< إِرْمِيَا 15 >
ثُمَّ قَالَ ٱلرَّبُّ لِي: «وَإِنْ وَقَفَ مُوسَى وَصَمُوئِيلُ أَمَامِي لَا تَكُونُ نَفْسِي نَحْوَ هَذَا ٱلشَّعْبِ. اِطْرَحْهُمْ مِنْ أَمَامِي فَيَخْرُجُوا. | ١ 1 |
೧ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
وَيَكُونُ إِذَا قَالُوا لَكَ: إِلَى أَيْنَ نَخْرُجُ؟ أَنَّكَ تَقُولُ لَهُمْ: هَكَذَا قَالَ ٱلرَّبُّ: ٱلَّذِينَ لِلْمَوْتِ فَإِلَى ٱلْمَوْتِ، وَٱلَّذِينَ لِلسَّيْفِ فَإِلَى ٱلسَّيْفِ، وَٱلَّذِينَ لِلْجُوعِ فَإِلَى ٱلْجُوعِ، وَٱلَّذِينَ لِلسَّبْيِ فَإِلَى ٱلسَّبْيِ. | ٢ 2 |
೨ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.
وَأُوَكِّلُ عَلَيْهِمْ أَرْبَعَةَ أَنْوَاعٍ، يَقُولُ ٱلرَّبُّ: ٱلسَّيْفَ لِلْقَتْلِ، وَٱلْكِلَابَ لِلسَّحْبِ، وَطُيُورَ ٱلسَّمَاءِ وَوُحُوشَ ٱلْأَرْضِ لِلْأَكْلِ وَٱلْإِهْلَاكِ. | ٣ 3 |
೩“ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.
وَأَدْفَعُهُمْ لِلْقَلَقِ فِي كُلِّ مَمَالِكِ ٱلْأَرْضِ مِنْ أَجْلِ مَنَسَّى بْنِ حَزَقِيَّا مَلِكِ يَهُوذَا، مِنْ أَجْلِ مَا صَنَعَ فِي أُورُشَلِيمَ. | ٤ 4 |
೪“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
فَمَنْ يَشْفُقُ عَلَيْكِ يَا أُورُشَلِيمُ، وَمَنْ يُعَزِّيكِ، وَمَنْ يَمِيلُ لِيَسْأَلَ عَنْ سَلَامَتِكِ؟ | ٥ 5 |
೫ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?
أَنْتِ تَرَكْتِنِي، يَقُولُ ٱلرَّبُّ. إِلَى ٱلْوَرَاءِ سِرْتِ. فَأَمُدُّ يَدِي عَلَيْكِ وَأُهْلِكُكِ. مَلِلْتُ مِنَ ٱلنَّدَامَةِ. | ٦ 6 |
೬ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.
وَأُذْرِيهِمْ بِمِذْرَاةٍ فِي أَبْوَابِ ٱلْأَرْضِ. أُثْكِلُ وَأُبِيدُ شَعْبِي. لَمْ يَرْجِعُوا عَنْ طُرُقِهِمْ. | ٧ 7 |
೭ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.
كَثُرَتْ لِي أَرَامِلُهُمْ أَكْثَرَ مِنْ رَمْلِ ٱلْبِحَارِ. جَلَبْتُ عَلَيْهِمْ، عَلَى أُمِّ ٱلشُّبَّانِ، نَاهِبًا فِي ٱلظَّهِيرَةِ. أَوْقَعْتُ عَلَيْهَا بَغْتَةً رَعْدَةً وَرُعُبَاتٍ. | ٨ 8 |
೮ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.
ذَبُلَتْ وَالِدَةُ ٱلسَّبْعَةِ. أَسْلَمَتْ نَفْسَهَا. غَرَبَتْ شَمْسُهَا إِذْ بَعْدُ نَهَارٌ. خَزِيَتْ وَخَجِلَتْ. أَمَّا بَقِيَّتُهُمْ فَلِلسَّيْفِ أَدْفَعُهَا أَمَامَ أَعْدَائِهِمْ، يَقُولُ ٱلرَّبُّ». | ٩ 9 |
೯ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’” ಇದು ಯೆಹೋವನ ನುಡಿ.
وَيْلٌ لِي يَا أُمِّي لِأَنَّكِ وَلَدْتِنِي إِنْسَانَ خِصَامٍ وَإِنْسَانَ نِزَاعٍ لِكُلِّ ٱلْأَرْضِ. لَمْ أَقْرِضْ وَلَا أَقْرَضُونِي، وَكُلُّ وَاحِدٍ يَلْعَنُنِي. | ١٠ 10 |
೧೦ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.
قَالَ ٱلرَّبُّ: «إِنِّي أَحُلُّكَ لِلْخَيْرِ. إِنِّي أَجْعَلُ ٱلْعَدُوَّ يَتَضَرَّعُ إِلَيْكَ فِي وَقْتِ ٱلشَّرِّ وَفِي وَقْتِ ٱلضِّيقِ. | ١١ 11 |
೧೧ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.
«هَلْ يَكْسِرُ ٱلْحَدِيدُ ٱلْحَدِيدَ ٱلَّذِي مِنَ ٱلشِّمَالِ وَٱلنُّحَاسَ؟ | ١٢ 12 |
೧೨ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವುದು ಯಾರಿಂದಾದೀತು?” ಎಂದು ಹೇಳಿದನು.
ثَرْوَتُكَ وَخَزَائِنُكَ أَدْفَعُهَا لِلنَّهْبِ، لَا بِثَمَنٍ، بَلْ بِكُلِّ خَطَايَاكَ وَفِي كُلِّ تُخُومِكَ. | ١٣ 13 |
೧೩“ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,
وَأُعَبِّرُكَ مَعَ أَعْدَائِكَ فِي أَرْضٍ لَمْ تَعْرِفْهَا، لِأَنَّ نَارًا قَدْ أُشْعِلَتْ بِغَضَبِي تُوقَدُ عَلَيْكُمْ». | ١٤ 14 |
೧೪ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”
أَنْتَ يَارَبُّ عَرَفْتَ. ٱذْكُرْنِي وَتَعَهَّدْنِي وَٱنْتَقِمْ لِي مِنْ مُضْطَهِدِيَّ. بِطُولِ أَنَاتِكَ لَا تَأْخُذْنِي. اِعْرِفِ ٱحْتِمَالِي ٱلْعَارَ لِأَجْلِكَ. | ١٥ 15 |
೧೫ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.
وُجِدَ كَلَامُكَ فَأَكَلْتُهُ، فَكَانَ كَلَامُكَ لِي لِلْفَرَحِ وَلِبَهْجَةِ قَلْبِي، لِأَنِّي دُعِيتُ بِٱسْمِكَ يَارَبُّ إِلَهَ ٱلْجُنُودِ. | ١٦ 16 |
೧೬ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!
لَمْ أَجْلِسْ فِي مَحْفَلِ ٱلْمَازِحِينَ مُبْتَهِجًا. مِنْ أَجْلِ يَدِكَ جَلَسْتُ وَحْدِي، لِأَنَّكَ قَدْ مَلَأْتَنِي غَضَبًا. | ١٧ 17 |
೧೭ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.
لِمَاذَا كَانَ وَجَعِي دَائِمًا وَجُرْحِي عَدِيمَ ٱلشِّفَاءِ، يَأْبَى أَنْ يُشْفَى؟ أَتَكُونُ لِي مِثْلَ كَاذِبٍ، مِثْلَ مِيَاهٍ غَيْرِ دَائِمَةٍ؟ | ١٨ 18 |
೧೮ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.
لِذَلِكَ هَكَذَا قَالَ ٱلرَّبُّ: «إِنْ رَجَعْتَ أُرَجِّعْكَ، فَتَقِفْ أَمَامِي. وَإِذَا أَخْرَجْتَ ٱلثَّمِينَ مِنَ ٱلْمَرْذُولِ فَمِثْلَ فَمِي تَكُونُ. هُمْ يَرْجِعُونَ إِلَيْكَ وَأَنْتَ لَا تَرْجِعُ إِلَيْهِمْ. | ١٩ 19 |
೧೯ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
وَأَجْعَلُكَ لِهَذَا ٱلشَّعْبِ سُورَ نُحَاسٍ حَصِينًا، فَيُحَارِبُونَكَ وَلَا يَقْدِرُونَ عَلَيْكَ، لِأَنِّي مَعَكَ لِأُخَلِّصَكَ وَأُنْقِذَكَ، يَقُولُ ٱلرَّبُّ. | ٢٠ 20 |
೨೦ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.
فَأُنْقِذُكَ مِنْ يَدِ ٱلْأَشْرَارِ وَأَفْدِيكَ مِنْ كَفِّ ٱلْعُتَاةِ». | ٢١ 21 |
೨೧ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.