< 2 أخبار 25 >
كَانَ أَمَصْيَا فِي الْخَامِسَةِ وَالْعِشْرِينَ مِنْ عُمْرِهِ عِنْدَمَا تَوَلَّى الْمُلْكَ، وَدَامَ حُكْمُهُ فِي أُورُشَلِيمَ تِسْعاً وَعِشْرِينَ سَنَةً، وَاسْمُ أُمِّهِ يَهُوعَدَّانُ مِنْ أُورُشَلِيمَ. | ١ 1 |
ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು.
وَصَنَعَ مَا هُوَ قَوِيمٌ فِي عَيْنَيِ الرَّبِّ، وَإِنْ لَمْ يَكُنْ دَائِماً بِقَلْبٍ مُخْلِصٍ. | ٢ 2 |
ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.
وَعِنْدَمَا سَيْطَرَ عَلَى زِمَامِ الْمَمْلَكَةِ قَتَلَ الْمُتَآمِرَيْنِ اللَّذَيْنِ اغْتَالا وَالِدَهُ، | ٣ 3 |
ಅವನು ರಾಜ್ಯವನ್ನು ಸ್ಥಿರಪಡಿಸಿಕೊಂಡ ತರುವಾಯ, ಅರಸನಾಗಿದ್ದ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆಯನ್ನು ವಿಧಿಸಿದನು.
وَلَكِنَّهُ عَفَا عَنْ أَبْنَائِهِمَا، عَمَلا بِمَا وَرَدَ فِي كِتَابِ شَرِيعَةِ مُوسَى، حَيْثُ أَمَرَ الرَّبُّ قَائِلاً: «لا يُقْتَلُ الآبَاءُ عِوَضاً عَنِ الأَبْنَاءِ، وَلا يُقْتَلُ الأَبْنَاءُ بَدَلاً مِنَ الآبَاءِ فَكُلُّ إِنْسَانٍ يَتَحَمَّلُ وِزْرَ نَفْسِهِ». | ٤ 4 |
ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅಮಚ್ಯನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.
وَعَبَّأَ أَمَصْيَا جَيْشاً مِنْ يَهُوذَا وَمِنْ بِنْيَامِينَ وَوَزَّعَهُمْ بِحَسَبِ بُيُوتِ الآبَاءِ لِيَكُونُوا تَحْتَ إِمْرَةِ رُؤَسَاءِ أُلُوفٍ وَرُؤَسَاءِ مِئَاتٍ، وَأَحْصَاهُمْ مِنِ ابْنِ عِشْرِينَ سَنَةً فَمَا فَوْقُ، فَبَلَغَ عَدَدُهُمْ ثَلاثَ مِئَةِ أَلْفٍ مِنَ الْجُنُودِ الْمُدَرَّبِينَ عَلَى اسْتِعْمَالِ الرِّمَاحِ وَالتُّرُوسِ. | ٥ 5 |
ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.
وَاسْتَأْجَرَ مِنْ إِسْرَائِيلَ مِئَةَ أَلْفِ مُرْتَزِقٍ مِنَ الْمُحَارِبِينَ الأَشِدَّاءِ بِمِئَةِ وَزْنَةٍ مِنَ الْفِضَّةِ (نَحْوَ ثَلاثَةِ آلافٍ وَسِتِّ مِئَةِ كِيلُو جِرَامٍ). | ٦ 6 |
ಇದಲ್ಲದೆ ಇಸ್ರಾಯೇಲಿನವರಿಗೆ 3,400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು, ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.
فَجَاءَهُ رَجُلُ اللهِ قَائِلاً: «أَيُّهَا الْمَلِكُ، لَا يَذْهَبَنَّ مَعَكَ جَيْشُ إِسْرَائِيلَ، لأَنَّ الرَّبَّ قَدْ تَخَلَّى عَنْ كُلِّ وَاحِدٍ مِنْ شَعْبِ إِسْرَائِيلَ | ٧ 7 |
ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.
وَحَتَّى لَوْ خُضْتَ الْمَعْرَكَةَ وَحَارَبْتَ بِإِقْدَامٍ وَشَجَاعَةٍ فَإِنَّهُ يَهْزِمُكَ أَمَامَ أَعْدَائِكَ لأَنَّ للهِ وَحْدَهُ أَنْ يُؤْتِيَكَ النَّصْرَ أَوِ الْهَزِيمَةَ». | ٨ 8 |
ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.
فَسَأَلَ أَمَصْيَا رَجُلَ اللهِ: «وَمَاذَا عَنِ الْمَالِ الَّذِي دَفَعْتُهُ لِمُرْتَزِقَةِ إِسْرَائِيلَ؟» فَأَجَابَهُ: «إِنَّ الرَّبَّ قَادِرٌ أَنْ يُعَوِّضَكَ أَكْثَرَ مِمَّا دَفَعْتَ». | ٩ 9 |
ಆಗ ಅಮಚ್ಯನು ದೇವರ ಮನುಷ್ಯನಿಗೆ, “ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ 3,400 ಕಿಲೋಗ್ರಾಂ ಬೆಳ್ಳಿಯನ್ನು ಏನು ಮಾಡಬೇಕು?” ಎಂದನು. ಅದಕ್ಕೆ ದೇವರ ಮನುಷ್ಯನು, “ಯೆಹೋವ ದೇವರು ಇದಕ್ಕಿಂತ ಅಧಿಕವಾಗಿಯೇ ನಿನಗೆ ಕೊಡಲು ಶಕ್ತರು,” ಎಂದನು.
فَصَرَفَ أَمَصْيَا الْمُرْتَزِقَةَ الَّذِينَ تَوَافَدُوا عَلَيْهِ مِنْ أَفْرَايِمَ وَأَرْسَلَهُمْ إِلَى أَرْضِهِمْ. فَاحْتَدَمَ غَضَبُهُمْ عَلَى يَهُوذَا، وَرَجَعُوا إِلَى بِلادِهِمْ سَاخِطِينَ. | ١٠ 10 |
ಆಗ ಅಮಚ್ಯನು ಎಫ್ರಾಯೀಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವರನ್ನು ಕಳುಹಿಸಿಬಿಟ್ಟನು. ಆದಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪಗೊಂಡವರಾಗಿ ತಮ್ಮ ಮನೆಗೆ ತಿರುಗಿದರು.
أَمَّا أَمَصْيَا، فَقَدْ تَشَجَّعَ وَاقْتَادَ شَعْبَهُ إِلَى وَادِي الْمِلْحِ، وَقَتَلَ مِنْ رِجَالِ سَعِيرَ عَشَرَةَ آلافٍ. | ١١ 11 |
ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡೆಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ, ಅಲ್ಲಿ ಸೇಯೀರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
وَسَبَى بَنُو يَهُوذَا عَشَرَةَ آلافٍ آخَرِينَ أَتَوْا بِهِمْ إِلَى قِمَّةِ جَبَلِ سَالِعَ حَيْثُ طَرَحُوهُمْ مِنْ فَوْقِهَا، فَتَهَشَّمَتْ عِظَامُهُمْ جَمِيعاً. | ١٢ 12 |
ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದ್ಯರು ಸೆರೆಯಾಗಿ ಒಯ್ದು, ಬಂಡೆಯ ಶಿಖರಕ್ಕೆ ಅವರನ್ನು ಕರೆದುಕೊಂಡು ಹೋಗಿ, ಅಲ್ಲಿಂದ ಅವರನ್ನು ದಬ್ಬಿ ಸಾಯಿಸಿದರು.
أَمَّا الْمُرْتَزِقَةُ الَّذِينَ صَرَفَهُمْ أَمَصْيَا عَنْ خَوْضِ الْقِتَالِ مَعَهُ، فَقَدْ أَغَارُوا عَلَى مُدُنِ يَهُوذَا، مَا بَيْنَ السَّامِرَةِ وَبَيْتِ حُورُونَ، وَقَتَلُوا ثَلاثَةَ آلافٍ مِنْ أَهْلِهَا، وَنَهَبُوا غَنَائِمَ كَثِيرَةً. | ١٣ 13 |
ತಮ್ಮ ಸಂಗಡ ಯುದ್ಧಕ್ಕೆ ಬಾರದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ದಾಳಿಮಾಡಿ, ಸಮಾರ್ಯ ಮೊದಲುಗೊಂಡು ಬೇತ್ ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಕೊಂದು, ಬಹು ಕೊಳ್ಳೆಯನ್ನು ತೆಗೆದುಕೊಂಡು ಹೋದರು.
وَبَعْدَ رُجُوعِ أَمَصْيَا مِنْ مُحَارَبَةِ الأَدُومِيِّينَ مُنْتَصِراً، حَمَلَ مَعَهُ آلِهَةَ بَنِي سَاعِيرَ وَنَصَبَهَا لَهُ آلِهَةً، وَسَجَدَ لَهَا وَأَوْقَدَ لَهَا بَخُوراً. | ١٤ 14 |
ಅಮಚ್ಯನು ಎದೋಮ್ಯರನ್ನು ಹೊಡೆದು ತಿರುಗಿ ಬಂದ ತರುವಾಯ, ಸೇಯೀರನ ಮಕ್ಕಳ ದೇವರುಗಳನ್ನು ತೆಗೆದುಕೊಂಡು ಬಂದು, ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು, ಅವುಗಳ ಮುಂದೆ ಅಡ್ಡಬಿದ್ದು, ಅವುಗಳಿಗೆ ಧೂಪವನ್ನು ಸುಟ್ಟನು.
فَاحْتَدَمَ غَضَبُ الرَّبِّ عَلَيْهِ وَأَرْسَلَ إِلَيْهِ نَبِيًّا يَقُولُ: «لِمَاذَا ضَلَلْتَ وَرَاءَ آلِهَةِ قَوْمٍ عَجَزُوا عَنْ إِنْقَاذِ شَعْبِهِمْ مِنْ يَدِكَ؟» | ١٥ 15 |
ಆದಕಾರಣ ಯೆಹೋವ ದೇವರ ಕೋಪವು ಅಮಚ್ಯನ ಮೇಲೆ ಬಂತು. ದೇವರು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿದರು. ಪ್ರವಾದಿಯು ಅರಸನಿಗೆ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆ ಹೋದ ದೇವರುಗಳನ್ನು ನೀನು ವಿಚಾರಿಸುವುದೇನು?” ಎಂದನು.
فَقَاطَعَهُ الْمَلِكُ وَقَالَ: «هَلْ أَقَمْنَاكَ أَحَدَ مُشِيرِي الْمَلِكِ؟ كُفَّ لِئَلّا تُقْتَلَ». فَانْصَرَفَ النَّبِيُّ وَهُوَ يَقُولُ: «قَدْ أَيْقَنْتُ أَنَّ اللهَ قَضَى بِإِهْلاكِكَ، لأَنَّكَ ارْتَكَبْتَ هَذَا وَأَبَيْتَ أَنْ تَسْمَعَ لِمَشُورَتِي». | ١٦ 16 |
ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.
ثُمَّ بَعْدَ أَنْ تَدَاوَلَ أَمَصْيَا مَلِكُ يَهُوذَا مَعَ مُسْتَشَارِيهِ، بَعَثَ إِلَى يُوآشَ بْنِ يَهُوآحَازَ بْنِ يَاهُو مَلِكِ إِسْرَائِيلَ قَائِلاً: «تَعَالَ نَتَوَاجَهُ لِلْقِتَالِ». | ١٧ 17 |
ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲರ ಅರಸನಾದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರಿಸೋಣ ಬಾ,” ಎಂದು ದೂತರ ಮುಖಾಂತರ ಹೇಳಿ ಕಳುಹಿಸಿದನು.
فَأَجَابَهُ يُوآشُ مَلِكُ إِسْرَائِيلَ بِهَذا الْمَثَلِ: «أَرْسَلَ الْعَوْسَجُ النَّابِتُ فِي لُبْنَانَ إِلَى الأَرْزِ فِي لُبْنَانَ يَقُولُ: زَوِّجِ ابْنَتَكَ مِنِ ابْنِي. فَمَرَّ حَيَوَانٌ بَرِّيٌّ كَانَ هُنَاكَ وَدَاسَ الْعَوْسَجَ. | ١٨ 18 |
ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.
أَنْتَ تَقُولُ فِي نَفْسِكَ: لَقَدْ هَزَمْتُ الأَدُومِيِّينَ، فَانْتَابَكَ الْغُرُورُ، وَلَكِنْ خَيْرٌ لَكَ أَنْ تَمْكُثَ فِي قَصْرِكَ. لِمَاذَا تَسْعَى فِي طَلَبِ الشَّرِّ فَتُسَبِّبَ دَمَارَكَ وَدَمَارَ يَهُوذَا مَعَكَ؟» | ١٩ 19 |
ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು.
فَلَمْ يُصْغِ أَمَصْيَا إِلَيْهِ لأَنَّ الرَّبَّ قَضَى بِالْهَزِيمَةِ عَلَيْهِ لأَنَّهُمْ عَبَدُوا آلِهَةَ أَدُومَ. | ٢٠ 20 |
ಆದರೆ ಅಮಚ್ಯನು ಕೇಳದೆ ಹೋದನು. ಏಕೆಂದರೆ ಯೆಹೂದ್ಯರು ಎದೋಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ, ಅವರನ್ನು ಯೆಹೋವಾಷನ ಕೈಯಲ್ಲಿ ಒಪ್ಪಿಸುವಂತೆ ಇದು ದೇವರಿಂದ ಆಯಿತು.
وَزَحَفَ يُوآشُ مَلِكُ إِسْرَائِيلَ بِجَيْشِهِ، وَتَوَاجَهَ مَعَ أَمَصْيَا مَلِكِ يَهُوذَا فِي بَيْتِ شَمْسٍ التَّابِعَةِ لِيَهُوذَا. | ٢١ 21 |
ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ, ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.
فَانْدَحَرَ يَهُوذَا أَمَامَ جَيْشِ إِسْرَائِيلَ وَهَرَبُوا إِلَى مَنَازِلِهِمْ. | ٢٢ 22 |
ಯೆಹೂದದವರು ಇಸ್ರಾಯೇಲರ ಮುಂದೆ ಸೋತುಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು.
وَوَقَعَ أَمَصْيَا مَلِكُ يَهُوذَا فِي أَسْرِ يُوآشَ مَلِكِ إِسْرَائِيلَ فِي بَيْتِ شَمْسٍ، فَأَخَذَهُ يُوآشُ إِلَى أُورُشَلِيمَ حَيْثُ هَدَمَ سُورَهَا مِنْ بَابِ أَفْرَايِمَ إِلَى بَابِ الزَّاوِيَةِ عَلَى امْتِدَادِ نَحْوِ مِئَتَيْ مِتْرٍ، | ٢٣ 23 |
ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.
وَاسْتَوْلَى عَلَى كُلِّ الذَّهَبِ وَالْفِضَّةِ وَجَمِيعِ الآنِيَةِ الْمَوْجُودَةِ فِي بَيْتِ اللهِ الَّتِي فِي عُهْدَةِ أَبْنَاءِ عُوبِيدَ أَدُومَ وَخَزَائِنِ قَصْرِ الْمَلِكِ، وَأَخَذَ رَهَائِنَ، ثُمَّ عَادَ إِلَى السَّامِرَةِ. | ٢٤ 24 |
ಅವನು ಓಬೇದ್ ಏದೋಮನ ಬಳಿಯಲ್ಲಿ ಯೆಹೋವ ದೇವರ ಆಲಯದಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ, ಅರಮನೆಯ ಬೊಕ್ಕಸಗಳನ್ನೂ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.
وَعَاشَ أَمَصْيَا بْنُ يُوآشَ مَلِكُ يَهُوذَا خَمْسَ عَشْرَةَ سَنَةً بَعْدَ وَفَاةِ يُوآشَ بْنِ يَهُوآحَازَ مَلِكِ إِسْرَائِيلَ. | ٢٥ 25 |
ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೆಹೋವಾಷನ ಮರಣದ ತರುವಾಯ, ಯೆಹೂದದ ಅರಸನಾದ ಯೋವಾಷನ ಮಗನಾಗಿರುವ ಅಮಚ್ಯನು ಹದಿನೈದು ವರ್ಷ ಬದುಕಿದನು.
أَمَّا بَقِيَّةُ أَخْبَارِ أَمَصْيَا مِنْ بِدَايَتِهَا إِلَى نِهَايَتِهَا أَلَيْسَتْ هِيَ مُدَوَّنَةً فِي كِتَابِ مُلُوكِ يَهُوذَا وَإِسْرَائِيلَ؟ | ٢٦ 26 |
ಅಮಚ್ಯನ ಆಳ್ವಿಕೆಯ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಯೆಹೂದ ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
وَمُنْذُ أَنْ تَحَوَّلَ أَمَصْيَا عَنِ الرَّبِّ ثَارَتْ عَلَيْهِ الْفِتْنَةُ فِي أُورُشَلِيمَ، فَلَجَأَ إِلَى لَخِيشَ. وَلَكِنَّهُمْ أَرْسَلُوا مَنْ تَعَقَّبَهُ إِلَى هُنَاكَ وَاغْتَالَهُ، | ٢٧ 27 |
ಅಮಚ್ಯನು ಯೆಹೋವ ದೇವರ ಕಡೆಯಿಂದ ತೊಲಗಿಹೋದ ತರುವಾಯ, ಯೆರೂಸಲೇಮಿನವರು ಅವನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.
ثُمَّ نَقَلُوهُ عَلَى الْخَيْلِ حَيْثُ دَفَنُوهُ مَعَ آبَائِهِ فِي مَدِينَةِ دَاوُدَ. | ٢٨ 28 |
ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು.