< عَامُوس 8 >
هَكَذَا أَرَانِي ٱلسَّيِّدُ ٱلرَّبُّ وَإِذَا سَلَّةٌ لِلْقِطَافِ. | ١ 1 |
೧ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ ಪುಟ್ಟಿಯನ್ನು ಕಂಡೆನು!
فَقَالَ: «مَاذَا أَنْتَ رَاءٍ يَا عَامُوسُ؟» فَقُلْتُ: «سَلَّةً لِلْقِطَافِ». فَقَالَ لِي ٱلرَّبُّ: «قَدْ أَتَتِ ٱلنِّهَايَةُ عَلَى شَعْبِي إِسْرَائِيلَ. لَا أَعُودُ أَصْفَحُ لَهُ بَعْدُ. | ٢ 2 |
೨ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.
فَتَصِيرُ أَغَانِي ٱلْقَصْرِ وَلَاوِلَ فِي ذَلِكَ ٱلْيَوْمِ، يَقُولُ ٱلسَّيِّدُ ٱلرَّبُّ، ٱلْجُثَثُ كَثِيرَةٌ يَطْرَحُونَهَا فِي كُلِّ مَوْضِعٍ بِٱلسُّكُوتِ». | ٣ 3 |
೩ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”
اِسْمَعُوا هَذَا أَيُّهَا ٱلْمُتَهَمِّمُونَ ٱلْمَسَاكِينَ لِكَيْ تُبِيدُوا بَائِسِي ٱلْأَرْضِ، | ٤ 4 |
೪“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.
قَائِلِينَ: «مَتَى يَمْضِي رَأْسُ ٱلشَّهْرِ لِنَبِيعَ قَمْحًا، وَٱلسَّبْتُ لِنَعْرِضَ حِنْطَةً؟ لِنُصَغِّرَ ٱلْإِيفَةَ، وَنُكَبِّرَ ٱلشَّاقِلَ، وَنُعَوِّجَ مَوَازِينَ ٱلْغِشِّ. | ٥ 5 |
೫ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?
لِنَشْتَرِيَ ٱلضُّعَفَاءَ بِفِضَّةٍ، وَٱلْبَائِسَ بِنَعْلَيْنِ، وَنَبِيعَ نُفَايَةَ ٱلْقَمْحِ». | ٦ 6 |
೬ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!
قَدْ أَقْسَمَ ٱلرَّبُّ بِفَخْرِ يَعْقُوبَ: «إِنِّي لَنْ أَنْسَى إِلَى ٱلْأَبَدِ جَمِيعَ أَعْمَالِهِمْ. | ٧ 7 |
೭ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
أَلَيْسَ مِنْ أَجْلِ هَذَا تَرْتَعِدُ ٱلْأَرْضُ، وَيَنُوحُ كُلُّ سَاكِنٍ فِيهَا، وَتَطْمُو كُلُّهَا كَنَهْرٍ، وَتَفِيضُ وَتَنْضُبُ كَنِيلِ مِصْرَ؟ | ٨ 8 |
೮ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.
وَيَكُونُ فِي ذَلِكَ ٱلْيَوْمِ، يَقُولُ ٱلسَّيِّدُ ٱلرَّبُّ، أَنِّي أُغَيِّبُ ٱلشَّمْسَ فِي ٱلظُّهْرِ، وَأُقْتِمُ ٱلْأَرْضَ فِي يَوْمِ نُورٍ، | ٩ 9 |
೯ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.
وَأُحَوِّلُ أَعْيَادَكُمْ نَوْحًا، وَجَمِيعَ أَغَانِيكُمْ مَرَاثِيَ، وَأُصْعِدُ عَلَى كُلِّ ٱلْأَحْقَاءِ مِسْحًا، وَعَلَى كُلِّ رَأْسٍ قَرَعَةً، وَأَجْعَلُهَا كَمَنَاحَةِ ٱلْوَحِيدِ وَآخِرَهَا يَوْمًا مُرًّا! | ١٠ 10 |
೧೦ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
«هُوَذَا أَيَّامٌ تَأْتِي، يَقُولُ ٱلسَّيِّدُ ٱلرَّبُّ، أُرْسِلُ جُوعًا فِي ٱلْأَرْضِ، لَا جُوعًا لِلْخُبْزِ، وَلَا عَطَشًا لِلْمَاءِ، بَلْ لِٱسْتِمَاعِ كَلِمَاتِ ٱلرَّبِّ. | ١١ 11 |
೧೧ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
فَيَجُولُونَ مِنْ بَحْرٍ إِلَى بَحْرٍ، وَمِنَ ٱلشِّمَالِ إِلَى ٱلْمَشْرِقِ، يَتَطَوَّحُونَ لِيَطْلُبُوا كَلِمَةَ ٱلرَّبِّ فَلَا يَجِدُونَهَا. | ١٢ 12 |
೧೨ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ.
فِي ذَلِكَ ٱلْيَوْمِ تَذْبُلُ بِٱلْعَطَشِ ٱلْعَذَارَى ٱلْجَمِيلَاتُ وَٱلْفِتْيَانُ، | ١٣ 13 |
೧೩ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು.
ٱلَّذِينَ يَحْلِفُونَ بِذَنْبِ ٱلسَّامِرَةِ، وَيَقُولُونَ: حَيٌّ إِلَهُكَ يَا دَانُ، وَحَيَّةٌ طَرِيقَةُ بِئْرِ سَبْعٍ. فَيَسْقُطُونَ وَلَا يَقُومُونَ بَعْدُ». | ١٤ 14 |
೧೪‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.