< עזרא 4 >

וַֽיִּשְׁמְעוּ צָרֵי יְהוּדָה וּבִנְיָמִן כִּֽי־בְנֵי הַגּוֹלָה בּוֹנִים הֵיכָל לַיהֹוָה אֱלֹהֵי יִשְׂרָאֵֽל׃ 1
ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.
וַיִּגְּשׁוּ אֶל־זְרֻבָּבֶל וְאֶל־רָאשֵׁי הָֽאָבוֹת וַיֹּאמְרוּ לָהֶם נִבְנֶה עִמָּכֶם כִּי כָכֶם נִדְרוֹשׁ לֵֽאלֹהֵיכֶם (ולא) [וְלוֹ ׀] אֲנַחְנוּ זֹבְחִים מִימֵי אֵסַר חַדֹּן מֶלֶךְ אַשּׁוּר הַמַּעֲלֶה אֹתָנוּ פֹּֽה׃ 2
ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.
וַיֹּאמֶר לָהֶם זְרֻבָּבֶל וְיֵשׁוּעַ וּשְׁאָר רָאשֵׁי הָֽאָבוֹת לְיִשְׂרָאֵל לֹֽא־לָכֶם וָלָנוּ לִבְנוֹת בַּיִת לֵאלֹהֵינוּ כִּי אֲנַחְנוּ יַחַד נִבְנֶה לַֽיהֹוָה אֱלֹהֵי יִשְׂרָאֵל כַּאֲשֶׁר צִוָּנוּ הַמֶּלֶךְ כּוֹרֶשׁ מֶֽלֶךְ־פָּרָֽס׃ 3
ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.
וַיְהִי עַם־הָאָרֶץ מְרַפִּים יְדֵי עַם־יְהוּדָה (ומבלהים) [וּֽמְבַהֲלִים] אוֹתָם לִבְנֽוֹת׃ 4
ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.
וְסֹכְרִים עֲלֵיהֶם יוֹעֲצִים לְהָפֵר עֲצָתָם כׇּל־יְמֵי כּוֹרֶשׁ מֶלֶךְ פָּרַס וְעַד־מַלְכוּת דָּרְיָוֶשׁ מֶֽלֶךְ־פָּרָֽס׃ 5
ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.
וּבְמַלְכוּת אֲחַשְׁוֵרוֹשׁ בִּתְחִלַּת מַלְכוּתוֹ כָּתְבוּ שִׂטְנָה עַל־יֹשְׁבֵי יְהוּדָה וִירוּשָׁלָֽ͏ִם׃ 6
ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.
וּבִימֵי אַרְתַּחְשַׁשְׂתָּא כָּתַב בִּשְׁלָם מִתְרְדָת טָֽבְאֵל וּשְׁאָר כְּנָוֺתָו עַל־אַרְתַּחְשַׁשְׂתְּא מֶלֶךְ פָּרָס וּכְתָב הַֽנִּשְׁתְּוָן כָּתוּב אֲרָמִית וּמְתֻרְגָּם אֲרָמִֽית׃ 7
ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.
רְחוּם בְּעֵל־טְעֵם וְשִׁמְשַׁי סָֽפְרָא כְּתַבוּ אִגְּרָה חֲדָה עַל־יְרוּשְׁלֶם לְאַרְתַּחְשַׁשְׂתְּא מַלְכָּא כְּנֵֽמָא׃ 8
ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.
אֱדַיִן רְחוּם בְּעֵל־טְעֵם וְשִׁמְשַׁי סָֽפְרָא וּשְׁאָר כְּנָוָתְהוֹן דִּינָיֵא וַאֲפַרְסַתְכָיֵא טַרְפְּלָיֵא אֲפָֽרְסָיֵא (ארכוי) [אַרְכֳּוָיֵא] בָבְלָיֵא שֽׁוּשַׁנְכָיֵא (דהוא) [דֶּהָיֵא] עֵלְמָיֵֽא׃ 9
ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.
וּשְׁאָר אֻמַּיָּא דִּי הַגְלִי אׇסְנַפַּר רַבָּא וְיַקִּירָא וְהוֹתֵב הִמּוֹ בְּקִרְיָה דִּי שָׁמְרָיִן וּשְׁאָר עֲבַֽר־נַהֲרָה וּכְעֶֽנֶת׃ 10
೧೦ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.
דְּנָה פַּרְשֶׁגֶן אִגַּרְתָּא דִּי שְׁלַחוּ עֲלוֹהִי עַל־אַרְתַּחְשַׁשְׂתְּא מַלְכָּא עַבְדָיךְ אֱנָשׁ עֲבַֽר־נַהֲרָה וּכְעֶֽנֶת׃ 11
೧೧ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.
יְדִיעַ לֶהֱוֵא לְמַלְכָּא דִּי יְהוּדָיֵא דִּי סְלִקוּ מִן־לְוָתָךְ עֲלֶינָא אֲתוֹ לִירוּשְׁלֶם קִרְיְתָא מָֽרָדְתָּא וּבִֽאישְׁתָּא בָּנַיִן (ושורי) [וְשׁוּרַיָּא] (אשכללו) [שַׁכְלִילוּ] וְאֻשַּׁיָּא יַחִֽיטוּ׃ 12
೧೨ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
כְּעַן יְדִיעַ לֶהֱוֵא לְמַלְכָּא דִּי הֵן קִרְיְתָא דָךְ תִּתְבְּנֵא וְשׁוּרַיָּא יִֽשְׁתַּכְלְלוּן מִנְדָּֽה־בְלוֹ וַהֲלָךְ לָא יִנְתְּנוּן וְאַפְּתֹם מַלְכִים תְּהַנְזִֽק׃ 13
೧೩ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
כְּעַן כׇּל־קֳבֵל דִּֽי־מְלַח הֵֽיכְלָא מְלַחְנָא וְעַרְוַת מַלְכָּא לָא אֲֽרִֽיךְ־לַנָא לְמֶֽחֱזֵא עַל־דְּנָה שְׁלַחְנָא וְהוֹדַעְנָא לְמַלְכָּֽא׃ 14
೧೪ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.
דִּי יְבַקַּר בִּֽסְפַר־דׇּכְרָנַיָּא דִּי אֲבָהָתָךְ וּתְהַשְׁכַּח בִּסְפַר דׇּכְרָנַיָּא וְתִנְדַּע דִּי קִרְיְתָא דָךְ קִרְיָא מָֽרָדָא וּֽמְהַנְזְקַת מַלְכִין וּמְדִנָן וְאֶשְׁתַּדּוּר עָבְדִין בְּגַוַּהּ מִן־יוֹמָת עָלְמָא עַל־דְּנָה קִרְיְתָא דָךְ הׇֽחָרְבַֽת׃ 15
೧೫ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.
מְהוֹדְעִין אֲנַחְנָה לְמַלְכָּא דִּי הֵן קִרְיְתָא דָךְ תִּתְבְּנֵא וְשׁוּרַיָּה יִֽשְׁתַּכְלְלוּן לׇקֳבֵל דְּנָה חֲלָק בַּעֲבַר נַהֲרָא לָא אִיתַי לָֽךְ׃ 16
೧೬ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”
פִּתְגָמָא שְׁלַח מַלְכָּא עַל־רְחוּם בְּעֵל־טְעֵם וְשִׁמְשַׁי סָֽפְרָא וּשְׁאָר כְּנָוָתְהוֹן דִּי יָתְבִין בְּשָֽׁמְרָיִן וּשְׁאָר עֲבַֽר־נַהֲרָה שְׁלָם וּכְעֶֽת׃ 17
೧೭ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.
נִשְׁתְּוָנָא דִּי שְׁלַחְתּוּן עֲלֶינָא מְפָרַשׁ קֱרִי קׇדָמָֽי׃ 18
೧೮ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು.
וּמִנִּי שִׂים טְעֵם וּבַקַּרוּ וְהַשְׁכַּחוּ דִּי קִרְיְתָא דָךְ מִן־יוֹמָת עָֽלְמָא עַל־מַלְכִין מִֽתְנַשְּׂאָה וּמְרַד וְאֶשְׁתַּדּוּר מִתְעֲבֶד־בַּֽהּ׃ 19
೧೯ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.
וּמַלְכִין תַּקִּיפִין הֲווֹ עַל־יְרוּשְׁלֶם וְשַׁלִּיטִין בְּכֹל עֲבַר נַהֲרָה וּמִדָּה בְלוֹ וַהֲלָךְ מִתְיְהֵב לְהֽוֹן׃ 20
೨೦ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
כְּעַן שִׂימוּ טְּעֵם לְבַטָּלָא גֻּבְרַיָּא אִלֵּךְ וְקִרְיְתָא דָךְ לָא תִתְבְּנֵא עַד־מִנִּי טַעְמָא יִתְּשָֽׂם׃ 21
೨೧ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.
וּזְהִירִין הֱווֹ שָׁלוּ לְמֶעְבַּד עַל־דְּנָה לְמָה יִשְׂגֵּא חֲבָלָא לְהַנְזָקַת מַלְכִֽין׃ 22
೨೨ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.
אֱדַיִן מִן־דִּי פַּרְשֶׁגֶן נִשְׁתְּוָנָא דִּי אַרְתַּחְשַׁשְׂתְּא מַלְכָּא קֱרִי קֳדָם־רְחוּם וְשִׁמְשַׁי סָפְרָא וּכְנָוָתְהוֹן אֲזַלוּ בִבְהִילוּ לִירֽוּשְׁלֶם עַל־יְהוּדָיֵא וּבַטִּלוּ הִמּוֹ בְּאֶדְרָע וְחָֽיִל׃ 23
೨೩ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.
בֵּאדַיִן בְּטֵלַת עֲבִידַת בֵּית־אֱלָהָא דִּי בִּירוּשְׁלֶם וַהֲוָת בָּֽטְלָא עַד שְׁנַת תַּרְתֵּין לְמַלְכוּת דָּרְיָוֶשׁ מֶֽלֶךְ־פָּרָֽס׃ 24
೨೪ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.

< עזרא 4 >