< مَرْقُس 10 >
وَقَامَ مِنْ هُنَاكَ وَجَاءَ إِلَى تُخُومِ ٱلْيَهُودِيَّةِ مِنْ عَبْرِ ٱلْأُرْدُنِّ. فَٱجْتَمَعَ إِلَيْهِ جُمُوعٌ أَيْضًا، وَكَعَادَتِهِ كَانَ أَيْضًا يُعَلِّمُهُمْ. | ١ 1 |
೧ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
فَتَقَدَّمَ ٱلْفَرِّيسِيُّونَ وَسَأَلُوهُ: «هَلْ يَحِلُّ لِلرَّجُلِ أَنْ يُطَلِّقَ ٱمْرَأَتَهُ؟». لِيُجَرِّبُوهُ. | ٢ 2 |
೨ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.
فَأَجَابَ وَقَالَ لَهُمْ: «بِمَاذَا أَوْصَاكُمْ مُوسَى؟». | ٣ 3 |
೩ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು.
فَقَالُوا: «مُوسَى أَذِنَ أَنْ يُكْتَبَ كِتَابُ طَلَاقٍ، فَتُطَلَّقُ». | ٤ 4 |
೪ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು.
فَأَجَابَ يَسُوعُ وَقَالَ لَهُمْ: «مِنْ أَجْلِ قَسَاوَةِ قُلُوبِكُمْ كَتَبَ لَكُمْ هَذِهِ ٱلْوَصِيَّةَ، | ٥ 5 |
೫ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು.
وَلَكِنْ مِنْ بَدْءِ ٱلْخَلِيقَةِ، ذَكَرًا وَأُنْثَى خَلَقَهُمَا ٱللهُ. | ٦ 6 |
೬ದೇವರಾದರೋ ಸೃಷ್ಟಿಯ ಮೊದಲಿನಿಂದಲೇಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.
مِنْ أَجْلِ هَذَا يَتْرُكُ ٱلرَّجُلُ أَبَاهُ وَأُمَّهُ وَيَلْتَصِقُ بِٱمْرَأَتِهِ، | ٧ 7 |
೭ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
وَيَكُونُ ٱلِٱثْنَانِ جَسَدًا وَاحِدًا. إِذًا لَيْسَا بَعْدُ ٱثْنَيْنِ بَلْ جَسَدٌ وَاحِدٌ. | ٨ 8 |
೮ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.
فَٱلَّذِي جَمَعَهُ ٱللهُ لَا يُفَرِّقْهُ إِنْسَانٌ». | ٩ 9 |
೯ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.
ثُمَّ فِي ٱلْبَيْتِ سَأَلَهُ تَلَامِيذُهُ أَيْضًا عَنْ ذَلِكَ، | ١٠ 10 |
೧೦ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.
فَقَالَ لَهُمْ: «مَنْ طَلَّقَ ٱمْرَأَتَهُ وَتَزَوَّجَ بِأُخْرَى يَزْنِي عَلَيْهَا. | ١١ 11 |
೧೧ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;
وَإِنْ طَلَّقَتِ ٱمْرَأَةٌ زَوْجَهَا وَتَزَوَّجَتْ بِآخَرَ تَزْنِي». | ١٢ 12 |
೧೨ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.
وَقَدَّمُوا إِلَيْهِ أَوْلَادًا لِكَيْ يَلْمِسَهُمْ. وَأَمَّا ٱلتَّلَامِيذُ فَٱنْتَهَرُوا ٱلَّذِينَ قَدَّمُوهُمْ. | ١٣ 13 |
೧೩ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.
فَلَمَّا رَأَى يَسُوعُ ذَلِكَ ٱغْتَاظَ وَقَالَ لَهُمْ: «دَعُوا ٱلْأَوْلَادَ يَأْتُونَ إِلَيَّ وَلَا تَمْنَعُوهُمْ، لِأَنَّ لِمِثْلِ هَؤُلَاءِ مَلَكُوتَ ٱللهِ. | ١٤ 14 |
೧೪ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
اَلْحَقَّ أَقُولُ لَكُمْ: مَنْ لَا يَقْبَلُ مَلَكُوتَ ٱللهِ مِثْلَ وَلَدٍ فَلَنْ يَدْخُلَهُ». | ١٥ 15 |
೧೫ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.
فَٱحْتَضَنَهُمْ وَوَضَعَ يَدَيْهِ عَلَيْهِمْ وَبَارَكَهُمْ. | ١٦ 16 |
೧೬ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
وَفِيمَا هُوَ خَارِجٌ إِلَى ٱلطَّرِيقِ، رَكَضَ وَاحِدٌ وَجَثَا لَهُ وَسَأَلَهُ: «أَيُّهَا ٱلْمُعَلِّمُ ٱلصَّالِحُ، مَاذَا أَعْمَلُ لِأَرِثَ ٱلْحَيَاةَ ٱلْأَبَدِيَّةَ؟». (aiōnios ) | ١٧ 17 |
೧೭ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು. (aiōnios )
فَقَالَ لَهُ يَسُوعُ: «لِمَاذَا تَدْعُونِي صَالِحًا؟ لَيْسَ أَحَدٌ صَالِحًا إِلَّا وَاحِدٌ وَهُوَ ٱللهُ. | ١٨ 18 |
೧೮ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.
أَنْتَ تَعْرِفُ ٱلْوَصَايَا: لَا تَزْنِ. لَا تَقْتُلْ. لَا تَسْرِقْ. لَا تَشْهَدْ بِٱلزُّورِ. لَا تَسْلُبْ. أَكْرِمْ أَبَاكَ وَأُمَّكَ». | ١٩ 19 |
೧೯ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
فَأَجَابَ وَقَالَ لَهُ: «يَا مُعَلِّمُ، هَذِهِ كُلُّهَا حَفِظْتُهَا مُنْذُ حَدَاثَتِي». | ٢٠ 20 |
೨೦ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು,
فَنَظَرَ إِلَيْهِ يَسُوعُ وَأَحَبَّهُ، وَقَالَ لَهُ: «يُعْوِزُكَ شَيْءٌ وَاحِدٌ: اِذْهَبْ بِعْ كُلَّ مَا لَكَ وَأَعْطِ ٱلْفُقَرَاءَ، فَيَكُونَ لَكَ كَنْزٌ فِي ٱلسَّمَاءِ، وَتَعَالَ ٱتْبَعْنِي حَامِلًا ٱلصَّلِيبَ». | ٢١ 21 |
೨೧ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
فَٱغْتَمَّ عَلَى ٱلْقَوْلِ وَمَضَى حَزِينًا، لِأَنَّهُ كَانَ ذَا أَمْوَالٍ كَثِيرَةٍ. | ٢٢ 22 |
೨೨ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.
فَنَظَرَ يَسُوعُ حَوْلَهُ وَقَالَ لِتَلَامِيذِهِ: «مَا أَعْسَرَ دُخُولَ ذَوِي ٱلْأَمْوَالِ إِلَى مَلَكُوتِ ٱللهِ!». | ٢٣ 23 |
೨೩ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.
فَتَحَيَّرَ ٱلتَّلَامِيذُ مِنْ كَلَامِهِ. فَأَجَابَ يَسُوعُ أَيْضًا وَقَالَ لَهُمْ: «يَا بَنِيَّ، مَا أَعْسَرَ دُخُولَ ٱلْمُتَّكِلِينَ عَلَى ٱلْأَمْوَالِ إِلَى مَلَكُوتِ ٱللهِ! | ٢٤ 24 |
೨೪ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.
مُرُورُ جَمَلٍ مِنْ ثَقْبِ إِبْرَةٍ أَيْسَرُ مِنْ أَنْ يَدْخُلَ غَنِيٌّ إِلَى مَلَكُوتِ ٱللهِ». | ٢٥ 25 |
೨೫ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು.
فَبُهِتُوا إِلَى ٱلْغَايَةِ قَائِلِينَ بَعْضُهُمْ لِبَعْضٍ: «فَمَنْ يَسْتَطِيعُ أَنْ يَخْلُصَ؟». | ٢٦ 26 |
೨೬ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
فَنَظَرَ إِلَيْهِمْ يَسُوعُ وَقَالَ: «عِنْدَ ٱلنَّاسِ غَيْرُ مُسْتَطَاعٍ، وَلَكِنْ لَيْسَ عِنْدَ ٱللهِ، لِأَنَّ كُلَّ شَيْءٍ مُسْتَطَاعٌ عِنْدَ ٱللهِ». | ٢٧ 27 |
೨೭ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.
وَٱبْتَدَأَ بُطْرُسُ يَقُولُ لَهُ: «هَا نَحْنُ قَدْ تَرَكْنَا كُلَّ شَيْءٍ وَتَبِعْنَاكَ». | ٢٨ 28 |
೨೮ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು.
فَأَجَابَ يَسُوعُ وَقَالَ: «ٱلْحَقَّ أَقُولُ لَكُمْ: لَيْسَ أَحَدٌ تَرَكَ بَيْتًا أَوْ إِخْوَةً أَوْ أَخَوَاتٍ أَوْ أَبًا أَوْ أُمًّا أَوِ ٱمْرَأَةً أَوْ أَوْلَادًا أَوْ حُقُولًا، لِأَجْلِي وَلِأَجْلِ ٱلْإِنْجِيلِ، | ٢٩ 29 |
೨೯ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,
إِلَّا وَيَأْخُذُ مِئَةَ ضِعْفٍ ٱلْآنَ فِي هَذَا ٱلزَّمَانِ، بُيُوتًا وَإِخْوَةً وَأَخَوَاتٍ وَأُمَّهَاتٍ وَأَوْلَادًا وَحُقُولًا، مَعَ ٱضْطِهَادَاتٍ، وَفِي ٱلدَّهْرِ ٱلْآتِي ٱلْحَيَاةَ ٱلْأَبَدِيَّةَ. (aiōn , aiōnios ) | ٣٠ 30 |
೩೦ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು. (aiōn , aiōnios )
وَلَكِنْ كَثِيرُونَ أَوَّلُونَ يَكُونُونَ آخِرِينَ، وَٱلْآخِرُونَ أَوَّلِينَ». | ٣١ 31 |
೩೧ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು” ಎಂದು ಹೇಳಿದನು.
وَكَانُوا فِي ٱلطَّرِيقِ صَاعِدِينَ إِلَى أُورُشَلِيمَ وَيَتَقَدَّمُهُمْ يَسُوعُ، وَكَانُوا يَتَحَيَّرُونَ. وَفِيمَا هُمْ يَتْبَعُونَ كَانُوا يَخَافُونَ. فَأَخَذَ ٱلِٱثْنَيْ عَشَرَ أَيْضًا وَٱبْتَدَأَ يَقُولُ لَهُمْ عَمَّا سَيَحْدُثُ لَهُ: | ٣٢ 32 |
೩೨ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;
«هَا نَحْنُ صَاعِدُونَ إِلَى أُورُشَلِيمَ، وَٱبْنُ ٱلْإِنْسَانِ يُسَلَّمُ إِلَى رُؤَسَاءِ ٱلْكَهَنَةِ وَٱلْكَتَبَةِ، فَيَحْكُمُونَ عَلَيْهِ بِٱلْمَوْتِ، وَيُسَلِّمُونَهُ إِلَى ٱلْأُمَمِ، | ٣٣ 33 |
೩೩ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.
فَيَهْزَأُونَ بِهِ وَيَجْلِدُونَهُ وَيَتْفُلُونَ عَلَيْهِ وَيَقْتُلُونَهُ، وَفِي ٱلْيَوْمِ ٱلثَّالِثِ يَقُومُ». | ٣٤ 34 |
೩೪ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
وَتَقَدَّمَ إِلَيْهِ يَعْقُوبُ وَيُوحَنَّا ٱبْنَا زَبْدِي قَائِلَيْنِ: «يَا مُعَلِّمُ، نُرِيدُ أَنْ تَفْعَلَ لَنَا كُلَّ مَا طَلَبْنَا». | ٣٥ 35 |
೩೫ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು.
فَقَالَ لَهُمَا: «مَاذَا تُرِيدَانِ أَنْ أَفْعَلَ لَكُمَا؟». | ٣٦ 36 |
೩೬ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು,
فَقَالَا لَهُ: «أَعْطِنَا أَنْ نَجْلِسَ وَاحِدٌ عَنْ يَمِينِكَ وَٱلْآخَرُ عَنْ يَسَارِكَ فِي مَجْدِكَ». | ٣٧ 37 |
೩೭ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು.
فَقَالَ لَهُمَا يَسُوعُ: «لَسْتُمَا تَعْلَمَانِ مَا تَطْلُبَانِ. أَتَسْتَطِيعَانِ أَنْ تَشْرَبَا ٱلْكَأْسَ ٱلَّتِي أَشْرَبُهَا أَنَا، وَأَنْ تَصْطَبِغَا بِٱلصِّبْغَةِ ٱلَّتِي أَصْطَبغُ بِهَا أَنَا؟» | ٣٨ 38 |
೩೮ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.
فَقَالَا لَهُ: «نَسْتَطِيعُ». فَقَالَ لَهُمَا يَسُوعُ: «أَمَّا ٱلْكَأْسُ ٱلَّتِي أَشْرَبُهَا أَنَا فَتَشْرَبَانِهَا، وَبَالصِّبْغَةِ ٱلَّتِي أَصْطَبِغُ بِهَا أَنَا تَصْطَبِغَانِ. | ٣٩ 39 |
೩೯ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.
وَأَمَّا ٱلْجُلُوسُ عَنْ يَمِينِي وَعَنْ يَسَارِي فَلَيْسَ لِي أَنْ أُعْطِيَهُ إِلَّا لِلَّذِينَ أُعِدَّ لَهُمْ». | ٤٠ 40 |
೪೦ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
وَلَمَّا سَمِعَ ٱلْعَشَرَةُ ٱبْتَدَأُوا يَغْتَاظُونَ مِنْ أَجْلِ يَعْقُوبَ وَيُوحَنَّا. | ٤١ 41 |
೪೧ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.
فَدَعَاهُمْ يَسُوعُ وَقَالَ لَهُمْ: «أَنْتُمْ تَعْلَمُونَ أَنَّ ٱلَّذِينَ يُحْسَبُونَ رُؤَسَاءَ ٱلْأُمَمِ يَسُودُونَهُمْ، وَأَنَّ عُظَمَاءَهُمْ يَتَسَلَّطُونَ عَلَيْهِمْ. | ٤٢ 42 |
೪೨ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
فَلَا يَكُونُ هَكَذَا فِيكُمْ. بَلْ مَنْ أَرَادَ أَنْ يَصِيرَ فِيكُمْ عَظِيمًا، يَكُونُ لَكُمْ خَادِمًا، | ٤٣ 43 |
೪೩ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.
وَمَنْ أَرَادَ أَنْ يَصِيرَ فِيكُمْ أَوَّلًا، يَكُونُ لِلْجَمِيعِ عَبْدًا. | ٤٤ 44 |
೪೪ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು.
لِأَنَّ ٱبْنَ ٱلْإِنْسَانِ أَيْضًا لَمْ يَأْتِ لِيُخْدَمَ بَلْ لِيَخْدِمَ وَلِيَبْذِلَ نَفْسَهُ فِدْيَةً عَنْ كَثِيرِينَ». | ٤٥ 45 |
೪೫ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.
وَجَاءُوا إِلَى أَرِيحَا. وَفِيمَا هُوَ خَارِجٌ مِنْ أَرِيحَا مَعَ تَلَامِيذِهِ وَجَمْعٍ غَفِيرٍ، كَانَ بَارْتِيمَاوُسُ ٱلْأَعْمَى ٱبْنُ تِيمَاوُسَ جَالِسًا عَلَى ٱلطَّرِيقِ يَسْتَعْطِي. | ٤٦ 46 |
೪೬ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
فَلَمَّا سَمِعَ أَنَّهُ يَسُوعُ ٱلنَّاصِرِيُّ، ٱبْتَدَأَ يَصْرُخُ وَيَقُولُ: «يَا يَسُوعُ ٱبْنَ دَاوُدَ، ٱرْحَمْنِي!» | ٤٧ 47 |
೪೭ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.
فَٱنْتَهَرَهُ كَثِيرُونَ لِيَسْكُتَ، فَصَرَخَ أَكْثَرَ كَثِيرًا: «يَا ٱبْنَ دَاوُدَ، ٱرْحَمْنِي!». | ٤٨ 48 |
೪೮ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.
فَوَقَفَ يَسُوعُ وَأَمَرَ أَنْ يُنَادَى. فَنَادَوْا ٱلْأَعْمَى قَائِلِينَ لَهُ: «ثِقْ! قُمْ! هُوَذَا يُنَادِيكَ». | ٤٩ 49 |
೪೯ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.
فَطَرَحَ رِدَاءَهُ وَقَامَ وَجَاءَ إِلَى يَسُوعَ. | ٥٠ 50 |
೫೦ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.
فَأَجَابَ يَسُوعُ وَقَالَ لَهُ: «مَاذَا تُرِيدُ أَنْ أَفْعَلَ بِكَ؟» فَقَالَ لَهُ ٱلْأَعْمَى: «يَا سَيِّدِي، أَنْ أُبْصِرَ!». | ٥١ 51 |
೫೧ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.
فَقَالَ لَهُ يَسُوعُ: «ٱذْهَبْ. إِيمَانُكَ قَدْ شَفَاكَ». فَلِلْوَقْتِ أَبْصَرَ، وَتَبِعَ يَسُوعَ فِي ٱلطَّرِيقِ. | ٥٢ 52 |
೫೨ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.