونَ؟» فَقَصُّوا عَلَيْهِ كَلَامَ أَهْلِ يَابِيشَ. | ٥ 5 |
೫ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
فَحَلَّ رُوحُ ٱللهِ عَلَى شَاوُلَ عِنْدَمَا سَمِعَ هَذَا ٱلْكَلَامَ وَحَمِيَ غَضَبُهُ جِدًّا. | ٦ 6 |
೬ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
فَأَخَذَ فَدَّانَ بَقَرٍ وَقَطَّعَهُ، وَأَرْسَلَ إِلَى كُلِّ تُخُومِ إِسْرَائِيلَ بِيَدِ ٱلرُّسُلِ قَائِلًا: «مَنْ لَا يَخْرُجُ وَرَاءَ شَاوُلَ وَوَرَاءَ صَمُوئِيلَ، فَهَكَذَا يُفْعَلُ بِبَقَرِهِ». فَوَقَعَ رُعْبُ ٱلرَّبِّ عَلَى ٱلشَّعْبِ، فَخَرَجُوا كَرَجُلٍ وَاحِدٍ. | ٧ 7 |
೭ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.
وَعَدَّهُمْ فِي بَازَقَ، فَكَانَ بَنُو إِسْرَائِيلَ ثَلَاثَ مِئَةِ أَلْفٍ، وَرِجَالُ يَهُوذَا ثَلَاثِينَ أَلْفًا. | ٨ 8 |
೮ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
وَقَالُوا لِلرُّسُلِ ٱلَّذِينَ جَاءُوا: «هَكَذَا تَقُولُونَ لِأَهْلِ يَابِيشَ جِلْعَادَ: غَدًا عِنْدَمَا تَحْمَى ٱلشَّمْسُ يَكُونُ لَكُمْ خَلَاصٌ». فَأَتَى ٱلرُّسُلُ وَأَخْبَرُوا أَهْلَ يَابِيشَ فَفَرِحُوا. | ٩ 9 |
೯ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
وَقَالَ أَهْلُ يَابِيشَ: «غَدًا نَخْرُجُ إِلَيْكُمْ فَتَفْعَلُونَ بِنَا حَسَبَ كُلِّ مَا يَحْسُنُ فِي أَعْيُنِكُمْ». | ١٠ 10 |
೧೦ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
وَكَانَ فِي ٱلْغَدِ أَنَّ شَاوُلَ جَعَلَ ٱلشَّعْبَ ثَلَاثَ فِرَقٍ، وَدَخَلُوا فِي وَسَطِ ٱلْمَحَلَّةِ عِنْدَ سَحَرِ ٱلصُّبْحِ وَضَرَبُوا ٱلْعَمُّونِيِّينَ حَتَّى حَمِيَ ٱلنَّهَارُ. وَٱلَّذِينَ بَقُوا تَشَتَّتُوا حَتَّى لَمْ يَبْقَ مِنْهُمُ ٱثْنَانِ مَعًا. | ١١ 11 |
೧೧ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
وَقَالَ ٱلشَّعْبُ لِصَمُوئِيلَ: «مَنْ هُمُ ٱلَّذِينَ يَقُولُونَ: هَلْ شَاوُلُ يَمْلِكُ عَلَيْنَا؟ اِيْتُوا بِٱلرِّجَالِ فَنَقْتُلَهُمْ». | ١٢ 12 |
೧೨ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
فَقَالَ شَاوُلُ: «لَا يُقْتَلْ أَحَدٌ فِي هَذَا ٱلْيَوْمِ، لِأَنَّهُ فِي هَذَا ٱلْيَوْمِ صَنَعَ ٱلرَّبُّ خَلَاصًا فِي إِسْرَائِيلَ». | ١٣ 13 |
೧೩ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
وَقَالَ صَمُوئِيلُ لِلشَّعْبِ: «هَلُمُّوا نَذْهَبْ إِلَى ٱلْجِلْجَالِ وَنُجَدِّدْ هُنَاكَ ٱلْمَمْلَكَةَ». | ١٤ 14 |
೧೪ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು
فَذَهَبَ كُلُّ ٱلشَّعْبِ إِلَى ٱلْجِلْجَالِ وَمَلَّكُوا هُنَاكَ شَاوُلَ أَمَامَ ٱلرَّبِّ فِي ٱلْجِلْجَالِ، وَذَبَحُوا هُنَاكَ ذَبَائِحَ سَلَامَةٍ أَمَامَ ٱلرَّبِّ. وَفَرِحَ هُنَاكَ شَاوُلُ وَجَمِيعُ رِجَالِ إِسْرَائِيلَ جِدًّا. | ١٥ 15 |
೧೫ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.