< حِزْقِيَال 7 >
وَكَانَ إِلَيَّ كَلَامُ ٱلرَّبِّ قَائِلًا: | ١ 1 |
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
«وَأَنْتَ يَا ٱبْنَ آدَمَ، فَهَكَذَا قَالَ ٱلسَّيِّدُ ٱلرَّبُّ لِأَرْضِ إِسْرَائِيلَ: نِهَايَةٌ! قَدْ جَاءَتِ ٱلنِّهَايَةُ عَلَى زَوَايَا ٱلْأَرْضِ ٱلْأَرْبَعِ. | ٢ 2 |
“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!
اَلْآنَ ٱلنِّهَايَةُ عَلَيْكِ، وَأُرْسِلُ غَضَبِي عَلَيْكِ، وَأَحْكُمُ عَلَيْكِ كَطُرُقِكِ، وَأَجْلِبُ عَلَيْكِ كُلَّ رَجَاسَاتِكِ. | ٣ 3 |
ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.
فَلَا تَشْفُقُ عَلَيْكِ عَيْنِي، وَلَا أَعْفُو، بَلْ أَجْلِبُ عَلَيْكِ طُرُقَكِ وَتَكُونُ رَجَاسَاتُكِ فِي وَسْطِكِ، فَتَعْلَمُونَ أَنِّي أَنَا ٱلرَّبُّ. | ٤ 4 |
ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’
«هَكَذَا قَالَ ٱلسَّيِّدُ ٱلرَّبُّ: شَرٌّ! شَرٌّ وَحِيدٌ هُوَذَا قَدْ أَتَى. | ٥ 5 |
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಕೇಡು! ಎಂದೂ ಕೇಳದ ಕೇಡು, ಇಗೋ ಬಂದಿತು.
نِهَايَةٌ قَدْ جَاءَتْ. جَاءَتِ ٱلنِّهَايَةُ. ٱنْتَبَهَتْ إِلَيْكِ. هَا هِيَ قَدْ جَاءَتْ. | ٦ 6 |
ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.
ٱنْتَهَى ٱلدَّوْرُ إِلَيْكَ أَيُّهَا ٱلسَّاكِنُ فِي ٱلْأَرْضِ. بَلَغَ ٱلْوَقْتُ. ٱقْتَرَبَ يَوْمُ ٱضْطِرَابٍ، لَا هُتَافُ ٱلْجِبَالِ. | ٧ 7 |
ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.
اَلْآنَ عَنْ قَرِيبٍ أَصُبُّ رِجْزِي عَلَيْكِ، وَأُتَمِّمُ سَخَطِي عَلَيْكِ، وَأَحْكُمُ عَلَيْكِ كَطُرُقِكِ، وَأَجْلِبُ عَلَيْكِ كُلَّ رَجَاسَاتِكِ. | ٨ 8 |
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.
فَلَا تَشْفُقُ عَيْنِي، وَلَا أَعْفُو، بَلْ أَجْلِبُ عَلَيْكِ كَطُرُقِكِ، وَرَجَاسَاتُكِ تَكُونُ فِي وَسْطِكِ، فَتَعْلَمُونَ أَنِّي أَنَا ٱلرَّبُّ ٱلضَّارِبُ. | ٩ 9 |
ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.
«هَا هُوَذَا ٱلْيَوْمُ، هَا هُوَذَا قَدْ جَاءَ! دَارَتِ ٱلدَّائِرَةُ. أَزْهَرَتِ ٱلْعَصَا. أَفْرَخَتِ ٱلْكِبْرِيَاءُ. | ١٠ 10 |
“‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,
قَامَ ٱلظُّلْمُ إِلَى عَصَا ٱلشَّرِّ. لَا يَبْقَى مِنْهُمْ وَلَا مِنْ ثَرْوَتِهِمْ وَلَا مِنْ ضَجِيجِهِمْ، وَلَا نَوْحٌ عَلَيْهِمْ. | ١١ 11 |
ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.
قَدْ جَاءَ ٱلْوَقْتُ. بَلَغَ ٱلْيَوْمُ. فَلَا يَفْرَحَنَّ ٱلشَّارِي، وَلَا يَحْزَنَنَّ ٱلْبَائِعُ، لِأَنَّ ٱلْغَضَبَ عَلَى كُلِّ جُمْهُورِهِمْ. | ١٢ 12 |
ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.
لِأَنَّ ٱلْبَائِعَ لَنْ يَعُودَ إِلَى ٱلْمَبِيعِ، وَإِنْ كَانُوا بَعْدُ بَيْنَ ٱلْأَحْيَاءِ. لِأَنَّ ٱلرُّؤْيَا عَلَى كُلِّ جُمْهُورِهَا فَلَا يَعُودُ، وَٱلْإِنْسَانُ بِإِثْمِهِ لَا يُشَدِّدُ حَيَاتَهُ. | ١٣ 13 |
ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು.
قَدْ نَفَخُوا فِي ٱلْبُوقِ وَأَعَدُّوا ٱلْكُلَّ، وَلَا ذَاهِبَ إِلَى ٱلْقِتَالِ، لِأَنَّ غَضَبِي عَلَى كُلِّ جُمْهُورِهِمْ. | ١٤ 14 |
“‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.
«اَلسَّيْفُ مِنْ خَارِجٍ، وَٱلْوَبَأُ وَٱلْجُوعُ مِنْ دَاخِلٍ. ٱلَّذِي هُوَ فِي ٱلْحَقْلِ يَمُوتُ بِٱلسَّيْفِ، وَٱلَّذِي هُوَ فِي ٱلْمَدِينَةِ يَأْكُلُهُ ٱلْجُوعُ وَٱلْوَبَأُ. | ١٥ 15 |
ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.
وَيَنْفَلِتُ مِنْهُمْ مُنْفَلِتُونَ وَيَكُونُونَ عَلَى ٱلْجِبَالِ كَحَمَامِ ٱلْأَوْطِئَةِ. كُلُّهُمْ يَهْدِرُونَ كُلُّ وَاحِدٍ عَلَى إِثْمِهِ. | ١٦ 16 |
ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.
كُلُّ ٱلْأَيْدِي تَرْتَخِي، وَكُلُّ ٱلرُّكَبِ تَصِيرُ مَاءً. | ١٧ 17 |
ಕೈಗಳೆಲ್ಲಾ ಜೋತಾಡುವುವು, ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ಆಗುವುವು.
وَيَتَنَطَّقُونَ بِٱلْمَسْحِ وَيَغْشَاهُمْ رُعْبٌ، وَعَلَى جَمِيعِ ٱلْوُجُوهِ خِزْيٌ، وَعَلَى جَمِيعِ رُؤُوسِهِمْ قَرَعٌ. | ١٨ 18 |
ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.
يُلْقُونَ فِضَّتَهُمْ فِي ٱلشَّوَارِعِ، وَذَهَبُهُمْ يَكُونُ لِنَجَاسَةٍ. لَا تَسْتَطِيعُ فِضَّتُهُمْ وَذَهَبُهُمْ إِنْقَاذَهُمْ فِي يَوْمِ غَضَبِ ٱلرَّبِّ. لَا يُشْبِعُونَ مِنْهُمَا أَنْفُسَهُمْ، وَلَا يَمْلَأُونَ جَوْفَهُمْ، لِأَنَّهُمَا صَارَا مَعْثَرَةَ إِثْمِهِمْ. | ١٩ 19 |
“‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.
أَمَّا بَهْجَةُ زِينَتِهِ فَجَعَلَهَا لِلْكِبْرِيَاءِ. جَعَلُوا فِيهَا أَصْنَامَ مَكْرُهَاتِهِمْ، رَجَاسَاتِهِمْ، لِأَجْلِ ذَلِكَ جَعَلْتُهَا لَهُمْ نَجَاسَةً. | ٢٠ 20 |
ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ
أُسْلِمُهَا إِلَى أَيْدِي ٱلْغُرَبَاءِ لِلنَّهْبِ، وَإِلَى أَشْرَارِ ٱلْأَرْضِ سَلْبًا فَيُنَجِّسُونَهَا. | ٢١ 21 |
ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. ಅವರು ಅದನ್ನು ಅಪವಿತ್ರಪಡಿಸುವರು.
وَأُحَوِّلُ وَجْهِي عَنْهُمْ فَيُنَجِّسُونَ سِرِّي، وَيَدْخُلُهُ ٱلْمُعْتَنِفُونَ وَيُنَجِّسُونَهُ. | ٢٢ 22 |
ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು. ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರಪಡಿಸುವರು.
«اِصْنَعِ ٱلسِّلْسِلَةَ لِأَنَّ ٱلْأَرْضَ قَدِ ٱمْتَلَأَتْ مِنْ أَحْكَامِ ٱلدَّمِ، وَٱلْمَدِينَةُ ٱمْتَلَأَتْ مِنَ ٱلظُّلْمِ. | ٢٣ 23 |
“‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
فَآتِي بِأَشَرِّ ٱلْأُمَمِ فَيَرِثُونَ بُيُوتَهُمْ، وَأُبِيدُ كِبْرِيَاءَ ٱلْأَشِدَّاءِ فَتَتَنَجَّسُ مَقَادِسُهُمْ. | ٢٤ 24 |
ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.
اَلرُّعْبُ آتٍ فَيَطْلُبُونَ ٱلسَّلَامَ وَلَا يَكُونُ. | ٢٥ 25 |
ನಾಶವು ಬರುತ್ತದೆ. ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ.
سَتَأْتِي مُصِيبَةٌ عَلَى مُصِيبَةٍ، وَيَكُونُ خَبَرٌ عَلَى خَبَرٍ، فَيَطْلُبُونَ رُؤْيَا مِنَ ٱلنَّبِيِّ، وَٱلشَّرِيعَةُ تُبَادُ عَنِ ٱلْكَاهِنِ، وَٱلْمَشُورَةُ عَنِ ٱلشُّيُوخِ. | ٢٦ 26 |
ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.
ٱلْمَلِكُ يَنُوحُ وَٱلرَّئِيسُ يَلْبَسُ حَيْرَةً، وَأَيْدِي شَعْبِ ٱلْأَرْضِ تَرْجُفُ. كَطَرِيقِهِمْ أَصْنَعُ بِهِمْ، وَكَأَحْكَامِهِمْ أَحْكُمُ عَلَيْهِمْ، فَيَعْلَمُونَ أَنِّي أَنَا ٱلرَّبُّ». | ٢٧ 27 |
ಅರಸನು ದುಃಖಿಸುವನು, ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. ದೇಶದ ಜನರ ಕೈಗಳು ತತ್ತರಿಸುವುವು, ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. “‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’”