< Ἰεζεκιήλ 33 >

1 καὶ ἐγένετο λόγος κυρίου πρός με λέγων
ಯೆಹೋವ ದೇವರ ವಾಕ್ಯವು ನನಗೆ ಬಂದು:
2 υἱὲ ἀνθρώπου λάλησον τοῖς υἱοῖς τοῦ λαοῦ σου καὶ ἐρεῖς πρὸς αὐτούς γῆ ἐφ’ ἣν ἂν ἐπάγω ῥομφαίαν καὶ λάβῃ ὁ λαὸς τῆς γῆς ἄνθρωπον ἕνα ἐξ αὐτῶν καὶ δῶσιν αὐτὸν ἑαυτοῖς εἰς σκοπόν
“ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ನಾನು ಬಂದು ದೇಶದ ಮೇಲೆ ಯಾವಾಗ ಖಡ್ಗವನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
3 καὶ ἴδῃ τὴν ῥομφαίαν ἐρχομένην ἐπὶ τὴν γῆν καὶ σαλπίσῃ τῇ σάλπιγγι καὶ σημάνῃ τῷ λαῷ
ಅವನು ಖಡ್ಗವು ದೇಶದ ಮೇಲೆ ಬರುವುದನ್ನು ನೋಡಿ, ಕೊಂಬನ್ನೂದಿ ಜನರನ್ನು ಎಚ್ಚರಿಸಲಿ,
4 καὶ ἀκούσῃ ὁ ἀκούσας τὴν φωνὴν τῆς σάλπιγγος καὶ μὴ φυλάξηται καὶ ἐπέλθῃ ἡ ῥομφαία καὶ καταλάβῃ αὐτόν τὸ αἷμα αὐτοῦ ἐπὶ τῆς κεφαλῆς αὐτοῦ ἔσται
ಯಾವನು ಕೊಂಬಿನ ಧ್ವನಿಯನ್ನು ಕೇಳಿ ಎಚ್ಚರವಾಗುವುದಿಲ್ಲವೋ ಅವನನ್ನು ಖಡ್ಗವು ನಾಶಮಾಡಿದರೆ ಅವನ ಸಾವಿಗೆ ಅವನೇ ಹೊಣೆಯಾಗುವನು.
5 ὅτι τὴν φωνὴν τῆς σάλπιγγος ἀκούσας οὐκ ἐφυλάξατο τὸ αἷμα αὐτοῦ ἐπ’ αὐτοῦ ἔσται καὶ οὗτος ὅτι ἐφυλάξατο τὴν ψυχὴν αὐτοῦ ἐξείλατο
ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.
6 καὶ ὁ σκοπός ἐὰν ἴδῃ τὴν ῥομφαίαν ἐρχομένην καὶ μὴ σημάνῃ τῇ σάλπιγγι καὶ ὁ λαὸς μὴ φυλάξηται καὶ ἐλθοῦσα ἡ ῥομφαία λάβῃ ἐξ αὐτῶν ψυχήν αὕτη διὰ τὴν αὑτῆς ἀνομίαν ἐλήμφθη καὶ τὸ αἷμα ἐκ τῆς χειρὸς τοῦ σκοποῦ ἐκζητήσω
ಆದರೆ ಕಾವಲುಗಾರನು ಬರುವ ಖಡ್ಗವನ್ನು ನೋಡಿ, ಒಂದು ವೇಳೆ ಕೊಂಬನ್ನು ಊದದೆ ಜನರನ್ನೂ ಎಚ್ಚರಿಸದೆ ಹೋದರೆ, ಆಗ ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನಾದರೂ ನಾಶಮಾಡಿದರೆ, ಅವನು ತನ್ನ ಪಾಪದಲ್ಲಿಯೇ ನಾಶವಾಗುವನು. ಆದರೆ ನಾನು ಅವನ ಸಾವಿಗೆ ಕಾವಲುಗಾರನನ್ನೇ ಹೊಣೆಮಾಡುವೆನು.’
7 καὶ σύ υἱὲ ἀνθρώπου σκοπὸν δέδωκά σε τῷ οἴκῳ Ισραηλ καὶ ἀκούσῃ ἐκ στόματός μου λόγον
“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.
8 ἐν τῷ εἶπαί με τῷ ἁμαρτωλῷ θανάτῳ θανατωθήσῃ καὶ μὴ λαλήσῃς τοῦ φυλάξασθαι τὸν ἀσεβῆ ἀπὸ τῆς ὁδοῦ αὐτοῦ αὐτὸς ὁ ἄνομος τῇ ἀνομίᾳ αὐτοῦ ἀποθανεῖται τὸ δὲ αἷμα αὐτοῦ ἐκ τῆς χειρός σου ἐκζητήσω
ಯಾವಾಗ ನಾನು ದುಷ್ಟನಿಗೆ, ‘ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ಅವನ ದುರ್ಮಾರ್ಗಗಳಿಂದ ತಪ್ಪಿಸಲು ಅವನನ್ನು ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.
9 σὺ δὲ ἐὰν προαπαγγείλῃς τῷ ἀσεβεῖ τὴν ὁδὸν αὐτοῦ τοῦ ἀποστρέψαι ἀπ’ αὐτῆς καὶ μὴ ἀποστρέψῃ ἀπὸ τῆς ὁδοῦ αὐτοῦ οὗτος τῇ ἀσεβείᾳ αὐτοῦ ἀποθανεῖται καὶ σὺ τὴν ψυχὴν σαυτοῦ ἐξῄρησαι
ಆದರೆ ನೀನು ದುಷ್ಟನನ್ನು ಅವನ ದುರ್ಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತಿರುಗಿಕೊಳ್ಳದೆ ಹೋದರೆ ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.
10 καὶ σύ υἱὲ ἀνθρώπου εἰπὸν τῷ οἴκῳ Ισραηλ οὕτως ἐλαλήσατε λέγοντες αἱ πλάναι ἡμῶν καὶ αἱ ἀνομίαι ἡμῶν ἐφ’ ἡμῖν εἰσιν καὶ ἐν αὐταῖς ἡμεῖς τηκόμεθα καὶ πῶς ζησόμεθα
“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?”’
11 εἰπὸν αὐτοῖς ζῶ ἐγώ τάδε λέγει κύριος οὐ βούλομαι τὸν θάνατον τοῦ ἀσεβοῦς ὡς τὸ ἀποστρέψαι τὸν ἀσεβῆ ἀπὸ τῆς ὁδοῦ αὐτοῦ καὶ ζῆν αὐτόν ἀποστροφῇ ἀποστρέψατε ἀπὸ τῆς ὁδοῦ ὑμῶν καὶ ἵνα τί ἀποθνῄσκετε οἶκος Ισραηλ
ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’
12 εἰπὸν πρὸς τοὺς υἱοὺς τοῦ λαοῦ σου δικαιοσύνη δικαίου οὐ μὴ ἐξέληται αὐτὸν ἐν ᾗ ἂν ἡμέρᾳ πλανηθῇ καὶ ἀνομία ἀσεβοῦς οὐ μὴ κακώσῃ αὐτὸν ἐν ᾗ ἂν ἡμέρᾳ ἀποστρέψῃ ἀπὸ τῆς ἀνομίας αὐτοῦ καὶ δίκαιος οὐ μὴ δύνηται σωθῆναι
“ಆದ್ದರಿಂದ, ನರಪುತ್ರನೇ, ನೀನು ನಿನ್ನ ಜನರ ಮಕ್ಕಳಿಗೆ ಹೇಳು: ‘ಒಬ್ಬ ನೀತಿವಂತನು ಅವಿಧೇಯನಾದರೆ, ಆ ವ್ಯಕ್ತಿಯ ಹಿಂದಿನ ನೀತಿಯು ಯಾವುದಕ್ಕೂ ಲೆಕ್ಕವಿಲ್ಲ. ಹಾಗೆಯೇ ದುಷ್ಟನು ಪಶ್ಚಾತ್ತಾಪಪಟ್ಟರೆ, ಆ ವ್ಯಕ್ತಿಯ ಹಿಂದಿನ ದುಷ್ಟತನವು ಖಂಡನೆಯನ್ನು ತರುವುದಿಲ್ಲ. ಪಾಪಮಾಡುವ ನೀತಿವಂತನು ಹಿಂದೆ ನೀತಿವಂತರಾಗಿದ್ದರೂ ಬದುಕಲು ಬಿಡುವುದಿಲ್ಲ.’
13 ἐν τῷ εἶπαί με τῷ δικαίῳ οὗτος πέποιθεν ἐπὶ τῇ δικαιοσύνῃ αὐτοῦ καὶ ποιήσῃ ἀνομίαν πᾶσαι αἱ δικαιοσύναι αὐτοῦ οὐ μὴ ἀναμνησθῶσιν ἐν τῇ ἀδικίᾳ αὐτοῦ ᾗ ἐποίησεν ἐν αὐτῇ ἀποθανεῖται
ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು.
14 καὶ ἐν τῷ εἶπαί με τῷ ἀσεβεῖ θανάτῳ θανατωθήσῃ καὶ ἀποστρέψῃ ἀπὸ τῆς ἁμαρτίας αὐτοῦ καὶ ποιήσῃ κρίμα καὶ δικαιοσύνην
ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ’ ಎಂದು ಹೇಳುವಾಗ ಅವನು ಪಾಪದಿಂದ ಬಿಟ್ಟು ತಿರುಗಿಕೊಂಡು ಮತ್ತು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ
15 καὶ ἐνεχύρασμα ἀποδῷ καὶ ἅρπαγμα ἀποτείσῃ ἐν προστάγμασιν ζωῆς διαπορεύηται τοῦ μὴ ποιῆσαι ἄδικον ζωῇ ζήσεται καὶ οὐ μὴ ἀποθάνῃ
ದುಷ್ಟನು ತನ್ನ ಒತ್ತೆಯನ್ನು ಮತ್ತು ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಅನ್ಯಾಯವನ್ನು ಮಾಡದೆ ಜೀವನಾಧಾರವಾದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತವಾಗಿ ಬದುಕುವನು.
16 πᾶσαι αἱ ἁμαρτίαι αὐτοῦ ἃς ἥμαρτεν οὐ μὴ ἀναμνησθῶσιν ὅτι κρίμα καὶ δικαιοσύνην ἐποίησεν ἐν αὐτοῖς ζήσεται
ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ನ್ಯಾಯವನ್ನೂ ನೀತಿಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
17 καὶ ἐροῦσιν οἱ υἱοὶ τοῦ λαοῦ σου οὐκ εὐθεῖα ἡ ὁδὸς τοῦ κυρίου καὶ αὕτη ἡ ὁδὸς αὐτῶν οὐκ εὐθεῖα
“ಆದರೂ ನಿನ್ನ ಜನರ ಮಕ್ಕಳು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತಾರೆ. ಅವರಿಗಾದರೋ ಅವರ ಮಾರ್ಗವೇ ನೀತಿಯುಕ್ತವಲ್ಲ.
18 ἐν τῷ ἀποστρέψαι δίκαιον ἀπὸ τῆς δικαιοσύνης αὐτοῦ καὶ ποιήσῃ ἀνομίας καὶ ἀποθανεῖται ἐν αὐταῖς
ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು, ಅಕ್ರಮವನ್ನು ಮಾಡುವನೋ ಅವನು ಖಂಡಿತವಾಗಿಯೂ ಅದರಲ್ಲಿಯೇ ಸಾಯುವನು.
19 καὶ ἐν τῷ ἀποστρέψαι τὸν ἁμαρτωλὸν ἀπὸ τῆς ἀνομίας αὐτοῦ καὶ ποιήσῃ κρίμα καὶ δικαιοσύνην ἐν αὐτοῖς αὐτὸς ζήσεται
ಆದರೆ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ ಅವನು ಅವುಗಳಿಂದ ಉಳಿಯುವನು.
20 καὶ τοῦτό ἐστιν ὃ εἴπατε οὐκ εὐθεῖα ἡ ὁδὸς κυρίου ἕκαστον ἐν ταῖς ὁδοῖς αὐτοῦ κρινῶ ὑμᾶς οἶκος Ισραηλ
ಆದರೂ, ‘ನೀವು ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಅನ್ನುತ್ತೀರಿ. ಇಸ್ರಾಯೇಲಿನ ಮನೆತನದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯತೀರಿಸುವೆನು.”
21 καὶ ἐγενήθη ἐν τῷ δωδεκάτῳ ἔτει ἐν τῷ δωδεκάτῳ μηνὶ πέμπτῃ τοῦ μηνὸς τῆς αἰχμαλωσίας ἡμῶν ἦλθεν ὁ ἀνασωθεὶς πρός με ἀπὸ Ιερουσαλημ λέγων ἑάλω ἡ πόλις
ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.
22 καὶ ἐγενήθη ἐπ’ ἐμὲ χεὶρ κυρίου ἑσπέρας πρὶν ἐλθεῖν αὐτὸν καὶ ἤνοιξέν μου τὸ στόμα ἕως ἦλθεν πρός με τὸ πρωί καὶ ἀνοιχθέν μου τὸ στόμα οὐ συνεσχέθη ἔτι
ಆಗ ಅವನು ತಪ್ಪಿಸಿಕೊಂಡು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಯೆಹೋವ ದೇವರ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲಾಗಿತ್ತು. ನನ್ನ ಬಾಯಿ ತೆರೆದಿತ್ತು. ನಾನು ಮೌನವಾಗಿರಲಿಲ್ಲ.
23 καὶ ἐγενήθη λόγος κυρίου πρός με λέγων
ಆಮೇಲೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
24 υἱὲ ἀνθρώπου οἱ κατοικοῦντες τὰς ἠρημωμένας ἐπὶ τῆς γῆς τοῦ Ισραηλ λέγουσιν εἷς ἦν Αβρααμ καὶ κατέσχεν τὴν γῆν καὶ ἡμεῖς πλείους ἐσμέν ἡμῖν δέδοται ἡ γῆ εἰς κατάσχεσιν
“ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ.
25 διὰ τοῦτο εἰπὸν αὐτοῖς τάδε λέγει κύριος κύριος
ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?
ನೀವು ನಿಮ್ಮ ಖಡ್ಗದ ಮೇಲೆ ಭರವಸೆ ಇಟ್ಟು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ನಿಮ್ಮ ನೆರೆಯವನ ಹೆಂಡತಿಯನ್ನು ಕೆಡಿಸುವಿರಿ. ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡಿರೇನು?’
27 ζῶ ἐγώ εἰ μὴν οἱ ἐν ταῖς ἠρημωμέναις μαχαίρᾳ πεσοῦνται καὶ οἱ ἐπὶ προσώπου τοῦ πεδίου τοῖς θηρίοις τοῦ ἀγροῦ δοθήσονται εἰς κατάβρωμα καὶ τοὺς ἐν ταῖς τετειχισμέναις καὶ τοὺς ἐν τοῖς σπηλαίοις θανάτῳ ἀποκτενῶ
“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.
28 καὶ δώσω τὴν γῆν ἔρημον καὶ ἀπολεῖται ἡ ὕβρις τῆς ἰσχύος αὐτῆς καὶ ἐρημωθήσεται τὰ ὄρη τοῦ Ισραηλ διὰ τὸ μὴ εἶναι διαπορευόμενον
ನಾನು ಈ ದೇಶವನ್ನು ಹಾಳುಪಾಳುಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವುದು. ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅದರ ಮೂಲಕ ಹಾದು ಹೋಗುವುದಿಲ್ಲ.
29 καὶ γνώσονται ὅτι ἐγώ εἰμι κύριος καὶ ποιήσω τὴν γῆν αὐτῶν ἔρημον καὶ ἐρημωθήσεται διὰ πάντα τὰ βδελύγματα αὐτῶν ἃ ἐποίησαν
ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.’
30 καὶ σύ υἱὲ ἀνθρώπου οἱ υἱοὶ τοῦ λαοῦ σου οἱ λαλοῦντες περὶ σοῦ παρὰ τὰ τείχη καὶ ἐν τοῖς πυλῶσι τῶν οἰκιῶν καὶ λαλοῦσιν ἄνθρωπος τῷ ἀδελφῷ αὐτοῦ λέγοντες συνέλθωμεν καὶ ἀκούσωμεν τὰ ἐκπορευόμενα παρὰ κυρίου
“ಮನುಷ್ಯಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿಜ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಯೆಹೋವ ದೇವರ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
31 ἔρχονται πρὸς σέ ὡς συμπορεύεται λαός καὶ κάθηνται ἐναντίον σου καὶ ἀκούουσιν τὰ ῥήματά σου καὶ αὐτὰ οὐ μὴ ποιήσουσιν ὅτι ψεῦδος ἐν τῷ στόματι αὐτῶν καὶ ὀπίσω τῶν μιασμάτων ἡ καρδία αὐτῶν
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.
32 καὶ γίνῃ αὐτοῖς ὡς φωνὴ ψαλτηρίου ἡδυφώνου εὐαρμόστου καὶ ἀκούσονταί σου τὰ ῥήματα καὶ οὐ μὴ ποιήσουσιν αὐτά
ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
33 καὶ ἡνίκα ἂν ἔλθῃ ἐροῦσιν ἰδοὺ ἥκει καὶ γνώσονται ὅτι προφήτης ἦν ἐν μέσῳ αὐτῶν
“ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವುದು.”

< Ἰεζεκιήλ 33 >