< مَتَّى 12 >
فِي ذَلِكَ الْوَقْتِ مَرَّ يَسُوعُ بَيْنَ الْحُقُولِ فِي يَوْمِ سَبْتٍ. فَجَاعَ تَلامِيذُهُ، فَأَخَذُوا يَقْطِفُونَ سَنَابِلَ الْقَمْحِ وَيَأْكُلُونَ. | ١ 1 |
೧ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
وَلَمَّا رَآهُمُ الْفَرِّيسِيُّونَ قَالُوا لَهُ: «هَا إِنَّ تَلامِيذَكَ يَفْعَلُونَ مَا لَا يَحِلُّ فِعْلُهُ فِي السَّبْتِ!» | ٢ 2 |
೨ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು.
فَأَجَابَهُمْ: «أَمَا قَرَأْتُمْ مَا فَعَلَهُ دَاوُدُ وَمُرَافِقُوهُ عِنْدَمَا جَاعُوا؟ | ٣ 3 |
೩ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
كَيْفَ دَخَلَ بَيْتَ اللهِ وَأَكَلَ خُبْزَ التَّقْدِمَةِ الَّذِي لَمْ يَكُنْ أَكْلُهُ يَحِلُّ لَهُ وَلا لِمُرَافِقِيهِ بَلْ لِلْكَهَنَةِ فَقَطْ! | ٤ 4 |
೪ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.
أَوَ لَمْ تَقْرَأُوا فِي الشَّرِيعَةِ أَنَّ الْكَهَنَةَ يُخَالِفُونَ شَرِيعَةَ السَّبْتِ (بِالْعَمَلِ) فِي الْهَيْكَلِ أَيَّامَ السَّبْتِ وَلا يُحْسَبُونَ مُذْنِبِينَ؟ | ٥ 5 |
೫ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?
وَلكِنِّي أَقُولُ لَكُمْ: هَا هُنَا أَعْظَمُ مِنَ الْهَيْكَلِ! | ٦ 6 |
೬ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ.
وَلَوْ فَهِمْتُمْ مَعْنَى الْقَوْلِ: إِنِّي أَطْلُبُ رَحْمَةً لَا ذَبِيحَةً، لَمَا حَكَمْتُمْ عَلَى مَنْ لَا ذَنْبَ عَلَيْهِمْ! | ٧ 7 |
೭‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.
فَإِنَّ ابْنَ الإِنْسَانِ هُوَ رَبُّ السَّبْتِ!» | ٨ 8 |
೮ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು.
ثُمَّ انْتَقَلَ مِنْ هُنَاكَ وَدَخَلَ مَجْمَعَهُمْ، | ٩ 9 |
೯ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು.
وَإذَا هُنَاكَ رَجُلٌ يَدُهُ يَابِسَةٌ. وَإِذْ أَرَادَ الْفَرِّيسِيُّونَ أَنْ يَشْتَكُوا عَلَيْهِ بِتُهْمَةٍ مَا، سَأَلُوهُ: «أَيَحِلُّ شِفَاءُ الْمَرْضَى فِي يَوْمِ السَّبْتِ؟» | ١٠ 10 |
೧೦ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.
فَأَجَابَهُمْ: «أَيُّ وَاحِدٍ مِنْكُمْ يَكُونُ عِنْدَهُ خَرُوفٌ وَاحِدٌ، فَإِذَا وَقَعَ فِي حُفْرَةٍ يَوْمَ سَبْتٍ، أَفَلا يُمْسِكُهُ وَيُخْرِجُهُ؟ | ١١ 11 |
೧೧ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?
فَكَمْ هُوَ الإِنْسَانُ أَفْضَلُ كَثِيراً مِنَ الْخَرُوفِ! إِذَنْ يَحِلُّ فِعْلُ الْخَيْرِ يَوْمَ السَّبْتِ». | ١٢ 12 |
೧೨ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ” ಎಂದು ಉತ್ತರ ಕೊಟ್ಟನು.
ثُمَّ قَالَ لِلرَّجُلِ: «مُدَّ يَدَكَ!» فَمَدَّهَا، فَعَادَتْ سَلِيمَةً كَالْيَدِ الأُخْرَى. | ١٣ 13 |
೧೩ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.
وَلكِنَّ الْفَرِّيسِيِّينَ خَرَجُوا وَتَآمَرُوا عَلَى يَسُوعَ لِيَقْتُلُوهُ. | ١٤ 14 |
೧೪ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.
فَعَلِمَ بِذَلِكَ وَانْسَحَبَ مِنْ هُنَاكَ. وَتَبِعَتْهُ جُمُوعٌ كَثِيرَةٌ، فَشَفَاهُمْ جَمِيعاً، | ١٥ 15 |
೧೫ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.
وَحَذَّرَهُمْ مِنْ أَنْ يُذِيعُوا أَمْرَهُ، | ١٦ 16 |
೧೬ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.
لِيَتِمَّ مَا قِيلَ بِلِسَانِ النَّبِيِّ إِشَعْيَاءَ الْقَائِلِ: | ١٧ 17 |
೧೭ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,
«هَا هُوَ فَتَايَ الَّذِي اخْتَرْتُهُ، حَبِيبِي الَّذِي سُرَّتْ بِهِ نَفْسِي! سَأَضَعُ رُوحِي عَلَيْهِ، فَيُعْلِنُ الْحَقَّ لِلأُمَمِ. | ١٨ 18 |
೧೮“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.
لَا يُخَاصِمُ وَلا يَصْرُخُ، وَلا يَسْمَعُ أَحَدٌ صَوْتَهُ فِي الشَّوَارِعِ. | ١٩ 19 |
೧೯ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ.
قَصَبَةً مَرْضُوضَةً لَا يَكْسِرُ، وَفَتِيلَةً مُدَخِّنَةً لَا يُطْفِئُ، حَتَّى يَقُودَ الْعَدْلَ إِلى النَّصْرِ، | ٢٠ 20 |
೨೦ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.
وَعَلَى اسْمِهِ تُعَلِّقُ الأُمَمُ رَجَاءَهَا!» | ٢١ 21 |
೨೧ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.”
ثُمَّ أُحْضِرَ إِلَيْهِ رَجُلٌ أَعْمَى وَأَخْرَسُ يَسْكُنُهُ شَيْطَانٌ، فَشَفَاهُ حَتَّى أَبْصَرَ وَتَكَلَّمَ. | ٢٢ 22 |
೨೨ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.
فَدُهِشَ الْجُمُوعُ كُلُّهُمْ، وَقَالُوا: «لَعَلَّ هَذَا هُوَ ابْنُ دَاوُدَ!» | ٢٣ 23 |
೨೩ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು.
أَمَّا الْفَرِّيسِيُّونَ، فَلَمَّا سَمِعُوا بِهَذَا قَالُوا: «إِنَّهُ لَا يَطْرُدُ الشَّيَاطِينَ إِلّا بِبَعْلَزَبُولَ رَئِيسِ الشَّيَاطِينِ!» | ٢٤ 24 |
೨೪ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
وَعَلِمَ يَسُوعُ أَفْكَارَهُمْ، فَقَالَ لَهُمْ: «كُلُّ مَمْلَكَةٍ تَنْقَسِمُ عَلَى ذَاتِهَا تَخْرَبُ. وَكُلُّ مَدِينَةٍ أَوْ بَيْتٍ يَنْقَسِمُ عَلَى ذَاتِهِ، لَا يَصْمُدُ. | ٢٥ 25 |
೨೫ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.
فَإِنْ كَانَ الشَّيْطَانُ يَطْرُدُ الشَّيْطَانَ، يَكُونُ قَدِ انْقَسَمَ عَلَى ذَاتِهِ، فَكَيْفَ تَصْمُدُ مَمْلَكَتُهُ؟ | ٢٦ 26 |
೨೬ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?
وَإِنْ كُنْتُ أَنَا أَطْرُدُ الشَّيَاطِينَ بِبَعْلَزَبُولَ، فَأَبْنَاؤُكُمْ بِمَنْ يَطْرُدُونَهُمْ؟ لِذَلِكَ هُمْ يَحْكُمُونَ عَلَيْكُمْ؟ | ٢٧ 27 |
೨೭ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
وَلَكِنْ إِنْ كُنْتُ بِرُوحِ اللهِ أَطْرُدُ الشَّيَاطِينَ، فَقَدْ أَقْبَلَ عَلَيْكُمْ مَلَكُوتُ اللهِ! | ٢٨ 28 |
೨೮ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?
وَإلَّا، فَكَيْفَ يَقْدِرُ أَحَدٌ أَنْ يَدْخُلَ بَيْتَ الْقَوِيِّ وَيَنْهَبَ أَمْتِعَتَهُ إِذَا لَمْ يَرْبِطِ الْقَوِيَّ أَوَّلاً؛ وَبَعْدَئِذٍ يَنْهَبُ بَيْتَهُ؟ | ٢٩ 29 |
೨೯ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.
مَنْ لَيْسَ مَعِي، فَهُوَ ضِدِّي؛ وَمَنْ لَا يَجْمَعُ مَعِي، فَهُوَ يُفَرِّقُ. | ٣٠ 30 |
೩೦ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.
لِذَلِكَ أَقُولُ لَكُمْ: إِنَّ كُلَّ خَطِيئَةٍ وَازْدِرَاءَ يُغْفَرُ لِلنَّاسِ. | ٣١ 31 |
೩೧ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.
وَأَمَّا الازْدِرَاءَ بِالرُّوحِ (الْقُدُسِ)، فَلَنْ يُغْفَرَ. وَمَنْ قَالَ كَلِمَةً ضِدَّ ابْنِ الإِنْسَانِ، يُغْفَرُ لَهُ. وَأَمَّا مَنْ قَالَ كَلِمَةً ضِدَّ الرُّوحِ الْقُدُسِ، فَلَنْ يُغْفَرَ لَهُ، لَا فِي هَذَا الزَّمَانِ، وَلا فِي الزَّمَانِ الآتِي. (aiōn ) | ٣٢ 32 |
೩೨ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ. (aiōn )
لِتَكُنِ الشَّجَرَةُ جَيِّدَةً، فَتُنْتِجَ ثَمَراً جَيِّداً؛ وَلْتَكُنِ الشَّجَرَةُ رَدِيئَةً، فَتُنْتِجَ ثَمَراً رَدِيئاً! فَمِنَ الثَّمَرِ، تُعْرَفُ الشَّجَرَةُ. | ٣٣ 33 |
೩೩“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.
يَا أَوْلادَ الأَفَاعِي، كَيْفَ تَقْدِرُونَ، وَأَنْتُمْ أَشْرَارٌ، أَنْ تَتَكَلَّمُوا كَلاماً صَالِحاً؟ لأَنَّ الْفَمَ يَتَكَلَّمُ بِمَا يَفِيضُ بِهِ الْقَلْبُ. | ٣٤ 34 |
೩೪ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
فَالإِنْسَانُ الصَّالِحُ، مِنَ الْكَنْزِ الصَّالِحِ فِي قَلْبِهِ، يُصْدِرُ مَا هُوَ صَالِحٌ. وَالإِنْسَانُ الشِّرِّيرُ، يُصْدِرُ مَا هُوَ شِرِّيرٌ. | ٣٥ 35 |
೩೫ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.
عَلَى أَنِّي أَقُولُ لَكُمْ: إِنَّ كُلَّ كَلِمَةٍ بَاطِلَةٍ يَتَكَلَّمُ بِها النَّاسُ، سَوْفَ يُؤَدُّونَ عَنْهَا الْحِسَابَ فِي يَوْمِ الدَّيْنُونَةِ. | ٣٦ 36 |
೩೬ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.
فَإِنَّكَ بِكَلامِكَ تَتَبَرَّرُ، وَبِكَلامِكَ تُدَانُ!» | ٣٧ 37 |
೩೭ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.
عِنْدَئِذٍ أَجَابَهُ بَعْضُ الْكَتَبَةِ وَالْفَرِّيسِيِّينَ، قَائِلِينَ: «يَا مُعَلِّمُ، نَرْغَبُ فِي أَنْ نُشَاهِدَ آيَةً تُجْرِيهَا!» | ٣٨ 38 |
೩೮ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,
فَأَجَابَهُمْ: «جِيلٌ شِرِّيرٌ فَاسِقٌ يَطْلُبُ آيَةً؛ وَلَنْ يُعْطَى آيَةً إِلّا آيَةَ يُونَانَ النَّبِيِّ. | ٣٩ 39 |
೩೯“ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.
فَكَمَا بَقِيَ يُونَانُ فِي جَوْفِ الْحُوتِ ثَلاثَةَ أَيَّامٍ وَثَلاثَ لَيَالٍ، هكَذَا سَيَبْقَى ابْنُ الإِنْسَانِ فِي جَوْفِ الأَرْضِ ثَلاثَةَ أَيَّامٍ وَثَلاثَ لَيَالٍ. | ٤٠ 40 |
೪೦ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
سَيَقِفُ أَهْلُ نِينَوَى يَوْمَ الْحِسَابِ مَعَ هَذَا الْجِيلِ وَيَحْكُمُونَ عَلَيْهِ؛ لأَنَّهُمْ تَابُوا لَمَّا أَنْذَرَهُمْ يُونَانُ. وَهَا هُنَا أَعْظَمُ مِنْ يُونَانَ! | ٤١ 41 |
೪೧ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.
وَسَتَقُومُ مَلِكَةُ الْجَنُوبِ يَوْمَ الْحِسَابِ مَعَ هَذَا الْجِيلِ وَتَحْكُمُ عَلَيْهِ، لأَنَّهَا جَاءَتْ مِنْ أَقْصَى الأَرْضِ لِتَسْمَعَ حِكْمَةَ سُلَيْمَانَ. وَهَا هُنَا أَعْظَمُ مِنْ سُلَيْمَانَ! | ٤٢ 42 |
೪೨ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.
وَلكِنْ مَتَى خَرَجَ الرُّوحُ النَّجِسُ مِنْ إِنْسَانٍ يَسْكُنُهُ، فَإِنَّهُ يَهِيمُ فِي الأَمَاكِنِ الْخَرِبَةِ طَالِباً الرَّاحَةَ، فَلا يَجِدُ. | ٤٣ 43 |
೪೩“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.
فَيَقُولُ: أَرْجِعُ إِلَى مَسْكَنِي الَّذِي فَارَقْتُهُ! وَيَرْجِعُ، فَيَجِدُهُ فَارِغاً مَكْنُوساً مُزَيَّناً. | ٤٤ 44 |
೪೪ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ, ಗುಡಿಸಿ, ಅಲಂಕರಿಸಿರುವುದನ್ನು ಕಂಡು,
فَيَذْهَبُ، وَيُحْضِرُ مَعَهُ سَبْعَةَ أَرْوَاحٍ أُخْرَى أَكْثَرَ مِنْهُ شَرّاً، فَتَدْخُلُ جَمِيعاً وَتَسْكُنُ ذَلِكَ الإِنْسَانَ، فَتَكُونُ آخِرَتُهُ أَسْوَأَ مِنْ حَالَتِهِ الأُولَى. هكَذَا تَكُونُ حَالُ هَذَا الْجِيلِ الشِّرِّيرِ!» | ٤٥ 45 |
೪೫ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.
وَبَيْنَمَا كَانَ يُكَلِّمُ الْجُمُوعَ، إِذَا أُمُّهُ وَإخْوَتُهُ قَدْ وَقَفُوا خَارِجاً، يَطْلُبُونَ أَنْ يُكَلِّمُوهُ. | ٤٦ 46 |
೪೬ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.
فَقَالَ لَهُ وَاحِدٌ مِنَ الْحَاضِرِينَ: «هَا إِنَّ أُمَّكَ وَإِخْوَتَكَ وَاقِفُونَ خَارِجاً يَطْلُبُونَ أَنْ يُكَلِّمُوكَ!» | ٤٧ 47 |
೪೭ಆಗ ಒಬ್ಬನು, “ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ” ಅಂದನು.
فَأَجَابَ قَائِلاً لِلَّذِي أَخْبَرَهُ: «مَنْ هِيَ أُمِّي؟ وَمَنْ هُمْ إِخْوَتِي؟» | ٤٨ 48 |
೪೮ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ
ثُمَّ أَشَارَ بِيَدِهِ إِلَى تَلامِيذِهِ، وَقَالَ: «هَؤُلاءِ هُمْ أُمِّي وَإِخْوَتِي: | ٤٩ 49 |
೪೯ಶಿಷ್ಯರ ಕಡೆಗೆ ಕೈ ಚಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು.
لأَنَّ كُلَّ مَنْ يَعْمَلُ بِإِرَادَةِ أَبِي الَّذِي فِي السَّمَاوَاتِ هُوَ أَخِي وَأُخْتِي وَأُمِّي!» | ٥٠ 50 |
೫೦ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.