< Jeremias 50 >
1 And it came to pass, when Jeremias ceased speaking to the people all the words of the Lord, [for] which the Lord had sent him to them, [even] all these words,
ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಯೆಹೋವ ದೇವರು ನುಡಿಸಿದ ವಾಕ್ಯ ಇದು:
2 that Azarias son of Maasaeas spoke, and Joanan, the son of Caree, and all the men who had spoken to Jeremias, saying, [It is] false: the Lord has not sent you to us, saying, Enter not into Egypt to dwell there:
“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’
3 but Baruch the son of Nerias sets you against us, that you may deliver us into the hands of the Chaldeans, to kill us, and that we should be carried away captives to Babylon.
ಏಕೆಂದರೆ ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳುಮಾಡಿಬಿಡುವುದು; ಅವಳಲ್ಲಿ ಯಾರೂ ವಾಸಿಸುವುದಿಲ್ಲ; ಮನುಷ್ಯರೂ, ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
4 So Joanan, and all the leaders of the host, and all the people, refused to listen to the voice of the Lord, to dwell in the land of Juda.
“ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು.
5 And Joanan, and all the leaders of the host, took all the remnant of Juda, who had returned to dwell in the land;
ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.
6 the mighty men, and the women, and the children that were left, and the daughters of the king, and the souls which Nabuzardan had left with Godolias the son of Achicam and Jeremias the prophet, and Baruch the son of Nerias.
“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
7 And they came into Egypt: for they listened not to the voice of the Lord: and they entered into Taphnas.
ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು.
8 And the word of the Lord came to Jeremias in Taphnas, saying,
“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಬಾಬಿಲೋನಿನ ಸೀಮೆಯಿಂದ ಹೊರಡಿರಿ; ಮಂದೆಯ ಮುಂದೆ ಹೋತಗಳ ಹಾಗೆ ಇರಿ.
9 Take you great stones, and hide them in the entrance, at the gate of the house of Pharao in Taphnas, in the sight of the men of Juda:
ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ, ಬಾಬಿಲೋನಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧವಾಗಿ ಯುದ್ಧ ಸಿದ್ಧಮಾಡುವರು. ಅಲ್ಲಿಂದ ಅದು ಹಿಡಿಯಲಾಗುವುದು. ಅವರ ಬಾಣಗಳು ಬಲಿಷ್ಠನಾದ ಪ್ರವೀಣ ಶೂರನಂತಿರುವುವು. ಯಾವುದೂ ವ್ಯರ್ಥವಾಗಿ ತಿರುಗದು.
10 and you shall say, Thus has the Lord said; Behold, I [will] send, and will bring Nabuchodonosor king of Babylon, and he shall place his throne upon these stones which you have hidden, and he shall lift up weapons against them.
ಬಾಬಿಲೋನಿನ ದೇಶವು ಸುಲಿಗೆಯಾಗುವುದು; ಅದನ್ನು ಸುಲಿದುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವುದು, ಎಂದು ಯೆಹೋವ ದೇವರು ಹೇಳುತ್ತಾರೆ.
11 And he shall enter in, and strike the land of Egypt, [delivering] some for death to death; and some for captivity to captivity; and some for the sword to the sword.
“ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ, ನೀವು ಉಲ್ಲಾಸಿಸಿದ್ದರಿಂದಲೂ, ಕೊಬ್ಬಿದ ಕಡಸಿನ ಹಾಗೆ ಗರ್ವ ಪಟ್ಟದ್ದರಿಂದಲೂ, ಗಂಡು ಕುದುರೆಗಳ ಹಾಗೆ ಹೂಂಕರಿಸಿದ್ದರಿಂದಲೂ,
12 And he shall kindle a fire in the houses of their gods, and shall burn them, and shall carry them away captives: and shall search the land of Egypt, as a shepherd searches his garment; and he shall go forth in peace.
ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, ಒಣ ಭೂಮಿಯೂ, ಮರುಭೂಮಿಯೂ ಆಗುವುದು.
13 And he shall break to pieces the pillars of Heliopolis that are in On, and shall burn their houses with fire.
ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; ಸಂಪೂರ್ಣ ಹಾಳಾಗುವುದು; ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು.
“ಬಿಲ್ಲನ್ನು ಬಗ್ಗಿಸುವವರೇ, ಬಾಬಿಲೋನಿಗೆ ವಿರೋಧವಾಗಿ ಸುತ್ತಲೂ ಯುದ್ಧ ಸಿದ್ಧಮಾಡಿರಿ; ಅದಕ್ಕೆ ಎಸೆಯಿರಿ; ಬಾಣಗಳನ್ನು ಕಡಿಮೆ ಮಾಡಬೇಡಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿತಲ್ಲಾ.
ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; ಕಷ್ಟಪಡುವ ಖಡ್ಗದ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು.
“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ.
ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”
ಯೆಹೋವ ದೇವರು ಹೇಳುತ್ತಾರೆ, “ಆ ದಿವಸಗಳಲ್ಲಿಯೂ, ಆ ಕಾಲದಲ್ಲಿಯೂ ಇಸ್ರಾಯೇಲಿನ ಅಕ್ರಮವನ್ನು ಹುಡುಕಿದರೂ, ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವುದಿಲ್ಲ. ಏಕೆಂದರೆ ನಾನು ಉಳಿಸುವವರನ್ನು ಮನ್ನಿಸುತ್ತೇನೆ.
“ಮೆರಾಥಯಿಮ್ ದೇಶಕ್ಕೆ ವಿರೋಧವಾಗಿ, ಪೆಕೋದಿನ ನಿವಾಸಿಗಳಿಗೆ ವಿರೋಧವಾಗಿಯೂ ದಂಡೆತ್ತಿ ಹೋಗು; ಅವರನ್ನು ಹಿಂದಟ್ಟಿ ಸಂಹರಿಸು. ಸಂಪೂರ್ಣ ನಾಶಮಾಡು.” “ನಾನು ನಿನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾಡು, ಎಂದು ಯೆಹೋವ ದೇವರು ಹೇಳುತ್ತಾರೆ.
ಯುದ್ಧದ ಶಬ್ದವೂ, ದೊಡ್ಡ ನಾಶನವೂ ದೇಶದಲ್ಲಿ ಇರುವುದು.
ಇಗೋ, ಲೋಕವನ್ನೆಲ್ಲಾ ಹೊಡೆದ ಸುತ್ತಿಗೆಯು ಮುರಿದು ತುಂಡುತುಂಡಾಯಿತು! ಹೇಗೆ ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
ನಾನು ಬೋನನ್ನು ಇಟ್ಟೆನು; ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. ಆದರೆ ನಿನಗೆ ತಿಳಿಯದೆ ಇತ್ತು. ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ.
ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. ಏಕೆಂದರೆ ಬಾಬಿಲೋನಿನ ದೇಶದಲ್ಲಿ ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ.
ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಅದನ್ನು ದಿಬ್ಬಗಳಂತೆ ತುಳಿಯಿರಿ. ಸಂಪೂರ್ಣವಾಗಿ ನಾಶಮಾಡಿರಿ. ಅದಕ್ಕೆ ಒಂದೂ ಉಳಿಯದಿರಲಿ.
ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.
ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ.
“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.
ಆದ್ದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಸೈನಿಕರೆಲ್ಲಾ ಆ ದಿವಸದಲ್ಲಿ ಸುಮ್ಮನಾಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.
“ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು.
ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿ ಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲರೂ, ಯೆಹೂದ್ಯರೂ ಕೂಡ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆಗೆ ಒಯ್ಯುವವರೆಲ್ಲರು ಅವರನ್ನು ಬಿಟ್ಟುಬಿಡುವುದಿಲ್ಲವೆಂದು, ಬಲವಾಗಿ ಪಟ್ಟುಹಿಡಿದಿದ್ದಾರೆ.
ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು.
“ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದರ ಜನಸಾಮಾನ್ಯರನ್ನು, ಪ್ರಧಾನರನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಖಡ್ಗ,
ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗುವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
ಅದರ ಕುದುರೆಗಳಿಗೆ ವಿರೋಧವಾಗಿಯೂ, ಅವರ ರಥಗಳಿಗೆ ವಿರೋಧವಾಗಿಯೂ, ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; ಅವರ ಹೆಂಗಸರಂತೆ ಅಶಕ್ತರಾಗುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು.
ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿಹೋಗುವುದು; ಏಕೆಂದರೆ ಅದು ವಿಗ್ರಹಗಳ ದೇಶವೇ, ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು.
“ಆದ್ದರಿಂದ ಅರಣ್ಯದ ಕಾಡುಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವುವು; ಉಷ್ಟ್ರಪಕ್ಷಿಗಳೂ ಸಹ ಅದರಲ್ಲಿ ವಾಸಮಾಡುವುವು; ತಲತಲಾಂತರಗಳವರೆಗೂ ಯಾರೂ ಅದರಲ್ಲಿ ತಂಗುವುದಿಲ್ಲ.
ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ.
“ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು ಅನೇಕ ಅರಸರು ಎಚ್ಚರಗೊಳ್ಳುವರು. ಅವರು ಲೋಕದ ಕಟ್ಟಕಡೆಯಿಂದ ಬರುತ್ತಾರೆ.
ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.
ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ; ಅವನ ಕೈಗಳು ನಿತ್ರಾಣವಾದವು; ಸಂಕಟವೂ, ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”
ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.