< Προς Εβραιους 2 >
1 Διὰ τοῦτο δεῖ περισσοτέρως προσέχειν ἡμᾶς τοῖς ἀκουσθεῖσιν, μή ποτε παραρυῶμεν.
೧ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
2 εἰ γὰρ ὁ δι᾽ ἀγγέλων λαληθεὶς λόγος ἐγένετο βέβαιος, καὶ πᾶσα παράβασις καὶ παρακοὴ ἔλαβεν ἔνδικον μισθα ποδοσίαν,
೨ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.
3 πῶς ἡμεῖς ἐκφευξόμεθα τηλικαύτης ἀμελήσαντες σωτηρίας; ἥτις ἀρχὴν λαβοῦσα λαλεῖσθαι διὰ τοῦ κυρίου, ὑπὸ τῶν ἀκουσάντων εἰς ἡμᾶς ἐβεβαιώθη,
೩ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
4 συνεπιμαρτυροῦντος τοῦ θεοῦ σημείοις τε καὶ τέρασιν, καὶ ποικίλαις δυνάμεσιν, καὶ πνεύματος ἁγίου μερισμοῖς, κατὰ τὴν αὐτοῦ θέλησιν.
೪ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.
5 Οὐ γὰρ ἀγγέλοις ὑπέταξεν τὴν οἰκουμένην τὴν μέλλουσαν, περὶ ἧς λαλοῦμεν·
೫ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ.
6 διεμαρτύρατο δέ πού τις λέγων, Τί ἐστιν ἄνθρωπος, ὅτι μιμνήσκῃ αὐτοῦ· ἢ υἱὸς ἀνθρώπου, ὅτι ἐπισκέπτῃ αὐτόν;
೬“ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?
7 ἠλάττωσας αὐτὸν βραχύ τι παρ᾽ ἀγγέλους· δόξῃ καὶ τιμῇ ἐστεφάνωσας αὐτόν, [καὶ κατέστησας αὐτὸν ἐπὶ τὰ ἔργα τῶν χειρῶν σου·]
೭ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
8 πάντα ὑπέταξας ὑποκάτω τῶν ποδῶν αὐτοῦ. Ἐν τῷ γὰρ ὑποτάξαι αὐτῷ τὰ πάντα, οὐδὲν ἀφῆκεν αὐτῷ ἀνυπότακτον· νῦν δὲ οὔπω ὁρῶμεν αὐτῷ τὰ πάντα ὑποτεταγμένα.
೮ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.
9 τὸν δὲ βραχύ τι παρ᾽ ἀγγέλους ἠλαττωμένον βλέπομεν Ἰησοῦν διὰ τὸ πάθημα τοῦ θανάτου, δόξῃ καὶ τιμῇ ἐστεφανωμένον, ὅπως χάριτι θεοῦ ὑπὲρ παντὸς γεύσηται θανάτου.
೯ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.
10 ἔπρεπεν γὰρ αὐτῷ, δι᾽ ὃν τὰ πάντα καὶ δι᾽ οὗ τὰ πάντα, πολλοὺς υἱοὺς εἰς δόξαν ἀγαγόντα, τὸν ἀρχηγὸν τῆς σωτηρίας αὐτῶν διὰ παθημάτων τελειῶσαι.
೧೦ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
11 ὅ τε γὰρ ἁγιάζων καὶ οἱ ἁγιαζόμενοι ἐξ ἑνὸς πάντες· δι᾽ ἣν αἰτίαν οὐκ ἐπαισχύνεται ἀδελφοὺς αὐτοὺς καλεῖν,
೧೧ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.
12 λέγων, Ἀπαγγελῶ τὸ ὄνομά σου τοῖς ἀδελφοῖς μου, ἐν μέσῳ ἐκκλησίας ὑμνήσω σε.
೧೨“ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,
13 καὶ πάλιν, Ἐγὼ ἔσομαι πεποιθὼς ἐπ᾽ αὐτῷ. καὶ πάλιν, Ἰδοὺ ἐγὼ καὶ τὰ παιδία ἅ μοι ἔδωκεν ὁ θεός.
೧೩“ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ.
14 ἐπεὶ οὖν τὰ παιδία κεκοινώνηκεν αἵματος καὶ σαρκός, καὶ αὐτὸς παραπλησίως μετέσχεν τῶν αὐτῶν, ἵνα διὰ τοῦ θανάτου καταργήσῃ τὸν τὸ κράτος ἔχοντα τοῦ θανάτου, τουτέστιν τὸν διάβολον,
೧೪ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
15 καὶ ἀπαλλάξῃ τούτους, ὅσοι φόβῳ θανάτου διὰ παντὸς τοῦ ζῇν ἔνοχοι ἦσαν δουλείας.
೧೫ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.
16 οὐ γὰρ δήπου ἀγγέλων ἐπιλαμβάνεται, ἀλλὰ σπέρματος Ἀβραὰμ ἐπιλαμβάνεται.
೧೬ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ.
17 ὅθεν ὤφειλεν κατὰ πάντα τοῖς ἀδελφοῖς ὁμοιωθῆναι, ἵνα ἐλεήμων γένηται καὶ πιστὸς ἀρχιερεὺς τὰ πρὸς τὸν θεόν, εἰς τὸ ἱλάσκεσθαι τὰς ἁμαρτίας τοῦ λαοῦ.
೧೭ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.
18 ἐν ᾧ γὰρ πέπονθεν αὐτὸς πειρασθείς, δύναται τοῖς πειραζομένοις βοηθῆσαι.
೧೮ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.