< Mark 12 >

1 yesu wu vu tsuro ba ni misali a tre wa ro wa indi ri a sen kukron ni rju a rhau kagon nda shi juju wa a ni ka ta shibi ima klo ma a me ko u gbien gugloma nda ban nno jingina ni bi ron bi kukron ki a kle nda ye wlu hi ziren
ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.
2 ni tsar mton u klo kukron ka ton igran ma ndu hi kpa iklo kukron bari wa ba tiea ni bi sen kukron a
ಫಲದ ಕಾಲ ಬಂದಾಗ ಅವನು ದ್ರಾಕ್ಷಿತೋಟದ ಫಲವನ್ನು ರೈತರಿಂದ ಪಡೆಯುವುದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕನನ್ನು ಕಳುಹಿಸಿದನು.
3 amma baka vu u nda tsie nda zu kamma hi ni wo kuklu
ಆದರೆ ಅವರು ಅವನನ್ನು ಹಿಡಿದು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.
4 a la tru dran ma ri hi u ba ka ruu tu nda nnu shan
ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ತಲೆಯನ್ನು ಗಾಯಗೊಳಿಸಿ ಅವಮಾನ ಮಾಡಿ ಕಳುಹಿಸಿಬಿಟ್ಟರು.
5 nga rli a tru ri u ba ka wu kimaa ba tie ri ndi gbugbu wu na ki ba tsi bari nda wu bari
ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದಾಗ ಅವರು ಅವನನ್ನು ಕೊಂದುಹಾಕಿದರು. ಯಜಮಾನನು ಬೇರೆ ಕೆಲವರನ್ನು ಕಳುಹಿಸಿದಾಗ ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
6 a don indin ma ri u wa ani tona ivren ba wa anni san a tru wa wu ma hi u kle klea a tre ba to vren mu ni fu tu
“ಕಡೆಯದಾಗಿ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನಿದ್ದನು. ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು,’ ಎಂದು ಭಾವಿಸಿ, ಅವನನ್ನು ಅವರ ಬಳಿಗೆ ಕಳುಹಿಸಿದನು.
7 ma me bi ron kukron ba bitre din a wa ti mba ni ri gadoa ye ki wu ndi ka rli gadoa
“ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು.
8 ba vu wu nda kau taga ni mi rjua
ಅವರು ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷಿತೋಟದ ಹೊರಗೆ ಬಿಸಾಡಿದರು.
9 to waa u ndi u rju ni he? a ni ye nda wu bi ndu sen kukron ba nda nno bari nkan nu irjua
“ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು.
10 bina kra kpie wa beblu tre a na? tita wa bi me ba ka mba ni wua a katie wa ba you ni vrun tra
ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
11 i wa yi a hi tie u rji nda bi ya tawu
ಇದು ಕರ್ತನಿಂದಲೇ ಆಯಿತು. ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ,’” ಎಂದು ಹೇಳಿದರು.
12 ikpie wa a ye ko gona bi ninkon yahudawa ba wa nkon wa ba ba vu yesu don ba to din a tre misalia ni tu mba yi amma ba klu sisri ikpe ndi mba ni tu ki ba ka donwume nda hi kpa mba
ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.
13 ba son nda la ka tru bi ninkon yahudawa bari ni hirodiyawa hi wu don ndu mba trene ni tre
ಆಮೇಲೆ ಅವರು ಯೇಸುವನ್ನು ಅವರ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಅವರ ಬಳಿಗೆ ಕಳುಹಿಸಿದರು.
14 da ba ye batre ni wu tica ki to wu na hu tre ndi na una tsuro son tu din na u tsuro jiji inkon rji han ban ni kaisar heitu nkon kanihe? ki han ka ni he?
ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ?
15 amma u yesu to mliya nye ba nda tre di bi tsar me ni ngye? ne denarius ri me ndi ya to
ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.
16 ba nji ri ye ni yesu a tre ndi a hi yu nha ba nde nha mba he yi? ba tre u kaisar
ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು,” ಎಂದು ಉತ್ತರಕೊಟ್ಟರು.
17 yesu tre din nno kaisar ikpie u kaisar din nno rji ikpie wa u rjia a nno ba mamaki
ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು.
18 me na a sadukiyawa wa ba tre ndi tashmen na heina ba ye ni wu ba mye nda tre din
ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಯೇಸುವಿನ ಬಳಿಗೆ ಬಂದು,
19 tica musa a nla tawu idan indi wa vayi ma qu nda da hama ni vren da kawa don inda ka ban wa vayi ma tie wa ma nda zi bi ni vayi maa
“ಬೋಧಕರೇ, ‘ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ವಿಧವೆಯನ್ನು ಬಿಟ್ಟು ಸತ್ತರೆ, ಅವನ ಸಹೋದರನು ಅವನ ಹೆಂಡತಿಯನ್ನು ತೆಗೆದುಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು’ ಎಂದು ಮೋಶೆಯು ನಮಗೆ ಬರೆದಿರುತ್ತಾನಷ್ಟೆ.
20 mri vayi bari tangban bana he u mumla a gra wa nda ye qu hamma ni vren
ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.
21 u haa ka ban wa nda qu game hamma ni vren u traa ngame a la he na u mbru na ba
ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು. ಅದರಂತೆಯೇ ಮೂರನೆಯವನೂ ಆದನು.
22 tangban mba u ba na fe bi na iwaa me ye qu hu ba
ಹೀಗೆ ಏಳುಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವರಾಗಿ ಮೃತರಾದರು. ಕೊನೆಯಲ್ಲಿ ಆ ಸ್ತ್ರೀಯೂ ಸಹ ಮರಣಹೊಂದಿದಳು.
23 ni shulu iwa a ni u rime ba tie tashme ngarli? hon mri vayi tangban ba ba gran a tie wa mba
ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ,” ಎಂದು ಪ್ರಶ್ನಿಸಿದರು.
24 yesu ka tre a na ni ki bi yiba shishi na? don bina tre rji na ndi na to gbengle rji na
ಅದಕ್ಕೆ ಯೇಸು, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದಿರಲ್ಲವೇ?
25 don bata tashme ba na gran ko ba gran ba na ba he na malaiku
ಅವರು ಸತ್ತವರೊಳಗಿಂದ ಜೀವಂತವಾಗಿ ಎದ್ದ ಮೇಲೆ, ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
26 amma ni tu bi wa qu nda tashmela bi na kara ta ni taka da Musa na ni waa irji tre wu ni tsutsu miji naa tre din me hi rji u Ibrahim ni rji u Ishaku u ni rji u Yakubu?
ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
27 ana irji kmo na ammma u bi sisren
ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ, ಆದ್ದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪುಮಾಡುತ್ತೀರಿ,” ಎಂದು ಹೇಳಿದರು.
28 iri ni grji bi nha ye nda wo kpe wa ki trea ni to sa tre yesua a myee a hi doka ria me bran zaaan wawuu?
ನಿಯಮ ಬೋಧಕರಲ್ಲಿ ಒಬ್ಬನು ಬಂದು ಅವರು ಕೂಡಿಕೊಂಡು ತರ್ಕಿಸುತ್ತಿರುವುದನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಅವರಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವುದು?” ಎಂದು ಕೇಳಿದನು.
29 yesu kaa sa wa a zan a hi wo Israila baci rji mbu bacia a riri
ಯೇಸು ಉತ್ತರವಾಗಿ ಅವನಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು, ‘ಇಸ್ರಾಯೇಲೇ, ಕೇಳು: ನಮ್ಮ ದೇವರಾದ ಕರ್ತ ಒಬ್ಬರೇ ಕರ್ತನಾಗಿದ್ದಾರೆ.
30 gbigbi u ka kpanyem ni baci rji ni suron me wawuu ni mre me wawuu ni dri me wawuu ni gble gble me wawuu
ನೀನು ನಿನ್ನ ದೇವರನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು?’
31 doka u ha a heito yi gbigbu u ka son makobci me na tu me doka ri na la he waa bran zan bi yi na
‘ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,’ ಎಂಬುದು ಅದರಂತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿಗಿಂತ ಹೆಚ್ಚಿನ ಆಜ್ಞೆಯು ಮತ್ತೊಂದಿಲ್ಲ,” ಎಂದು ಹೇಳಿದರು.
32 u bi nha ba tre din abi tica u tre njaji ndi irji a riri u ni wa wuyi a rji ni nklema
ಅದಕ್ಕೆ ಆ ನಿಯಮ ಬೋಧಕನು ಯೇಸುವಿಗೆ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ನೀವು ಹೇಳಿದ್ದು ಸತ್ಯವೇ; ಏಕೆಂದರೆ ದೇವರು ಒಬ್ಬರೇ, ಅವರ ಹೊರತು ಬೇರೊಬ್ಬರು ಇಲ್ಲ.
33 nduu son wu ni suron me wawuu u ni to me wawuu mba ni gbengble me wawuu ndi son vayi u ndio na tu me a zan hadaya wa ba gon ni lua
ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.
34 da yesu to ndaa hla tre u bi a hla wu di wu na bran kon ni mulki rjiwamba a kle tre a itre na la mere tre na kpena
ಅವನು ವಿವೇಕದಿಂದ ಉತ್ತರ ಕೊಟ್ಟದ್ದನ್ನು ಯೇಸು ಕಂಡು ಅವನಿಗೆ, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ,” ಎಂದರು. ಅಂದಿನಿಂದ ಯೇಸುವನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
35 yesu sita ru tra rji tre din ni he mba ni nha hla din kristi a hi vren Dauda?
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ, “ಕ್ರಿಸ್ತನು ದಾವೀದನ ಪುತ್ರನು ಎಂದು ನಿಯಮ ಬೋಧಕರು ಹೇಳುತ್ತಿರುವುದು ಹೇಗೆ?
36 Dauda tu na ni mi ruhu tsartsar tre din baci a tre ni baci mu ku son ni wo ru mu se me ka bi kran wu tie kpe wa wu chan ni za
ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.”’
37 Dauda tu ma ne you ndi baci u ni he rli kristi ka vren Daua? nkpentren ndi ba ba ngri ni wo tre ma
ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು.
38 ni tsuro ma yesu tre tie wrli ni bi nha ba wa ba son zren ni guglo nklon da ni wa ci ni kasuwa
ಯೇಸು ಬೋಧನೆಮಾಡುತ್ತಾ, “ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ
39 nda son ni ruron u bi nikon ni tra rji ni wrji bi gan
ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಇಷ್ಟಪಡುತ್ತಾರೆ.
40 ba mrien imba bi kobo nda bre rji bran nkon ndu duba to ba indi bi ki ba kpa lukunci rligrama
ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.
41 yesu kuson ni gbala kori ni mi tra rji nda si ya ndi bubu ya nkle mba ni kaji gbugbu ndin bi nkle ba sur nkle babran
ಯೇಸು ಕಾಣಿಕೆ ಪೆಟ್ಟಿಗೆಯ ಎದುರಾಗಿ ಕುಳಿತುಕೊಂಡು ಜನರು ಹೇಗೆ ಅದರಲ್ಲಿ ಹಣ ಹಾಕುತ್ತಿದ್ದಾರೆಂಬುದನ್ನು ಗಮನಿಸುತ್ತಿದ್ದರು. ಅನೇಕ ಐಶ್ವರ್ಯವಂತರು ಹೆಚ್ಚು ಹಣ ಹಾಕಿದರು.
42 uwa u kmbo a ye nda sur nini ha rli wa a tsar ni kuburi
ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು.
43 a yo mrli ko ma da hla ba wu njajimu me hla yiwu iwa u kmbo yi sur nkle zan ndi ba wawuv wa ba sur nkle ni kajia
ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
44 bi mu ba nno rji gbugbu wu ni mi gbubgu wu wa ba hei va ama iwa kobo yi a no zan du di biwo ba yo kl ni kajia duka idi ba sur kle gbugbu wu wa ba hei va ama iwakobo yo kpe wa a hei ni mi ya ma da ni rli a
ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದುದನ್ನು ಹಾಕಿದ್ದಾಳೆ,” ಎಂದರು.

< Mark 12 >