< Jérémie 48 >
1 Et le septième mois, Ismaël fils de Nathanias, fils d'Eléasa, de la famille royale, vint, avec dix hommes chez Godolias à Masphath, et ils y mangèrent ensemble.
೧ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.
2 Et Ismaël et ses dix hommes se levèrent, et ils tuèrent Godolias, que le roi de Babylone avait fait gouverneur de la terre,
೨ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.
3 Et tous les Juifs qui étaient avec lui, et tous les Chaldéens qui se trouvaient là.
೩‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!
4 Et le lendemain de la mort de Godolias, que nul ne savait encore,
೪ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗೆಟ್ಟವರು ಮೊರೆಯಿಟ್ಟಿದ್ದಾರೆ.
5 Quatre-vingts hommes vinrent de Sichem, de Salem et de Samarie, le menton rasé, les vêlements déchirés, se frappant la poitrine, portant dans leurs mains de l'encens et de la manne, pour les offrir dans le temple du Seigneur.
೫ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.
6 Et Ismaël sortit de la ville à leur rencontre, et ils marchaient et ils pleuraient, et il leur dit: Entrez chez Godolias.
೬ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ.
7 Et lorsqu'ils furent au milieu de la ville il les égorgea et les jeta dans un puits.
೭ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
8 Mais il s'en trouva dix qui dirent à Ismaël: Ne nous tue pas; car nous avons dans les champs des trésors, du froment, de l'orge et de l'huile. Et il passa outre, et il ne les tua pas au milieu de leurs frères.
೮ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.
9 Or le puits où Ismaël jeta ceux qu'il avait tués, c'est le grand puits que fit le roi Asa, par crainte de Baasa, roi d'Israël, et qu'Ismaël remplit de cadavres.
೯ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.
10 Et Ismaël emmena tout le peuple qui était resté en Masphath, et les filles du roi, que le chef des cuisines avait confiées à Godolias, fils d'Achicam; et il partit pour la terre au delà des fils d'Ammon.
೧೦ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.
11 Or Joanan, fils de Garée, et tous les chefs de l'armée qui étaient avec lui, apprirent tout le mal qu'avait fait Ismaël.
೧೧ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”
12 Et ils mirent en marche toute leur armée; et ils partirent pour le combattre, et ils l'atteignirent près des grandes eaux de Gabaon.
೧೨ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ.
13 Et quand tout le peuple qui était avec Ismaël vit Joanan et les chefs de l'armée qu'il commandait,
೧೩ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.
14 Ils retournèrent auprès de Joanan.
೧೪“‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?
15 Mais Ismaël échappa avec huit hommes, et s'enfuit chez les fils d'Ammon.
೧೫ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.
16 Et Joanan et les officiers de l'armée qui étaient avec lui recueillirent tous les restes du peuple, qui s'étaient éloignés d'Ismaël, et les hommes capables de porter les armes, ainsi que les femmes, le butin et les eunuques, et ils les ramenèrent à Gabaon.
೧೬ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವುದು.
17 Et ils marchèrent, et ils firent halte à Gaberochamea, près de Bethléhem, pour se rendre en Égypte,
೧೭ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.
18 Loin des Chaldéens; car ils en avaient crainte, parce que Ismaël avait tué Godolias, que le roi de Babylone avait fait gouverneur de la terre.
೧೮ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
೧೯ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ.
೨೦ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.
೨೧ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್,
೨೨ದೀಬೋನ್, ನೆಬೋ ಮತ್ತು ಬೇತ್ ದಿಬ್ಲಾತಯಿಮ್,
೨೩ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್,
೨೪ಕೆರೀಯೋತ್, ಬೊಚ್ರ ಅಂತು ದೂರದ ಮತ್ತು ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗದೆ ಇರುವುದಿಲ್ಲ.
೨೫ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ.
೨೬“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.
೨೭ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?
೨೮ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;
೨೯ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.”
೩೦ಯೆಹೋವನು ಹೇಳುವುದೇನೆಂದರೆ, “ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ.
೩೧ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.
೩೨ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.
೩೩ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.
೩೪ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.
೩೫ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.”
೩೬ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.
೩೭ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.
೩೮ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.
೩೯ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.
೪೦ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.
೪೧ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
೪೨ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”
೪೩ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;
೪೪ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”
೪೫ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.
೪೬“ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.
೪೭ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.