< أعمال 21 >

وَلَمَّا ٱنْفَصَلْنَا عَنْهُمْ أَقْلَعْنَا وَجِئْنَا مُتَوَجِّهِينَ بِٱلِٱسْتِقَامَةِ إِلَى كُوسَ، وَفِي ٱلْيَوْمِ ٱلتَّالِي إِلَى رُودُسَ، وَمِنْ هُنَاكَ إِلَى بَاتَرَا. ١ 1
ನಾವು ಅವರನ್ನು ಅಗಲಿದ ನಂತರ, ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ ನೇರವಾಗಿ ಕೋಸ್ ದ್ವೀಪಕ್ಕೆ ಹೋದೆವು. ಮರುದಿನ ರೋದ ಎಂಬಲ್ಲಿಗೆ ಹೋಗಿ ಅಲ್ಲಿಂದ ಪತರಕ್ಕೆ ಬಂದೆವು.
فَإِذْ وَجَدْنَا سَفِينَةً عَابِرَةً إِلَى فِينِيقِيَةَ صَعِدْنَا إِلَيْهَا وَأَقْلَعْنَا. ٢ 2
ಅಲ್ಲಿ ಫೊಯಿನಿಕೆಗೆ ಹೋಗುವ ನೌಕೆಯನ್ನು ಕಂಡು, ಅದನ್ನೇರಿ ಪ್ರಯಾಣ ಮುಂದುವರಿಸಿದೆವು.
ثُمَّ ٱطَّلَعْنَا عَلَى قُبْرُسَ، وَتَرَكْنَاهَا يَسْرَةً وَسَافَرْنَا إِلَى سُورِيَّةَ، وَأَقْبَلْنَا إِلَى صُورَ، لِأَنَّ هُنَاكَ كَانَتِ ٱلسَّفِينَةُ تَضَعُ وَسْقَهَا. ٣ 3
ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.
وَإِذْ وَجَدْنَا ٱلتَّلَامِيذَ مَكَثْنَا هُنَاكَ سَبْعَةَ أَيَّامٍ. وَكَانُوا يَقُولُونَ لِبُولُسَ بِٱلرُّوحِ أَنْ لَا يَصْعَدَ إِلَى أُورُشَلِيمَ. ٤ 4
ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಅವರೊಂದಿಗೆ ಏಳು ದಿನ ಇದ್ದೆವು. ಪೌಲನು ಯೆರೂಸಲೇಮಿಗೆ ಹೋಗಬಾರದೆಂದು ಅವರು ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದರು.
وَلَكِنْ لَمَّا ٱسْتَكْمَلْنَا ٱلْأَيَّامَ خَرَجْنَا ذَاهِبِينَ، وَهُمْ جَمِيعًا يُشَيِّعُونَنَا، مَعَ ٱلنِّسَاءِ وَٱلْأَوْلَادِ إِلَى خَارِجِ ٱلْمَدِينَةِ. فَجَثَوْنَا عَلَى رُكَبِنَا عَلَى ٱلشَّاطِئِ وَصَلَّيْنَا. ٥ 5
ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
وَلَمَّا وَدَّعْنَا بَعْضُنَا بَعْضًا صَعِدْنَا إِلَى ٱلسَّفِينَةِ. وَأَمَّا هُمْ فَرَجَعُوا إِلَى خَاصَّتِهِمْ. ٦ 6
ಪರಸ್ಪರ ಬೀಳ್ಕೊಡುಗೆಯಾದ ನಂತರ, ನಾವು ನೌಕೆಯನ್ನೇರಿದೆವು. ಅವರು ತಮ್ಮ ಮನೆಗೆ ಹೊರಟು ಹೋದರು.
وَلَمَّا أَكْمَلْنَا ٱلسَّفَرَ فِي ٱلْبَحْرِ مِنْ صُورَ، أَقْبَلْنَا إِلَى بُتُولِمَايِسَ، فَسَلَّمْنَا عَلَى ٱلْإِخْوَةِ وَمَكَثْنَا عِنْدَهُمْ يَوْمًا وَاحِدًا. ٧ 7
ಟೈರ್ ಪಟ್ಟಣದಿಂದ ನಮ್ಮ ಪ್ರಯಾಣ ಮುಂದುವರಿಸಿ ಪ್ತೊಲೆಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿಯ ಸಹೋದರರನ್ನು ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.
ثُمَّ خَرَجْنَا فِي ٱلْغَدِ نَحْنُ رُفَقَاءَ بُولُسَ وَجِئْنَا إِلَى قَيْصَرِيَّةَ، فَدَخَلْنَا بَيْتَ فِيلُبُّسَ ٱلْمُبَشِّرِ، إِذْ كَانَ وَاحِدًا مِنَ ٱلسَّبْعَةِ وَأَقَمْنَا عِنْدَهُ. ٨ 8
ಮರುದಿನ ಹೊರಟು ಕೈಸರೈಯ ಪಟ್ಟಣವನ್ನು ತಲುಪಿದೆವು. ಅಲ್ಲಿ ಏಳು ಜನರಲ್ಲಿ ಒಬ್ಬನಾದ, ಫಿಲಿಪ್ಪನೆಂಬ ಸುವಾರ್ತಿಕನ ಮನೆಯಲ್ಲಿ ತಂಗಿದೆವು.
وَكَانَ لِهَذَا أَرْبَعُ بَنَاتٍ عَذَارَى كُنَّ يَتَنَبَّأْنَ. ٩ 9
ಅವನಿಗೆ ಅವಿವಾಹಿತರಾದ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಪ್ರವಾದಿಸುವವರಾಗಿದ್ದರು.
وَبَيْنَمَا نَحْنُ مُقِيمُونَ أَيَّامًا كَثِيرَةً، ٱنْحَدَرَ مِنَ ٱلْيَهُودِيَّةِ نَبِيٌّ ٱسْمُهُ أَغَابُوسُ. ١٠ 10
ನಾವು ಅಲ್ಲಿ ಕೆಲವು ದಿನ ಇದ್ದ ತರುವಾಯ, ಅಗಬ ಎಂಬ ಹೆಸರಿನ ಪ್ರವಾದಿ ಯೂದಾಯದಿಂದ ಬಂದನು.
فَجَاءَ إِلَيْنَا، وَأَخَذَ مِنْطَقَةَ بُولُسَ، وَرَبَطَ يَدَيْ نَفْسِهِ وَرِجْلَيْهِ وَقَالَ: «هَذَا يَقُولُهُ ٱلرُّوحُ ٱلْقُدُسُ: ٱلرَّجُلُ ٱلَّذِي لَهُ هَذِهِ ٱلْمِنْطَقَةُ، هَكَذَا سَيَرْبُطُهُ ٱلْيَهُودُ فِي أُورُشَلِيمَ وَيُسَلِّمُونَهُ إِلَى أَيْدِي ٱلْأُمَمِ». ١١ 11
ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’” ಎಂದನು.
فَلَمَّا سَمِعْنَا هَذَا طَلَبْنَا إِلَيْهِ نَحْنُ وَٱلَّذِينَ مِنَ ٱلْمَكَانِ أَنْ لَا يَصْعَدَ إِلَى أُورُشَلِيمَ. ١٢ 12
ಇದನ್ನು ನಾವು ಕೇಳಿದಾಗ, ನಾವೂ ಅಲ್ಲಿಯ ಜನರೂ ಯೆರೂಸಲೇಮಿಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು.
فَأَجَابَ بُولُسُ: «مَاذَا تَفْعَلُونَ؟ تَبْكُونَ وَتَكْسِرُونَ قَلْبِي، لِأَنِّي مُسْتَعِدٌّ لَيْسَ أَنْ أُرْبَطَ فَقَطْ، بَلْ أَنْ أَمُوتَ أَيْضًا فِي أُورُشَلِيمَ لِأَجْلِ ٱسْمِ ٱلرَّبِّ يَسُوعَ». ١٣ 13
ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.
وَلَمَّا لَمْ يُقْنَعْ سَكَتْنَا قَائِلِينَ: «لِتَكُنْ مَشِيئَةُ ٱلرَّبِّ». ١٤ 14
ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.
وَبَعْدَ تِلْكَ ٱلْأَيَّامِ تَأَهَّبْنَا وَصَعِدْنَا إِلَى أُورُشَلِيمَ. ١٥ 15
ಇದಾದನಂತರ ನಾವು ಸಿದ್ಧರಾಗಿ ಯೆರೂಸಲೇಮಿಗೆ ಹೋದೆವು.
وَجَاءَ أَيْضًا مَعَنَا مِنْ قَيْصَرِيَّةَ أُنَاسٌ مِنَ ٱلتَّلَامِيذِ ذَاهِبِينَ بِنَا إِلَى مَنَاسُونَ، وَهُوَ رَجُلٌ قُبْرُسِيٌّ، تِلْمِيذٌ قَدِيمٌ، لِنَنْزِلَ عِنْدَهُ. ١٦ 16
ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು.
وَلَمَّا وَصَلْنَا إِلَى أُورُشَلِيمَ قَبِلَنَا ٱلْإِخْوَةُ بِفَرَحٍ. ١٧ 17
ನಾವು ಯೆರೂಸಲೇಮನ್ನು ತಲುಪಿದಾಗ, ಸಹೋದರರು ನಮ್ಮನ್ನು ಸಂತೋಷದಿಂದ ಸ್ವೀಕರಿಸಿದರು.
وَفِي ٱلْغَدِ دَخَلَ بُولُسُ مَعَنَا إِلَى يَعْقُوبَ، وَحَضَرَ جَمِيعُ ٱلْمَشَايِخِ. ١٨ 18
ಮರುದಿನ ನಾವೆಲ್ಲರೂ ಪೌಲನೊಂದಿಗೆ ಯಾಕೋಬನನ್ನು ನೋಡಲು ಹೋದೆವು. ಅಲ್ಲಿ ಎಲ್ಲಾ ಸಭೆಹಿರಿಯರೂ ಇದ್ದರು.
فَبَعْدَ مَا سَلَّمَ عَلَيْهِمْ طَفِقَ يُحَدِّثُهُمْ شَيْئًا فَشَيْئًا بِكُلِّ مَا فَعَلَهُ ٱللهُ بَيْنَ ٱلْأُمَمِ بِوَاسِطَةِ خِدْمَتِهِ. ١٩ 19
ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.
فَلَمَّا سَمِعُوا كَانُوا يُمَجِّدُونَ ٱلرَّبَّ. وَقَالُوا لَهُ: «أَنْتَ تَرَى أَيُّهَا ٱلْأَخُ كَمْ يُوجَدُ رَبْوَةً مِنَ ٱلْيَهُودِ ٱلَّذِينَ آمَنُوا، وَهُمْ جَمِيعًا غَيُورُونَ لِلنَّامُوسِ. ٢٠ 20
ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.
وَقَدْ أُخْبِرُوا عَنْكَ أَنَّكَ تُعَلِّمُ جَمِيعَ ٱلْيَهُودِ ٱلَّذِينَ بَيْنَ ٱلْأُمَمِ ٱلِٱرْتِدَادَ عَنْ مُوسَى، قَائِلًا: أَنْ لَا يَخْتِنُوا أَوْلَادَهُمْ وَلَا يَسْلُكُوا حَسَبَ ٱلْعَوَائِدِ. ٢١ 21
ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.
فَإِذًا مَاذَا يَكُونُ؟ لَا بُدَّ عَلَى كُلِّ حَالٍ أَنْ يَجْتَمِعَ ٱلْجُمْهُورُ، لِأَنَّهُمْ سَيَسْمَعُونَ أَنَّكَ قَدْ جِئْتَ. ٢٢ 22
ಹೀಗಿರುವಲ್ಲಿ ನಾವೇನು ಮಾಡೋಣ? ನೀನು ಇಲ್ಲಿಗೆ ಬಂದಿರುವ ವಿಷಯವೂ ಅವರಿಗೆ ಗೊತ್ತಾಗುವುದು.
فَٱفْعَلْ هَذَا ٱلَّذِي نَقُولُ لَكَ: عِنْدَنَا أَرْبَعَةُ رِجَالٍ عَلَيْهِمْ نَذْرٌ. ٢٣ 23
ಆದ್ದರಿಂದ ನಾವು ನಿನಗೆ ಹೇಳುವಂತೆ ಮಾಡು, ಹರಕೆ ಹೊತ್ತ ನಾಲ್ವರು ನಮ್ಮಲ್ಲಿ ಇದ್ದಾರೆ.
خُذْ هَؤُلَاءِ وَتَطهَّرْ مَعَهُمْ وَأَنْفِقْ عَلَيْهِمْ لِيَحْلِقُوا رُؤُوسَهُمْ، فَيَعْلَمَ ٱلْجَمِيعُ أَنْ لَيْسَ شَيْءٌ مِمَّا أُخْبِرُوا عَنْكَ، بَلْ تَسْلُكُ أَنْتَ أَيْضًا حَافِظًا لِلنَّامُوسِ. ٢٤ 24
ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು.
وَأَمَّا مِنْ جِهَةِ ٱلَّذِينَ آمَنُوا مِنَ ٱلْأُمَمِ، فَأَرْسَلْنَا نَحْنُ إِلَيْهِمْ وَحَكَمْنَا أَنْ لَا يَحْفَظُوا شَيْئًا مِثْلَ ذَلِكَ، سِوَى أَنْ يُحَافِظُوا عَلَى أَنْفُسِهِمْ مِمَّا ذُبِحَ لِلْأَصْنَامِ، وَمِنَ ٱلدَّمِ، وَٱلْمَخْنُوقِ، وَٱلزِّنَا». ٢٥ 25
ಯೆಹೂದ್ಯರಲ್ಲದವರಿಂದ ಬಂದ ವಿಶ್ವಾಸಿಗಳಿಗಾದರೋ, ಅವರು ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕೆಂದು ನಾವು ಬರೆದ ನಮ್ಮ ತೀರ್ಮಾನವನ್ನು ತಿಳಿಸಿದ್ದೇವೆ,” ಎಂದರು.
حِينَئِذٍ أَخَذَ بُولُسُ ٱلرِّجَالَ فِي ٱلْغَدِ، وَتَطَهَّرَ مَعَهُمْ وَدَخَلَ ٱلْهَيْكَلَ، مُخْبِرًا بِكَمَالِ أَيَّامِ ٱلتَّطْهِيرِ، إِلَى أَنْ يُقَرَّبَ عَنْ كُلِّ وَاحِدٍ مِنْهُمُ ٱلْقُرْبَانُ. ٢٦ 26
ಮರುದಿನ ಪೌಲನು ಆ ನಾಲ್ವರೊಂದಿಗೆ ತನ್ನನ್ನು ಶುದ್ಧೀಕರಿಸಿಕೊಂಡನು. ಅನಂತರ ಶುದ್ಧಾಚಾರ ಮುಗಿಯುವ ದಿನಗಳ ಬಗ್ಗೆ ತಿಳಿಸುವುದಕ್ಕಾಗಿ ದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಅರ್ಪಣೆಯು ಆಗಬೇಕೆಂಬುದರ ಬಗ್ಗೆಯೂ ಸೂಚಿಸಿದನು.
وَلَمَّا قَارَبَتِ ٱلْأَيَّامُ ٱلسَّبْعَةُ أَنْ تَتِمَّ، رَآهُ ٱلْيَهُودُ ٱلَّذِينَ مِنْ أَسِيَّا فِي ٱلْهَيْكَلِ، فَأَهَاجُوا كُلَّ ٱلْجَمْعِ وَأَلْقَوْا عَلَيْهِ ٱلْأَيَادِيَ ٢٧ 27
ಏಳು ದಿನಗಳ ಅವಧಿ ಮುಗಿಯುತ್ತಿದ್ದಾಗ, ಏಷ್ಯಾ ಪ್ರಾಂತದ ಕೆಲವು ಯೆಹೂದ್ಯ ಜನರು ದೇವಾಲಯದಲ್ಲಿ ಪೌಲನನ್ನು ಕಂಡರು. ಅವರು ಇಡೀ ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.
صَارِخِينَ: «يَا أَيُّهَا ٱلرِّجَالُ ٱلْإِسْرَائِيلِيُّونَ، أَعِينُوا! هَذَا هُوَ ٱلرَّجُلُ ٱلَّذِي يُعَلِّمُ ٱلْجَمِيعَ فِي كُلِّ مَكَانٍ ضِدًّا لِلشَّعْبِ وَٱلنَّامُوسِ وَهَذَا ٱلْمَوْضِعِ، حَتَّى أَدْخَلَ يُونَانِيِّينَ أَيْضًا إِلَى ٱلْهَيْكَلِ وَدَنَّسَ هَذَا ٱلْمَوْضِعَ ٱلْمُقَدَّسَ». ٢٨ 28
“ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.
لِأَنَّهُمْ كَانُوا قَدْ رَأَوْا مَعَهُ فِي ٱلْمَدِينَةِ تُرُوفِيمُسَ ٱلْأَفَسُسِيَّ، فَكَانُوا يَظُنُّونَ أَنَّ بُولُسَ أَدْخَلَهُ إِلَى ٱلْهَيْكَلِ. ٢٩ 29
ಅವರು ಮೊದಲು ಪಟ್ಟಣದಲ್ಲಿ ಪೌಲನೊಂದಿಗೆ ಎಫೆಸದ ತ್ರೊಫಿಮ ಎಂಬವನು ಇದ್ದುದನ್ನು ಕಂಡಿದ್ದರಿಂದ, ಪೌಲನು ಈಗ ಅವನನ್ನು ದೇವಾಲಯದೊಳಗೆ ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು.
فَهَاجَتِ ٱلْمَدِينَةُ كُلُّهَا، وَتَرَاكَضَ ٱلشَّعْبُ وَأَمْسَكُوا بُولُسَ وَجَرُّوهُ خَارِجَ ٱلْهَيْكَلِ. وَلِلْوَقْتِ أُغْلِقَتِ ٱلْأَبْوَابُ. ٣٠ 30
ಇಡೀ ಪಟ್ಟಣದಲ್ಲೇ ಕೋಲಾಹಲವೆದ್ದಿತು. ಜನರು ಎಲ್ಲಾ ದಿಕ್ಕುಗಳಿಂದ ಓಡೋಡುತ್ತಾ ಬಂದು. ಪೌಲನನ್ನು ಹಿಡಿದುಕೊಂಡು ದೇವಾಲಯದೊಳಗಿಂದ ಹೊರಗೆಳೆದುಕೊಂಡು ಹೋದರು. ಕೂಡಲೇ ದ್ವಾರಗಳನ್ನು ಮುಚ್ಚಿಬಿಟ್ಟರು.
وَبَيْنَمَا هُمْ يَطْلُبُونَ أَنْ يَقْتُلُوهُ، نَمَا خَبَرٌ إِلَى أَمِيرِ ٱلْكَتِيبَةِ أَنَّ أُورُشَلِيمَ كُلَّهَا قَدِ ٱضْطَرَبَتْ. ٣١ 31
ಅವರು ಪೌಲನನ್ನು ಕೊಲ್ಲುವುದಕ್ಕೆ ಪ್ರಯತ್ನಿಸುತ್ತಿದ್ದಾಗ, ಯೆರೂಸಲೇಮ ಪಟ್ಟಣದಲ್ಲೆಲ್ಲಾ ಗೊಂದಲವೆದ್ದಿದೆ ಎಂಬ ಸುದ್ದಿ ಅಲ್ಲಿದ್ದ ರೋಮ್ ಸಹಸ್ರಾಧಿಪತಿಗೆ ತಲುಪಿತು.
فَلِلْوَقْتِ أَخَذَ عَسْكَرًا وَقُوَّادَ مِئَاتٍ وَرَكَضَ إِلَيْهِمْ. فَلَمَّا رأَوْا ٱلْأَمِيرَ وَٱلْعَسْكَرَ كَفُّوا عَنْ ضَرْبِ بُولُسَ. ٣٢ 32
ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ಕರೆದುಕೊಂಡು ಜನಸಮೂಹದ ಬಳಿಗೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಅವನ ಸೈನಿಕರನ್ನೂ ಕಂಡಾಗ ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.
حِينَئِذٍ ٱقْتَرَبَ ٱلْأَمِيرُ وَأَمْسَكَهُ، وَأَمَرَ أَنْ يُقَيَّدَ بِسِلْسِلَتَيْنِ، وَطَفِقَ يَسْتَخْبِرُ: تُرَى مَنْ يَكُونُ؟ وَمَاذَا فَعَلَ؟ ٣٣ 33
ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.
وَكَانَ ٱلْبَعْضُ يَصْرُخُونَ بِشَيْءٍ وَٱلْبَعْضُ بِشَيْءٍ آخَرَ فِي ٱلْجَمْعِ. وَلَمَّا لَمْ يَقْدِرْ أَنْ يَعْلَمَ ٱلْيَقِينَ لِسَبَبِ ٱلشَّغَبِ، أَمَرَ أَنْ يُذْهَبَ بِهِ إِلَى ٱلْمُعَسْكَرِ. ٣٤ 34
ಜನಸಮೂಹದಲ್ಲಿದ್ದ ಇತರರು ವಿವಿಧ ರೀತಿಯಿಂದ ಕೂಗುತ್ತಿರಲು ಗಲಭೆಯ ನಿಮಿತ್ತ ಸಹಸ್ರಾಧಿಪತಿಗೆ ಸತ್ಯಾಂಶ ತಿಳಿಯಲಾಗಲಿಲ್ಲ. ಆದ್ದರಿಂದ ಪೌಲನನ್ನು ಸೈನಿಕ ಪಾಳ್ಯದೊಳಗೆ ತೆಗೆದುಕೊಂಡು ಹೋಗಲು ಆಜ್ಞಾಪಿಸಿದನು.
وَلَمَّا صَارَ عَلَى ٱلدَّرَجِ ٱتَّفَقَ أَنَّ ٱلْعَسْكَرَ حَمَلَهُ بِسَبَبِ عُنْفِ ٱلْجَمْعِ، ٣٥ 35
ಪೌಲನನ್ನು ಮೆಟ್ಟಲುಗಳವರೆಗೆ ತೆಗೆದುಕೊಂಡು ಹೋದಾಗ ಜನರ ರೋಷ ಇನ್ನೂ ಬಲವಾದುದ್ದರಿಂದ ಸೈನಿಕರು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.
لِأَنَّ جُمْهُورَ ٱلشَّعْبِ كَانُوا يَتْبَعُونَهُ صَارِخِينَ: «خُذْهُ!». ٣٦ 36
ಏಕೆಂದರೆ ಮುನ್ನುಗ್ಗುತ್ತಿದ್ದ ಜನರ ಗುಂಪು, “ಅವನನ್ನು ಕೊಲ್ಲಿರಿ!” ಎಂದು ಆರ್ಭಟಿಸುತ್ತಿತ್ತು.
وَإِذْ قَارَبَ بُولُسُ أَنْ يَدْخُلَ ٱلْمُعَسْكَرَ قَالَ لِلْأَمِيرِ: «أَيَجُوزُ لِي أَنْ أَقُولَ لَكَ شَيْئًا؟» فَقَالَ: «أَتَعْرِفُ ٱلْيُونَانِيَّةَ؟ ٣٧ 37
ಸೈನಿಕರು ಪೌಲನನ್ನು ಅವರ ಪಾಳ್ಯದೊಳಗೆ ಒಯ್ಯುತ್ತಿದ್ದಾಗ, ಅವನು ಸಹಸ್ರಾಧಿಪತಿಗೆ, “ನಾನು ನಿನ್ನೊಡನೆ ಸ್ವಲ್ಪ ಮಾತನಾಡುವುದಕ್ಕೆ ಅಪ್ಪಣೆಯಾದೀತೇ?” ಎಂದು ಕೇಳಲು, ಅದಕ್ಕೆ ಅವನು, “ನಿನಗೆ ಗ್ರೀಕ್ ಭಾಷೆಯೂ ಗೊತ್ತಿದೆಯೋ?”
أَفَلَسْتَ أَنْتَ ٱلْمِصْرِيَّ ٱلَّذِي صَنَعَ قَبْلَ هَذِهِ ٱلْأَيَّامِ فِتْنَةً، وَأَخْرَجَ إِلَى ٱلْبَرِّيَّةِ أَرْبَعَةَ ٱلْآلَافِ ٱلرَّجُلِ مِنَ ٱلْقَتَلَةِ؟». ٣٨ 38
“ಹಾಗಾದರೆ ಕೆಲವು ಸಮಯದ ಹಿಂದೆ ದಂಗೆಯೆಬ್ಬಿಸಿ ನಾಲ್ಕು ಸಾವಿರ ಉಗ್ರಗಾಮಿಗಳನ್ನು ಅರಣ್ಯಕ್ಕೆ ಕರೆದುಕೊಂಡುಹೋದ ಈಜಿಪ್ಟಿನವನು ನೀನಲ್ಲವೋ?” ಎಂದನು.
فَقَالَ بُولُسُ: «أَنَا رَجُلٌ يَهُودِيٌّ طَرْسُوسِيٌّ، مِنْ أَهْلِ مَدِينَةٍ غَيْرِ دَنِيَّةٍ مِنْ كِيلِيكِيَّةَ. وَأَلْتَمِسُ مِنْكَ أَنْ تَأْذَنَ لِي أَنْ أُكَلِّمَ ٱلشَّعْبَ». ٣٩ 39
ಅದಕ್ಕೆ ಪೌಲನು, “ನಾನೊಬ್ಬ ಯೆಹೂದ್ಯನು, ಕಿಲಿಕ್ಯದ ತಾರ್ಸದವನು, ಪ್ರಸಿದ್ಧ ಪಟ್ಟಣದ ನಾಗರಿಕನು. ದಯವಿಟ್ಟು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಕೊಡಬೇಕು,” ಎಂದು ಸಹಸ್ರಾಧಿಪತಿಯನ್ನು ಬೇಡಿಕೊಂಡನು.
فَلَمَّا أَذِنَ لَهُ، وَقَفَ بُولُسُ عَلَى ٱلدَّرَجِ وَأَشَارَ بِيَدِهِ إِلَى ٱلشَّعْبِ، فَصَارَ سُكُوتٌ عَظِيمٌ. فَنَادَى بِٱللُّغَةِ ٱلْعِبْرَانِيَّةِ قَائِلًا: ٤٠ 40
ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು:

< أعمال 21 >