< مَتَّى 17 >
وَبَعْدَ سِتَّةِ أَيَّامٍ أَخَذَ يَسُوعُ بُطْرُسَ وَيَعْقُوبَ وَيُوحَنَّا أَخَاهُ وَصَعِدَ بِهِمْ إِلَى جَبَلٍ عَالٍ مُنْفَرِدِينَ. | ١ 1 |
೧ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
وَتَغَيَّرَتْ هَيْئَتُهُ قُدَّامَهُمْ، وَأَضَاءَ وَجْهُهُ كَٱلشَّمْسِ، وَصَارَتْ ثِيَابُهُ بَيْضَاءَ كَٱلنُّورِ. | ٢ 2 |
೨ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
وَإِذَا مُوسَى وَإِيلِيَّا قَدْ ظَهَرَا لَهُمْ يَتَكَلَّمَانِ مَعَهُ. | ٣ 3 |
೩ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.
فَجَعَلَ بُطْرُسُ يَقُولُ لِيَسُوعَ: «يَارَبُّ، جَيِّدٌ أَنْ نَكُونَ هَهُنَا! فَإِنْ شِئْتَ نَصْنَعْ هُنَا ثَلَاثَ مَظَالَّ: لَكَ وَاحِدَةٌ، وَلِمُوسَى وَاحِدَةٌ، وَلِإِيلِيَّا وَاحِدَةٌ». | ٤ 4 |
೪ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
وَفِيمَا هُوَ يَتَكَلَّمُ إِذَا سَحَابَةٌ نَيِّرَةٌ ظَلَّلَتْهُمْ، وَصَوْتٌ مِنَ ٱلسَّحَابَةِ قَائِلًا: «هَذَا هُوَ ٱبْنِي ٱلْحَبِيبُ ٱلَّذِي بِهِ سُرِرْتُ. لَهُ ٱسْمَعُوا». | ٥ 5 |
೫ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
وَلَمَّا سَمِعَ ٱلتَّلَامِيذُ سَقَطُوا عَلَى وُجُوهِهِمْ وَخَافُوا جِدًّا. | ٦ 6 |
೬ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
فَجَاءَ يَسُوعُ وَلَمَسَهُمْ وَقَالَ: «قُومُوا، وَلَا تَخَافُوا». | ٧ 7 |
೭ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು.
فَرَفَعُوا أَعْيُنَهُمْ وَلَمْ يَرَوْا أَحَدًا إِلَّا يَسُوعَ وَحْدَهُ. | ٨ 8 |
೮ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
وَفِيمَا هُمْ نَازِلُونَ مِنَ ٱلْجَبَلِ أَوْصَاهُمْ يَسُوعُ قَائِلًا: «لَا تُعْلِمُوا أَحَدًا بِمَا رَأَيْتُمْ حَتَّى يَقُومَ ٱبْنُ ٱلْإِنْسَانِ مِنَ ٱلْأَمْوَاتِ». | ٩ 9 |
೯ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.
وَسَأَلَهُ تَلَامِيذُهُ قَائِلِينَ: «فَلِمَاذَا يَقُولُ ٱلْكَتَبَةُ: إِنَّ إِيلِيَّا يَنْبَغِي أَنْ يَأْتِيَ أَوَّلًا؟». | ١٠ 10 |
೧೦ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು.
فَأَجَابَ يَسُوعُ وَقَالَ لَهُمْ: «إِنَّ إِيلِيَّا يَأْتِي أَوَّلًا وَيَرُدُّ كُلَّ شَيْءٍ. | ١١ 11 |
೧೧ಯೇಸು ಅವರಿಗೆ, “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.
وَلَكِنِّي أَقُولُ لَكُمْ: إِنَّ إِيلِيَّا قَدْ جَاءَ وَلَمْ يَعْرِفُوهُ، بَلْ عَمِلُوا بِهِ كُلَّ مَا أَرَادُوا. كَذَلِكَ ٱبْنُ ٱلْإِنْسَانِ أَيْضًا سَوْفَ يَتَأَلَّمُ مِنْهُمْ». | ١٢ 12 |
೧೨ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.
حِينَئِذٍ فَهِمَ ٱلتَّلَامِيذُ أَنَّهُ قَالَ لَهُمْ عَنْ يُوحَنَّا ٱلْمَعْمَدَانِ. | ١٣ 13 |
೧೩ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.
وَلَمَّا جَاءُوا إِلَى ٱلْجَمْعِ تَقَدَّمَ إِلَيْهِ رَجُلٌ جَاثِيًا لَهُ | ١٤ 14 |
೧೪ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,
وَقَائِلًا: «يَا سَيِّدُ، ٱرْحَمِ ٱبْنِي فَإِنَّهُ يُصْرَعُ وَيَتَأَلَّمُ شَدِيدًا، وَيَقَعُ كَثِيرًا فِي ٱلنَّارِ وَكَثِيرًا فِي ٱلْمَاءِ. | ١٥ 15 |
೧೫“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.
وَأَحْضَرْتُهُ إِلَى تَلَامِيذِكَ فَلَمْ يَقْدِرُوا أَنْ يَشْفُوهُ». | ١٦ 16 |
೧೬ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.
فَأَجَابَ يَسُوعُ وَقَالَ: «أَيُّهَا ٱلْجِيلُ غَيْرُ ٱلْمُؤْمِنِ، ٱلْمُلْتَوِي، إِلَى مَتَى أَكُونُ مَعَكُمْ؟ إِلَى مَتَى أَحْتَمِلُكُمْ؟ قَدِّمُوهُ إِلَيَّ هَهُنَا!». | ١٧ 17 |
೧೭ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.
فَٱنْتَهَرَهُ يَسُوعُ، فَخَرَجَ مِنْهُ ٱلشَّيْطَانُ. فَشُفِيَ ٱلْغُلَامُ مِنْ تِلْكَ ٱلسَّاعَةِ. | ١٨ 18 |
೧೮ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
ثُمَّ تَقَدَّمَ ٱلتَّلَامِيذُ إِلَى يَسُوعَ عَلَى ٱنْفِرَادٍ وَقَالُوا: «لِمَاذَا لَمْ نَقْدِرْ نَحْنُ أَنْ نُخْرِجَهُ؟». | ١٩ 19 |
೧೯ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”
فَقَالَ لَهُمْ يَسُوعُ: «لِعَدَمِ إِيمَانِكُمْ. فَٱلْحَقَّ أَقُولُ لَكُمْ: لَوْ كَانَ لَكُمْ إِيمَانٌ مِثْلُ حَبَّةِ خَرْدَلٍ لَكُنْتُمْ تَقُولُونَ لِهَذَا ٱلْجَبَلِ: ٱنْتَقِلْ مِنْ هُنَا إِلَى هُنَاكَ فَيَنْتَقِلُ، وَلَا يَكُونُ شَيْءٌ غَيْرَ مُمْكِنٍ لَدَيْكُمْ. | ٢٠ 20 |
೨೦ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
وَأَمَّا هَذَا ٱلْجِنْسُ فَلَا يَخْرُجُ إِلَّا بِٱلصَّلَاةِ وَٱلصَّوْمِ». | ٢١ 21 |
೨೧ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.
وَفِيمَا هُمْ يَتَرَدَّدُونَ فِي ٱلْجَلِيلِ قَالَ لَهُمْ يَسُوعُ: «ٱبْنُ ٱلْإِنْسَانِ سَوْفَ يُسَلَّمُ إِلَى أَيْدِي ٱلنَّاسِ | ٢٢ 22 |
೨೨ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
فَيَقْتُلُونَهُ، وَفِي ٱلْيَوْمِ ٱلثَّالِثِ يَقُومُ». فَحَزِنُوا جِدًّا. | ٢٣ 23 |
೨೩ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
وَلَمَّا جَاءُوا إِلَى كَفْرَنَاحُومَ تَقَدَّمَ ٱلَّذِينَ يَأْخُذُونَ ٱلدِّرْهَمَيْنِ إِلَى بُطْرُسَ وَقَالُوا: «أَمَا يُوفِي مُعَلِّمُكُمُ ٱلدِّرْهَمَيْنِ؟». | ٢٤ 24 |
೨೪ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.
قَالَ: «بَلَى». فَلَمَّا دَخَلَ ٱلْبَيْتَ سَبَقَهُ يَسُوعُ قَائِلًا: «مَاذَا تَظُنُّ يا سِمْعَانُ؟ مِمَّنْ يَأْخُذُ مُلُوكُ ٱلْأَرْضِ ٱلْجِبَايَةَ أَوِ ٱلْجِزْيَةَ، أَمِنْ بَنِيهِمْ أَمْ مِنَ ٱلْأَجَانِبِ؟». | ٢٥ 25 |
೨೫ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.
قَالَ لَهُ بُطْرُسُ: «مِنَ ٱلْأَجَانِبِ». قَالَ لَهُ يَسُوعُ: «فَإِذًا ٱلْبَنُونَ أَحْرَارٌ. | ٢٦ 26 |
೨೬ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.
وَلَكِنْ لِئَلَّا نُعْثِرَهُمُ، ٱذْهَبْ إِلَى ٱلْبَحْرِ وَأَلْقِ صِنَّارَةً، وَٱلسَّمَكَةُ ٱلَّتِي تَطْلُعُ أَوَّلًا خُذْهَا، وَمَتَى فَتَحْتَ فَاهَا تَجِدْ إِسْتَارًا، فَخُذْهُ وَأَعْطِهِمْ عَنِّي وَعَنْكَ». | ٢٧ 27 |
೨೭ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದುಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.