< لُوقا 18 >
وَقَالَ لَهُمْ أَيْضًا مَثَلًا فِي أَنَّهُ يَنْبَغِي أَنْ يُصَلَّى كُلَّ حِينٍ وَلَا يُمَلَّ، | ١ 1 |
ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.
قَائِلًا: «كَانَ فِي مَدِينَةٍ قَاضٍ لَا يَخَافُ ٱللهَ وَلَا يَهَابُ إِنْسَانًا. | ٢ 2 |
“ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.
وَكَانَ فِي تِلْكَ ٱلْمَدِينَةِ أَرْمَلَةٌ. وَكَانَتْ تَأْتِي إِلَيْهِ قَائِلَةً: أَنْصِفْنِي مِنْ خَصْمِي! | ٣ 3 |
ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.
وَكَانَ لَا يَشَاءُ إِلَى زَمَانٍ. وَلَكِنْ بَعْدَ ذَلِكَ قَالَ فِي نَفْسِهِ: وَإِنْ كُنْتُ لَا أَخَافُ ٱللهَ وَلَا أَهَابُ إِنْسَانًا، | ٤ 4 |
“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,
فَإِنِّي لِأَجْلِ أَنَّ هَذِهِ ٱلْأَرْمَلَةَ تُزْعِجُنِي، أُنْصِفُهَا، لِئَلَّا تَأْتِيَ دَائِمًا فَتَقْمَعَنِي!». | ٥ 5 |
ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’” ಎಂದುಕೊಂಡನು.
وَقَالَ ٱلرَّبُّ: «ٱسْمَعُوا مَا يَقُولُ قَاضِي ٱلظُّلْمِ. | ٦ 6 |
ಅನಂತರ ಕರ್ತದೇವರು, “ಈ ಅನ್ಯಾಯಗಾರನಾದ ನ್ಯಾಯಾಧಿಪತಿಯು ಹೇಳಿಕೊಂಡಿದ್ದನ್ನು ಕೇಳಿರಿ.
أَفَلَا يُنْصِفُ ٱللهُ مُخْتَارِيهِ، ٱلصَّارِخِينَ إِلَيْهِ نَهَارًا وَلَيْلًا، وَهُوَ مُتَمَهِّلٌ عَلَيْهِمْ؟ | ٧ 7 |
ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?
أَقُولُ لَكُمْ: إِنَّهُ يُنْصِفُهُمْ سَرِيعًا! وَلَكِنْ مَتَى جَاءَ ٱبْنُ ٱلْإِنْسَانِ، أَلَعَلَّهُ يَجِدُ ٱلْإِيمَانَ عَلَى ٱلْأَرْضِ؟». | ٨ 8 |
ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.
وَقَالَ لِقَوْمٍ وَاثِقِينَ بِأَنْفُسِهِمْ أَنَّهُمْ أَبْرَارٌ، وَيَحْتَقِرُونَ ٱلْآخَرِينَ هَذَا ٱلْمَثَلَ: | ٩ 9 |
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು:
«إِنْسَانَانِ صَعِدَا إِلَى ٱلْهَيْكَلِ لِيُصَلِّيَا، وَاحِدٌ فَرِّيسِيٌّ وَٱلْآخَرُ عَشَّارٌ. | ١٠ 10 |
“ಇಬ್ಬರು ಪ್ರಾರ್ಥನೆಮಾಡುವುದಕ್ಕೆ ದೇವಾಲಯಕ್ಕೆ ಹೋದರು. ಅವರಲ್ಲಿ ಒಬ್ಬನು ಫರಿಸಾಯನು ಮತ್ತೊಬ್ಬನು ಸುಂಕದವನು.
أَمَّا ٱلْفَرِّيسِيُّ فَوَقَفَ يُصَلِّي فِي نَفْسِهِ هَكَذَا: اَللَّهُمَّ أَنَا أَشْكُرُكَ أَنِّي لَسْتُ مِثْلَ بَاقِي ٱلنَّاسِ ٱلْخَاطِفِينَ ٱلظَّالِمِينَ ٱلزُّنَاةِ، وَلَا مِثْلَ هَذَا ٱلْعَشَّارِ. | ١١ 11 |
ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.
أَصُومُ مَرَّتَيْنِ فِي ٱلْأُسْبُوعِ، وَأُعَشِّرُ كُلَّ مَا أَقْتَنِيهِ. | ١٢ 12 |
ನಾನು ವಾರಕ್ಕೆ ಎರಡು ಸಾರಿ ಉಪವಾಸ ಮಾಡುತ್ತೇನೆ. ನನಗಿರುವ ಎಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ,’ ಎಂದು ಹೇಳಿ ತನಗೆ ತಾನೇ ಪ್ರಾರ್ಥಿಸಿದನು.
وَأَمَّا ٱلْعَشَّارُ فَوَقَفَ مِنْ بَعِيدٍ، لَا يَشَاءُ أَنْ يَرْفَعَ عَيْنَيْهِ نَحْوَ ٱلسَّمَاءِ، بَلْ قَرَعَ عَلَى صَدْرِهِ قَائِلًا: ٱللهُمَّ ٱرْحَمْنِي، أَنَا ٱلْخَاطِئَ. | ١٣ 13 |
“ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.
أَقُولُ لَكُمْ: إِنَّ هَذَا نَزَلَ إِلَى بَيْتِهِ مُبَرَّرًا دُونَ ذَاكَ، لِأَنَّ كُلَّ مَنْ يَرْفَعُ نَفْسَهُ يَتَّضِعُ، وَمَنْ يَضَعُ نَفْسَهُ يَرْتَفِعُ». | ١٤ 14 |
“ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.
فَقَدَّمُوا إِلَيْهِ ٱلْأَطْفَالَ أَيْضًا لِيَلْمِسَهُمْ، فَلَمَّا رَآهُمُ ٱلتَّلَامِيذُ ٱنْتَهَرُوهُمْ. | ١٥ 15 |
ಚಿಕ್ಕಮಕ್ಕಳನ್ನು ಯೇಸು ಮುಟ್ಟುವಂತೆ ಕೆಲವರು ಚಿಕ್ಕಮಕ್ಕಳನ್ನು ಅವರ ಬಳಿಗೆ ತಂದರು ಆಗ ಅವರ ಶಿಷ್ಯರು ಇದನ್ನು ಕಂಡು, ಜನರನ್ನು ಗದರಿಸಿದರು.
أَمَّا يَسُوعُ فَدَعَاهُمْ وَقَالَ: «دَعُوا ٱلْأَوْلَادَ يَأْتُونَ إِلَيَّ وَلَا تَمْنَعُوهُمْ، لِأَنَّ لِمِثْلِ هَؤُلَاءِ مَلَكُوتَ ٱللهِ. | ١٦ 16 |
ಆದರೆ ಯೇಸುವೋ ಚಿಕ್ಕಮಕ್ಕಳನ್ನು ತಮ್ಮ ಹತ್ತಿರಕ್ಕೆ ಆಹ್ವಾನಿಸಿ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.
اَلْحَقَّ أَقُولُ لَكُمْ: مَنْ لَا يَقْبَلُ مَلَكُوتَ ٱللهِ مِثْلَ وَلَدٍ فَلَنْ يَدْخُلَهُ». | ١٧ 17 |
ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.
وَسَأَلَهُ رَئِيسٌ قَائِلًا: «أَيُّهَا ٱلْمُعَلِّمُ ٱلصَّالِحُ، مَاذَا أَعْمَلُ لِأَرِثَ ٱلْحَيَاةَ ٱلْأَبَدِيَّةَ؟» (aiōnios ) | ١٨ 18 |
ಒಬ್ಬ ಅಧಿಕಾರಿಯು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು. (aiōnios )
فَقَالَ لَهُ يَسُوعُ: «لِمَاذَا تَدْعُونِي صَالِحًا؟ لَيْسَ أَحَدٌ صَالِحًا إِلَّا وَاحِدٌ وَهُوَ ٱللهُ. | ١٩ 19 |
ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.
أَنْتَ تَعْرِفُ ٱلْوَصَايَا: لَا تَزْنِ. لَا تَقْتُلْ. لَا تَسْرِقْ. لَا تَشْهَدْ بِٱلزُّورِ. أَكْرِمْ أَبَاكَ وَأُمَّكَ». | ٢٠ 20 |
‘ವ್ಯಭಿಚಾರ ಮಾಡಬಾರದು, ನರಹತ್ಯೆ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.
فَقَالَ: «هَذِهِ كُلُّهَا حَفِظْتُهَا مُنْذُ حَدَاثَتِي». | ٢١ 21 |
ಅದಕ್ಕವನು, “ನನ್ನ ಬಾಲ್ಯದಿಂದಲೇ ನಾನು ಇವೆಲ್ಲವನ್ನೂ ಕೈಕೊಂಡಿದ್ದೇನೆ,” ಎಂದು ಹೇಳಿದನು.
فَلَمَّا سَمِعَ يَسُوعُ ذَلِكَ قَالَ لَهُ: «يُعْوِزُكَ أَيْضًا شَيْءٌ: بِعْ كُلَّ مَا لَكَ وَوَزِّعْ عَلَى ٱلْفُقَرَاءِ، فَيَكُونَ لَكَ كَنْزٌ فِي ٱلسَّمَاءِ، وَتَعَالَ ٱتْبَعْنِي». | ٢٢ 22 |
ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
فَلَمَّا سَمِعَ ذَلِكَ حَزِنَ، لِأَنَّهُ كَانَ غَنِيًّا جِدًّا. | ٢٣ 23 |
ಅವನು ಇದನ್ನು ಕೇಳಿ, ಬಹಳ ದುಃಖವುಳ್ಳವನಾದನು. ಏಕೆಂದರೆ ಅವನು ಬಹಳ ಸಿರಿವಂತನಾಗಿದ್ದನು.
فَلَمَّا رَآهُ يَسُوعُ قَدْ حَزِنَ، قَالَ: «مَا أَعْسَرَ دُخُولَ ذَوِي ٱلْأَمْوَالِ إِلَى مَلَكُوتِ ٱللهِ! | ٢٤ 24 |
ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ಕಂಡು, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!
لِأَنَّ دُخُولَ جَمَلٍ مِنْ ثَقْبِ إِبْرَةٍ أَيْسَرُ مِنْ أَنْ يَدْخُلَ غَنِيٌّ إِلَى مَلَكُوتِ ٱللهِ!». | ٢٥ 25 |
ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.
فَقَالَ ٱلَّذِينَ سَمِعُوا: «فَمَنْ يَسْتَطِيعُ أَنْ يَخْلُصَ؟» | ٢٦ 26 |
ಇದನ್ನು ಕೇಳಿದವರು, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದರು.
فَقَالَ: «غَيْرُ ٱلْمُسْتَطَاعِ عِنْدَ ٱلنَّاسِ مُسْتَطَاعٌ عِنْدَ ٱللهِ». | ٢٧ 27 |
ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.
فَقَالَ بُطْرُسُ: «هَا نَحْنُ قَدْ تَرَكْنَا كُلَّ شَيْءٍ وَتَبِعْنَاكَ». | ٢٨ 28 |
ಆಗ ಪೇತ್ರನು, “ಇಗೋ, ನಾವು ಎಲ್ಲವನ್ನೂ ಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು.
فَقَالَ لَهُمُ: «ٱلْحَقَّ أَقُولُ لَكُمْ: إِنْ لَيْسَ أَحَدٌ تَرَكَ بَيْتًا أَوْ وَالِدَيْنِ أَوْ إِخْوَةً أَوِ ٱمْرَأَةً أَوْ أَوْلَادًا مِنْ أَجْلِ مَلَكُوتِ ٱللهِ، | ٢٩ 29 |
ಯೇಸು ಅವರಿಗೆ, “ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಮನೆಯನ್ನಾದರೂ ಹೆಂಡತಿಯನ್ನಾದರೂ ಸಹೋದರರನ್ನಾದರೂ ತಂದೆತಾಯಿಗಳನ್ನಾದರೂ ಮಕ್ಕಳನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು,
إِلَّا وَيَأْخُذُ فِي هَذَا ٱلزَّمَانِ أَضْعَافًا كَثِيرَةً، وَفِي ٱلدَّهْرِ ٱلْآتِي ٱلْحَيَاةَ ٱلْأَبَدِيَّةَ». (aiōn , aiōnios ) | ٣٠ 30 |
ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು. (aiōn , aiōnios )
وَأَخَذَ ٱلِٱثْنَيْ عَشَرَ وَقَالَ لَهُمْ: «هَا نَحْنُ صَاعِدُونَ إِلَى أُورُشَلِيمَ، وَسَيَتِمُّ كُلُّ مَا هُوَ مَكْتُوبٌ بِٱلْأَنْبِيَاءِ عَنِ ٱبْنِ ٱلْإِنْسَانِ، | ٣١ 31 |
ಯೇಸು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ, ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಪ್ರವಾದಿಗಳಿಂದ ಬರೆದಿರುವುದೆಲ್ಲವೂ ನೆರವೇರಬೇಕು.
لِأَنَّهُ يُسَلَّمُ إِلَى ٱلْأُمَمِ، وَيُسْتَهْزَأُ بِهِ، وَيُشْتَمُ وَيُتْفَلُ عَلَيْهِ، | ٣٢ 32 |
ನಾನು ಯೆಹೂದ್ಯರಲ್ಲದವರ ಕೈಗೆ ಸೆರೆಯಾಗುವೆನು. ಅವರು ನನ್ನನ್ನು ಹಾಸ್ಯಮಾಡಿ, ನನಗೆ ಅವಮಾನ ಮಾಡಿ, ನನ್ನ ಮೇಲೆ ಉಗುಳುವರು.
وَيَجْلِدُونَهُ، وَيَقْتُلُونَهُ، وَفِي ٱلْيَوْمِ ٱلثَّالِثِ يَقُومُ». | ٣٣ 33 |
ಇದಲ್ಲದೆ ಅವರು ನನ್ನನ್ನು ಕೊರಡೆಗಳಿಂದ ಹೊಡೆದು, ಕೊಂದುಹಾಕುವರು. ಆದರೆ ನಾನು ಮೂರನೆಯ ದಿನ ಜೀವಿತನಾಗಿ ಎದ್ದು ಬರುವೆನು,” ಎಂದರು.
وَأَمَّا هُمْ فَلَمْ يَفْهَمُوا مِنْ ذَلِكَ شَيْئًا، وَكَانَ هَذَا ٱلْأَمْرُ مُخْفًى عَنْهُمْ، وَلَمْ يَعْلَمُوا مَا قِيلَ. | ٣٤ 34 |
ಆದರೆ ಶಿಷ್ಯರಿಗೆ ಇವುಗಳಲ್ಲಿ ಒಂದೂ ಅರ್ಥವಾಗಲಿಲ್ಲ. ಈ ಮಾತುಗಳು ಅವರಿಗೆ ಮರೆಯಾಗಿದ್ದುದರಿಂದ, ಯೇಸು ಹೇಳಿದವುಗಳನ್ನು ಅವರು ತಿಳಿದುಕೊಳ್ಳಲಿಲ್ಲ.
وَلَمَّا ٱقْتَرَبَ مِنْ أَرِيحَا كَانَ أَعْمَى جَالِسًا علَى ٱلطَّرِيقِ يَسْتَعْطِي. | ٣٥ 35 |
ಯೇಸು ಯೆರಿಕೋವಿನ ಸಮೀಪಕ್ಕೆ ಬಂದಾಗ, ಒಬ್ಬ ಕುರುಡನು ದಾರಿಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.
فَلَمَّا سَمِعَ ٱلْجَمْعَ مُجْتَازًا سَأَلَ: «مَا عَسَى أَنْ يَكُونَ هَذَا؟». | ٣٦ 36 |
ಜನಸಮೂಹವು ಹಾದು ಹೋಗುವುದನ್ನು ಇವನು ಕೇಳಿಸಿಕೊಂಡು, ಅದೇನೆಂದು ವಿಚಾರಿಸಿದನು.
فَأَخْبَرُوهُ أَنَّ يَسُوعَ ٱلنَّاصِرِيَّ مُجْتَازٌ. | ٣٧ 37 |
“ನಜರೇತಿನ ಯೇಸು ಹಾದು ಹೋಗುತ್ತಿದ್ದಾರೆ,” ಎಂದು ಜನರು ಅವನಿಗೆ ಹೇಳಿದರು.
فَصَرَخَ قَائِلًا: «يَا يَسُوعُ ٱبْنَ دَاوُدَ، ٱرْحَمْنِي!». | ٣٨ 38 |
ಆಗ ಅವನು, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!” ಎಂದು ಗಟ್ಟಿಯಾಗಿ ಕೂಗಿಕೊಂಡನು.
فَٱنْتَهَرَهُ ٱلْمُتَقَدِّمُونَ لِيَسْكُتَ، أَمَّا هُوَ فَصَرَخَ أَكْثَرَ كَثِيرًا: «يَا ٱبْنَ دَاوُدَ، ٱرْحَمْنِي!». | ٣٩ 39 |
ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
فَوَقَفَ يَسُوعُ وَأَمَرَ أَنْ يُقَدَّمَ إِلَيْهِ. وَلَمَّا ٱقْتَرَبَ سَأَلَهُ | ٤٠ 40 |
ಆಗ ಯೇಸು ನಿಂತು ಅವನನ್ನು ತಮ್ಮ ಬಳಿಗೆ ಕರೆತರುವಂತೆ ಅಪ್ಪಣೆಕೊಟ್ಟರು. ಅವನು ಯೇಸುವಿನ ಬಳಿಗೆ ಬಂದಾಗ, ಅವರು ಅವನಿಗೆ,
قَائِلًا: «مَاذَا تُرِيدُ أَنْ أَفْعَلَ بِكَ؟». فَقَالَ: «يَاسَيِّدُ، أَنْ أُبْصِرَ!». | ٤١ 41 |
“ನನ್ನಿಂದ ನಿನಗೇನಾಗಬೇಕು?” ಎಂದು ಕೇಳಿದರು. ಅದಕ್ಕವನು, “ಕರ್ತದೇವರೇ, ನನಗೆ ದೃಷ್ಟಿ ಕೊಡಿ,” ಎಂದನು.
فَقَالَ لَهُ يَسُوعُ: «أَبْصِرْ. إِيمَانُكَ قَدْ شَفَاكَ». | ٤٢ 42 |
ಆಗ ಯೇಸು ಅವನಿಗೆ, “ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.
وَفِي ٱلْحَالِ أَبْصَرَ، وَتَبِعَهُ وَهُوَ يُمَجِّدُ ٱللهَ. وَجَمِيعُ ٱلشَّعْبِ إِذْ رَأَوْا سَبَّحُوا ٱللهَ. | ٤٣ 43 |
ಕೂಡಲೇ ಅವನು ದೃಷ್ಟಿಯನ್ನು ಪಡೆದನು. ಆಗ ಅವನು ದೇವರನ್ನು ಸ್ತುತಿಸುತ್ತಾ, ಯೇಸುವನ್ನು ಹಿಂಬಾಲಿಸಿದನು. ಎಲ್ಲಾ ಜನರು ಅದನ್ನು ಕಂಡು, ದೇವರಿಗೆ ಸ್ತೋತ್ರ ಸಲ್ಲಿಸಿದರು.