< مَرْقُس 2 >
ثُمَّ دَخَلَ كَفْرَنَاحُومَ أَيْضًا بَعْدَ أَيَّامٍ، فَسُمِعَ أَنَّهُ فِي بَيْتٍ. | ١ 1 |
೧ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.
وَلِلْوَقْتِ ٱجْتَمَعَ كَثِيرُونَ حَتَّى لَمْ يَعُدْ يَسَعُ وَلَا مَا حَوْلَ ٱلْبَابِ. فَكَانَ يُخَاطِبُهُمْ بِٱلْكَلِمَةِ. | ٢ 2 |
೨ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
وَجَاءُوا إِلَيْهِ مُقَدِّمِينَ مَفْلُوجًا يَحْمِلُهُ أَرْبَعَةٌ. | ٣ 3 |
೩ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.
وَإِذْ لَمْ يَقْدِرُوا أَنْ يَقْتَرِبُوا إِلَيْهِ مِنْ أَجْلِ ٱلْجَمْعِ، كَشَفُوا ٱلسَّقْفَ حَيْثُ كَانَ. وَبَعْدَ مَا نَقَبُوهُ دَلَّوْا ٱلسَّرِيرَ ٱلَّذِي كَانَ ٱلْمَفْلُوجُ مُضْطَجِعًا عَلَيْهِ. | ٤ 4 |
೪ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
فَلَمَّا رَأَى يَسُوعُ إِيمَانَهُمْ، قَالَ لِلْمَفْلُوجِ: «يَا بُنَيَّ، مَغْفُورَةٌ لَكَ خَطَايَاكَ». | ٥ 5 |
೫ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
وَكَانَ قَوْمٌ مِنَ ٱلْكَتَبَةِ هُنَاكَ جَالِسِينَ يُفَكِّرُونَ فِي قُلُوبِهِمْ: | ٦ 6 |
೬ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;
«لِمَاذَا يَتَكَلَّمُ هَذَا هَكَذَا بِتَجَادِيفَ؟ مَنْ يَقْدِرُ أَنْ يَغْفِرَ خَطَايَا إِلَّا ٱللهُ وَحْدَهُ؟». | ٧ 7 |
೭“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.
فَلِلْوَقْتِ شَعَرَ يَسُوعُ بِرُوحِهِ أَنَّهُمْ يُفَكِّرُونَ هَكَذَا فِي أَنْفُسِهِمْ، فَقَالَ لَهُمْ: «لِمَاذَا تُفَكِّرُونَ بِهَذَا فِي قُلُوبِكُمْ؟ | ٨ 8 |
೮ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?
أَيُّمَا أَيْسَرُ، أَنْ يُقَالَ لِلْمَفْلُوجِ: مَغْفُورَةٌ لَكَ خَطَايَاكَ، أَمْ أَنْ يُقَالَ: قُمْ وَٱحْمِلْ سَرِيرَكَ وَٱمْشِ؟ | ٩ 9 |
೯ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?
وَلَكِنْ لِكَيْ تَعْلَمُوا أَنَّ لِٱبْنِ ٱلْإِنْسَانِ سُلْطَانًا عَلَى ٱلْأَرْضِ أَنْ يَغْفِرَ ٱلْخَطَايَا». قَالَ لِلْمَفْلُوجِ: | ١٠ 10 |
೧೦ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ
«لَكَ أَقُولُ: قُمْ وَٱحْمِلْ سَرِيرَكَ وَٱذْهَبْ إِلَى بَيْتِكَ!». | ١١ 11 |
೧೧“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು.
فَقَامَ لِلْوَقْتِ وَحَمَلَ ٱلسَّرِيرَ وَخَرَجَ قُدَّامَ ٱلْكُلِّ، حَتَّى بُهِتَ ٱلْجَمِيعُ وَمَجَّدُوا ٱللهَ قَائِلِينَ: «مَا رَأَيْنَا مِثْلَ هَذَا قَطُّ!». | ١٢ 12 |
೧೨ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
ثُمَّ خَرَجَ أَيْضًا إِلَى ٱلْبَحْرِ. وَأَتَى إِلَيْهِ كُلُّ ٱلْجَمْعِ فَعَلَّمَهُمْ. | ١٣ 13 |
೧೩ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.
وَفِيمَا هُوَ مُجْتَازٌ رَأَى لَاوِيَ بْنَ حَلْفَى جَالِسًا عِنْدَ مَكَانِ ٱلْجِبَايَةِ، فَقَالَ لَهُ: «ٱتْبَعْنِي». فَقَامَ وَتَبِعَهُ. | ١٤ 14 |
೧೪ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
وَفِيمَا هُوَ مُتَّكِئٌ فِي بَيْتِهِ كَانَ كَثِيرُونَ مِنَ ٱلْعَشَّارِينَ وَٱلْخُطَاةِ يَتَّكِئُونَ مَعَ يَسُوعَ وَتَلَامِيذِهِ، لِأَنَّهُمْ كَانُوا كَثِيرِينَ وَتَبِعُوهُ. | ١٥ 15 |
೧೫ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.
وَأَمَّا ٱلْكَتَبَةُ وَٱلْفَرِّيسِيُّونَ فَلَمَّا رَأَوْهُ يَأْكُلُ مَعَ ٱلْعَشَّارِينَ وَٱلْخُطَاةِ، قَالُوا لِتَلَامِيذِهِ: «مَا بَالُهُ يَأْكُلُ وَيَشْرَبُ مَعَ ٱلْعَشَّارِينَ وَٱلْخُطَاةِ؟». | ١٦ 16 |
೧೬ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
فَلَمَّا سَمِعَ يَسُوعُ قَالَ لَهُمْ: «لَا يَحْتَاجُ ٱلْأَصِحَّاءُ إِلَى طَبِيبٍ بَلِ ٱلْمَرْضَى. لَمْ آتِ لِأَدْعُوَ أَبْرَارًا بَلْ خُطَاةً إِلَى ٱلتَّوْبَةِ». | ١٧ 17 |
೧೭ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
وَكَانَ تَلَامِيذُ يُوحَنَّا وَٱلْفَرِّيسِيِّينَ يَصُومُونَ، فَجَاءُوا وَقَالُوا لَهُ: «لِمَاذَا يَصُومُ تَلَامِيذُ يُوحَنَّا وَٱلْفَرِّيسِيِّينَ، وَأَمَّا تَلَامِيذُكَ فَلَا يَصُومُونَ؟». | ١٨ 18 |
೧೮ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
فَقَالَ لَهُمْ يَسُوعُ: «هَلْ يَسْتَطِيعُ بَنُو ٱلْعُرْسِ أَنْ يَصُومُوا وَٱلْعَرِيسُ مَعَهُمْ؟ مَا دَامَ ٱلْعَرِيسُ مَعَهُمْ لَا يَسْتَطِيعُونَ أَنْ يَصُومُوا. | ١٩ 19 |
೧೯ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
وَلَكِنْ سَتَأْتِي أَيَّامٌ حِينَ يُرْفَعُ ٱلْعَرِيسُ عَنْهُمْ، فَحِينَئِذٍ يَصُومُونَ فِي تِلْكَ ٱلْأَيَّامِ. | ٢٠ 20 |
೨೦ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.
لَيْسَ أَحَدٌ يَخِيطُ رُقْعَةً مِنْ قِطْعَةٍ جَدِيدَةٍ عَلَى ثَوْبٍ عَتِيقٍ، وَإِلَّا فَٱلْمِلْءُ ٱلْجَدِيدُ يَأْخُذُ مِنَ ٱلْعَتِيقِ فَيَصِيرُ ٱلْخَرْقُ أَرْدَأَ. | ٢١ 21 |
೨೧“ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
وَلَيْسَ أَحَدٌ يَجْعَلُ خَمْرًا جَدِيدَةً فِي زِقَاقٍ عَتِيقَةٍ، لِئَلَّا تَشُقَّ ٱلْخَمْرُ ٱلْجَدِيدَةُ ٱلزِّقَاقَ، فَٱلْخَمْرُ تَنْصَبُّ وَٱلزِّقَاقُ تَتْلَفُ. بَلْ يَجْعَلُونَ خَمْرًا جَدِيدَةً فِي زِقَاقٍ جَدِيدَةٍ». | ٢٢ 22 |
೨೨ಮತ್ತು ಹಳೆಯಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
وَٱجْتَازَ فِي ٱلسَّبْتِ بَيْنَ ٱلزُّرُوعِ، فَٱبْتَدَأَ تَلَامِيذُهُ يَقْطِفُونَ ٱلسَّنَابِلَ وَهُمْ سَائِرُونَ. | ٢٣ 23 |
೨೩ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
فَقَالَ لَهُ ٱلْفَرِّيسِيُّونَ: «ٱنْظُرْ! لِمَاذَا يَفْعَلُونَ فِي ٱلسَّبْتِ مَا لَا يَحِلُّ؟». | ٢٤ 24 |
೨೪ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.
فَقَالَ لَهُمْ: «أَمَا قَرَأْتُمْ قَطُّ مَا فَعَلَهُ دَاوُدُ حِينَ ٱحْتَاجَ وَجَاعَ هُوَ وَٱلَّذِينَ مَعَهُ؟ | ٢٥ 25 |
೨೫ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?
كَيْفَ دَخَلَ بَيْتَ ٱللهِ فِي أَيَّامِ أَبِيَأَثَارَ رَئِيسِ ٱلْكَهَنَةِ، وَأَكَلَ خُبْزَ ٱلتَّقْدِمَةِ ٱلَّذِي لَا يَحِلُّ أَكْلُهُ إِلَّا لِلْكَهَنَةِ، وَأَعْطَى ٱلَّذِينَ كَانُوا مَعَهُ أَيْضًا». | ٢٦ 26 |
೨೬ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,
ثُمَّ قَالَ لَهُمُ: «ٱلسَّبْتُ إِنَّمَا جُعِلَ لِأَجْلِ ٱلْإِنْسَانِ، لَا ٱلْإِنْسَانُ لِأَجْلِ ٱلسَّبْتِ. | ٢٧ 27 |
೨೭“ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.
إِذًا ٱبْنُ ٱلْإِنْسَانِ هُوَ رَبُّ ٱلسَّبْتِ أَيْضًا». | ٢٨ 28 |
೨೮ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು.