< مَتَّى 22 >
وَعَادَ يَسُوعُ يَتَكَلَّمُ بِالأَمْثَالِ، فَقَالَ: | ١ 1 |
೧ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,
«يُشَبَّهُ مَلَكُوتُ السَّمَاوَاتِ بِإِنْسَانٍ مَلِكٍ أَقَامَ وَلِيمَةً فِي عُرْسِ ابْنِهِ، | ٢ 2 |
೨“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
وَأَرْسَلَ عَبِيدَهُ يَسْتَدْعِي الْمَدْعُوِّينَ إِلَى الْعُرْسِ، فَلَمْ يَرْغَبُوا فِي الْحُضُورِ. | ٣ 3 |
೩ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
فَأَرْسَلَ الْمَلِكُ ثَانِيَةً عَبِيداً آخَرِينَ قَائِلاً لَهُمْ: قُولُوا لِلْمَدْعُوِّينَ: هَا أَنَا قَدْ أَعْدَدْتُ وَلِيمَتِي؛ ثِيرَانِي وَعُجُولِي الْمُسَمَّنَةُ قَدْ ذُبِحَتْ وَكُلُّ شَيْءٍ جَاهِزٌ، فَتَعَالَوْا إِلَى الْعُرْسِ! | ٤ 4 |
೪ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.
وَلكِنَّ الْمَدْعُوِّينَ تَهَاوَنُوا، فَذَهَبَ وَاحِدٌ إِلَى حَقْلِهِ، وَآخَرُ إِلَى مَتْجَرِهِ؛ | ٥ 5 |
೫ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;
وَالْبَاقُونَ قَبَضُوا عَلَى عَبِيدِ الْمَلِكِ وَأَهَانُوهُمْ وَقَتَلُوهُمْ. | ٦ 6 |
೬ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.
فَغَضِبَ الْمَلِكُ وَأَرْسَلَ جُيُوشَهُ، فَأَهْلَكَ أُولئِكَ الْقَتَلَةَ وَأَحْرَقَ مَدِينَتَهُمْ. | ٧ 7 |
೭ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ثُمَّ قَالَ لِعَبِيدِهِ: إِنَّ وَلِيمَةَ الْعُرْسِ جَاهِزَةٌ، وَلكِنَّ الْمَدْعُوِّينَ لَمْ يَكُونُوا مُسْتَحِقِّينَ. | ٨ 8 |
೮ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.
فَاذْهَبُوا إِلَى مَفَارِقِ الطُّرُقِ، وَكُلُّ مَنْ تَجِدُونَهُ ادْعُوهُ إِلَى وَلِيمَةِ الْعُرْسِ! | ٩ 9 |
೯ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.
فَخَرَجَ الْعَبِيدُ إِلَى الطُّرُقِ، وَجَمَعُوا كُلَّ مَنْ وَجَدُوا، أَشْرَاراً وَصَالِحِينَ، حَتَّى امْتَلأَتْ قَاعَةُ الْعُرْسِ بِالضُّيُوفِ. | ١٠ 10 |
೧೦ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
وَدَخَلَ الْمَلِكُ لِيَنْظُرَ الضُّيُوفَ، فَرَأَى إِنْسَاناً لَا يَلْبَسُ ثَوْبَ الْعُرْسِ. | ١١ 11 |
೧೧ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,
فَقَالَ لَهُ: يَا صَاحِبِي، كَيْفَ دَخَلْتَ إِلَى هُنَا وَأَنْتَ لَا تَلْبَسُ ثَوْبَ الْعُرْسِ؟ فَظَلَّ صَامِتاً. | ١٢ 12 |
೧೨ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
فَأَمَرَ الْمَلِكُ خُدَّامَهُ قَائِلاً: قَيِّدُوا رِجْلَيْهِ وَيَدَيْهِ، وَاطْرَحُوهُ فِي الظَّلامِ الْخَارِجِيِّ، هُنَالِكَ يَكُونُ الْبُكَاءُ وَصَرِيرُ الأَسْنَانِ! | ١٣ 13 |
೧೩ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
لأَنَّ الْمَدْعُوِّينَ كَثِيرُونَ، وَلكِنَّ الْمُخْتَارِينَ قَلِيلُونَ!» | ١٤ 14 |
೧೪ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.
فَذَهَبَ الْفَرِّيسِيُّونَ وَتَآمَرُوا كَيْفَ يُوْقِعُونَهُ بِكَلِمَةٍ يَقُولُهَا. | ١٥ 15 |
೧೫ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
فَأَرْسَلُوا إِلَيْهِ بَعْضَ تَلامِيذِهِمْ مَعَ أَعْضَاءِ حِزْبِ هِيرُودُسَ، يَقُولُونَ لَهُ: «يَا مُعَلِّمُ، نَعْلَمُ أَنَّكَ صَادِقٌ وَتُعَلِّمُ النَّاسَ طَرِيقَ اللهِ فِي الْحَقِّ، وَلا تُبَالِي بِأَحَدٍ لأَنَّكَ لَا تُرَاعِي مَقَامَاتِ النَّاسِ، | ١٦ 16 |
೧೬ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
فَقُلْ لَنَا إِذَنْ مَا رَأْيُكَ؟ أَيَحِلُّ أَنْ تُدْفَعَ الْجِزْيَةُ لِلْقَيْصَرِ أَمْ لا؟» | ١٧ 17 |
೧೭ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
فَأَدْرَكَ يَسُوعُ مَكْرَهُمْ وَقَالَ: «أَيُّهَا الْمُنَافِقُونَ، لِمَاذَا تُحَاوِلُونَ الإيقَاعَ بِي؟ | ١٨ 18 |
೧೮ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?
أَرُونِي عُمْلَةَ الْجِزْيَةِ!» فَقَدَّمُوا لَهُ دِينَاراً. | ١٩ 19 |
೧೯ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.
فَسَأَلَهُمْ: «لِمَنْ هَذِهِ الصُّورَةُ وَهَذَا النَّقْشُ؟» | ٢٠ 20 |
೨೦ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ
أَجَابُوهُ: «لِلْقَيْصَرِ!» فَقَالَ لَهُمْ: «إِذَنْ، أَعْطُوا مَا لِلْقَيْصَرِ لِلْقَيْصَرِ، وَمَا لِلهِ لِلهِ» | ٢١ 21 |
೨೧ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
فَتَرَكُوهُ وَمَضَوْا، مَدْهُوشِينَ مِمَّا سَمِعُوا. | ٢٢ 22 |
೨೨ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.
فِي ذلِكَ الْيَوْمِ تَقَدَّمَ إِلَيْهِ بَعْضُ الصَّدُّوقِيِّينَ الَّذِينَ لَا يَؤْمِنُونَ بالْقِيَامَةِ، وَسَأَلُوهُ | ٢٣ 23 |
೨೩ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.
قَائِلِينَ: «يَا مُعَلِّمُ، قَالَ مُوسَى: إِنْ مَاتَ رَجُلٌ دُونَ أَنْ يُخَلِّفَ أَوْلاداً، فَعَلَى أَخِيهِ أَنْ يَتَزَوَّجَ بِأَرْمَلَتِهِ، وَيُقِيمَ نَسْلاً عَلَى اسْمِ أَخِيهِ. | ٢٤ 24 |
೨೪ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
فَقَدْ كَانَ عِنْدَنَا سَبْعَةُ إِخْوَةٍ، تَزَوَّجَ أَوَّلُهُمْ ثُمَّ مَاتَ وَلَيْسَ لَهُ نَسْلٌ، فَتَرَكَ زَوْجَتَهُ لأَخِيهِ؛ | ٢٥ 25 |
೨೫ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;
وَكَذلِكَ الثَّانِي ثُمَّ الثَّالِثُ، حَتَّى السَّابِعِ. | ٢٦ 26 |
೨೬ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.
وَمِنْ بَعْدِهِمْ جَمِيعاً، مَاتَتِ الْمَرْأَةُ أَيْضاً. | ٢٧ 27 |
೨೭ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು.
فَفِي الْقِيَامَةِ، لِمَنْ مِنَ السَّبْعَةِ تَكُونُ الْمَرْأَةُ زَوْجَةً، لأَنَّهَا كَانَتْ زَوْجَةً لِكُلٍّ مِنْهُمْ؟» | ٢٨ 28 |
೨೮ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು.
فَرَدَّ عَلَيْهِمْ يَسُوعُ قَائِلاً: «أَنْتُمْ فِي ضَلالٍ لأَنَّكُمْ لَا تَفْهَمُونَ الْكِتَابَ وَلا قُدْرَةَ اللهِ. | ٢٩ 29 |
೨೯ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;
فَالنَّاسُ فِي الْقِيَامَةِ لَا يَتَزَوَّجُونَ وَلا يُزَوِّجُونَ، بَلْ يَكُونُونَ كَمَلائِكَةِ اللهِ فِي السَّمَاءِ. | ٣٠ 30 |
೩೦ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.
أَمَّا عَنْ قِيَامَةِ الأَمْوَاتِ، أَفَمَا قَرَأْتُمْ مَا قِيلَ لَكُمْ عَلَى لِسَانِ اللهِ: | ٣١ 31 |
೩೧ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,
أَنَا إِلهُ إِبْرَاهِيمَ وَإِلَهُ إِسْحَاقَ وَإِلَهُ يَعْقُوبَ؟ وَلَيْسَ اللهُ بِإِلَهِ أَمْوَاتٍ، بِلْ هُوَ إِلهُ أَحْيَاءَ». | ٣٢ 32 |
೩೨‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.
فَلَمَّا سَمِعَ الْجُمُوعُ، ذُهِلُوا مِنْ تَعْلِيمِهِ. | ٣٣ 33 |
೩೩ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.
وَلكِنْ لَمَّا سَمِعَ الْفَرِّيسِيُّونَ أَنَّ يَسُوعَ أَفْحَمَ الصَّدُّوقِيِّينَ، اجْتَمَعُوا مَعاً، | ٣٤ 34 |
೩೪ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
وَسَأَلَهُ وَاحِدٌ مِنْهُمْ، وَهُوَ مِنْ عُلَمَاءِ الشَّرِيعَةِ، يُحَاوِلُ أَنْ يَسْتَدْرِجَهُ: | ٣٥ 35 |
೩೫ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,
«يَا مُعَلِّمُ، مَا هِيَ الْوَصِيَّةُ الْعُظْمَى فِي الشَّرِيعَةِ؟» | ٣٦ 36 |
೩೬“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ
فَأَجَابَهُ: «أَحِبّ الرَّبَّ إِلهَكَ بِكُلِّ قَلْبِكَ وَكُلِّ نَفْسِكَ وَكُلِّ فِكْرِكَ! | ٣٧ 37 |
೩೭ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
هَذِهِ هِيَ الْوَصِيَّةُ الْعُظْمَى الأُولَى. | ٣٨ 38 |
೩೮ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.
وَالثَّانِيَةُ مِثْلُهَا: أَحِبّ قَرِيبَكَ كَنَفْسِكَ! | ٣٩ 39 |
೩೯ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
بِهَاتَيْنِ الْوَصِيَّتَيْنِ تَتَعَلَّقُ الشَّرِيعَةُ وَكُتُبُ الأَنْبِيَاءِ!» | ٤٠ 40 |
೪೦ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.
وَفِيمَا كَانَ الْفَرِّيسِيُّونَ مُجْتَمِعِينَ، سَأَلَهُمْ يَسُوعُ: | ٤١ 41 |
೪೧ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ,
«مَا رَأْيُكُمْ فِي الْمَسِيحِ: ابْنُ مَنْ هُوَ؟» أَجَابُوهُ: «ابْنُ دَاوُدَ!» | ٤٢ 42 |
೪೨“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ
فَسَأَلَهُمْ: «إِذَنْ، كَيْفَ يَدْعُوهُ دَاوُدُ بِالرُّوحِ رَبّاً لَهُ إِذْ يَقُولُ: | ٤٣ 43 |
೪೩ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?
قَالَ الرَّبُّ لِرَبِّي: اجْلِسْ عَنْ يَمِينِي حَتَّى أَضَعَ أَعْدَاءَكَ مَوْطِئاً لِقَدَمَيْكَ؟ | ٤٤ 44 |
೪೪“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.
فَإِنْ كَانَ دَاوُدُ يَدْعُوهُ رَبَّهُ، فَكَيْفَ يَكُونُ ابْنَهُ؟» | ٤٥ 45 |
೪೫ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.
فَلَمْ يَقْدِرْ وَاحِدٌ مِنْهُمْ أَنْ يُجِيبَهُ وَلَوْ بِكَلِمَةٍ. وَمِنْ ذلِكَ الْيَوْمِ، لَمْ يَجْرُؤْ أَحَدٌ أَنْ يَسْتَدْرِجَهُ بِأَيِّ سُؤَالٍ. | ٤٦ 46 |
೪೬ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.