< عَدَد 11 >

وَرَاحَ الشَّعْبُ يَتَذَمَّرُ فِي مَسْمَعِ الرَّبِّ وَكَأَنَّ شَرّاً أَصَابَهُمْ، فَاحْتَدَمَ غَضَبُ الرَّبِّ عَلَيْهِمْ، وَانْدَلَعَتْ فِيهِمْ نَارُهُ وَأَحْرَقَتْ طَرَفَ الْمُخَيَّمِ، ١ 1
ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
فَصَرَخُوا إِلَى مُوسَى، فَصَلَّى مُوسَى إِلَى الرَّبِّ فَخَمِدَتِ النَّارُ، ٢ 2
ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.
فَدُعِيَ ذَلِكَ الْمَكَانُ «تَبْعِيرَةَ» (وَمَعْنَاهُ: اشْتِعَالٌ) لأَنَّ نَارَ الرَّبِّ اشْتَعَلَتْ فِيهِمْ. ٣ 3
ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.
وَاشْتَهَى أَخْلاطُ الأُمَمِ الْمُقِيمُونَ بَيْنَ بَنِي إِسْرَائِيلَ، مِمَّنْ خَرَجُوا مَعَهُمْ مِنْ مِصْرَ، طَعَامَ مِصْرَ، فَعَادَ بَنُو إِسْرَائِيلَ يَبْكُونَ قَائِلِينَ: «مَنْ يُطْعِمُنَا لَحْماً؟ ٤ 4
ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?
لَقَدْ تَذَكَّرْنَا سَمَكَ مِصْرَ الَّذِي كُنَّا نَأْكُلُهُ مَجَّاناً، وَالقِثَّاءَ وَالْبَطِّيخَ وَالْكُرَّاتَ وَالْبَصَلَ وَالثُّومَ، ٥ 5
ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
أَمَّا الآنَ فَقَدْ فَقَدْنَا شَهِيَّتَنَا وَهُزِلْنَا، وَلَيْسَ أَمَامَ أَعْيُنِنَا سِوَى هَذَا الْمَنِّ». ٦ 6
ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.
وَكَانَ الْمَنُّ فِي حَجْمِ بُذُورِ الْكُزْبَرَةِ، وَشَكْلُهُ مُمَاثِلاً لِلْمُقْلِ. ٧ 7
ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.
وَكَانَ الشَّعْبُ يَطُوفُونَ لِيَجْمَعُوهُ ثُمَّ يَطْحَنُونَهُ بِالرَّحَى أَوْ يَدُقُّونَهُ فِي الْهَاوَنِ وَيَطْبُخُونَهُ فِي الْقُدُورِ أَوْ يَخْبِزُونَهُ عَلَى حِجَارَةٍ مُحَمَّاةٍ. وَكَانَ طَعْمُهُ كَطَعْمِ قَطَائِفَ بِزَيْتٍ. ٨ 8
ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
وَكَانَ الْمَنُّ يَنْزِلُ بِنُزُولِ النَّدَى عَلَى الْمُخَيَّمِ فِي أَثْنَاءِ اللَّيْلِ. ٩ 9
ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.
فَلَمَّا سَمِعَ مُوسَى بُكَاءَ جَمِيعِ أَفْرَادِ الشَّعْبِ، كُلٍّ أَمَامَ بَابِ خَيْمَتِهِ، وَرَأَى احْتِدَامَ غَضَبِ الرَّبِّ الشَّدِيدِ اعْتَرَاهُ الاسْتِيَاءُ. ١٠ 10
೧೦ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.
فَقَالَ مُوسَى لِلرَّبِّ: «لَمَاذَا أَسَأْتَ إِلَى عَبْدِكَ وَلَمْ تَرْضَ عَنْهُ حَتَّى إِنَّكَ حَمَّلْتَهُ مَسْؤولِيَّةَ هَذَا الشَّعْبِ؟ ١١ 11
೧೧ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?
أَلَعَلِّي حَبِلْتُ بِهِ أَوْ وَلَدْتُهُ، حَتَّى تَقُولَ لِي احْمِلْهُ فِي حِضْنِكَ كَمَا يَحْمِلُ الْمُرَبِّي الرَّضِيعَ، وَقُدْهُ إِلَى الأَرْضِ الَّتِي وَعَدْتَ بِها آبَاءَهُ. ١٢ 12
೧೨ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
مِنْ أَيْنَ أَجِيءُ بِلَحْمٍ يَكْفِي جَمِيعَ هَذَا الشَّعْبِ؟ فَإِنَّهُمْ يَبْكُونَ إِلَيَّ قَائِلِينَ: أَعْطِنَا لَحْماً لِنَأْكُلَ. ١٣ 13
೧೩ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
إِنَّنِي عَاجِزٌ عَنْ حَمْلِ عِبْءِ هَذَا الشَّعْبِ وَحْدِي لأَنَّهُ ثَقِيلٌ عَلَيَّ. ١٤ 14
೧೪ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.
إِنْ كُنْتَ سَتُعَامِلُنِي هَكَذَا، فَاقْتُلْنِي، إِنْ حَظِيتُ بِرِضَاكَ، فَلا أَشْهَدُ بَلِيَّتِي». ١٥ 15
೧೫ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.
فَقَالَ الرَّبُّ لِمُوسَى: «اجْمَعْ إِلَيَّ سَبْعِينَ رَجُلاً مِنَ رُؤَسَاءِ إِسْرَائِيلَ مِمَّنْ تَعْلَمُ أَنَّهُمْ حَقّاً شُيُوخُ الشَّعْبِ وَعُرَفَاؤُهُ، وَأَقْبِلْ بِهِمْ إِلَى خَيْمَةِ الاجْتِمَاعِ لِيَمْثُلُوا مَعَكَ هُنَاكَ. ١٦ 16
೧೬ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
فَأَنْزِلَ وَأُخَاطِبَكَ هُنَاكَ، وَآخُذَ مِنَ الرُّوحِ الَّذِي عَلَيْكَ وَأَضَعَ عَلَيْهِمْ، فَيُعِينُونَكَ فِي حَمْلِ مَسْؤولِيَّةِ الشَّعْبِ، فَلا تَحْمِلُهَا أَنْتَ وَحْدَكَ. ١٧ 17
೧೭ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
وَقُلْ لِلشَّعْبِ، أَنْ يَتَقَدَّسُوا لِلْغَدِ، فَيَأْكُلُوا لَحْماً، لأَنَّكُمْ قَدْ بَكَيْتُمْ فِي أُذُنَي الرَّبِّ مُتَسَائِلِينَ: مَنْ يُطْعِمُنَا لَحْماً؟ لَقَدْ كَانَ لَنَا خَيْرٌ فِي مِصْرَ. إِنَّ الرَّبَّ سَيُعْطِيكُمْ لَحْماً فَتَأْكُلُونَ. ١٨ 18
೧೮ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
وَسَتَأْكُلُونَهُ لَا لِيَوْمٍ وَاحِدٍ، وَلا لِيَوْمَيْنِ، وَلا لِخَمْسَةِ أَيَّامٍ أَوْ لِعَشْرَةِ أَيَّامٍ وَلا لِعِشْرِينَ يَوْماً، ١٩ 19
೧೯ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.
بَلْ لِشَهْرٍ كَامِلٍ إِلَى أَنْ تَعَافُوهُ وَيَخْرُجَ مِنْ أُنُوفِكُمْ، لأَنَّكُمْ رَفَضْتُمُ الرَّبَّ الَّذِي فِي وَسَطِكُمْ، وَبَكَيْتُمْ لَدَيْهِ قَائِلِينَ: لِمَاذَا خَرَجْنَا مِنْ مِصْرَ؟» ٢٠ 20
೨೦ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.
فَقَالَ مُوسَى: «هَذَا الشَّعْبُ الَّذِي أَنَا قَائِمٌ فِي وَسَطِهِ نَحْوَ سِتِّ مِئَةِ أَلْفِ رَجُلٍ، مَاعَدَا النَّسَاءَ وَالأَطْفَالَ، وَأَنْتَ تَقُولُ إِنَّكَ سَتُعْطِيهِمْ لَحْماً لِيَأْكُلُوا شَهْراً كَامِلاً، ٢١ 21
೨೧ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.
فَمَهْمَا ذُبِحَ مِنْ غَنَمٍ وَبَقَرٍ أَيَكْفِيهِمْ؟ أَمْ يَكْفِيهِمْ لَوْ جُمِعَ كُلُّ سَمَكِ الْبَحْرِ؟» ٢٢ 22
೨೨ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು.
فَقَالَ الرَّبُّ لِمُوسَى: «هَلْ تَعْجَزُ يَدُ الرَّبِّ؟ انْتَظِرِ الآنَ لِتَرَى إِنْ كَانَ يَتَحَقَّقُ كَلامِي أَمْ لا». ٢٣ 23
೨೩ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.
فَخَرجَ مُوسَى وَكَلَّمَ الشَّعْبَ بِمَا قَالَهُ الرَّبُّ، وَجَمَعَ سَبْعِينَ رَجُلاً مِنْ رُؤَسَائِهِمْ وَأَوْقَفَهُمْ حَوْلَ الْخَيْمَةِ. ٢٤ 24
೨೪ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
فَنَزَلَ الرَّبُّ فِي سَحَابَةٍ وَخَاطَبَهُ، وَأَخَذَ مِنَ الرُّوحِ الْحَالِّ عَلَيْهِ وَوَضَعَهُ عَلَى السَّبْعِينَ رَئِيساً. فَلَمَّا حَلَّ عَلَيْهِمِ الرُّوحُ تَنَبَّأُوا لِفَتْرَةٍ وَتَوَقَّفُوا. ٢٥ 25
೨೫ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.
وَكَانَ قَدْ بَقِيَ اثْنَانِ مِنَ الشُّيُوخِ الْمُسَجَّلِينَ بَيْنَ السَّبْعِينَ فِي الْمُخَيَّمِ لَمْ يَأْتِيَا إِلَى الْخَيْمَةِ، اسْمُ أَحَدِهِمَا أَلْدَادُ، وَاسْمُ الآخَرِ مِيدَادُ. فَحَلَّ عَلَيْهِمَا الرُّوحُ فَتَنَبَّآ فِي الْمُخَيَّمِ. ٢٦ 26
೨೬ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
فَأَسْرَعَ أَحَدُ الشُّبَّانِ وَأَخْبَرَ مُوسَى بِذَلِكَ، ٢٧ 27
೨೭ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು.
فَقَالَ يَشُوعُ بْنُ نُونَ، مُسَاعِدُ مُوسَى مُنْذُ حَدَاثَتِهِ: «يَا سَيِّدِي، امْنَعْهُمَا!» ٢٨ 28
೨೮ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
غَيْرَ أَنَّ مُوسَى قَالَ لَهُ: «هَلْ مَلَأَتْكَ غَيْرَةٌ عَلَيَّ؟ لَيْتَ كُلَّ شَعْبِ الرَّبِّ يُصْبِحُونَ أَنْبِيَاءَ يَحِلُّ عَلَيْهِمِ الرَّبُّ بِرُوحِهِ». ٢٩ 29
೨೯ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
ثُمَّ رَجَعَ مُوسَى وَشُيُوخُ إِسْرَائِيلَ إِلَى الْمُخَيَّمِ. ٣٠ 30
೩೦ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
فَهَبَّتْ رِيحٌ مِنْ عِنْدِ الرَّبِّ سَاقَتِ السُّمَانِيَ مِنْ جِهَةِ الْبَحْرِ وَأَسْقَطَتْهَا عَلَى الْمُخَيَّمِ، نَحْوَ مَسِيرَةِ يَوْمٍ، مِنْ كِلا جِهَتَيْهِ وَحَوَالَيْهِ، وَتَرَاكَمَ حَتَّى بَلَغَ ارْتِفَاعُهُ ذِرَاعَيْنِ (نَحْوَ مِتْرٍ) فَوْقَ وَجْهِ الأَرْضِ. ٣١ 31
೩೧ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.
فَهَبَّ الشَّعْبُ طَوَالَ ذَلِكَ النَّهَارِ وَاللَّيْلِ، وَكُلَّ نَهَارِ الْيَوْمِ التَّالِي يَلْتَقِطُونَ السُّمَانِيَ. فَكَانَتْ أَقَلُّ كَمِّيَّةٍ جُمِعَتْ حَوَالَيْ عَشْرَةِ حَوَامِرَ (نَحْوَ أَلْفَيْنِ وَأَرْبَعَ مِئَةِ لِتْرٍ)، ثُمَّ نَشَرُوهَا حَوْلَ الْمُخَيَّمِ لِتَجِفَّ. ٣٢ 32
೩೨ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
وَإِذْ كَانُوا مَازَالُوا يَمْضُغُونَ اللَّحْمَ، احْتَدَمَ غَضَبُ الرَّبِّ عَلَيْهِمْ، فَأَفْشَى بَيْنَهُمْ وَبَأً مُمِيتاً، ٣٣ 33
೩೩ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
فَدَعُوا الْمَكَانَ «قَبَرُوتَ هَتَّأَوَةَ» (وَمَعْنَاهُ قُبُورُ الشَّهْوَةِ) لأَنَّهُمْ هُنَاكَ دَفَنُوا الْقَوْمَ الْمُشْتَهِينَ. ٣٤ 34
೩೪ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.
ثُمَّ ارْتَحَلَ الشَّعْبُ مِنْ قَبَرُوتَ هَتَّأَوَةَ إِلَى حَضَيْرُوتَ وَمَكَثُوا فِيهَا. ٣٥ 35
೩೫ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.

< عَدَد 11 >