< હઝકિયેલ 45 >

1 જ્યારે તમે ચિઠ્ઠી નાખીને વારસો વહેંચી લો ત્યારે તમારે યહોવાહને અર્પણ ચઢાવવું; એટલે કે તે દેશનો અમુક ભાગ અર્પણ કરવો. તે ભાગ પચીસ હજાર હાથ લાંબો તથા દસ હજાર હાથ પહોળો હોય. તેની ચારે બાજુનો ભાગ પવિત્ર ગણાય.
ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.
2 આમાંથી પવિત્રસ્થાનની ચારેબાજુ પાંચસો હાથ લાંબી તથા પાંચસો હાથ પહોળી ચોરસ જગા રાખવી તેની આસપાસ પચાસ હાથ પહોળી જગા રાખવી.
ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು.
3 આ ભાગમાંથી તારે પચીસ હાથ લાંબી અને દશ હાથ પહોળી જગા માપવી તે તારે માટે પવિત્રસ્થાન એટલે પરમપવિત્રસ્થાન થાય.
ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು.
4 તે જમીનનો પવિત્ર ભાગ છે. જેઓ યહોવાહની સેવા કરવા સારુ પાસે આવે છે, તે યાજકોને સારુ રહે. તે જગા તેઓનાં ઘરો માટે તથા પવિત્રસ્થાનને સારુ થાય.
ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.
5 પચીસ હાથ લાંબી અને દશ હાથ પહોળી જગા, લેવીઓ કે જેઓ સભાસ્થાનની સેવા કરતા લેવીઓ માટે વતનરૂપી થાય.
ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದವೂ ಮತ್ತು ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವುದು.
6 “પવિત્ર ભૂમિની પાસે લગોલગ પાંચહજાર હાથ પહોળો અને પચીસહજાર હાથ લાંબો ભાગ નગરને માટે નિયુક્ત કરવો. આ નગર બધા ઇઝરાયલી લોકો માટે છે.
ನೀವು ನನಗೆ ಸಮರ್ಪಿಸುವ ಪರಿಶುದ್ಧ ಭಾಗದ ಪಕ್ಕದಲ್ಲಿ ಐದು ಸಾವಿರ ಮೊಳ ಅಗಲದ, ಇಪ್ಪತ್ತೈದು ಸಾವಿರ ಮೊಳ ಉದ್ದದ ಕ್ಷೇತ್ರವನ್ನು ಪಟ್ಟಣಕ್ಕೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು. ಅದರಲ್ಲಿ ಇಸ್ರಾಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು.
7 સરદારને માટે પવિત્રસ્થાનની તથા નગરની બન્ને બાજુએ તથા પશ્ચિમ દિશાએ તથા પૂર્વ દિશાએ જમીન હોય. લંબાઈમાં ભાગોમાંના એકની બરાબર, પશ્ચિમ તરફની સીમા પૂર્વ તરફની સીમા સુધી હોય.
ರಾಜನ ಸ್ವತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ, ಪಟ್ಟಣಕ್ಕೆ ಒಳಪಟ್ಟ ಭೂಮಿಗೂ ಎರಡು ಕಡೆಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಪಶ್ಚಿಮ ಕಡೆಯಲ್ಲಿ ಹರಡುವುದು, ಪೂರ್ವದಿಂದ ಪೂರ್ವಕ್ಕೂ ಹರಡುವುದು, ಅದರ ಉದ್ದವು ಪಶ್ಚಿಮದಿಂದ ಪೂರ್ವಕ್ಕೂ ಒಂದು ಕುಲದ ಸ್ವತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.
8 સરદારને આ જમીન ઇઝરાયલમાં સંપત્તિ તરીકે મળે, મારા સરદારો ફરી કદી મારા લોકો પર જુલમ કરે નહિ; પણ, તેઓ ઇઝરાયલી લોકોને, તેઓનાં કુળ પ્રમાણે જમીન આપે.’”
ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವುದು; ಇನ್ನು ಮೇಲೆ ನನ್ನ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸುವುದಿಲ್ಲ; ದೇಶದ ಭೂಮಿಯನ್ನು ಇಸ್ರಾಯೇಲರಿಗೆ ಕುಲಕ್ಕೆ ತಕ್ಕಂತೆ ಹಂಚುವರು.
9 પ્રભુ યહોવાહ આમ કહે છે: ‘હે ઇઝરાયલના સરદારો, ‘આટલું બસ કરો, હિંસા તથા ઝઘડો દૂર કરો; યથાર્થ ઇનસાફ કરો! મારા લોકો પરથી તમારો જુલમ બંધ કરો.’ આમ પ્રભુ યહોવાહ કહે છે.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.
10 ૧૦ ‘તમારે સાચાં ત્રાજવાં, સાચો એફાહ, સાચા બાથ રાખવા.
೧೦ನಿಮ್ಮ ತಕ್ಕಡಿಯೂ, ಧಾನ್ಯದ ಅಳತೆಯೂ, ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.
11 ૧૧ એફાહ તથા બાથ એક જ માપના હોવા જોઈએ. બાથમાં હોમેરનો દસમો ભાગ હોય, એફાહમાં હોમેરનો દસમો ભાગ હોય. તેનું માપ હોમેરના ભાગ જેટલું હોય.
೧೧ಏಫಾ (ಧಾನ್ಯದ ಅಳತೆ) ಮತ್ತು ಬತ್ (ರಸದ್ರವ್ಯದ ಅಳತೆ) ಒಂದೇ ಪ್ರಮಾಣವಾಗಿರಬೇಕು. ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.
12 ૧૨ એક શેકેલ વીસ ગેરાહનો હોય; માનેહ સાઠ શેકેલનો હોવો જોઈએ. તમારો માનેહ વીસ શેકેલ, પચીસ તથા પચાસ શેકેલનો હોવો જોઈએ.
೧೨ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.”
13 ૧૩ તમારે નીચે દર્શાવ્યા પ્રમાણે અર્પણ કરવું: દરેક હોમેર ઘઉંમાંથી એફાહનો છઠ્ઠો ભાગ, દરેક હોમેર જવમાંથી છઠ્ઠો ભાગ તમારે આપવો.
೧೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ, ಸರ್ವಾಂಗಹೋಮವನ್ನೂ, ಸಮಾಧಾನಯಜ್ಞವನ್ನೂ ಮಾಡುವುದಕ್ಕೋಸ್ಕರ ಸಮರ್ಪಿಸತಕ್ಕದು ಏನೆಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು.
14 ૧૪ તેલનો નીમેલો ભાગ આ પ્રમાણે એટલે દરેક કોર માટે, દરેક હોમેર માટે તથા દર હોમેર એક દશાંશ બાથ તેલનો હોવો જોઈએ, કેમ કે દશ બાથનો એક હોમેર થાય છે.
೧೪ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು. (ಹತ್ತು ಬತ್ ಅಂದರೆ ಒಂದು ಹೋಮೆರ್)
15 ૧૫ ઇઝરાયલના પાણીવાળા પ્રદેશમાંનાં બસો ટોળાંમાંથી એક ઘેટું કે બકરો ખાદ્યાર્પણ તરીકે, દહનીયાર્પણ તરીકે અને શાંત્યર્પણ તરીકે લોકોને શુદ્ધ કરવા માટે આપવું. આમ પ્રભુ યહોવાહ કહે છે.
೧೫ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.
16 ૧૬ દેશના બધા લોકોએ ઇઝરાયલના સરદારને આ હિસ્સો આપવો.
೧೬ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಈ ಕಾಣಿಕೆಯನ್ನು ಒಪ್ಪಿಸತಕ್ಕದ್ದು.
17 ૧૭ પર્વોમાં, ચંદ્રદર્શનોમાં તથા વિશ્રામવારોમાં, ઇઝરાયલી લોકોના ખાસ તહેવારોમાં દહનીયાર્પણો, ખાદ્યાર્પણો તથા પેયાર્પણો આપવાં એ સરદારોની જવાબદારી છે. તે ઇઝરાયલી લોકોનાં શુદ્ધિકરણ માટે પાપાર્થાર્પણો, ખાદ્યાર્પણો, દહનીયાર્પણ તથા શાંત્યર્પણો પૂરા પાડશે.’”
೧೭ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.
18 ૧૮ પ્રભુ યહોવાહ આમ કહે છે: ‘પહેલા મહિનાના પહેલા દિવસે તમારે ખોડખાંપણ વગરનો એક વાછરડો લેવો અને પવિત્રસ્થાનને માટે પાપાર્થાર્પણ ચઢાવવું.
೧೮ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಲಯವನ್ನು ಶುದ್ಧೀಕರಿಸಬೇಕು.
19 ૧૯ યાજક પાપાર્થાર્પણનું કેટલુંક રક્ત લઈને તે સભાસ્થાનની બારસાખ પર, વેદીના ચાર ખૂણા પર તથા અંદરના આંગણાના દરવાજે લગાડે.
೧೯ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.
20 ૨૦ દરેક વ્યક્તિએ અજાણતાંથી તથા અજ્ઞાનતાથી પાપ કર્યું હોય તો તેણે તે મહિનાના સાતમા દિવસે પણ આ પ્રમાણે કરવું. સભાસ્થાન માટે આ રીતે તમારે શુદ્ધ કરવું.
೨೦ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.
21 ૨૧ પહેલા મહિનાના ચૌદમા દિવસે તમારે પાસ્ખાપર્વ પાળવું. સાત દિવસ સુધી પાસ્ખાપર્વ પાળવું. તારે બેખમીર રોટલી ખાવી.
೨೧“ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿನದಲ್ಲಿ, ಏಳು ದಿನದ ಪಸ್ಕಹಬ್ಬವನ್ನು ಆಚರಿಸಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.
22 ૨૨ તે દિવસે સરદારે પોતાના તથા ઇઝરાયલી લોકોના પાપને માટે એક બળદને પાપાર્થાર્પણ તરીકે તૈયાર કરવો.
೨೨ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರೆಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.
23 ૨૩ એ પર્વના સાત દિવસ સરદાર યહોવાહ માટે દહનીયાર્પણ તૈયાર કરે સાત દિવસ ખોડખાંપણ વગરના સાત બળદો તથા ખોડખાંપણ વગરના સાત ઘેટાને, પાપાર્થાર્પણ તરીકે દરરોજ એક બકરાને રજૂ કરે.
೨೩ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಒದಗಿಸಲಿ ಮತ್ತು ದೋಷಪರಿಹಾರಕ ಯಜ್ಞವಾಗಿ ಪ್ರತಿ ದಿನವೂ ಒಂದು ಹೋತವನ್ನು ಕೊಡಲಿ.
24 ૨૪ સરદાર દરેક બળદ એક એફાહ તથા ઘેટા માટે એક એફાહ, દરેક એફાહ એક હિન તેલ ખાદ્યાર્પણ તરીકે રજૂ કરે.
೨೪ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.
25 ૨૫ સાતમા મહિનાના પંદરમા દિવસે, સરદાર પર્વમાં સાત દિવસ એ જ પ્રમાણે કરે; એટલે પાપાર્થાર્પણ, દહનીયાર્પણ, ખાદ્યાર્પણ તથા તેલનાં અર્પણ ચઢાવવાં.’”
೨೫“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನೈವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”

< હઝકિયેલ 45 >