< হগয় ভাববাদীর বই 2 >

1 সপ্তম মাসের একুশ দিনের দিন, সদাপ্রভু বাক্য ভাববাদী হগয়ের মাধ্যমে এল,
ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು,
2 “শল্টীয়েলের ছেলে যিহূদার শাসনকর্তা সরুব্বাবিলকে, যিহোষাদকের ছেলে মহাযাজক যিহোশূয়কে এবং অবশিষ্ট লোকদের জিজ্ঞাসা করো,
“ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
3 ‘তোমাদের মধ্যে কেউ বাকি আছে যে সদাপ্রভুর গৃহের পূর্বের শোভা দেখেছে? এখন তা কেমন দেখাচ্ছে? দেখে মনে হয় না আগেকার তুলনায় এটি এখন কিছুই নয়?
‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’
4 কিন্তু এখন, সরুব্বাবিল, বলবান হও,’ এই কথা সদপ্রভু বলেন, ‘যিহোষাদকের ছেলে মহাযাজক যিহোশূয় এবং দেশের অবশিষ্ট লোকেরা বলবান হও, কাজ করে যাও কারণ আমি তোমাদের সঙ্গে আছি,’ এই কথা সর্বশক্তিমান সদাপ্রভু বলেন।
ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
5 ‘মিশর দেশ থেকে বেরিয়ে আসার সময় আমি তোমাদের সঙ্গে এই প্রতিশ্রুতি করেছিলাম যে, আমার আত্মা তোমাদের সঙ্গে থাকবে। তাই ভয় করো না।’
‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
6 “সর্বশক্তিমান সদাপ্রভু এই কথা বলেন, ‘আর কিছুক্ষণের মধ্যেই আমি আবার আকাশ, পৃথিবী, সমুদ্র এবং ভূমিকে প্রকম্পিত করব।
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
7 আমি সমগ্র জাতিকে নাড়া দেব, ও সব জাতির মনোরঞ্জনকারী আসবেন, এবং এই গৃহ প্রতাপে পরিপূর্ণ করব,’ সর্বশক্তিমান সদাপ্রভু একথাই বলেন।
ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
8 সর্বশক্তিমান সদাপ্রভু বলেন, ‘সোনা আমার ও রুপোও আমার,
‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
9 ভবনের বর্তমানের শোভা অতীতের শোভার চেয়ে মহান হবে।’ সর্বশক্তিমান সদাপ্রভু এই কথা বলেন। ‘আর এখানেই আমি শান্তি প্রদান করব,’ সর্বশক্তিমান সদাপ্রভু এই কথা ঘোষণা করেন।”
‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
10 নবম মাসের চব্বিশ দিনে, রাজা দারিয়াবসের দ্বিতীয় বছরের রাজত্বকালে ভাববাদী হগয়ের কাছে সদাপ্রভুর বাক্য উপস্থিত হল।
೧೦ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.
11 “সর্বশক্তিমান সদাপ্রভু এই কথা বলেন, ‘বিধান সমন্ধে পুরোহিতদের জিজ্ঞাসা করো,
೧೧ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,
12 যদি কেউ নিজের কাপড়ের ভাঁজে পবিত্র মাংস বহন করে, এবং সেই ভাঁজ করা কাপড় কোনো রুটি বা সিদ্ধ করা খাবার, দ্রাক্ষারস, জলপাই তেল বা অন্যান্য খাদ্যবস্তুকে স্পর্শ করে, কি সেই বস্তুসমগ্র পবিত্র হবে?’” পুরোহিতরা উত্তর দিল, “না।”
೧೨ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
13 তারপর হগয় জিজ্ঞাসা করলেন, “যদি কোনো ব্যক্তি মৃতদেহ স্পর্শ করে অশুচি হয়ে, এইসব বস্তুর মধ্যে কাউকে স্পর্শ করে, কি তা অশুচি হবে?” পুরোহিতরা উত্তর দিলেন, “হ্যাঁ, সেটি অশুচি হয়ে যাবে।”
೧೩ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.
14 তখন হগয় বললেন, সদাপ্রভুর বলছেন, “‘আমার দৃষ্টিতে এই জাতি ও দেশ এমনই, তারা সেখানে যেসব কাজকর্ম করে এবং যা কিছু উৎসর্গ করে সেসব অশুচি।’
೧೪ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
15 “‘এখন থেকে সযত্নে চিন্তা করো—সদাপ্রভুর গৃহ স্থাপিত হওয়ার আগে যখন একটি পাথরের উপরে আরেকটি পাথর ছিল না তখন কি অবস্থা ছিল।
೧೫“ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;
16 কেউ যখন কুড়ি কাঠা শস্যরাশির কাছে আসত, তখন শুধুমাত্র দশ কাঠা পেত। কেউ যখন দ্রাক্ষারসের ভাঁটি থেকে পঞ্চাশ পাত্র দ্রাক্ষারস নেওয়ার জন্য যেত, তখন শুধুমাত্র কুড়ি পাত্রই থাকত।
೧೬ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.
17 আমি তোমাদের হাতের কাজকে ক্ষয়রোগ, ছাতারোগ আর শিলাবৃষ্টি দিয়ে আঘাত করেছি, তা সত্ত্বেও তোমরা আমার দিকে ফেরোনি,’ সদাপ্রভু বলেন।
೧೭ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
18 ‘সযত্নে চিন্তা করো আজ নবম মাসের চব্বিশ দিন থেকে সদাপ্রভুর মন্দিরের ভিত্তিমূল স্থাপনের দিন পর্যন্ত। সযত্নে চিন্তা করো,
೧೮“ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
19 এখনও কি গোলাঘরে কোনো বীজ আছে? এখনও পর্যন্ত দ্রাক্ষালতা, ডুমুর, ডালিম ও জলপাই গাছে ফলও ভালো করে ধরেনি। “‘এখন থেকে আমি সদাপ্রভু তোমাদের আশীর্বাদ করব।’”
೧೯ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
20 সেই মাসের চব্বিশতম দিনে দ্বিতীয়বার সদাপ্রভুর বাক্য হগয়ের কাছে এল,
೨೦ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,
21 “যিহূদার শাসক সরুব্বাবিলকে বলো যে আমি আকাশ আর পৃথিবীকে নাড়াবো।
೨೧“ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
22 আমি রাজাদের সিংহাসন উল্টে দেব এবং বিজাতীয় রাজ্যের ক্ষমতা শেষ করে দেব। আমি রথ ও তার চালকদের উল্টে দেব; ঘোড়া এবং ঘোড়সওয়ারেরা প্রত্যকে তার ভাইদের তরোয়ালের দ্বারা মারা যাবে।
೨೨ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”
23 “সর্বশক্তিমান সদাপ্রভু বলেন, ‘সেইদিন, শল্টীয়েলের পুত্র সরুব্বাবিল, আমার দাসকে গ্রহণ করব এবং আমার সিলমোহরের আংটির মতো করব কারণ আমি তোমাকে মনোনীত করেছি,’ সর্বশক্তিমান সদপ্রভু এই কথা বলেন।”
೨೩ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.

< হগয় ভাববাদীর বই 2 >