< मरकुस 12 >
1 यीशु उदाहरणां म्ह उनतै बात करण लाग्या: “किसे माणस नै अंगूर का बाग लगाया, अर उसकै चौगरदे नै बाड़ा बाँधया, अर रस का कुण्ड खोद्या, अर रुखाळ खात्तर एक मचान बणाया; अर किसानां ताहीं उसका ठेक्का देकै परदेस चल्या गया।
ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.
2 फेर फळ तोड़ण का बखत लोवै आया, तो बाग के माल्लिक नै अपणे नौक्कर ताहीं उसका फळ लेण नै किसानां धोरै भेज्या के किसानां तै अंगूर के बाग के फळां का हिस्सा लेवै।
ಫಲದ ಕಾಲ ಬಂದಾಗ ಅವನು ದ್ರಾಕ್ಷಿತೋಟದ ಫಲವನ್ನು ರೈತರಿಂದ ಪಡೆಯುವುದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕನನ್ನು ಕಳುಹಿಸಿದನು.
3 पर किसानां नै उस नौक्कर ताहीं पकड़कै छेत्या अर खाल्ली हाथ भेज दिया।
ಆದರೆ ಅವರು ಅವನನ್ನು ಹಿಡಿದು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.
4 फेर उसनै एक और नौक्कर ताहीं उनकै धोरै भेज्या; उननै उसकी बेजती करी उसका सिर फोड़ दिया अर।
ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ತಲೆಯನ್ನು ಗಾಯಗೊಳಿಸಿ ಅವಮಾನ ಮಾಡಿ ಕಳುಹಿಸಿಬಿಟ್ಟರು.
5 फेर उस माल्लिक नै एक और ताहीं भेज्या; उननै उस नौक्कर ताहीं भी मार दिया। फेर उसनै और घणाए ताहीं भेज्या; उन म्ह तै उननै कुछ तो छेत्ते अर कुछ मार दिये।”
ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದಾಗ ಅವರು ಅವನನ್ನು ಕೊಂದುಹಾಕಿದರು. ಯಜಮಾನನು ಬೇರೆ ಕೆಲವರನ್ನು ಕಳುಹಿಸಿದಾಗ ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
6 “इब माल्लिक कै धोरै एकैए आदमी रहग्या जो उसका प्यारा बेट्टा था; आखर म्ह उसनै अपणे बेट्टे ताहीं भी उनकै धोरै न्यू सोचकै भेज्या के वे मेरै बेट्टे की इज्जत तो जरुर करैगें।”
“ಕಡೆಯದಾಗಿ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನಿದ್ದನು. ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು,’ ಎಂದು ಭಾವಿಸಿ, ಅವನನ್ನು ಅವರ ಬಳಿಗೆ ಕಳುಹಿಸಿದನು.
7 पर उन किसानां नै आप्पस म्ह कह्या, “योए तो वारिस सै; आओ, हम इसनै मार द्या, फेर यो अंगूर का बाग म्हारा हो जावैगा।”
“ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು.
8 अर उननै उस ताहीं पकड़कै मार दिया, अर अंगूर के बाग तै बाहरणै बगा दिया।
ಅವರು ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷಿತೋಟದ ಹೊರಗೆ ಬಿಸಾಡಿದರು.
9 इस करकै अंगूर के बाग का माल्लिक के करैगा? वो आकै उन किसानां का नाश करैगा, अर अंगूर के बाग का ठेक्का दुसरे किसानां नै दे देवैगा।
“ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು.
10 के थमनै पवित्र ग्रन्थ म्ह यो वचन कोनी पढ्या: जिस पत्थर ताहीं राजमिस्त्रियाँ नै बेकार बताया था, वोए कोणे का खास पत्थर होग्या;
ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
11 यो प्रभु की ओड़ तै होया, अर यो म्हारे खात्तर अनोक्खा सै!
ಇದು ಕರ್ತನಿಂದಲೇ ಆಯಿತು. ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ,’” ಎಂದು ಹೇಳಿದರು.
12 फेर यहूदियाँ के प्रधान नै उस ताहीं पकड़णा चाह्या; क्यूँके वे समझगे थे, के उसनै म्हारै बिरोध म्ह यो उदाहरण कह्या सै: पर वे माणसां तै डरगे, अर उसनै छोड़कै चले गये।
ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.
13 फेर यहूदियाँ के प्रधान नै यीशु ताहीं बात्तां म्ह उलझाण खात्तर कुछ फरीसियाँ अर हेरोदेस राजा के समर्थकां ताहीं उसकै धोरै भेज्या।
ಆಮೇಲೆ ಅವರು ಯೇಸುವನ್ನು ಅವರ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಅವರ ಬಳಿಗೆ ಕಳುಹಿಸಿದರು.
14 उननै आकै यीशु तै कह्या, “हे गुरु, हमनै बेरा सै, के तू साच्चा सै, अर किसे की परवाह न्ही करदा, क्यूँके तू माणसां का मुँह देखकै बात कोनी करदा, पर परमेसवर की बातें सच्चाई तै सिखावै सै। तो के कैसर ताहीं कर देणा ठीक सै या कोनी?
ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ?
15 हम देवां, या न्ही देवां?” उसनै उनका कपट जाणकै उनतै कह्या, “मन्नै क्यांतै परखो सो? एक दीनार (एक दिन की मजदूरी) मेरै धोरै ल्याओ, के मै उसनै देक्खूँ।”
ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.
16 वे लियाए, अर उसनै उनतै कह्या, “या छाप अर नाम किसका सै?” उननै कह्या, “कैसर का।”
ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು,” ಎಂದು ಉತ್ತರಕೊಟ್ಟರು.
17 यीशु नै उनतै कह्या, “जो कैसर का सै वो कैसर ताहीं, अर जो परमेसवर का सै परमेसवर ताहीं द्यो।” फेर वे उसपै घणे हैरान होण लाग्गे।
ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು.
18 फेर सदूकी लोग भी, जो कहवै सै के मरे होए जिन्दा होए न्ही सकदे; उसकै धोरै आकै उसतै बुझ्झया,
ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಯೇಸುವಿನ ಬಳಿಗೆ ಬಂದು,
19 “हे गुरु, मूसा नबी नै म्हारै खात्तर पवित्र ग्रन्थ म्ह लिख्या सै के जै किसे का भाई बेऊलादा मर जावै अर उसकी घरआळी रह जावै, तो उसका भाई उसकी घरआळी तै ब्याह कर लेवै अर अपणे भाई खात्तर पीढ़ी पैदा करै।
“ಬೋಧಕರೇ, ‘ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ವಿಧವೆಯನ್ನು ಬಿಟ್ಟು ಸತ್ತರೆ, ಅವನ ಸಹೋದರನು ಅವನ ಹೆಂಡತಿಯನ್ನು ತೆಗೆದುಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು’ ಎಂದು ಮೋಶೆಯು ನಮಗೆ ಬರೆದಿರುತ್ತಾನಷ್ಟೆ.
20 उदाहरण के तौर पै सात भाई थे। पैहल्ड़ा भाई ब्याह करकै बेऊलादा मरग्या।
ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.
21 फेर दुसरे भाई नै उसकी बिरबान्नी तै ब्याह कर लिया अर वो भी बेऊलादा मरग्या; अर उस्से तरियां तीसरे नै भी करया।
ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು. ಅದರಂತೆಯೇ ಮೂರನೆಯವನೂ ಆದನು.
22 अर सातुवां कै ऊलाद कोनी होई। सारया पाच्छै वा बिरबान्नी भी मरगी।
ಹೀಗೆ ಏಳುಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವರಾಗಿ ಮೃತರಾದರು. ಕೊನೆಯಲ್ಲಿ ಆ ಸ್ತ್ರೀಯೂ ಸಹ ಮರಣಹೊಂದಿದಳು.
23 आखर म्ह जिन्दा होण पै वा उन म्ह तै किसकी घरआळी होवैगी? क्यूँके वा सातुवां की घरआळी हो ली थी।”
ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ,” ಎಂದು ಪ್ರಶ್ನಿಸಿದರು.
24 यीशु नै उनतै कह्या, “थारी गलती या सै के थम पवित्र ग्रन्थ अर परमेसवर की सामर्थ नै न्ही जाणते।
ಅದಕ್ಕೆ ಯೇಸು, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದಿರಲ್ಲವೇ?
25 क्यूँके जी उठण कै बाद ब्याह शादी कोनी होन्दी, पर सुर्ग म्ह वो परमेसवर के सुर्गदूत्तां की ढाळ होवैगें।
ಅವರು ಸತ್ತವರೊಳಗಿಂದ ಜೀವಂತವಾಗಿ ಎದ್ದ ಮೇಲೆ, ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
26 मरे होया कै जिन्दा होण कै बारें म्ह के थमनै मूसा नबी की किताब म्ह जळती होई झाड़ी की कथा म्ह कोनी पढ़्या के परमेसवर नै उसतै कह्या, ‘मै अब्राहम का परमेसवर, अर इसहाक का परमेसवर, अर याकूब का परमेसवर सूं’?
ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
27 परमेसवर मरे होया का न्ही बल्के जिन्दयां का परमेसवर सै; थम बड्डी भूल म्ह पड़े सो।”
ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ, ಆದ್ದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪುಮಾಡುತ್ತೀರಿ,” ಎಂದು ಹೇಳಿದರು.
28 शास्त्री समाज के माणसां म्ह तै एक नै आकै उन ताहीं बहस करदे सुण्या, अर न्यू जाणकै उसनै उन ताहीं ठीक ढाळ तै जवाब दिया, अर उसतै बुझ्झया, “सारया तै खास हुकम कौण सा सै?”
ನಿಯಮ ಬೋಧಕರಲ್ಲಿ ಒಬ್ಬನು ಬಂದು ಅವರು ಕೂಡಿಕೊಂಡು ತರ್ಕಿಸುತ್ತಿರುವುದನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಅವರಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವುದು?” ಎಂದು ಕೇಳಿದನು.
29 यीशु नै उस ताहीं जवाब दिया, “सारे हुकमां म्ह तै यो खास सै: ‘हे इस्राएल के माणसों सुणो! प्रभु म्हारा परमेसवर सिर्फ एक ही प्रभु सै,
ಯೇಸು ಉತ್ತರವಾಗಿ ಅವನಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು, ‘ಇಸ್ರಾಯೇಲೇ, ಕೇಳು: ನಮ್ಮ ದೇವರಾದ ಕರ್ತ ಒಬ್ಬರೇ ಕರ್ತನಾಗಿದ್ದಾರೆ.
30 अर तू प्रभु अपणे परमेसवर तै अपणे सारे मन तै, अर अपणे सारे प्राण तै, अर अपणी सारी समझ तै, अर अपणी सारी शक्ति तै प्यार राखणा।’
ನೀನು ನಿನ್ನ ದೇವರನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು?’
31 अर दुसरा यो सै, ‘तू अपणे पड़ोसी तै अपणे जिसा प्यार राखणा।’ इसतै बड्ड़ा और कोए हुकम कोनी।”
‘ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,’ ಎಂಬುದು ಅದರಂತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿಗಿಂತ ಹೆಚ್ಚಿನ ಆಜ್ಞೆಯು ಮತ್ತೊಂದಿಲ್ಲ,” ಎಂದು ಹೇಳಿದರು.
32 शास्त्री नै उसतै कह्या, “हे गुरु, जमा ठीक! तन्नै साच्ची कही के परमेसवर एक-ए सै, अर उस ताहीं छोड़कै और कोए कोनी।
ಅದಕ್ಕೆ ಆ ನಿಯಮ ಬೋಧಕನು ಯೇಸುವಿಗೆ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ನೀವು ಹೇಳಿದ್ದು ಸತ್ಯವೇ; ಏಕೆಂದರೆ ದೇವರು ಒಬ್ಬರೇ, ಅವರ ಹೊರತು ಬೇರೊಬ್ಬರು ಇಲ್ಲ.
33 अर उसतै सारे मन तै, अर सारे प्राण तै, अर सारी समझ तै, अर सारी शक्ति तै प्यार राखणा; अर पड़ोसी तै अपणे जिसा प्यार राखणा, ये दोन्नु हुकम होमबलियाँ अर बलिदानां तै बाध सै।”
ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.
34 जिब यीशु नै देख्या के उसनै समझदारी तै जवाब दिया, तो उसतै कह्या, “तू परमेसवर कै राज्य तै दूर कोनी।” अर किसे नै फेर उसतै बुझ्झण की हिम्मत कोनी होई।
ಅವನು ವಿವೇಕದಿಂದ ಉತ್ತರ ಕೊಟ್ಟದ್ದನ್ನು ಯೇಸು ಕಂಡು ಅವನಿಗೆ, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ,” ಎಂದರು. ಅಂದಿನಿಂದ ಯೇಸುವನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
35 फेर यीशु नै मन्दर म्ह उपदेश देन्दे होए न्यू कह्या, “शास्त्री क्यूँ कहवै सै के मसीह दाऊद का बेट्टा सै?
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ, “ಕ್ರಿಸ್ತನು ದಾವೀದನ ಪುತ್ರನು ಎಂದು ನಿಯಮ ಬೋಧಕರು ಹೇಳುತ್ತಿರುವುದು ಹೇಗೆ?
36 क्यूँके दाऊद नै खुद ए पवित्र आत्मा म्ह होकै कह्या सै, ‘परमेसवर यहोवा नै मेरै प्रभु तै कह्या, “मेरै सोळी ओड़ बैठ, जिब ताहीं के मै तेरे बैरियाँ नै हरा कै, तेरे पायां की चौक्की न्ही बणा दियुँ।”’
ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.”’
37 “दाऊद तो खुद ए उसनै प्रभु कहवै सै, फेर वो उसका बेट्टा किस ढाळ होया?” अर भीड़ के माणस उसकी राज्जी होकै सुणै थे।
ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು.
38 यीशु नै अपणे उपदेश म्ह उनतै कह्या, “शास्त्रियाँ तै चौकन्ने रहियो, जो लाम्बे-लाम्बे चोगे पहरे होड़ हाँडै अर बजारां म्ह नमस्कार चाहवैं सै,
ಯೇಸು ಬೋಧನೆಮಾಡುತ್ತಾ, “ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ
39 अर आराधनालयाँ म्ह खास-खास जगहां बैठणा, जिम्मण म्ह खास-खास जगहां भी चाहवैं सै।
ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಇಷ್ಟಪಡುತ್ತಾರೆ.
40 वे बिधवायाँ के घर खा जावै सै अर दिखाण खात्तर घणी वार ताहीं प्रार्थना करदे रहवै सै। ये घणा दण्ड पावैगें।”
ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.
41 यीशु मन्दर कै भण्डार कै स्याम्ही बैठकै देक्खै था के आदमी मन्दर कै दानपात्र म्ह किस तरियां पईसे घालैं सै; अर घणखरे साहूकारां नै घणाए कुछ घाल्या।
ಯೇಸು ಕಾಣಿಕೆ ಪೆಟ್ಟಿಗೆಯ ಎದುರಾಗಿ ಕುಳಿತುಕೊಂಡು ಜನರು ಹೇಗೆ ಅದರಲ್ಲಿ ಹಣ ಹಾಕುತ್ತಿದ್ದಾರೆಂಬುದನ್ನು ಗಮನಿಸುತ್ತಿದ್ದರು. ಅನೇಕ ಐಶ್ವರ್ಯವಂತರು ಹೆಚ್ಚು ಹಣ ಹಾಕಿದರು.
42 इतनै म्ह एक कंगाल बिधवा नै आकै दो दमड़ी घाल्लीं। (जो एक धेले कै बराबर होवै सै)
ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು.
43 फेर उसनै अपणे चेल्यां ताहीं धोरै बुलाकै कह्या, “मै थमनै सच कहूँ सूं के मन्दर कै दानपात्र म्ह घाल्लण आळा म्ह तै इस कंगाल बिधवा नै सारया तै बाध घाल्या सै;
ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
44 क्यूँके सारया नै अपणे धन की बढ़दी म्ह तै घाल्या सै, पर इसनै अपणी घटदी म्ह तै जो उसकै धोरै जीवन चलाण खात्तर था, वो सारा घाल दिया।”
ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದುದನ್ನು ಹಾಕಿದ್ದಾಳೆ,” ಎಂದರು.