< ٢ أخبار 14 >
ثُمَّ ٱضْطَجَعَ أَبِيَّا مَعَ آبَائِهِ فَدَفَنُوهُ فِي مَدِينَةِ دَاوُدَ، وَمَلَكَ آسَا ٱبْنُهُ عِوَضًا عَنْهُ. فِي أَيَّامِهِ ٱسْتَرَاحَتِ ٱلْأَرْضُ عَشَرَ سِنِينَ. | ١ 1 |
ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.
وَعَمِلَ آسَا مَا هُوَ صَالِحٌ وَمُسْتَقِيمٌ فِي عَيْنَيِ ٱلرَّبِّ إِلَهِهِ. | ٢ 2 |
ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು.
وَنَزَعَ ٱلْمَذَابِحَ ٱلْغَرِيبَةَ وَٱلْمُرْتَفَعَاتِ، وَكَسَّرَ ٱلتَّمَاثِيلَ وَقَطَّعَ ٱلسَّوَارِيَ، | ٣ 3 |
ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.
وَقَالَ لِيَهُوذَا أَنْ يَطْلُبُوا ٱلرَّبَّ إِلَهَ آبَائِهِمْ وَأَنْ يَعْمَلُوا حَسَبَ ٱلشَّرِيعَةِ وَٱلْوَصِيَّةِ. | ٤ 4 |
ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು.
وَنَزَعَ مِنْ كُلِّ مُدُنِ يَهُوذَا ٱلْمُرْتَفَعَاتِ وَتَمَاثِيلَ ٱلشَّمْسِ، وَٱسْتَرَاحَتِ ٱلْمَمْلَكَةُ أَمَامَهُ. | ٥ 5 |
ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.
وَبَنَى مُدُنًا حَصِينَةً فِي يَهُوذَا لِأَنَّ ٱلْأَرْضَ ٱسْتَرَاحَتْ وَلَمْ تَكُنْ عَلَيْهِ حَرْبٌ فِي تِلْكَ ٱلسِّنِينَ، لِأَنَّ ٱلرَّبَّ أَرَاحَهُ. | ٦ 6 |
ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
وَقَالَ لِيَهُوذَا: «لِنَبْنِ هَذِهِ ٱلْمُدُنَ وَنُحَوِّطْهَا بِأَسْوَارٍ وَأَبْرَاجٍ وَأَبْوَابٍ وَعَوَارِضَ مَا دَامَتِ ٱلْأَرْضُ أَمَامَنَا، لِأَنَّنَا قَدْ طَلَبْنَا ٱلرَّبَّ إِلَهَنَا. طَلَبْنَاهُ فَأَرَاحَنَا مِنْ كُلِّ جِهَةٍ». فَبَنَوْا وَنَجَحُوا. | ٧ 7 |
ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.
وَكَانَ لِآسَا جَيْشٌ يَحْمِلُونَ أَتْرَاسًا وَرِمَاحًا مِنْ يَهُوذَا، ثَلَاثُ مِئَةِ أَلْفٍ، وَمِنْ بَنْيَامِينَ مِنَ ٱلَّذِينَ يَحْمِلُونَ ٱلْأَتْرَاسَ وَيَشُدُّونَ ٱلْقِسِيَّ مِئَتَانِ وَثَمَانُونَ أَلْفًا. كُلُّ هَؤُلَاءِ جَبَابِرَةُ بَأْسٍ. | ٨ 8 |
ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.
فَخَرَجَ إِلَيْهِمْ زَارَحُ ٱلْكُوشِيُّ بِجَيْشٍ أَلْفِ أَلْفٍ، وَبِمَرْكَبَاتٍ ثَلَاثِ مِئَةٍ، وَأَتَى إِلَى مَرِيشَةَ. | ٩ 9 |
ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.
وَخَرَجَ آسَا لِلِقَائِهِ وَٱصْطَفُّوا لِلْقِتَالِ فِي وَادِي صَفَاتَةَ عِنْدَ مَرِيشَةَ. | ١٠ 10 |
ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
وَدَعَا آسَا ٱلرَّبَّ إِلَهَهُ وَقَالَ: «أَيُّهَا ٱلرَّبُّ، لَيْسَ فَرْقًا عِنْدَكَ أَنْ تُسَاعِدَ ٱلْكَثِيرِينَ وَمَنْ لَيْسَ لَهُمْ قُوَّةٌ. فَسَاعِدْنَا أَيُّهَا ٱلرَّبُّ إِلَهُنَا لِأَنَّنَا عَلَيْكَ ٱتَّكَلْنَا وَبِٱسْمِكَ قَدُمْنَا عَلَى هَذَا ٱلْجَيْشِ. أَيُّهَا ٱلرَّبُّ أَنْتَ إِلَهُنَا. لَا يَقْوَ عَلَيْكَ إِنْسَانٌ». | ١١ 11 |
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.
فَضَرَبَ ٱلرَّبُّ ٱلْكُوشِيِّينَ أَمَامَ آسَا وَأَمَامَ يَهُوذَا، فَهَرَبَ ٱلْكُوشِيُّونَ. | ١٢ 12 |
ಆಗ ಯೆಹೋವ ದೇವರು ಕೂಷ್ಯರನ್ನು ಆಸನ ಮುಂದೆಯೂ, ಯೆಹೂದದವರ ಮುಂದೆಯೂ ಸೋಲುವಂತೆ ಮಾಡಿದರು. ಆದ್ದರಿಂದ ಕೂಷ್ಯರು ಓಡಿಹೋದರು.
وَطَرَدَهُمْ آسَا وَٱلشَّعْبُ ٱلَّذِي مَعَهُ إِلَى جَرَارَ، وَسَقَطَ مِنَ ٱلْكُوشِيِّينَ حَتَّى لَمْ يَكُنْ لَهُمْ حَيٌّ لِأَنَّهُمُ ٱنْكَسَرُوا أَمَامَ ٱلرَّبِّ وَأَمَامَ جَيْشِهِ. فَحَمَلُوا غَنِيمَةً كَثِيرَةً جِدًّا. | ١٣ 13 |
ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.
وَضَرَبُوا جَمِيعَ ٱلْمُدُنِ ٱلَّتِي حَوْلَ جَرَارَ، لِأَنَّ رُعْبَ ٱلرَّبِّ كَانَ عَلَيْهِمْ، وَنَهَبُوا كُلَّ ٱلْمُدُنِ لِأَنَّهُ كَانَ فِيهَا نَهْبٌ كَثِيرٌ. | ١٤ 14 |
ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.
وَضَرَبُوا أَيْضًا خِيَامَ ٱلْمَاشِيَةِ وَسَاقُوا غَنَمًا كَثِيرًا وَجِمَالًا، ثُمَّ رَجَعُوا إِلَى أُورُشَلِيمَ. | ١٥ 15 |
ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.