< 詩篇 37 >
೧ದಾವೀದನ ಕೀರ್ತನೆ. ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.
2 因為他們有如青草,快要枯槁,他們有如綠葉,行將零凋。
೨ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.
3 你該信賴上主,致力善行,你必安居樂土,享受康寧。
೩ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
೪ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
೫ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.
6 祂必使你的義德如光出現,祂必使你的仁義如日中天。
೬ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
7 你該在上主面前安心依靠,不要為萬事順心的人煩惱,不要因圖謀不軌的人暴燥;
೭ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
8 你應控制憤恨,消除怒火,不要動怒,免得再犯罪過。
೮ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
9 因為作惡犯罪的人必被剷除;唯有仰望上主的人繼承樂土。
೯ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
10 惡人再過片刻,就不知所在,詳察他的住所,也不復存在。
೧೦ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.
೧೧ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.
೧೨ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
೧೩ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.
14 惡人拔劍張弓,想毀滅貧困微弱的人,想屠殺操行正直的人;
೧೪ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
15 他們的劍反刺穿他們的心肝,他們的弓將被折得破爛不堪。
೧೫ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
೧೬ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
17 因為惡人的手臂將被折斷,義人卻有上主作支援。
೧೭ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
೧೮ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
19 在患難之時,他們必不蒙羞,在饑饉之日,他們必得飽飫。
೧೯ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
20 惡人和上主的仇人必要沉淪,像沃野的鮮花一樣凋零,必要像煙霧一般消散無影。
೨೦ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.
೨೧ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
22 上主祝福的人將繼承福地,上主咒罵的人將被除滅跡。
೨೨ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
೨೩ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
24 他縱或失足,也不致顛仆,因為上主扶持著他的手。
೨೪ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
25 我作過幼童,現今已年老,從未見過正義的人被棄掉。也未見過他的後裔行乞討。
೨೫ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
೨೬ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.
೨೭ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.
28 上主愛慕正義,必不拋棄自己的聖徒;乖戾歹徒必被消滅,惡人的子孫必被剷除。
೨೮ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
೨೯ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
೩೦ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
೩೧ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ.
೩೨ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
33 上主絕不將義人棄於惡人手中,上主審判時,也決不判義人受刑。
೩೩ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.
34 你常仰望上主,遵循祂的道路:祂必要舉揚你,使你承受樂土;當祂剷除惡人時,你將欣然目睹。
೩೪ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
35 我曾見過惡人橫極一時,像茂盛的橡樹滋長不息。
೩೫ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
36 當我再經過時,竟已不在眼前,我雖到處尋覓,再也沒有尋見。
೩೬ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
37 求你對正人注視,對君子觀看,愛好和平的人,子嗣必定連綿。
೩೭ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
೩೮ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.
39 義人的救護是來自上主,祂是我們困厄時的護守;
೩೯ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.
40 上主必多扶持助佑,解救他們脫離惡人,上主必予拯救,因他們曾向祂投奔
೪೦ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.