< مَتَّى 12 >

فِي ذَلِكَ ٱلْوَقْتِ ذَهَبَ يَسُوعُ فِي ٱلسَّبْتِ بَيْنَ ٱلزُّرُوعِ، فَجَاعَ تَلَامِيذُهُ وَٱبْتَدَأُوا يَقْطِفُونَ سَنَابِلَ وَيَأْكُلُونَ. ١ 1
ಯೇಸು ಒಂದು ಸಬ್ಬತ್ ದಿನ ಪೈರಿನ ಹೊಲವನ್ನು ಹಾದುಹೋಗುತ್ತಿದ್ದಾಗ, ಅವರ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
فَٱلْفَرِّيسِيُّونَ لَمَّا نَظَرُوا قَالُوا لَهُ: «هُوَذَا تَلَامِيذُكَ يَفْعَلُونَ مَا لَا يَحِلُّ فَعْلُهُ فِي ٱلسَّبْتِ!». ٢ 2
ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.
فَقَالَ لَهُمْ: «أَمَا قَرَأْتُمْ مَا فَعَلَهُ دَاوُدُ حِينَ جَاعَ هُوَ وَٱلَّذِينَ مَعَهُ؟ ٣ 3
ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?
كَيْفَ دَخَلَ بَيْتَ ٱللهِ وَأَكَلَ خُبْزَ ٱلتَّقْدِمَةِ ٱلَّذِي لَمْ يَحِلَّ أَكْلُهُ لَهُ وَلَا لِلَّذِينَ مَعَهُ، بَلْ لِلْكَهَنَةِ فَقَطْ. ٤ 4
ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?
أَوَ مَا قَرَأْتُمْ فِي ٱلتَّوْرَاةِ أَنَّ ٱلْكَهَنَةَ فِي ٱلسَّبْتِ فِي ٱلْهَيْكَلِ يُدَنِّسُونَ ٱلسَّبْتَ وَهُمْ أَبْرِيَاءُ؟ ٥ 5
ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?
وَلَكِنْ أَقُولُ لَكُمْ: إِنَّ هَهُنَا أَعْظَمَ مِنَ ٱلْهَيْكَلِ! ٦ 6
ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
فَلَوْ عَلِمْتُمْ مَا هُوَ: إِنِّي أُرِيدُ رَحْمَةً لَا ذَبِيحَةً، لَمَا حَكَمْتُمْ عَلَى ٱلْأَبْرِيَاءِ! ٧ 7
ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.
فَإِنَّ ٱبْنَ ٱلْإِنْسَانِ هُوَ رَبُّ ٱلسَّبْتِ أَيْضًا». ٨ 8
ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.
ثُمَّ ٱنْصَرَفَ مِنْ هُنَاكَ وَجَاءَ إِلَى مَجْمَعِهِمْ، ٩ 9
ಯೇಸು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದರು.
وَإِذَا إِنْسَانٌ يَدُهُ يَابِسَةٌ، فَسَأَلُوهُ قَائِلِينَ: «هَلْ يَحِلُّ ٱلْإِبْرَاءُ فِي ٱلسُّبُوتِ؟» لِكَيْ يَشْتَكُوا عَلَيْهِ. ١٠ 10
ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು.
فَقَالَ لَهُمْ: «أَيُّ إِنْسَانٍ مِنْكُمْ يَكُونُ لَهُ خَرُوفٌ وَاحِدٌ، فَإِنْ سَقَطَ هَذَا فِي ٱلسَّبْتِ فِي حُفْرَةٍ، أَفَمَا يُمْسِكُهُ وَيُقِيمُهُ؟ ١١ 11
ಅದಕ್ಕೆ ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?
فَٱلْإِنْسَانُ كَمْ هُوَ أَفْضَلُ مِنَ ٱلْخَرُوفِ! إِذًا يَحِلُّ فِعْلُ ٱلْخَيْرِ فِي ٱلسُّبُوتِ!». ١٢ 12
ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!” ಎಂದು ಹೇಳಿದರು.
ثُمَّ قَالَ لِلْإِنْسَانِ: «مُدَّ يَدَكَ». فَمَدَّهَا. فَعَادَتْ صَحِيحَةً كَٱلْأُخْرَى. ١٣ 13
ಆಗ ಯೇಸು ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು.
فَلَمَّا خَرَجَ ٱلْفَرِّيسِيُّونَ تَشَاوَرُوا عَلَيْهِ لِكَيْ يُهْلِكُوهُ، ١٤ 14
ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.
فَعَلِمَ يَسُوعُ وَٱنْصَرَفَ مِنْ هُنَاكَ. وَتَبِعَتْهُ جُمُوعٌ كَثِيرَةٌ فَشَفَاهُمْ جَمِيعًا. ١٥ 15
ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು.
وَأَوْصَاهُمْ أَنْ لَا يُظْهِرُوهُ، ١٦ 16
ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು.
لِكَيْ يَتِمَّ مَا قِيلَ بِإِشَعْيَاءَ ٱلنَّبِيِّ ٱلْقَائِلِ: ١٧ 17
ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:
«هُوَذَا فَتَايَ ٱلَّذِي ٱخْتَرْتُهُ، حَبِيبِي ٱلَّذِي سُرَّتْ بِهِ نَفْسِي. أَضَعُ رُوحِي عَلَيْهِ فَيُخْبِرُ ٱلْأُمَمَ بِٱلْحَقِّ. ١٨ 18
“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.
لَا يُخَاصِمُ وَلَا يَصِيحُ، وَلَا يَسْمَعُ أَحَدٌ فِي ٱلشَّوَارِعِ صَوْتَهُ. ١٩ 19
ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ.
قَصَبَةً مَرْضُوضَةً لَا يَقْصِفُ، وَفَتِيلَةً مُدَخِّنَةً لَا يُطْفِئُ، حَتَّى يُخْرِجَ ٱلْحَقَّ إِلَى ٱلنُّصْرَةِ. ٢٠ 20
ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.
وَعَلَى ٱسْمِهِ يَكُونُ رَجَاءُ ٱلْأُمَمِ». ٢١ 21
ಈತನ ಹೆಸರಿನಲ್ಲಿಯೇ ಯೆಹೂದ್ಯರಲ್ಲದವರು ನಿರೀಕ್ಷೆ ಇಡುವರು.”
حِينَئِذٍ أُحْضِرَ إِلَيْهِ مَجْنُونٌ أَعْمَى وَأَخْرَسُ فَشَفَاهُ، حَتَّى إِنَّ ٱلْأَعْمَى ٱلْأَخْرَسَ تَكَلَّمَ وَأَبْصَرَ. ٢٢ 22
ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.
فَبُهِتَ كُلُّ ٱلْجُمُوعِ وَقَالُوا: «أَلَعَلَّ هَذَا هُوَ ٱبْنُ دَاوُدَ؟». ٢٣ 23
ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?” ಎಂದರು.
أَمَّا ٱلْفَرِّيسِيُّونَ فَلَمَّا سَمِعُوا قَالُوا: «هَذَا لَا يُخْرِجُ ٱلشَّيَاطِينَ إِلَّا بِبَعْلَزَبُولَ رَئِيسِ ٱلشَّيَاطِينِ». ٢٤ 24
ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು.
فَعَلِمَ يَسُوعُ أَفْكَارَهُمْ، وَقَالَ لَهُمْ: «كُلُّ مَمْلَكَةٍ مُنْقَسِمَةٍ عَلَى ذَاتِهَا تُخْرَبُ، وَكُلُّ مَدِينَةٍ أَوْ بَيْتٍ مُنْقَسِمٍ عَلَى ذَاتِهِ لَا يَثْبُتُ. ٢٥ 25
ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.
فَإِنْ كَانَ ٱلشَّيْطَانُ يُخْرِجُ ٱلشَّيْطَانَ فَقَدِ ٱنْقَسَمَ عَلَى ذَاتِهِ. فَكَيْفَ تَثْبُتُ مَمْلَكَتُهُ؟ ٢٦ 26
ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?
وَإِنْ كُنْتُ أَنَا بِبَعْلَزَبُولَ أُخْرِجُ ٱلشَّيَاطِينَ، فَأَبْنَاؤُكُمْ بِمَنْ يُخْرِجُونَ؟ لِذَلِكَ هُمْ يَكُونُونَ قُضَاتَكُمْ! ٢٧ 27
ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.
وَلَكِنْ إِنْ كُنْتُ أَنَا بِرُوحِ ٱللهِ أُخْرِجُ ٱلشَّيَاطِينَ، فَقَدْ أَقْبَلَ عَلَيْكُمْ مَلَكُوتُ ٱللهِ! ٢٨ 28
ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
أَمْ كَيْفَ يَسْتَطِيعُ أَحَدٌ أَنْ يَدْخُلَ بَيْتَ ٱلْقَوِيِّ وَيَنْهَبَ أَمْتِعَتَهُ، إِنْ لَمْ يَرْبِطِ ٱلْقَوِيَّ أَوَّلًا، وَحِينَئِذٍ يَنْهَبُ بَيْتَهُ؟ ٢٩ 29
“ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.
مَنْ لَيْسَ مَعِي فَهُوَ عَلَيَّ، وَمَنْ لَا يَجْمَعُ مَعِي فَهُوَ يُفَرِّقُ. ٣٠ 30
“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.
لِذَلِكَ أَقُولُ لَكُمْ: كُلُّ خَطِيَّةٍ وَتَجْدِيفٍ يُغْفَرُ لِلنَّاسِ، وَأَمَّا ٱلتَّجْدِيفُ عَلَى ٱلرُّوحِ فَلَنْ يُغْفَرَ لِلنَّاسِ. ٣١ 31
ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.
وَمَنْ قَالَ كَلِمَةً عَلَى ٱبْنِ ٱلْإِنْسَانِ يُغْفَرُ لَهُ، وَأَمَّا مَنْ قَالَ عَلَى ٱلرُّوحِ ٱلْقُدُسِ فَلَنْ يُغْفَرَ لَهُ، لَا فِي هَذَا ٱلْعَالَمِ وَلَا فِي ٱلْآتِي. (aiōn g165) ٣٢ 32
ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ. (aiōn g165)
اِجْعَلُوا ٱلشَّجَرَةَ جَيِّدَةً وَثَمَرَهَا جَيِّدًا، أَوِ ٱجْعَلُوا ٱلشَّجَرَةَ رَدِيَّةً وَثَمَرَهَا رَدِيًّا، لِأَنْ مِنَ ٱلثَّمَرِ تُعْرَفُ ٱلشَّجَرَةُ. ٣٣ 33
“ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.
يَا أَوْلَادَ ٱلْأَفَاعِي! كَيْفَ تَقْدِرُونَ أَنْ تَتَكَلَّمُوا بِٱلصَّالِحَاتِ وَأَنْتُمْ أَشْرَارٌ؟ فَإِنَّهُ مِنْ فَضْلَةِ ٱلْقَلْبِ يَتَكَلَّمُ ٱلْفَمُ. ٣٤ 34
ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
اَلْإِنْسَانُ ٱلصَّالِحُ مِنَ ٱلْكَنْزِ ٱلصَّالِحِ فِي ٱلْقَلْبِ يُخْرِجُ ٱلصَّالِحَاتِ، وَٱلْإِنْسَانُ ٱلشِّرِّيرُ مِنَ ٱلْكَنْزِ ٱلشِّرِّيرِ يُخْرِجُ ٱلشُّرُورَ. ٣٥ 35
ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.
وَلَكِنْ أَقُولُ لَكُمْ: إِنَّ كُلَّ كَلِمَةٍ بَطَّالَةٍ يَتَكَلَّمُ بِهَا ٱلنَّاسُ سَوْفَ يُعْطُونَ عَنْهَا حِسَابًا يَوْمَ ٱلدِّينِ. ٣٦ 36
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
لِأَنَّكَ بِكَلَامِكَ تَتَبَرَّرُ وَبِكَلَامِكَ تُدَانُ». ٣٧ 37
ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು.
حِينَئِذٍ أَجَابَ قَوْمٌ مِنَ ٱلْكَتَبَةِ وَٱلْفَرِّيسِيِّينَ قَائِلِينَ: «يَا مُعَلِّمُ، نُرِيدُ أَنْ نَرَى مِنْكَ آيَةً». ٣٨ 38
ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.
فَأَجابَ وَقَالَ لَهُمْ: «جِيلٌ شِرِّيرٌ وَفَاسِقٌ يَطْلُبُ آيَةً، وَلَا تُعْطَى لَهُ آيَةٌ إِلَّا آيَةَ يُونَانَ ٱلنَّبِيِّ. ٣٩ 39
ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.
لِأَنَّهُ كَمَا كَانَ يُونَانُ فِي بَطْنِ ٱلْحُوتِ ثَلَاثَةَ أَيَّامٍ وَثَلَاثَ لَيَالٍ، هَكَذَا يَكُونُ ٱبْنُ ٱلْإِنْسَانِ فِي قَلْبِ ٱلْأَرْضِ ثَلَاثَةَ أَيَّامٍ وَثَلَاثَ لَيَالٍ. ٤٠ 40
ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.
رِجَالُ نِينَوَى سَيَقُومُونَ فِي ٱلدِّينِ مَعَ هَذَا ٱلْجِيلِ وَيَدِينُونَهُ، لِأَنَّهُمْ تَابُوا بِمُنَادَاةِ يُونَانَ، وَهُوَذَا أَعْظَمُ مِنْ يُونَانَ هَهُنَا! ٤١ 41
ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.
مَلِكَةُ ٱلتَّيْمَنِ سَتَقُومُ فِي ٱلدِّينِ مَعَ هَذَا ٱلْجِيلِ وَتَدِينُهُ، لِأَنَّهَا أَتَتْ مِنْ أَقَاصِي ٱلْأَرْضِ لِتَسْمَعَ حِكْمَةَ سُلَيْمَانَ، وَهُوَذَا أَعْظَمُ مِنْ سُلَيْمَانَ هَهُنَا! ٤٢ 42
ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.
إِذَا خَرَجَ ٱلرُّوحُ ٱلنَّجِسُ مِنَ ٱلْإِنْسَانِ يَجْتَازُ فِي أَمَاكِنَ لَيْسَ فِيهَا مَاءٌ، يَطْلُبُ رَاحَةً وَلَا يَجِدُ. ٤٣ 43
“ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,
ثُمَّ يَقُولُ: أَرْجِعُ إِلَى بَيْتِي ٱلَّذِي خَرَجْتُ مِنْهُ. فَيَأْتِي وَيَجِدُهُ فَارِغًا مَكْنُوسًا مُزَيَّنًا. ٤٤ 44
‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.
ثُمَّ يَذْهَبُ وَيَأْخُذُ مَعَهُ سَبْعَةَ أَرْوَاحٍ أُخَرَ أَشَرَّ مِنْهُ، فَتَدْخُلُ وَتَسْكُنُ هُنَاكَ، فَتَصِيرُ أَوَاخِرُ ذَلِكَ ٱلْإِنْسَانِ أَشَرَّ مِنْ أَوَائِلِهِ! هَكَذَا يَكُونُ أَيْضًا لِهَذَا ٱلْجِيلِ ٱلشِّرِّيرِ». ٤٥ 45
ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.
وَفِيمَا هُوَ يُكَلِّمُ ٱلْجُمُوعَ إِذَا أُمُّهُ وَإِخْوَتُهُ قَدْ وَقَفُوا خَارِجًا طَالِبِينَ أَنْ يُكَلِّمُوهُ. ٤٦ 46
ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
فَقَالَ لَهُ وَاحِدٌ: «هُوَذَا أُمُّكَ وَإِخْوَتُكَ وَاقِفُونَ خَارِجًا طَالِبِينَ أَنْ يُكَلِّمُوكَ». ٤٧ 47
ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.
فَأَجَابَ وَقَالَ لِلْقَائِلِ لَهُ: «مَنْ هِيَ أُمِّي وَمَنْ هُمْ إِخْوَتي؟». ٤٨ 48
ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ,
ثُمَّ مَدَّ يَدَهُ نَحْوَ تَلَامِيذِهِ وَقَالَ: «هَا أُمِّي وَإِخْوَتِي. ٤٩ 49
ಶಿಷ್ಯರ ಕಡೆಗೆ ತಮ್ಮ ಕೈಚಾಚಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.
لِأَنَّ مَنْ يَصْنَعُ مَشِيئَةَ أَبِي ٱلَّذِي فِي ٱلسَّمَاوَاتِ هُوَ أَخِي وَأُخْتِي وَأُمِّي». ٥٠ 50
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.

< مَتَّى 12 >