< إِرْمِيَا 29 >
هَذَا كَلَامُ ٱلرِّسَالَةِ ٱلَّتِي أَرْسَلَهَا إِرْمِيَا ٱلنَّبِيُّ مِنْ أُورُشَلِيمَ إِلَى بَقِيَّةِ شُيُوخِ ٱلسَّبْيِ، وَإِلَى ٱلْكَهَنَةِ وَٱلْأَنْبِيَاءِ، وَإِلَى كُلِّ ٱلشَّعْبِ ٱلَّذِينَ سَبَاهُمْ نَبُوخَذْنَاصَّرُ مِنْ أُورُشَلِيمَ إِلَى بَابِلَ، | ١ 1 |
೧ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.
بَعْدَ خُرُوجِ يَكُنْيَا ٱلْمَلِكِ وَٱلْمَلِكَةِ وَٱلْخِصْيَانِ وَرُؤَسَاءِ يَهُوذَا وَأُورُشَلِيمَ وَٱلنَّجَّارِينَ وَٱلْحَدَّادِينَ مِنْ أُورُشَلِيمَ، | ٢ 2 |
೨ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.
بِيَدِ أَلْعَاسَةَ بْنِ شَافَانَ، وَجَمَرْيَا بْنِ حِلْقِيَّا، ٱللَّذَيْنِ أَرْسَلَهُمَا صِدْقِيَّا مَلِكُ يَهُوذَا إِلَى نَبُوخَذْنَاصَّرَ مَلِكِ بَابِلَ إِلَى بَابِلَ قَائِلًا: | ٣ 3 |
೩ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.
«هَكَذَا قَالَ رَبُّ ٱلْجُنُودِ إِلَهُ إِسْرَائِيلَ لِكُلِّ ٱلسَّبْيِ ٱلَّذِي سَبَيْتُهُ مِنْ أُورُشَلِيمَ إِلَى بَابِلَ: | ٤ 4 |
೪ಅದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,
اِبْنُوا بُيُوتًا وَٱسْكُنُوا، وَٱغْرِسُوا جَنَّاتٍ وَكُلُوا ثَمَرَهَا. | ٥ 5 |
೫ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.
خُذُوا نِسَاءً وَلِدُوا بَنِينَ وَبَنَاتٍ وَخُذُوا لِبَنِيكُمْ نِسَاءً وَأَعْطُوا بَنَاتِكُمْ لِرِجَالٍ فَيَلِدْنَ بَنِينَ وَبَنَاتٍ، وَٱكْثُرُوا هُنَاكَ وَلَا تَقِلُّوا. | ٦ 6 |
೬ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.
وَٱطْلُبُوا سَلَامَ ٱلْمَدِينَةِ ٱلَّتِي سَبَيْتُكُمْ إِلَيْهَا، وَصَلُّوا لِأَجْلِهَا إِلَى ٱلرَّبِّ، لِأَنَّهُ بِسَلَامِهَا يَكُونُ لَكُمْ سَلَامٌ. | ٧ 7 |
೭ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.
لِأَنَّهُ هَكَذَا قَالَ رَبُّ ٱلْجُنُودِ إِلَهُ إِسْرَائِيلَ: لَا تَغُشَّكُمْ أَنْبِيَاؤُكُمُ ٱلَّذِينَ فِي وَسَطِكُمْ وَعَرَّافُوكُمْ، وَلَا تَسْمَعُوا لِأَحْلَامِكُمُ ٱلَّتِي تَتَحَلَّمُونَهَا. | ٨ 8 |
೮ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
لِأَنَّهُمْ إِنَّمَا يَتَنَبَّأُونَ لَكُمْ بِٱسْمِي بِٱلْكَذِبِ. أَنَا لَمْ أُرْسِلْهُمْ، يَقُولُ ٱلرَّبُّ. | ٩ 9 |
೯ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು.
«لِأَنَّهُ هَكَذَا قَالَ ٱلرَّبُّ: إِنِّي عِنْدَ تَمَامِ سَبْعِينَ سَنَةً لِبَابِلَ، أَتَعَهَّدُكُمْ وَأُقِيمُ لَكُمْ كَلَامِي ٱلصَّالِحَ، بِرَدِّكُمْ إِلَى هَذَا ٱلْمَوْضِعِ. | ١٠ 10 |
೧೦ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
لِأَنِّي عَرَفْتُ ٱلْأَفْكَارَ ٱلَّتِي أَنَا مُفْتَكِرٌ بِهَا عَنْكُمْ، يَقُولُ ٱلرَّبُّ، أَفْكَارَ سَلَامٍ لَا شَرٍّ، لِأُعْطِيَكُمْ آخِرَةً وَرَجَاءً. | ١١ 11 |
೧೧ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
فَتَدْعُونَنِي وَتَذْهَبُونَ وَتُصَلُّونَ إِلَيَّ فَأَسْمَعُ لَكُمْ. | ١٢ 12 |
೧೨ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
وَتَطْلُبُونَنِي فَتَجِدُونَنِي إِذْ تَطْلُبُونَنِي بِكُلِّ قَلْبِكُمْ. | ١٣ 13 |
೧೩ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
فَأُوجَدُ لَكُمْ، يَقُولُ ٱلرَّبُّ، وَأَرُدُّ سَبْيَكُمْ وَأَجْمَعُكُمْ مِنْ كُلِّ ٱلْأُمَمِ وَمِنْ كُلِّ ٱلْمَوَاضِعِ ٱلَّتِي طَرَدْتُكُمْ إِلَيْهَا، يَقُولُ ٱلرَّبُّ، وَأَرُدُّكُمْ إِلَى ٱلْمَوْضِعِ ٱلَّذِي سَبَيْتُكُمْ مِنْهُ. | ١٤ 14 |
೧೪ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.
«لِأَنَّكُمْ قُلْتُمْ: قَدْ أَقَامَ لَنَا ٱلرَّبُّ نَبِيِّينَ فِي بَابِلَ، | ١٥ 15 |
೧೫ನೀವೋ, “ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ” ಅಂದುಕೊಂಡಿದ್ದೀರಿ.
فَهَكَذَا قَالَ ٱلرَّبُّ لِلْمَلِكِ ٱلْجَالِسِ عَلَى كُرْسِيِّ دَاوُدَ، وَلِكُلِّ ٱلشَّعْبِ ٱلْجَالِسِ فِي هَذِهِ ٱلْمَدِينَةِ، إِخْوَتِكُمُ ٱلَّذِينَ لَمْ يَخْرُجُوا مَعَكُمْ فِي ٱلسَّبْيِ: | ١٦ 16 |
೧೬ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,
هَكَذَا قَالَ رَبُّ ٱلْجُنُودِ: هَأَنَذَا أُرْسِلُ عَلَيْهِمِ ٱلسَّيْفَ وَٱلْجُوعَ وَٱلْوَبَأَ، وَأَجْعَلُهُمْ كَتِينٍ رَدِيءٍ لَا يُؤْكَلُ مِنَ ٱلرَّدَاءَةِ. | ١٧ 17 |
೧೭“ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.
وَأُلْحِقُهُمْ بِٱلسَّيْفِ وَٱلْجُوعِ وَٱلْوَبَإِ، وَأَجْعَلُهُمْ قَلَقًا لِكُلِّ مَمَالِكِ ٱلْأَرْضِ، حِلْفًا وَدَهَشًا وَصَفِيرًا وَعَارًا فِي جَمِيعِ ٱلْأُمَمِ ٱلَّذِينَ طَرَدْتُهُمْ إِلَيْهِمْ، | ١٨ 18 |
೧೮ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.
مِنْ أَجْلِ أَنَّهُمْ لَمْ يَسْمَعُوا لِكَلَامِي، يَقُولُ ٱلرَّبُّ، إِذْ أَرْسَلْتُ إِلَيْهِمْ عَبِيدِي ٱلْأَنْبِيَاءَ مُبَكِّرًا وَمُرْسِلًا وَلَمْ تَسْمَعُوا، يَقُولُ ٱلرَّبُّ. | ١٩ 19 |
೧೯ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”
«وَأَنْتُمْ فَٱسْمَعُوا كَلِمَةَ ٱلرَّبِّ يَا جَمِيعَ ٱلسَّبْيِ ٱلَّذِينَ أَرْسَلْتُهُمْ مِنْ أُورُشَلِيمَ إِلَى بَابِلَ. | ٢٠ 20 |
೨೦ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.
هَكَذَا قَالَ رَبُّ ٱلْجُنُودِ إِلَهُ إِسْرَائِيلَ عَنْ أَخْآبَ بْنِ قُولَايَا، وَعَنْ صِدْقِيَّا بْنِ مَعْسِيَّا، ٱللَّذَيْنِ يَتَنَبَّآنِ لَكُمْ بِٱسْمِي بِٱلْكَذِبِ: هَأَنَذَا أَدْفَعُهُمَا لِيَدِ نَبُوخَذْرَاصَّرَ مَلِكِ بَابِلَ فَيَقْتُلُهُمَا أَمَامَ عُيُونِكُمْ. | ٢١ 21 |
೨೧ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.
وَتُؤْخَذُ مِنْهُمَا لَعْنَةٌ لِكُلِّ سَبْيِ يَهُوذَا ٱلَّذِينَ فِي بَابِلَ، فَيُقَالُ: يَجْعَلُكَ ٱلرَّبُّ مِثْلَ صِدْقِيَّا وَمِثْلَ أَخْآبَ ٱللَّذَيْنِ قَلَاهُمَا مَلِكُ بَابِلَ بِٱلنَّارِ. | ٢٢ 22 |
೨೨ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು.
مِنْ أَجْلِ أَنَّهُمَا عَمِلَا قَبِيحًا فِي إِسْرَائِيلَ، وَزَنَيَا بِنِسَاءِ أَصْحَابِهِمَا، وَتَكَلَّمَا بِٱسْمِي كَلَامًا كَاذِبًا لَمْ أُوصِهِمَا بِهِ، وَأَنَا ٱلْعَارِفُ وَٱلشَّاهِدُ، يَقُولُ ٱلرَّبُّ. | ٢٣ 23 |
೨೩ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.
«وَكَلِّمْ شِمْعِيَا ٱلنِّحْلَامِيِّ قَائِلًا: | ٢٤ 24 |
೨೪ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು, ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು,
هَكَذَا تَكَلَّمَ رَبُّ ٱلْجُنُودِ إِلَهُ إِسْرَائِيلَ قَائِلًا: مِنْ أَجْلِ أَنَّكَ أَرْسَلْتَ رَسَائِلَ بِٱسْمِكَ إِلَى كُلِّ ٱلشَّعْبِ ٱلَّذِي فِي أُورُشَلِيمَ، وَإِلَى صَفَنْيَا بْنِ مَعْسِيَّا ٱلْكَاهِنِ، وَإِلَى كُلِّ ٱلْكَهَنَةِ قَائِلًا: | ٢٥ 25 |
೨೫ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,
قَدْ جَعَلَكَ ٱلرَّبُّ كَاهِنًا عِوَضًا عَنْ يَهُويَادَاعَ ٱلْكَاهِنِ، لِتَكُونُوا وُكَلَاءَ فِي بَيْتِ ٱلرَّبِّ لِكُلِّ رَجُلٍ مَجْنُونٍ وَمُتَنَبِّئٍ، فَتَدْفَعُهُ إِلَى ٱلْمِقْطَرَةِ وَٱلْقُيُودِ. | ٢٦ 26 |
೨೬“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.
وَٱلْآنَ لِمَاذَا لَمْ تَزْجُرْ إِرْمِيَا ٱلْعَنَاثُوثِيَّ ٱلْمُتَنَبِّئَ لَكُمْ. | ٢٧ 27 |
೨೭ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?
لِأَنَّهُ لِذَلِكَ أَرْسَلَ إِلَيْنَا إِلَى بَابِلَ قَائِلًا: إِنَّهَا مُسْتَطِيلَةٌ. ٱبْنُوا بُيُوتًا وَٱسْكُنُوا، وَٱغْرِسُوا جَنَّاتٍ وَكُلُوا ثَمَرَهَا». | ٢٨ 28 |
೨೮ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.”
فَقَرَأَ صَفَنْيَا ٱلْكَاهِنُ هَذِهِ ٱلرِّسَالَةَ فِي أُذُنَيْ إِرْمِيَا ٱلنَّبِيِّ. | ٢٩ 29 |
೨೯ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.
ثُمَّ صَارَ كَلَامُ ٱلرَّبِّ إِلَى إِرْمِيَا قَائِلًا: | ٣٠ 30 |
೩೦ಅನಂತರ ಯೆರೆಮೀಯನಿಗೆ ಯೆಹೋವನು ಈ ಮಾತುಗಳನ್ನು ತಿಳಿಸಿದನು.
«أَرْسِلْ إِلَى كُلِّ ٱلسَّبْيِ قَائِلًا: هَكَذَا قَالَ ٱلرَّبُّ لِشِمْعِيَا ٱلنِّحْلَامِيِّ: مِنْ أَجْلِ أَنَّ شِمْعِيَا قَدْ تَنَبَّأَ لَكُمْ وَأَنَا لَمْ أُرْسِلْهُ، وَجَعَلَكُمْ تَتَّكِلُونَ عَلَى ٱلْكَذِبِ. | ٣١ 31 |
೩೧ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,
لِذَلِكَ هَكَذَا قَالَ ٱلرَّبُّ: هَأَنَذَا أُعَاقِبُ شِمْعِيَا ٱلنِّحْلَامِيَّ وَنَسْلَهُ. لَا يَكُونُ لَهُ إِنْسَانٌ يَجْلِسُ فِي وَسْطِ هَذَا ٱلشَّعْبِ، وَلَا يَرَى ٱلْخَيْرَ ٱلَّذِي سَأَصْنَعُهُ لِشَعْبِي، يَقُولُ ٱلرَّبُّ، لِأَنَّهُ تَكَلَّمَ بِعِصْيَانٍ عَلَى ٱلرَّبِّ». | ٣٢ 32 |
೩೨ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.