< اَلْجَامِعَةِ 5 >
اِحْفَظْ قَدَمَكَ حِينَ تَذْهَبُ إِلَى بَيْتِ ٱللهِ، فَٱلِٱسْتِمَاعُ أَقْرَبُ مِنْ تَقْدِيمِ ذَبِيحَةِ ٱلْجُهَّالِ، لِأَنَّهُمْ لَا يُبَالُونَ بِفَعْلِ ٱلشَّرِّ. | ١ 1 |
೧ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.
لَا تَسْتَعْجِلْ فَمَكَ وَلَا يُسْرِعْ قَلْبُكَ إِلَى نُطْقِ كَلَامٍ قُدَّامَ ٱللهِ، لِأَنَّ ٱللهَ فِي ٱلسَّمَاوَاتِ وَأَنْتَ عَلَى ٱلْأَرْضِ، فَلِذَلِكَ لِتَكُنْ كَلِمَاتُكَ قَلِيلَةً. | ٢ 2 |
೨ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.
لِأَنَّ ٱلْحُلْمَ يَأْتِي مِنْ كَثْرَةِ ٱلشُّغْلِ، وَقَوْلَ ٱلْجَهْلِ مِنْ كَثْرَةِ ٱلْكَلَامِ. | ٣ 3 |
೩ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.
إِذَا نَذَرْتَ نَذْرًا لِلهِ فَلَا تَتَأَخَّرْ عَنِ ٱلْوَفَاءِ بِهِ، لِأَنَّهُ لَا يُسَرُّ بِٱلْجُهَّالِ. فَأَوْفِ بِمَا نَذَرْتَهُ. | ٤ 4 |
೪ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.
أَنْ لَا تَنْذُرُ خَيْرٌ مِنْ أَنْ تَنْذُرَ وَلَا تَفِيَ. | ٥ 5 |
೫ನೀನು ಹರಕೆಮಾಡಿದ್ದನ್ನು ನೆರವೇರಿಸದೆ ಇರುವುದಕ್ಕಿಂತ ಹರಕೆಮಾಡದೆ ಇರುವುದು ಒಳ್ಳೆಯದು.
لَا تَدَعْ فَمَكَ يَجْعَلُ جَسَدَكَ يُخْطِئُ، وَلَا تَقُلْ قُدَّامَ ٱلْمَلَاكِ: «إِنَّهُ سَهْوٌ». لِمَاذَا يَغْضَبُ ٱللهُ عَلَى قَوْلِكَ، وَيُفْسِدُ عَمَلَ يَدَيْكَ؟ | ٦ 6 |
೬ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?
لِأَنَّ ذَلِكَ مِنْ كَثْرَةِ ٱلْأَحْلَامِ وَٱلْأَبَاطِيلِ وَكَثْرَةِ ٱلْكَلَامِ. وَلَكِنِ ٱخْشَ ٱللهَ. | ٧ 7 |
೭ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.
إِنْ رَأَيْتَ ظُلْمَ ٱلْفَقِيرِ وَنَزْعَ ٱلْحَقِّ وَٱلْعَدْلِ فِي ٱلْبِلَادِ، فَلَا تَرْتَعْ مِنَ ٱلْأَمْرِ، لِأَنَّ فَوْقَ ٱلْعَالِي عَالِيًا يُلَاحِظُ، وَٱلْأَعْلَى فَوْقَهُمَا. | ٨ 8 |
೮ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.
وَمَنْفَعَةُ ٱلْأَرْضِ لِلْكُلِّ. ٱلْمَلِكُ مَخْدُومٌ مِنَ ٱلْحَقْلِ. | ٩ 9 |
೯ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗದ್ದೆಗಳಿಂದ ರಾಜನಿಗೆ ಲಾಭವಾಗುತ್ತದೆ.
مَنْ يُحِبُّ ٱلْفِضَّةَ لَا يَشْبَعُ مِنَ ٱلْفِضَّةِ، وَمَنْ يُحِبُّ ٱلثَّرْوَةَ لَا يَشْبَعُ مِنْ دَخْلٍ. هَذَا أَيْضًا بَاطِلٌ. | ١٠ 10 |
೧೦ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.
إِذَا كَثُرَتِ ٱلْخَيْرَاتُ كَثُرَ ٱلَّذِينَ يَأْكُلُونَهَا، وَأَيُّ مَنْفَعَةٍ لِصَاحِبِهَا إِلَّا رُؤْيَتَهَا بِعَيْنَيْهِ؟ | ١١ 11 |
೧೧ಆಸ್ತಿ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು. ಅದನ್ನು ಕಣ್ಣಿನಿಂದ ನೋಡುವುದೇ ಹೊರತು ಯಜಮಾನನಿಗೆ ಇನ್ಯಾವ ಲಾಭವೂ ಇಲ್ಲ.
نَوْمُ ٱلْمُشْتَغِلِ حُلْوٌ، إِنْ أَكَلَ قَلِيلًا أَوْ كَثِيرًا، وَوَفْرُ ٱلْغَنِيِّ لَا يُرِيحُهُ حَتَّى يَنَامَ. | ١٢ 12 |
೧೨ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ, ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನಿಗೆ ನಿದ್ರೆ ಮಾಡಗೊಡಿಸದು.
يُوجَدُ شَرٌّ خَبِيثٌ رَأَيْتُهُ تَحْتَ ٱلشَّمْسِ: ثَرْوَةٌ مَصُونَةٌ لِصَاحِبِهَا لِضَرَرِهِ. | ١٣ 13 |
೧೩ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.
فَهَلَكَتْ تِلْكَ ٱلثَّرْوَةُ بِأَمْرٍ سَيِّئٍ، ثُمَّ وَلَدَ ٱبْنًا وَمَا بِيَدِهِ شَيْءٌ. | ١٤ 14 |
೧೪ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.
كَمَا خَرَجَ مِنْ بَطْنِ أُمِّهِ عُرْيَانًا يَرْجِعُ ذَاهِبًا كَمَا جَاءَ، وَلَا يَأْخُذُ شَيْئًا مِنْ تَعَبِهِ فَيَذْهَبُ بِهِ فِي يَدِهِ. | ١٥ 15 |
೧೫ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.
وَهَذَا أَيْضًا مَصِيبَةٌ رَدِيئَةٌ، فِي كُلِّ شَيْءٍ كَمَا جَاءَ هَكَذَا يَذْهَبُ، فَأَيَّةُ مَنْفَعَةٍ لَهُ، لِلَّذِي تَعِبَ لِلرِّيحِ؟ | ١٦ 16 |
೧೬ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?
أَيْضًا يَأْكُلُ كُلَّ أَيَّامِهِ فِي ٱلظَّلَامِ، وَيَغْتَمُّ كَثِيرًا مَعَ حُزْنٍ وَغَيْظٍ. | ١٧ 17 |
೧೭ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.
هُوَذَا ٱلَّذِي رَأَيْتُهُ أَنَا خَيْرًا، ٱلَّذِي هُوَ حَسَنٌ: أَنْ يَأْكُلَ ٱلْإِنْسَانُ وَيَشْرَبَ وَيَرَى خَيْرًا مِنْ كُلِّ تَعَبِهِ ٱلَّذِي يَتْعَبُ فِيهِ تَحْتَ ٱلشَّمْسِ مُدَّةَ أَيَّامِ حَيَاتِهِ ٱلَّتِي أَعْطَاهُ ٱللهُ إِيَّاهَا، لِأَنَّهُ نَصِيبُهُ. | ١٨ 18 |
೧೮ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.
أَيْضًا كُلُّ إِنْسَانٍ أَعْطَاهُ ٱللهُ غِنًى وَمَالًا وَسَلَّطَهُ عَلَيْهِ حَتَّى يَأْكُلَ مِنْهُ، وَيَأْخُذَ نَصِيبَهُ، وَيَفْرَحَ بِتَعَبِهِ، فَهَذَا هُوَ عَطِيَّةُ ٱللهِ. | ١٩ 19 |
೧೯ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.
لِأَنَّهُ لَا يَذْكُرُ أَيَّامَ حَيَاتِهِ كَثِيرًا، لِأَنَّ ٱللهَ مُلْهِيهِ بِفَرَحِ قَلْبِهِ. | ٢٠ 20 |
೨೦ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ.