< דברי הימים ב 32 >

אחרי הדברים והאמת האלה בא סנחריב מלך אשור ויבא ביהודה ויחן על הערים הבצרות ויאמר לבקעם אליו 1
ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.
וירא יחזקיהו כי בא סנחריב ופניו למלחמה על ירושלם 2
ಸನ್ಹೇರೀಬನು ಬಂದದ್ದನ್ನೂ, ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ನಿಶ್ಚಯಿಸಿದ್ದನ್ನೂ ಹಿಜ್ಕೀಯನು ಕಂಡಾಗ,
ויועץ עם שריו וגבריו לסתום את מימי העינות אשר מחוץ לעיר ויעזרוהו 3
ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.
ויקבצו עם רב--ויסתמו את כל המעינות ואת הנחל השוטף בתוך הארץ לאמר למה יבואו מלכי אשור ומצאו מים רבים 4
ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.
ויתחזק ויבן את כל החומה הפרוצה ויעל על המגדלות ולחוצה החומה אחרת ויחזק את המלוא עיר דויד ויעש שלח לרב ומגנים 5
ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.
ויתן שרי מלחמות על העם ויקבצם אליו אל רחוב שער העיר וידבר על לבבם לאמר 6
ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು:
חזקו ואמצו--אל תיראו ואל תחתו מפני מלך אשור ומלפני כל ההמון אשר עמו כי עמנו רב מעמו 7
“ಬಲಗೊಳ್ಳಿರಿ, ಧೈರ್ಯವಾಗಿರಿ, ಅಸ್ಸೀರಿಯದ ಅರಸನ ನಿಮಿತ್ತವೂ, ಅವನ ಸಂಗಡ ಕೂಡಿರುವ ಮಹಾ ಗುಂಪಿನ ನಿಮಿತ್ತವೂ ಭಯಪಡಬೇಡಿರಿ, ನಿರಾಶರಾಗಬೇಡಿರಿ. ಏಕೆಂದರೆ ಅವನ ಸಂಗಡ ಇರುವವರಿಗಿಂತ ಮಿಗಿಲಾದದ್ದು ನಮ್ಮ ಸಂಗಡ ಇದೆ.
עמו זרוע בשר ועמנו יהוה אלהינו לעזרנו ולהלחם מלחמתנו ויסמכו העם על דברי יחזקיהו מלך יהודה 8
ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.
אחר זה שלח סנחריב מלך אשור עבדיו ירושלימה והוא על לכיש וכל ממשלתו עמו--על יחזקיהו מלך יהודה ועל כל יהודה אשר בירושלם לאמר 9
ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.
כה אמר סנחריב מלך אשור על מה אתם בטחים וישבים במצור בירושלם 10
“ಅಸ್ಸೀರಿಯದ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ಉಳಿದಿರುವಿರಿ?
הלא יחזקיהו מסית אתכם לתת אתכם למות ברעב ובצמא לאמר יהוה אלהינו--יצילנו מכף מלך אשור 11
‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
הלא הוא יחזקיהו הסיר את במתיו ואת מזבחתיו ויאמר ליהודה ולירושלם לאמר לפני מזבח אחד תשתחוו ועליו תקטירו 12
ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?
הלא תדעו מה עשיתי אני ואבותי לכל עמי הארצות היכול יכלו אלהי גוי הארצות להציל את ארצם מידי 13
“ನಾನೂ, ನನ್ನ ಪಿತೃಗಳು ದೇಶಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವಿತ್ತೋ?
מי בכל אלהי הגוים האלה אשר החרימו אבותי אשר יכול להציל את עמו מידי כי יוכל אלהיכם להציל אתכם מידי 14
ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?
ועתה אל ישיא אתכם חזקיהו ואל יסית אתכם כזאת ואל תאמינו לו--כי לא יוכל כל אלוה כל גוי וממלכה להציל עמו מידי ומיד אבותי אף כי אלהיכם לא יצילו אתכם מידי 15
ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.
ועוד דברו עבדיו על יהוה האלהים ועל יחזקיהו עבדו 16
ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು.
וספרים כתב--לחרף ליהוה אלהי ישראל ולאמר עליו לאמר כאלהי גויי הארצות אשר לא הצילו עמם מידי--כן לא יציל אלהי יחזקיהו עמו מידי 17
ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.
ויקראו בקול גדול יהודית על עם ירושלם אשר על החומה ליראם ולבהלם--למען ילכדו את העיר 18
ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು.
וידברו אל אלהי ירושלם כעל אלהי עמי הארץ--מעשה ידי האדם 19
ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
ויתפלל יחזקיהו המלך וישעיהו בן אמוץ הנביא--על זאת ויזעקו השמים 20
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
וישלח יהוה מלאך ויכחד כל גבור חיל ונגיד ושר במחנה מלך אשור וישב בבשת פנים לארצו ויבא בית אלהיו ומיציאו (ומיציאי) מעיו שם הפילהו בחרב 21
ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.
ויושע יהוה את יחזקיהו ואת ישבי ירושלם מיד סנחריב מלך אשור--ומיד כל וינהלם מסביב 22
ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.
ורבים מביאים מנחה ליהוה לירושלם ומגדנות ליחזקיהו מלך יהודה וינשא לעיני כל הגוים מאחרי כן 23
ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.
בימים ההם חלה יחזקיהו עד למות ויתפלל אל יהוה ויאמר לו ומופת נתן לו 24
ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.
ולא כגמל עליו השיב יחזקיהו כי גבה לבו ויהי עליו קצף ועל יהודה וירושלם 25
ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.
ויכנע יחזקיהו בגבה לבו הוא ויושבי ירושלם ולא בא עליהם קצף יהוה בימי יחזקיהו 26
ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.
ויהי ליחזקיהו עשר וכבוד הרבה מאד ואצרות עשה לו לכסף ולזהב ולאבן יקרה ולבשמים ולמגנים ולכל כלי חמדה 27
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.
ומסכנות--לתבואת דגן ותירוש ויצהר וארות לכל בהמה ובהמה ועדרים לאורת 28
ಇದಲ್ಲದೆ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನೂ, ಸಕಲ ವಿಧವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ, ಕುರಿಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
וערים עשה לו ומקנה צאן ובקר לרב כי נתן לו אלהים רכוש רב מאד 29
ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.
והוא יחזקיהו סתם את מוצא מימי גיחון העליון ויישרם למטה מערבה לעיר דויד ויצלח יחזקיהו בכל מעשהו 30
ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.
וכן במליצי שרי בבל המשלחים עליו לדרש המופת אשר היה בארץ עזבו האלהים--לנסותו לדעת כל בלבבו 31
ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.
ויתר דברי יחזקיהו וחסדיו--הנם כתובים בחזון ישעיהו בן אמוץ הנביא על ספר מלכי יהודה וישראל 32
ಹಿಜ್ಕೀಯನ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗ ಪ್ರವಾದಿಯಾದ ಯೆಶಾಯನ ದರ್ಶನದ ಪುಸ್ತಕದಲ್ಲಿ ಮತ್ತು ಯೆಹೂದ ಇಸ್ರಾಯೇಲ್ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וישכב יחזקיהו עם אבתיו ויקברהו במעלה קברי בני דויד וכבוד עשו לו במותו כל יהודה וישבי ירושלם וימלך מנשה בנו תחתיו 33
ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.

< דברי הימים ב 32 >