< صَمُوئِيلَ ٱلثَّانِي 18 >
وَأَحْصَى دَاوُدُ ٱلشَّعْبَ ٱلَّذِي مَعَهُ، وَجَعَلَ عَلَيْهِمْ رُؤَسَاءَ أُلُوفٍ وَرُؤَسَاءَ مِئَاتٍ. | ١ 1 |
೧ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.
وَأَرْسَلَ دَاوُدُ ٱلشَّعْبَ ثُلْثًا بِيَدِ يُوآبَ، وَثُلْثًا بِيَدِ أَبِيشَايَ ٱبْنِ صَرُويَةَ أَخِي يُوآبَ، وَثُلْثًا بِيَدِ إِتَّايَ ٱلْجَتِّيِّ. وَقَالَ ٱلْمَلِكُ لِلشَّعْبِ: «إِنِّي أَنَا أَيْضًا أَخْرُجُ مَعَكُمْ». | ٢ 2 |
೨ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.
فَقَالَ ٱلشَّعْبُ: «لَا تَخْرُجْ، لِأَنَّنَا إِذَا هَرَبْنَا لَا يُبَالُونَ بِنَا، وَإِذَا مَاتَ نِصْفُنَا لَا يُبَالُونَ بِنَا. وَٱلْآنَ أَنْتَ كَعَشْرَةِ آلَافٍ مِنَّا. وَٱلْآنَ ٱلْأَصْلَحُ أَنْ تَكُونَ لَنَا نَجْدَةً مِنَ ٱلْمَدِينَةِ». | ٣ 3 |
೩ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
فَقَالَ لَهُمُ ٱلْمَلِكُ: «مَا يَحْسُنُ فِي أَعْيُنِكُمْ أَفْعَلُهُ». فَوَقَفَ ٱلْمَلِكُ بِجَانِبِ ٱلْبَابِ وَخَرَجَ جَمِيعُ ٱلشَّعْبِ مِئَاتٍ وَأُلُوفًا. | ٤ 4 |
೪ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
وَأَوْصَى ٱلْمَلِكُ يُوآبَ وَأَبِيشَايَ وَإِتَّايَ قَائِلًا: «تَرَفَّقُوا لِي بِٱلْفَتَى أَبْشَالُومَ». وَسَمِعَ جَمِيعُ ٱلشَّعْبِ حِينَ أَوْصَى ٱلْمَلِكُ جَمِيعَ ٱلرُّؤَسَاءِ بِأَبْشَالُومَ. | ٥ 5 |
೫ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
وَخَرَجَ ٱلشَّعْبُ إِلَى ٱلْحَقْلِ لِلِقَاءِ إِسْرَائِيلَ. وَكَانَ ٱلْقِتَالُ فِي وَعْرِ أَفْرَايِمَ، | ٦ 6 |
೬ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.
فَٱنْكَسَرَ هُنَاكَ شَعْبُ إِسْرَائِيلَ أَمَامَ عَبِيدِ دَاوُدَ، وَكَانَتْ هُنَاكَ مَقْتَلَةٌ عَظِيمَةٌ فِي ذَلِكَ ٱلْيَوْمِ. قُتِلَ عِشْرُونَ أَلْفًا. | ٧ 7 |
೭ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.
وَكَانَ ٱلْقِتَالُ هُنَاكَ مُنْتَشِرًا عَلَى وَجْهِ كُلِّ ٱلْأَرْضِ، وَزَادَ ٱلَّذِينَ أَكَلَهُمُ ٱلْوَعْرُ مِنَ ٱلشَّعْبِ عَلَى ٱلَّذِينَ أَكَلَهُمُ ٱلسَّيْفُ فِي ذَلِكَ ٱلْيَوْمِ. | ٨ 8 |
೮ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
وَصَادَفَ أَبْشَالُومُ عَبِيدَ دَاوُدَ، وَكَانَ أَبْشَالُومُ رَاكِبًا عَلَى بَغْلٍ، فَدَخَلَ ٱلْبَغْلُ تَحْتَ أَغْصَانِ ٱلْبُطْمَةِ ٱلْعَظِيمَةِ ٱلْمُلْتَفَّةِ، فَتَعَلَّقَ رَأْسُهُ بِٱلْبُطْمَةِ وَعُلِّقَ بَيْنَ ٱلسَّمَاءِ وَٱلْأَرْضِ، وَٱلْبَغْلُ ٱلَّذِي تَحْتَهُ مَرَّ. | ٩ 9 |
೯ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.
فَرَآهُ رَجُلٌ وَأَخْبَرَ يُوآبَ وَقَالَ: «إِنِّي قَدْ رَأَيْتُ أَبْشَالُومَ مُعَلَّقًا بِٱلْبُطْمَةِ». | ١٠ 10 |
೧೦ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.
فَقَالَ يُوآبُ لِلرَّجُلِ ٱلَّذِي أَخْبَرَهُ: «إِنَّكَ قَدْ رَأَيْتَهُ، فَلِمَاذَا لَمْ تَضْرِبْهُ هُنَاكَ إِلَى ٱلْأَرْضِ؟ وَعَلَيَّ أَنْ أُعْطِيَكَ عَشْرَةَ مِنَ ٱلْفِضَّةِ وَمِنْطَقَةً». | ١١ 11 |
೧೧ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.
فَقَالَ ٱلرَّجُلُ لِيُوآبَ: «فَلَوْ وُزِنَ فِي يَدِي أَلْفٌ مِنَ ٱلْفِضَّةِ لَمَا كُنْتُ أَمُدُّ يَدِي إِلَى ٱبْنِ ٱلْمَلِكِ، لِأَنَّ ٱلْمَلِكَ أَوْصَاكَ فِي آذَانِنَا أَنْتَ وَأَبِيشَايَ وَإِتَّايَ قَائِلًا: ٱحْتَرِزُوا أَيًّا كَانَ مِنْكُمْ عَلَى ٱلْفَتَى أَبْشَالُومَ. | ١٢ 12 |
೧೨ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?
وَإِلَّا فَكُنْتُ فَعَلْتُ بِنَفْسِي زُورًا، إِذْ لَا يَخْفَى عَنِ ٱلْمَلِكِ شَيْءٌ، وأَنْتَ كُنْتَ وَقَفْتَ ضِدِّي». | ١٣ 13 |
೧೩ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು.
فَقَالَ يُوآبُ: «إِنِّي لَا أَصْبِرُ هَكَذَا أَمَامَكَ». فَأَخَذَ ثَلَاثَةَ سِهَامٍ بِيَدِهِ وَنَشَّبَهَا فِي قَلْبِ أَبْشَالُومَ، وَهُوَ بَعْدُ حَيٌّ فِي قَلْبِ ٱلْبُطْمَةِ. | ١٤ 14 |
೧೪ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ
وَأَحَاطَ بِهَا عَشْرَةُ غِلْمَانٍ حَامِلُو سِلَاحِ يُوآبَ، وَضَرَبُوا أَبْشَالُومَ وَأَمَاتُوهُ. | ١٥ 15 |
೧೫ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.
وَضَرَبَ يُوآبُ بِٱلْبُوقِ فَرَجَعَ ٱلشَّعْبُ عَنِ ٱتِّبَاعِ إِسْرَائِيلَ، لِأَنَّ يُوآبَ مَنَعَ ٱلشَّعْبَ. | ١٦ 16 |
೧೬ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.
وَأَخَذُوا أَبْشَالُومَ وَطَرَحُوهُ فِي ٱلْوَعْرِ فِي ٱلْجُبِّ ٱلْعَظِيمِ، وَأَقَامُوا عَلَيْهِ رُجْمَةً عَظِيمَةً جِدًّا مِنَ ٱلْحِجَارَةِ. وَهَرَبَ كُلُّ إِسْرَائِيلَ، كُلُّ وَاحِدٍ إِلَى خَيْمَتِهِ. | ١٧ 17 |
೧೭ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
وَكَانَ أَبْشَالُومُ قَدْ أَخَذَ وَأَقَامَ لِنَفْسِهِ وَهُوَ حَيٌّ ٱلنُّصْبَ ٱلَّذِي فِي وَادِي ٱلْمَلِكِ، لِأَنَّهُ قَالَ: «لَيْسَ لِيَ ٱبْنٌ لِأَجْلِ تَذْكِيرِ ٱسْمِي». وَدَعَا ٱلنُّصْبَ بِٱسْمِهِ، وَهُوَ يُدْعَى «يَدَ أَبْشَالُومَ» إِلَى هَذَا ٱلْيَوْمِ. | ١٨ 18 |
೧೮ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.
وَقَالَ أَخِيمَعَصُ بْنُ صَادُوقَ: «دَعْنِي أَجْرِ فَأُبَشِّرَ ٱلْمَلِكَ، لِأَنَّ ٱللهَ قَدِ ٱنْتَقَمَ لَهُ مِنْ أَعْدَائِهِ». | ١٩ 19 |
೧೯ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.
فَقَالَ لَهُ يُوآبُ: «مَا أَنْتَ صَاحِبُ بِشَارَةٍ فِي هَذَا ٱلْيَوْمِ. فِي يَوْمٍ آخَرَ تُبَشِّرُ، وَهَذَا ٱلْيَوْمَ لَا تُبَشِّرُ مِنْ أَجْلِ أَنَّ ٱبْنَ ٱلْمَلِكِ قَدْ مَاتَ». | ٢٠ 20 |
೨೦ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.
وَقَالَ يُوآبُ لِكُوشِي: «ٱذْهَبْ وَأَخْبِرِ ٱلْمَلِكَ بِمَا رَأَيْتَ». فَسَجَدَ كُوشِي لِيُوآبَ وَرَكَضَ. | ٢١ 21 |
೨೧ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.
وَعَادَ أَيْضًا أَخِيمَعَصُ بْنُ صَادُوقَ فَقَالَ لِيُوآبَ: «مَهْمَا كَانَ، فَدَعْنِي أَجْرِ أَنَا أَيْضًا وَرَاءَ كُوشِي». فَقَالَ يُوآبُ: «لِمَاذَا تَجْرِي أَنْتَ يَا ٱبْنِي، وَلَيْسَ لَكَ بِشَارَةٌ تُجَازَى؟» | ٢٢ 22 |
೨೨ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, “ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು” ಎಂದು ಬೇಡಿಕೊಂಡನು. ಅದಕ್ಕೆ ಅವನು, “ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ” ಎಂದನು.
قَالَ: «مَهْمَا كَانَ أَجْرِي». فَقَالَ لَهُ: «ٱجْرِ». فَجَرَى أَخِيمَعَصُ فِي طَرِيقِ ٱلْغَوْرِ وَسَبَقَ كُوشِيَ. | ٢٣ 23 |
೨೩ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.
وَكَانَ دَاوُدُ جَالِسًا بَيْنَ ٱلْبَابَيْنِ، وَطَلَعَ ٱلرَّقِيبُ إِلَى سَطْحِ ٱلْبَابِ إِلَى ٱلسُّورِ وَرَفَعَ عَيْنَيْهِ وَنَظَرَ وَإِذَا بِرَجُلٍ يَجْرِي وَحْدَهُ. | ٢٤ 24 |
೨೪ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.
فَنَادَى ٱلرَّقِيبُ وَأَخْبَرَ ٱلْمَلِكَ. فَقَالَ ٱلْمَلِكُ: «إِنْ كَانَ وَحْدَهُ فَفِي فَمِهِ بِشَارَةٌ». وَكَانَ يَسْعَى وَيَقْرُبُ. | ٢٥ 25 |
೨೫ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.
ثُمَّ رَأَى ٱلرَّقِيبُ رَجُلًا آخَرَ يَجْرِي، فَنَادَى ٱلرَّقِيبُ ٱلْبَوَّابَ وَقَالَ: «هُوَذَا رَجُلٌ يَجْرِي وَحْدَهُ». فَقَالَ ٱلْمَلِكُ: «وَهَذَا أَيْضًا مُبَشِّرٌ». | ٢٦ 26 |
೨೬ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು.
وَقَالَ ٱلرَّقِيبُ: «إِنِّي أَرَى جَرْيَ ٱلْأَوَّلِ كَجَرْيِ أَخِيمَعَصَ بْنِ صَادُوقَ». فَقَالَ ٱلْمَلِكُ: «هَذَا رَجُلٌ صَالِحٌ وَيَأْتِي بِبِشَارَةٍ صَالِحَةٍ». | ٢٧ 27 |
೨೭ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.
فَنَادَى أَخِيمَعَصُ وَقَالَ لِلْمَلِكِ: «ٱلسَّلَامُ». وَسَجَدَ لِلْمَلِكِ عَلَى وَجْهِهِ إِلَى ٱلْأَرْضِ. وَقَالَ: «مُبَارَكٌ ٱلرَّبُّ إِلَهُكَ ٱلَّذِي دَفَعَ ٱلْقَوْمَ ٱلَّذِينَ رَفَعُوا أَيْدِيَهُمْ عَلَى سَيِّدِي ٱلْمَلِكِ». | ٢٨ 28 |
೨೮ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.
فَقَالَ ٱلْمَلِكُ: «أَسَلَامٌ لِلْفَتَى أَبْشَالُومَ؟» فَقَالَ أَخِيمَعَصُ: «قَدْ رَأَيْتُ جُمْهُورًا عَظِيمًا عِنْدَ إِرْسَالِ يُوآبَ عَبْدَ ٱلْمَلِكِ وَعَبْدَكَ، وَلَمْ أَعْلَمْ مَاذَا». | ٢٩ 29 |
೨೯ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.
فَقَالَ ٱلْمَلِكُ: «دُرْ وَقِفْ هَهُنَا». فَدَارَ وَوَقَفَ. | ٣٠ 30 |
೩೦ಆಗ ಅರಸನು ಅವನಿಗೆ, “ನೀನು ಇತ್ತ ನಿಲ್ಲು” ಎಂದು ಆಜ್ಞಾಪಿಸಿದನು. ಅವನು ನಿಂತನು.
وَإِذَا بِكُوشِي قَدْ أَتَى، وَقَالَ كُوشِي: «لِيُبَشَّرْ سَيِّدِي ٱلْمَلِكُ، لِأَنَّ ٱلرَّبَّ قَدِ ٱنْتَقَمَ لَكَ ٱلْيَوْمَ مِنْ جَمِيعِ ٱلْقَائِمِينَ عَلَيْكَ». | ٣١ 31 |
೩೧ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.
فَقَالَ ٱلْمَلِكُ لِكُوشِي: «أَسَلَامٌ لِلْفَتَى أَبْشَالُومَ؟» فَقَالَ كُوشِي: «لِيَكُنْ كَٱلْفَتَى أَعْدَاءُ سَيِّدِي ٱلْمَلِكِ وَجَمِيعُ ٱلَّذِينَ قَامُوا عَلَيْكَ لِلشَّرِّ». | ٣٢ 32 |
೩೨ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.
فَٱنْزَعَجَ ٱلْمَلِكُ وَصَعِدَ إِلَى عِلِّيَّةِ ٱلْبَابِ وَكَانَ يَبْكِي وَيَقُولُ هكَذَا وَهُوَ يَتَمَشَّى: «يَا ٱبْنِي أَبْشَالُومُ، يَا ٱبْنِي، يَا ٱبْنِي أَبْشَالُومُ! يَالَيْتَنِي مُتُّ عِوَضًا عَنْكَ! يَا أَبْشَالُومُ ٱبْنِي، يَا ٱبْنِي». | ٣٣ 33 |
೩೩ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.