< أعمال 26 >
فَقَالَ أَغْرِيبَاسُ لِبُولُسَ: «مَأْذُونٌ لَكَ أَنْ تَتَكَلَّمَ لِأَجْلِ نَفْسِكَ». حِينَئِذٍ بَسَطَ بُولُسُ يَدَهُ وَجَعَلَ يَحْتَجُّ: | ١ 1 |
ಆಗ ಅಗ್ರಿಪ್ಪನು, “ನಿನ್ನ ಪರವಾಗಿ ಮಾತನಾಡಲು ನಿನಗೆ ಅಪ್ಪಣೆಯಿದೆ,” ಎಂದು ಪೌಲನಿಗೆ ಹೇಳಿದನು. ಆಗ ಪೌಲನು ಕೈಯೆತ್ತಿ ಹೀಗೆ ಪ್ರತಿವಾದಿಸತೊಡಗಿದನು:
«إِنِّي أَحْسِبُ نَفْسِي سَعِيدًا أَيُّهَا ٱلْمَلِكُ أَغْرِيبَاسُ، إِذْ أَنَا مُزْمِعٌ أَنْ أَحْتَجَّ ٱلْيَوْمَ لَدَيْكَ عَنْ كُلِّ مَا يُحَاكِمُنِي بِهِ ٱلْيَهُودُ. | ٢ 2 |
“ಅಗ್ರಿಪ್ಪ ರಾಜರೇ, ಯೆಹೂದ್ಯರು ಮಾಡಿದ ಎಲ್ಲಾ ಆಪಾದನೆಗಳಿಗೆ ವಿರುದ್ಧವಾಗಿ ಇಂದು ನನ್ನ ಪ್ರತಿವಾದ ಮಾಡಲು ತಮ್ಮ ಎದುರಿನಲ್ಲಿರುವುದು ನನ್ನ ಭಾಗ್ಯವೆಂದೇ ತಿಳಿಯುತ್ತೇನೆ.
لَا سِيَّمَا وَأَنْتَ عَالِمٌ بِجَمِيعِ ٱلْعَوَائِدِ وَٱلْمَسَائِلِ ٱلَّتِي بَيْنَ ٱلْيَهُودِ. لِذَلِكَ أَلْتَمِسُ مِنْكَ أَنْ تَسْمَعَنِي بِطُولِ ٱلْأَنَاةِ. | ٣ 3 |
ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ.
فَسِيرَتِي مُنْذُ حَدَاثَتِي ٱلَّتِي مِنَ ٱلْبُدَاءَةِ كَانَتْ بَيْنَ أُمَّتِي فِي أُورُشَلِيمَ يَعْرِفُهَا جَمِيعُ ٱلْيَهُودِ، | ٤ 4 |
“ನಾನು ಬಾಲಕನಾಗಿದ್ದಾಗಿನಿಂದ, ನನ್ನ ಪಟ್ಟಣದಲ್ಲಿಯೂ ಅನಂತರ ಯೆರೂಸಲೇಮಿನಲ್ಲಿಯೂ ನಾನು ಜೀವನ ಮಾಡಿದ ರೀತಿಯನ್ನು ಯೆಹೂದ್ಯರೆಲ್ಲರೂ ಬಲ್ಲವರಾಗಿದ್ದಾರೆ.
عَالِمِينَ بِي مِنَ ٱلْأَوَّلِ، إِنْ أَرَادُوا أَنْ يَشْهَدُوا، أَنِّي حَسَبَ مَذْهَبِ عِبَادَتِنَا ٱلْأَضْيَقِ عِشْتُ فَرِّيسِيًّا. | ٥ 5 |
ಅವರು ನಮ್ಮ ವಿಶ್ವಾಸದ ಅತಿ ಕಟ್ಟುನಿಟ್ಟಾದ ಪಂಗಡಕ್ಕೆ ತಕ್ಕಂತೆ ನಾನು ಫರಿಸಾಯನಾಗಿ ಜೀವಿಸಿದೆನೆಂಬುದಾಗಿ ತಿಳಿದವರಾಗಿದ್ದಾರೆ. ಸಾಕ್ಷಿ ಹೇಳುವುದಕ್ಕೆ, ಅವರಿಗೆ ಮನಸ್ಸಿದ್ದರೆ ಹೇಳಬಹುದು.
وَٱلْآنَ أَنَا وَاقِفٌ أُحَاكَمُ عَلَى رَجَاءِ ٱلْوَعْدِ ٱلَّذِي صَارَ مِنَ ٱللهِ لِآبَائِنَا، | ٦ 6 |
ಈಗ ನಾನು ನನ್ನ ಪಿತೃಗಳಿಗೆ ದೇವರು ವಾಗ್ದಾನ ಮಾಡಿದ್ದರಲ್ಲಿ ನಿರೀಕ್ಷೆಯಿಟ್ಟಿದ್ದರಿಂದ ಇಂದು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ.
ٱلَّذِي أَسْبَاطُنَا ٱلِٱثْنَا عَشَرَ يَرْجُونَ نَوَالَهُ، عَابِدِينَ بِٱلْجَهْدِ لَيْلًا وَنَهَارًا. فَمِنْ أَجْلِ هَذَا ٱلرَّجَاءِ أَنَا أُحَاكَمُ مِنَ ٱلْيَهُودِ أَيُّهَا ٱلْمَلِكُ أَغْرِيبَاسُ. | ٧ 7 |
ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ.
لِمَاذَا يُعَدُّ عِنْدَكُمْ أَمْرًا لَا يُصَدَّقُ إِنْ أَقَامَ ٱللهُ أَمْوَاتًا؟ | ٨ 8 |
ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ?
فَأَنَا ٱرْتَأَيْتُ فِي نَفْسِي أَنَّهُ يَنْبَغِي أَنْ أَصْنَعَ أُمُورًا كَثِيرَةً مُضَادَّةً لِٱسْمِ يَسُوعَ ٱلنَّاصِرِيِّ. | ٩ 9 |
“ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.
وَفَعَلْتُ ذَلِكَ أَيْضًا فِي أُورُشَلِيمَ، فَحَبَسْتُ فِي سُجُونٍ كَثِيرِينَ مِنَ ٱلْقِدِّيسِينَ، آخِذًا ٱلسُّلْطَانَ مِنْ قِبَلِ رُؤَسَاءِ ٱلْكَهَنَةِ. وَلَمَّا كَانُوا يُقْتَلُونَ أَلْقَيْتُ قُرْعَةً بِذَلِكَ. | ١٠ 10 |
ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು.
وَفِي كُلِّ ٱلْمَجَامِعِ كُنْتُ أُعَاقِبُهُمْ مِرَارًا كَثِيرَةً، وَأَضْطَرُّهُمْ إِلَى ٱلتَّجْدِيفِ. وَإِذْ أَفْرَطَ حَنَقِي عَلَيْهِمْ كُنْتُ أَطْرُدُهُمْ إِلَى ٱلْمُدُنِ ٱلَّتِي فِي ٱلْخَارِجِ. | ١١ 11 |
ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು.
«وَلَمَّا كُنْتُ ذَاهِبًا فِي ذَلِكَ إِلَى دِمَشْقَ، بِسُلْطَانٍ وَوَصِيَّةٍ مِنْ رُؤَسَاءِ ٱلْكَهَنَةِ، | ١٢ 12 |
“ಹೀಗೆ ನಾನು ಮುಖ್ಯಯಾಜಕರ ಅಧಿಕಾರ, ಅಪ್ಪಣೆಗಳೊಂದಿಗೆ ದಮಸ್ಕಕ್ಕೆ ಪ್ರಯಾಣ ಹೋಗುತ್ತಿದ್ದೆನು.
رَأَيْتُ فِي نِصْفِ ٱلنَّهَارِ فِي ٱلطَّرِيقِ، أَيُّهَا ٱلْمَلِكُ، نُورًا مِنَ ٱلسَّمَاءِ أَفْضَلَ مِنْ لَمَعَانِ ٱلشَّمْسِ، قَدْ أَبْرَقَ حَوْلِي وَحَوْلَ ٱلذَّاهِبِينَ مَعِي. | ١٣ 13 |
ಆಗ ರಾಜರೇ, ಮಧ್ಯಾಹ್ನದ ಸಮಯದಲ್ಲಿ, ಮಾರ್ಗ ಮಧ್ಯದಲ್ಲಿ ನಾನು, ಆಕಾಶದಿಂದ ಸೂರ್ಯನ ಪ್ರಕಾಶಕ್ಕಿಂತಲೂ ಹೆಚ್ಚಾಗಿ ಹೊಳೆಯುವ ಒಂದು ಬೆಳಕನ್ನು ಕಂಡೆನು. ಅದು ನನ್ನ ಸುತ್ತಲೂ ನನ್ನ ಸಂಗಡಿಗರ ಸುತ್ತಲೂ ಪ್ರಕಾಶಿಸಿತು.
فَلَمَّا سَقَطْنَا جَمِيعُنَا عَلَى ٱلْأَرْضِ، سَمِعْتُ صَوْتًا يُكَلِّمُنِي وَيَقُولُ بِٱللُّغَةِ ٱلْعِبْرَانِيَّةِ: شَاوُلُ، شَاوُلُ! لِمَاذَا تَضْطَهِدُنِي؟ صَعْبٌ عَلَيْكَ أَنْ تَرْفُسَ مَنَاخِسَ. | ١٤ 14 |
ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.
فَقُلْتُ أَنَا: مَنْ أَنْتَ يَا سَيِّدُ؟ فَقَالَ: أَنَا يَسُوعُ ٱلَّذِي أَنْتَ تَضْطَهِدُهُ. | ١٥ 15 |
“ಆಗ ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ಕರ್ತದೇವರು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.
وَلَكِنْ قُمْ وَقِفْ عَلَى رِجْلَيْكَ لِأَنِّي لِهَذَا ظَهَرْتُ لَكَ، لِأَنْتَخِبَكَ خَادِمًا وَشَاهِدًا بِمَا رَأَيْتَ وَبِمَا سَأَظْهَرُ لَكَ بِهِ، | ١٦ 16 |
ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ.
مُنْقِذًا إِيَّاكَ مِنَ ٱلشَّعْبِ وَمِنَ ٱلْأُمَمِ ٱلَّذِينَ أَنَا ٱلْآنَ أُرْسِلُكَ إِلَيْهِمْ، | ١٧ 17 |
ನಾನು ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದವರಿಂದಲೂ ನಿನ್ನನ್ನು ಕಾಪಾಡುವೆನು.
لِتَفْتَحَ عُيُونَهُمْ كَيْ يَرْجِعُوا مِنْ ظُلُمَاتٍ إِلَى نُورٍ، وَمِنْ سُلْطَانِ ٱلشَّيْطَانِ إِلَى ٱللهِ، حَتَّى يَنَالُوا بِٱلْإِيمَانِ بِي غُفْرَانَ ٱلْخَطَايَا وَنَصِيبًا مَعَ ٱلْمُقَدَّسِينَ. | ١٨ 18 |
ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.
«مِنْ ثَمَّ أَيُّهَا ٱلْمَلِكُ أَغْرِيبَاسُ لَمْ أَكُنْ مُعَانِدًا لِلرُّؤْيَا ٱلسَّمَاوِيَّةِ، | ١٩ 19 |
“ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
بَلْ أَخْبَرْتُ أَوَّلًا ٱلَّذِينَ فِي دِمَشْقَ، وَفِي أُورُشَلِيمَ حَتَّى جَمِيعِ كُورَةِ ٱلْيَهُودِيَّةِ، ثُمَّ ٱلْأُمَمَ، أَنْ يَتُوبُوا وَيَرْجِعُوا إِلَى ٱللهِ عَامِلِينَ أَعْمَالًا تَلِيقُ بِٱلتَّوْبَةِ. | ٢٠ 20 |
ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.
مِنْ أَجْلِ ذَلِكَ أَمْسَكَنِي ٱلْيَهُودُ فِي ٱلْهَيْكَلِ وَشَرَعُوا فِي قَتْلِي. | ٢١ 21 |
ಈ ಕಾರಣದಿಂದಲೇ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು.
فَإِذْ حَصَلْتُ عَلَى مَعُونَةٍ مِنَ ٱللهِ، بَقِيتُ إِلَى هَذَا ٱلْيَوْمِ، شَاهِدًا لِلصَّغِيرِ وَٱلْكَبِيرِ. وَأَنَا لَا أَقُولُ شَيْئًا غَيْرَ مَا تَكَلَّمَ ٱلْأَنْبِيَاءُ وَمُوسَى أَنَّهُ عَتِيدٌ أَنْ يَكُونَ: | ٢٢ 22 |
ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.
إِنْ يُؤَلَّمِ ٱلْمَسِيحُ، يَكُنْ هُوَ أَوَّلَ قِيَامَةِ ٱلْأَمْوَاتِ، مُزْمِعًا أَنْ يُنَادِيَ بِنُورٍ لِلشَّعْبِ وَلِلْأُمَمِ». | ٢٣ 23 |
ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು.
وَبَيْنَمَا هُوَ يَحْتَجُّ بِهَذَا، قَالَ فَسْتُوسُ بِصَوْتٍ عَظِيمٍ: «أَنْتَ تَهْذِي يَا بُولُسُ! ٱلْكُتُبُ ٱلْكَثِيرَةُ تُحَوِّلُكَ إِلَى ٱلْهَذَيَانِ!». | ٢٤ 24 |
ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.
فَقَالَ: «لَسْتُ أَهْذِي أَيُّهَا ٱلْعَزِيزُ فَسْتُوسُ، بَلْ أَنْطِقُ بِكَلِمَاتِ ٱلصِّدْقِ وَٱلصَّحْوِ. | ٢٥ 25 |
ಆದರೆ ಪೌಲನು, “ಬಹು ಗೌರವವುಳ್ಳ ಫೆಸ್ತರೇ, ನಾನು ಹುಚ್ಚನಲ್ಲ, ಆದರೆ ನಾನು ಸತ್ಯವನ್ನೇ ಸ್ವಸ್ಥಬುದ್ಧಿಯಿಂದ ಮಾತನಾಡುತ್ತಿರುವೆನು.
لِأَنَّهُ مِنْ جِهَةِ هَذِهِ ٱلْأُمُورِ، عَالِمٌ ٱلْمَلِكُ ٱلَّذِي أُكَلِّمُهُ جِهَارًا، إِذْ أَنَا لَسْتُ أُصَدِّقُ أَنْ يَخْفَى عَلَيْهِ شَيْءٌ مِنْ ذَلِكَ، لِأَنَّ هَذَا لَمْ يُفْعَلْ فِي زَاوِيَةٍ. | ٢٦ 26 |
ಏಕೆಂದರೆ ರಾಜರಿಗೆ ಈ ಎಲ್ಲಾ ಸಂಗತಿಗಳ ಪರಿಚಯವಿದೆ. ರಾಜರೊಂದಿಗೆ ನಾನು ಸಹ ಭರವಸೆಯಿಂದ ಮಾತನಾಡುತ್ತಿರುವೆನು. ಇವುಗಳಲ್ಲಿ ಯಾವುದೂ ರಾಜರ ಗಮನಕ್ಕೆ ಬಾರದೆ ಹೋಗಿಲ್ಲ ಎಂಬುದು ನನ್ನ ದೃಢ ನಂಬಿಕೆ. ಏಕೆಂದರೆ ಇದು ಮೂಲೆಯಲ್ಲಿ ನಡೆದ ಸಂಗತಿಯಲ್ಲ.
أَتُؤْمِنُ أَيُّهَا ٱلْمَلِكُ أَغْرِيبَاسُ بِٱلْأَنْبِيَاءِ؟ أَنَا أَعْلَمُ أَنَّكَ تُؤْمِنُ». | ٢٧ 27 |
ಅಗ್ರಿಪ್ಪ ರಾಜರೇ, ನೀವು ಪ್ರವಾದಿಗಳನ್ನು ನಂಬುತ್ತೀರೋ? ನೀವು ನಂಬುತ್ತೀರೆಂದು ನಾನು ಬಲ್ಲೆ,” ಎಂದನು.
فَقَالَ أَغْرِيبَاسُ لِبُولُسَ: «بِقَلِيلٍ تُقْنِعُنِي أَنْ أَصِيرَ مَسِيحِيًّا!». | ٢٨ 28 |
ಆಗ ಅಗ್ರಿಪ್ಪನು ಪೌಲನಿಗೆ, “ಅಲ್ಪ ಸಮಯದಲ್ಲಿಯೇ ನನ್ನನ್ನು ಕ್ರಿಸ್ತ ವಿಶ್ವಾಸಿಯನ್ನಾಗಿ ಮಾಡಬೇಕೆಂದಿದ್ದೀಯಾ?” ಎಂದನು.
فَقَالَ بُولُسُ: «كُنْتُ أُصَلِّي إِلَى ٱللهِ أَنَّهُ بِقَلِيلٍ وَبِكَثِيرٍ، لَيْسَ أَنْتَ فَقَطْ، بَلْ أَيْضًا جَمِيعُ ٱلَّذِينَ يَسْمَعُونَنِي ٱلْيَوْمَ، يَصِيرُونَ هَكَذَا كَمَا أَنَا، مَا خَلَا هَذِهِ ٱلْقُيُودَ». | ٢٩ 29 |
ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.
فَلَمَّا قَالَ هَذَا قَامَ ٱلْمَلِكُ وَٱلْوَالِي وَبَرْنِيكِي وَٱلْجَالِسُونَ مَعَهُمْ، | ٣٠ 30 |
ರಾಜನು ಎದ್ದೇಳಲು ಅವನೊಂದಿಗೆ ರಾಜ್ಯಪಾಲನೂ ಬೆರ್ನಿಕೆಯೂ ಅವರೊಂದಿಗೆ ಕುಳಿತಿದ್ದವರೆಲ್ಲರೂ ಎದ್ದರು.
وَٱنْصَرَفُوا وَهُمْ يُكَلِّمُونَ بَعْضُهُمْ بَعْضًا قَائِلِينَ: «إِنَّ هَذَا ٱلْإِنْسَانَ لَيْسَ يَفْعَلُ شَيْئًا يَسْتَحِقُّ ٱلْمَوْتَ أَوِ ٱلْقُيُودَ». | ٣١ 31 |
ಅವರು ಅಲ್ಲಿಂದ ಹೊರಗೆ ಬಂದು, ಒಬ್ಬರೊಂದಿಗೊಬ್ಬರು ಮಾತನಾಡುತ್ತಾ, “ಮರಣದಂಡನೆಗಾಗಲಿ, ಸೆರೆಮನೆ ವಾಸಕ್ಕಾಗಲಿ ಯೋಗ್ಯವಾದ ಏನನ್ನೂ ಈ ಮನುಷ್ಯನು ಮಾಡಿಲ್ಲ,” ಎಂದರು.
وَقَالَ أَغْرِيبَاسُ لِفَسْتُوسَ: «كَانَ يُمْكِنُ أَنْ يُطْلَقَ هَذَا ٱلْإِنْسَانُ لَوْ لَمْ يَكُنْ قَدْ رَفَعَ دَعْوَاهُ إِلَى قَيْصَرَ». | ٣٢ 32 |
ಆಗ ಅಗ್ರಿಪ್ಪನು ಫೆಸ್ತನಿಗೆ, “ಪೌಲನು ನೇರವಾಗಿ ಕೈಸರನಿಗೆ ಬೇಡಿಕೆ ಸಲ್ಲಿಸದಿದ್ದರೆ ಇವನನ್ನು ಬಿಡುಗಡೆ ಮಾಡಬಹುದಾಗಿತ್ತು,” ಎಂದನು.