< حِزْقِيال 14 >
وَحَضَرَ إِلَيَّ بَعْضُ شُيُوخِ إِسْرَائِيلَ وَجَلَسُوا أَمَامِي، | ١ 1 |
ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
فَأَوْحَى إِلَيَّ الرَّبُّ بِكَلِمَتِهِ قَائِلاً: | ٢ 2 |
ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
«يَا ابْنَ آدَمَ، إِنَّ هَؤُلاءِ الرِّجَالَ قَدْ نَصَبُوا أَصْنَامَهُمْ فِي قُلُوبِهِمْ، وَأَقَامُوا مَعْثَرَةَ إِثْمِهِمْ تِلْقَاءَ وُجُوهِهِمْ، أَفَأُجِيبُ عَنْ سُؤَالِهِمْ؟ | ٣ 3 |
“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?
لِذَلِكَ قُلْ لَهُمْ: هَذَا مَا يُعْلِنُهُ السَّيِّدُ الرَّبُّ: كُلُّ رَجُلٍ مِنْ شَعْبِ إِسْرَائِيلَ نَصَبَ أَصْنَامَهُ فِي قَلْبِهِ وَأَقَامَ مَعْثَرَةَ إِثْمِهِ تِلْقَاءَ وَجْهِهِ، ثُمَّ أَقْبَلَ إِلَى النَّبِيِّ، فَإِنِّي أَنَا الرَّبُّ أُجِيبُ ذَلِكَ الْوَافِدَ عَلَى كَثْرَةِ أَصْنَامِهِ، | ٤ 4 |
ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.
لِكَيْ أَسْتَأْسِرَ قُلُوبَ شَعْبِ إِسْرَائِيلَ ثَانِيَةً، لأَنَّهُمُ ارْتَدُّوا عَنِّي بِالْغِوَايَةِ وَرَاءَ أَصْنَامِهِمْ. | ٥ 5 |
ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’
لِذَلِكَ قُلْ لِشَعْبِ إِسْرَائِيلَ، هَذَا مَا يُعْلِنُهُ السَّيِّدُ الرَّبُّ: تُوبُوا وَارْجِعُوا عَنْ أَصْنَامِكُمْ وَاصْرِفُوا وُجُوهَكُمْ عَنْ كُلِّ رَجَاسَتِكُمْ. | ٦ 6 |
“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.
لأَنَّ كُلَّ رَجُلٍ مِنْ شَعْبِ إِسْرَائِيلَ وَمِنَ الْغُرَبَاءِ الدُّخَلاءِ الْقَاطِنِينَ فِي إِسْرَائِيلَ، إِذَا ارْتَدَّ عَنِّي وَنَصَبَ أَصْنَامَهُ فِي قَلْبِهِ وَأَقَامَ مَعْثَرَةَ إِثْمِهِ تِلْقَاءَ وَجْهِهِ، ثُمَّ حَضَرَ إِلَى النَّبِيِّ لِيَسْأَلَهُ عَنِّي، فَإِنِّي أَنَا الرَّبُّ أُجِيبُهُ بِذَاتِي. | ٧ 7 |
“‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.
وَأَنْقَلِبُ عَلَى ذَلِكَ الإِنْسَانِ وَأَجْعَلُهُ عِبْرَةً وَمَثَلاً، وَأَسْتَأْصِلُهُ مِنْ بَيْنِ شَعْبِي، فَتُدْرِكُونَ أَنِّي أَنَا الرَّبُّ. | ٨ 8 |
ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.
فَإِذَا ضَلَّ النَّبِيُّ وَنَطَقَ بِنُبُوءَةٍ بَاطِلَةٍ، فَإِنِّي أَنَا الرَّبُّ قَدْ أَغْوَيْتُ ذَلِكَ النَّبِيَّ، لأَنَّهُ تَصَرَّفَ مِنْ نَفْسِهِ. فَأُعَاقِبُهُ وَأُبِيدُهُ مِنْ بَيْنِ شَعْبِي إِسْرَائِيلَ. | ٩ 9 |
“‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.
وَيَنَالُونَ عِقَابَ إِثْمِهِمْ، وَيَكُونُ ذَنْبُ النَّبِيِّ مُمَاثِلاً لِذَنْبِ السَّائِلِ. | ١٠ 10 |
ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು.
لِكَيْ لَا يَضِلَّ عَنِّي شَعْبُ إِسْرَائِيلَ مِنْ بَعْدُ، وَيَتَنَجَّسُوا بِآثَامِهِمْ، وَإِنَّمَا يَكُونُونَ لِي شَعْباً وَأَنَا أَكُونُ لَهُمْ إِلَهاً، يَقُولُ السَّيِّدُ الرَّبُّ». | ١١ 11 |
ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
ثُمَّ أَوْحَى إِلَيَّ الرَّبُّ بِكَلِمَتِهِ قَائِلاً: | ١٢ 12 |
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
«يَا ابْنَ آدَمَ، إِذَا أَخْطَأَتْ إِلَيَّ أَرْضٌ وَخَانَتْ عَهْدِي، أُعَاقِبُهَا وَأُعْوِزُهَا مَؤُونَةَ الْخُبْزِ وَأُشِيعُ فِيهَا الْجُوعَ، وَأُفْنِي مِنْهَا النَّاسَ وَالْبَهَائِمَ، | ١٣ 13 |
“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.
وَحَتَّى لَوْ كَانَ فِيهَا هَؤُلاءِ الرِّجَالُ الثَّلاثَةُ: نُوحٌ وَدَانِيالُ وَأَيُّوبُ، فَإِنَّهُمْ يَخْلُصُونَ وَحْدَهُمْ فَقَطْ بِبِرِّهِمْ. | ١٤ 14 |
ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
وَإِنْ أَطْلَقْتُ فِي تِلْكَ الأَرْضِ وُحُوشاً ضَارِيَةً فَأَقْفَرْتُهَا، وَأَصْبَحَتْ أَطْلالاً لَا يَجْتَازُ فِيهَا عَابِرٌ خَوْفاً مِنَ الْوُحُوشِ، | ١٥ 15 |
“ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,
وَكَانَ يُقِيمُ فِيهَا هَؤُلاءِ الثَّلاثَةُ الرِّجَالُ، فَحَيٌّ أَنَا يَقُولُ السَّيِّدُ الرَّبُّ، إِنَّهُمْ لَا يَقْدِرُونَ عَلَى إِنْقَاذِ أَبْنَاءَ لَهَا وَبَنَاتٍ. إِنَّمَا هُمْ وَحْدَهُمْ يَخْلُصُونَ، وَتَصِيرُ الأَرْضُ مُوْحِشَةً. | ١٦ 16 |
ಈ ಮೂರು ಮನುಷ್ಯರಲ್ಲಿ ಅದರಲ್ಲಿ ಇದ್ದರೂ, ನನ್ನ ಜೀವದಾಣೆ ಅವರು ಪುತ್ರರನ್ನಾಗಲಿ, ಪುತ್ರಿಯರನ್ನಾಗಲಿ ಬಿಡಿಸಲು ಆಗುತ್ತಿರಲಿಲ್ಲ, ತಾವು ಮಾತ್ರ ತಪ್ಪಿಸಿಕೊಳ್ಳುವರು. ಆದರೆ ದೇಶವು ಹಾಳಾಗುವುದು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
وَإذَا جَلَبْتُ سَيْفاً عَلَى تِلْكَ الأَرْضِ وَقُلْتُ: يَا سَيْفُ اعْبُرْ فِي الأَرْضِ وَافْنِهَا وَأَبَدْتُ مِنْهَا النَّاسَ وَالْبَهَائِمَ، | ١٧ 17 |
“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,
وَكَانَ يُقِيمُ فِيهَا هَؤُلاءِ الثَّلاثَةُ الرِّجَالُ، فَحَيٌّ أَنَا يَقُولُ الرَّبُّ، إِنَّهُمْ لَا يَقْدِرُونَ عَلَى إِنْقَاذِ أَبْنَاءَ لَهَا وَبَنَاتٍ، إِنَّمَا هُمْ وَحْدَهُمْ يَخْلُصُونَ. | ١٨ 18 |
ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
إِذَا أَفْشَيْتُ وَبَأً فِي تِلْكَ الأَرْضِ، وَسَكَبْتُ عَلَيْهَا غَضَبِي بِسَفْكِ الدَّمِ لأُفْنِيَ مِنْهَا النَّاسَ وَالْبَهَائِمَ، | ١٩ 19 |
“ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,
وَكَانَ يُقِيمُ فِيهَا هَؤُلاءِ الثَّلاثَةُ الرِّجَالُ، فَحَيٌّ أَنَا يَقُولُ الرَّبُّ إِنَّهُمْ لَا يَقْدِرُونَ عَلَى إِنْقَاذِ ابْنٍ لَهَا أَوِ ابْنَةٍ، إِنَّمَا يَخْلُصُونَ وَحْدَهُمْ فَقَطْ بِبِرِّهِمْ. | ٢٠ 20 |
ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
فَكَمْ بِالأَحْرَى يَحْدُثُ إِذَا أَرْسَلْتُ أَحْكَامِي الأَرْبَعَةَ الشَّدِيدَةَ: الْحَرْبَ وَالْمَجَاعَةَ وَالْوُحُوشَ الضَّارِيَةَ وَالْوَبَاءَ عَلَى أُورُشَلِيمَ لأُبِيدَ مِنْهَا النَّاسَ وَالْبَهَائِمَ. | ٢١ 21 |
“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?
وَلَكِنْ سَتَبْقَى فِيهَا بَقِيَّةٌ نَاجِيَةٌ مِنْ أَبْنَاءَ وَبَنَاتٍ، يَخْرُجُونَ مِنْهَا، فَيُقْبِلُونَ إِلَيْكُمْ فَتَشْهَدُونَ حُسْنَ سُلُوكِهِمْ وَتَصَرُّفَاتِهِمْ فَتَتَعَزَّوْنَ عَنِ الْمَصَائِبِ الَّتِي أَوْقَعْتُهَا بِأُورُشَلِيمَ وَعَنْ جَمِيعِ مَا ابْتَلَيْتُهَا بِهِ. | ٢٢ 22 |
ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ.
عِنْدَئِذٍ يُعَزُّونَكُمْ حِينَ تَشْهَدُونَ حُسْنَ سُلُوكِهِمْ وَتَصَرُّفَاتِهِمْ، فَتُدْرِكُونَ أَنَّ كُلَّ مَا صَنَعْتُهُ فِيهَا لَمْ يَكُنْ عَبَثاً، يَقُولُ السَّيِّدُ الرَّبُّ». | ٢٣ 23 |
ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”