< ויקרא 16 >
וַיְדַבֵּר יְהֹוָה אֶל־מֹשֶׁה אַחֲרֵי מוֹת שְׁנֵי בְּנֵי אַהֲרֹן בְּקׇרְבָתָם לִפְנֵי־יְהֹוָה וַיָּמֻֽתוּ׃ | 1 |
೧ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ,
וַיֹּאמֶר יְהֹוָה אֶל־מֹשֶׁה דַּבֵּר אֶל־אַהֲרֹן אָחִיךָ וְאַל־יָבֹא בְכׇל־עֵת אֶל־הַקֹּדֶשׁ מִבֵּית לַפָּרֹכֶת אֶל־פְּנֵי הַכַּפֹּרֶת אֲשֶׁר עַל־הָאָרֹן וְלֹא יָמוּת כִּי בֶּֽעָנָן אֵרָאֶה עַל־הַכַּפֹּֽרֶת׃ | 2 |
೨“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.
בְּזֹאת יָבֹא אַהֲרֹן אֶל־הַקֹּדֶשׁ בְּפַר בֶּן־בָּקָר לְחַטָּאת וְאַיִל לְעֹלָֽה׃ | 3 |
೩ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.
כְּתֹֽנֶת־בַּד קֹדֶשׁ יִלְבָּשׁ וּמִֽכְנְסֵי־בַד יִהְיוּ עַל־בְּשָׂרוֹ וּבְאַבְנֵט בַּד יַחְגֹּר וּבְמִצְנֶפֶת בַּד יִצְנֹף בִּגְדֵי־קֹדֶשׁ הֵם וְרָחַץ בַּמַּיִם אֶת־בְּשָׂרוֹ וּלְבֵשָֽׁם׃ | 4 |
೪ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.
וּמֵאֵת עֲדַת בְּנֵי יִשְׂרָאֵל יִקַּח שְׁנֵֽי־שְׂעִירֵי עִזִּים לְחַטָּאת וְאַיִל אֶחָד לְעֹלָֽה׃ | 5 |
೫ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.
וְהִקְרִיב אַהֲרֹן אֶת־פַּר הַחַטָּאת אֲשֶׁר־לוֹ וְכִפֶּר בַּעֲדוֹ וּבְעַד בֵּיתֽוֹ׃ | 6 |
೬ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.
וְלָקַח אֶת־שְׁנֵי הַשְּׂעִירִם וְהֶעֱמִיד אֹתָם לִפְנֵי יְהֹוָה פֶּתַח אֹהֶל מוֹעֵֽד׃ | 7 |
೭ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
וְנָתַן אַהֲרֹן עַל־שְׁנֵי הַשְּׂעִירִם גֹּרָלוֹת גּוֹרָל אֶחָד לַיהֹוָה וְגוֹרָל אֶחָד לַעֲזָאזֵֽל׃ | 8 |
೮ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.
וְהִקְרִיב אַהֲרֹן אֶת־הַשָּׂעִיר אֲשֶׁר עָלָה עָלָיו הַגּוֹרָל לַיהֹוָה וְעָשָׂהוּ חַטָּֽאת׃ | 9 |
೯ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.
וְהַשָּׂעִיר אֲשֶׁר עָלָה עָלָיו הַגּוֹרָל לַעֲזָאזֵל יׇֽעֳמַד־חַי לִפְנֵי יְהֹוָה לְכַפֵּר עָלָיו לְשַׁלַּח אֹתוֹ לַעֲזָאזֵל הַמִּדְבָּֽרָה׃ | 10 |
೧೦ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.
וְהִקְרִיב אַהֲרֹן אֶת־פַּר הַֽחַטָּאת אֲשֶׁר־לוֹ וְכִפֶּר בַּֽעֲדוֹ וּבְעַד בֵּיתוֹ וְשָׁחַט אֶת־פַּר הַֽחַטָּאת אֲשֶׁר־לֽוֹ׃ | 11 |
೧೧“ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.
וְלָקַח מְלֹֽא־הַמַּחְתָּה גַּֽחֲלֵי־אֵשׁ מֵעַל הַמִּזְבֵּחַ מִלִּפְנֵי יְהֹוָה וּמְלֹא חׇפְנָיו קְטֹרֶת סַמִּים דַּקָּה וְהֵבִיא מִבֵּית לַפָּרֹֽכֶת׃ | 12 |
೧೨ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.
וְנָתַן אֶֽת־הַקְּטֹרֶת עַל־הָאֵשׁ לִפְנֵי יְהֹוָה וְכִסָּה ׀ עֲנַן הַקְּטֹרֶת אֶת־הַכַּפֹּרֶת אֲשֶׁר עַל־הָעֵדוּת וְלֹא יָמֽוּת׃ | 13 |
೧೩ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.
וְלָקַח מִדַּם הַפָּר וְהִזָּה בְאֶצְבָּעוֹ עַל־פְּנֵי הַכַּפֹּרֶת קֵדְמָה וְלִפְנֵי הַכַּפֹּרֶת יַזֶּה שֶֽׁבַע־פְּעָמִים מִן־הַדָּם בְּאֶצְבָּעֽוֹ׃ | 14 |
೧೪ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.
וְשָׁחַט אֶת־שְׂעִיר הַֽחַטָּאת אֲשֶׁר לָעָם וְהֵבִיא אֶת־דָּמוֹ אֶל־מִבֵּית לַפָּרֹכֶת וְעָשָׂה אֶת־דָּמוֹ כַּאֲשֶׁר עָשָׂה לְדַם הַפָּר וְהִזָּה אֹתוֹ עַל־הַכַּפֹּרֶת וְלִפְנֵי הַכַּפֹּֽרֶת׃ | 15 |
೧೫“ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.
וְכִפֶּר עַל־הַקֹּדֶשׁ מִטֻּמְאֹת בְּנֵי יִשְׂרָאֵל וּמִפִּשְׁעֵיהֶם לְכׇל־חַטֹּאתָם וְכֵן יַעֲשֶׂה לְאֹהֶל מוֹעֵד הַשֹּׁכֵן אִתָּם בְּתוֹךְ טֻמְאֹתָֽם׃ | 16 |
೧೬ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.
וְכׇל־אָדָם לֹא־יִהְיֶה ׀ בְּאֹהֶל מוֹעֵד בְּבֹאוֹ לְכַפֵּר בַּקֹּדֶשׁ עַד־צֵאתוֹ וְכִפֶּר בַּעֲדוֹ וּבְעַד בֵּיתוֹ וּבְעַד כׇּל־קְהַל יִשְׂרָאֵֽל׃ | 17 |
೧೭ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.
וְיָצָא אֶל־הַמִּזְבֵּחַ אֲשֶׁר לִפְנֵֽי־יְהֹוָה וְכִפֶּר עָלָיו וְלָקַח מִדַּם הַפָּר וּמִדַּם הַשָּׂעִיר וְנָתַן עַל־קַרְנוֹת הַמִּזְבֵּחַ סָבִֽיב׃ | 18 |
೧೮ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.
וְהִזָּה עָלָיו מִן־הַדָּם בְּאֶצְבָּעוֹ שֶׁבַע פְּעָמִים וְטִהֲרוֹ וְקִדְּשׁוֹ מִטֻּמְאֹת בְּנֵי יִשְׂרָאֵֽל׃ | 19 |
೧೯ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.
וְכִלָּה מִכַּפֵּר אֶת־הַקֹּדֶשׁ וְאֶת־אֹהֶל מוֹעֵד וְאֶת־הַמִּזְבֵּחַ וְהִקְרִיב אֶת־הַשָּׂעִיר הֶחָֽי׃ | 20 |
೨೦“ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.
וְסָמַךְ אַהֲרֹן אֶת־שְׁתֵּי יָדָו עַל רֹאשׁ הַשָּׂעִיר הַחַי וְהִתְוַדָּה עָלָיו אֶת־כׇּל־עֲוֺנֹת בְּנֵי יִשְׂרָאֵל וְאֶת־כׇּל־פִּשְׁעֵיהֶם לְכׇל־חַטֹּאתָם וְנָתַן אֹתָם עַל־רֹאשׁ הַשָּׂעִיר וְשִׁלַּח בְּיַד־אִישׁ עִתִּי הַמִּדְבָּֽרָה׃ | 21 |
೨೧ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.
וְנָשָׂא הַשָּׂעִיר עָלָיו אֶת־כׇּל־עֲוֺנֹתָם אֶל־אֶרֶץ גְּזֵרָה וְשִׁלַּח אֶת־הַשָּׂעִיר בַּמִּדְבָּֽר׃ | 22 |
೨೨ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.
וּבָא אַהֲרֹן אֶל־אֹהֶל מוֹעֵד וּפָשַׁט אֶת־בִּגְדֵי הַבָּד אֲשֶׁר לָבַשׁ בְּבֹאוֹ אֶל־הַקֹּדֶשׁ וְהִנִּיחָם שָֽׁם׃ | 23 |
೨೩“ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.
וְרָחַץ אֶת־בְּשָׂרוֹ בַמַּיִם בְּמָקוֹם קָדוֹשׁ וְלָבַשׁ אֶת־בְּגָדָיו וְיָצָא וְעָשָׂה אֶת־עֹֽלָתוֹ וְאֶת־עֹלַת הָעָם וְכִפֶּר בַּעֲדוֹ וּבְעַד הָעָֽם׃ | 24 |
೨೪ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.
וְאֵת חֵלֶב הַֽחַטָּאת יַקְטִיר הַמִּזְבֵּֽחָה׃ | 25 |
೨೫ಅವನು ದೋಷಪರಿಹಾರಕ ಯಜ್ಞಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.
וְהַֽמְשַׁלֵּחַ אֶת־הַשָּׂעִיר לַֽעֲזָאזֵל יְכַבֵּס בְּגָדָיו וְרָחַץ אֶת־בְּשָׂרוֹ בַּמָּיִם וְאַחֲרֵי־כֵן יָבוֹא אֶל־הַֽמַּחֲנֶֽה׃ | 26 |
೨೬“ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.
וְאֵת פַּר הַֽחַטָּאת וְאֵת ׀ שְׂעִיר הַֽחַטָּאת אֲשֶׁר הוּבָא אֶת־דָּמָם לְכַפֵּר בַּקֹּדֶשׁ יוֹצִיא אֶל־מִחוּץ לַֽמַּחֲנֶה וְשָׂרְפוּ בָאֵשׁ אֶת־עֹרֹתָם וְאֶת־בְּשָׂרָם וְאֶת־פִּרְשָֽׁם׃ | 27 |
೨೭ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.
וְהַשֹּׂרֵף אֹתָם יְכַבֵּס בְּגָדָיו וְרָחַץ אֶת־בְּשָׂרוֹ בַּמָּיִם וְאַחֲרֵי־כֵן יָבוֹא אֶל־הַֽמַּחֲנֶֽה׃ | 28 |
೨೮ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.
וְהָיְתָה לָכֶם לְחֻקַּת עוֹלָם בַּחֹדֶשׁ הַשְּׁבִיעִי בֶּֽעָשׂוֹר לַחֹדֶשׁ תְּעַנּוּ אֶת־נַפְשֹֽׁתֵיכֶם וְכׇל־מְלָאכָה לֹא תַעֲשׂוּ הָֽאֶזְרָח וְהַגֵּר הַגָּר בְּתוֹכְכֶֽם׃ | 29 |
೨೯“ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.
כִּֽי־בַיּוֹם הַזֶּה יְכַפֵּר עֲלֵיכֶם לְטַהֵר אֶתְכֶם מִכֹּל חַטֹּאתֵיכֶם לִפְנֵי יְהֹוָה תִּטְהָֽרוּ׃ | 30 |
೩೦ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.
שַׁבַּת שַׁבָּתוֹן הִיא לָכֶם וְעִנִּיתֶם אֶת־נַפְשֹׁתֵיכֶם חֻקַּת עוֹלָֽם׃ | 31 |
೩೧ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ.
וְכִפֶּר הַכֹּהֵן אֲשֶׁר־יִמְשַׁח אֹתוֹ וַאֲשֶׁר יְמַלֵּא אֶת־יָדוֹ לְכַהֵן תַּחַת אָבִיו וְלָבַשׁ אֶת־בִּגְדֵי הַבָּד בִּגְדֵי הַקֹּֽדֶשׁ׃ | 32 |
೩೨“ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.
וְכִפֶּר אֶת־מִקְדַּשׁ הַקֹּדֶשׁ וְאֶת־אֹהֶל מוֹעֵד וְאֶת־הַמִּזְבֵּחַ יְכַפֵּר וְעַל הַכֹּהֲנִים וְעַל־כׇּל־עַם הַקָּהָל יְכַפֵּֽר׃ | 33 |
೩೩ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
וְהָֽיְתָה־זֹּאת לָכֶם לְחֻקַּת עוֹלָם לְכַפֵּר עַל־בְּנֵי יִשְׂרָאֵל מִכׇּל־חַטֹּאתָם אַחַת בַּשָּׁנָה וַיַּעַשׂ כַּאֲשֶׁר צִוָּה יְהֹוָה אֶת־מֹשֶֽׁה׃ | 34 |
೩೪ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.