< 2 מְלָכִים 10 >
וּלְאַחְאָ֛ב שִׁבְעִ֥ים בָּנִ֖ים בְּשֹׁמְרֹ֑ון וַיִּכְתֹּב֩ יֵה֨וּא סְפָרִ֜ים וַיִּשְׁלַ֣ח שֹׁמְרֹ֗ון אֶל־שָׂרֵ֤י יִזְרְעֶאל֙ הַזְּקֵנִ֔ים וְאֶל־הָאֹמְנִ֥ים אַחְאָ֖ב לֵאמֹֽר׃ | 1 |
೧ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.
וְעַתָּ֗ה כְּבֹ֨א הַסֵּ֤פֶר הַזֶּה֙ אֲלֵיכֶ֔ם וְאִתְּכֶ֖ם בְּנֵ֣י אֲדֹנֵיכֶ֑ם וְאִתְּכֶם֙ הָרֶ֣כֶב וְהַסּוּסִ֔ים וְעִ֥יר מִבְצָ֖ר וְהַנָּֽשֶׁק׃ | 2 |
೨ಪತ್ರಗಳಲ್ಲಿ, “ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ.
וּרְאִיתֶ֞ם הַטֹּ֤וב וְהַיָּשָׁר֙ מִבְּנֵ֣י אֲדֹנֵיכֶ֔ם וְשַׂמְתֶּ֖ם עַל־כִּסֵּ֣א אָבִ֑יו וְהִֽלָּחֲמ֖וּ עַל־בֵּ֥ית אֲדֹנֵיכֶֽם׃ | 3 |
೩ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು.
וַיִּֽרְאוּ֙ מְאֹ֣ד מְאֹ֔ד וַיֹּ֣אמְר֔וּ הִנֵּה֙ שְׁנֵ֣י הַמְּלָכִ֔ים לֹ֥א עָמְד֖וּ לְפָנָ֑יו וְאֵ֖יךְ נַעֲמֹ֥ד אֲנָֽחְנוּ׃ | 4 |
೪ಅವರು ಬಹಳವಾಗಿ ಭಯಪಟ್ಟು, “ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?” ಅಂದುಕೊಂಡರು.
וַיִּשְׁלַ֣ח אֲשֶׁר־עַל־הַבַּ֣יִת וַאֲשֶׁ֪ר עַל־הָעִ֟יר וְהַזְּקֵנִים֩ וְהָאֹמְנִ֨ים אֶל־יֵה֤וּא ׀ לֵאמֹר֙ עֲבָדֶ֣יךָ אֲנַ֔חְנוּ וְכֹ֛ל אֲשֶׁר־תֹּאמַ֥ר אֵלֵ֖ינוּ נַעֲשֶׂ֑ה לֹֽא־נַמְלִ֣יךְ אִ֔ישׁ הַטֹּ֥וב בְּעֵינֶ֖יךָ עֲשֵֽׂה׃ | 5 |
೫ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು.
וַיִּכְתֹּ֣ב אֲלֵיהֶם֩ סֵ֨פֶר ׀ שֵׁנִ֜ית לֵאמֹ֗ר אִם־לִ֨י אַתֶּ֜ם וּלְקֹלִ֣י ׀ אַתֶּ֣ם שֹׁמְעִ֗ים קְחוּ֙ אֶת־רָאשֵׁי֙ אַנְשֵׁ֣י בְנֵֽי־אֲדֹנֵיכֶ֔ם וּבֹ֧אוּ אֵלַ֛י כָּעֵ֥ת מָחָ֖ר יִזְרְעֶ֑אלָה וּבְנֵ֤י הַמֶּ֙לֶךְ֙ שִׁבְעִ֣ים אִ֔ישׁ אֶת־גְּדֹלֵ֥י הָעִ֖יר מְגַדְּלִ֥ים אֹותָֽם׃ | 6 |
೬ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.
וַיְהִ֗י כְּבֹ֤א הַסֵּ֙פֶר֙ אֲלֵיהֶ֔ם וַיִּקְחוּ֙ אֶת־בְּנֵ֣י הַמֶּ֔לֶךְ וַֽיִּשְׁחֲט֖וּ שִׁבְעִ֣ים אִ֑ישׁ וַיָּשִׂ֤ימוּ אֶת־רָֽאשֵׁיהֶם֙ בַּדּוּדִ֔ים וַיִּשְׁלְח֥וּ אֵלָ֖יו יִזְרְעֶֽאלָה׃ | 7 |
೭ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.
וַיָּבֹ֤א הַמַּלְאָךְ֙ וַיַּגֶּד־לֹ֣ו לֵאמֹ֔ר הֵבִ֖יאוּ רָאשֵׁ֣י בְנֵֽי־הַמֶּ֑לֶךְ וַיֹּ֗אמֶר שִׂ֣ימוּ אֹתָ֞ם שְׁנֵ֧י צִבֻּרִ֛ים פֶּ֥תַח הַשַּׁ֖עַר עַד־הַבֹּֽקֶר׃ | 8 |
೮ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ” ಎಂದು ಆಜ್ಞಾಪಿಸಿದನು.
וַיְהִ֤י בַבֹּ֙קֶר֙ וַיֵּצֵ֣א וַֽיַּעֲמֹ֔ד וַיֹּ֙אמֶר֙ אֶל־כָּל־הָעָ֔ם צַדִּקִ֖ים אַתֶּ֑ם הִנֵּ֨ה אֲנִ֜י קָשַׁ֤רְתִּי עַל־אֲדֹנִי֙ וָאֶהְרְגֵ֔הוּ וּמִ֥י הִכָּ֖ה אֶת־כָּל־אֵֽלֶּה׃ | 9 |
೯ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?
דְּע֣וּ אֵפֹ֗וא כִּי֩ לֹ֨א יִפֹּ֜ל מִדְּבַ֤ר יְהוָה֙ אַ֔רְצָה אֲשֶׁר־דִּבֶּ֥ר יְהוָ֖ה עַל־בֵּ֣ית אַחְאָ֑ב וַיהוָ֣ה עָשָׂ֔ה אֵ֚ת אֲשֶׁ֣ר דִּבֶּ֔ר בְּיַ֖ד עַבְדֹּ֥ו אֵלִיָּֽהוּ׃ | 10 |
೧೦ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು.
וַיַּ֣ךְ יֵה֗וּא אֵ֣ת כָּל־הַנִּשְׁאָרִ֤ים לְבֵית־אַחְאָב֙ בְּיִזְרְעֶ֔אל וְכָל־גְּדֹלָ֖יו וּמְיֻדָּעָ֣יו וְכֹהֲנָ֑יו עַד־בִּלְתִּ֥י הִשְׁאִֽיר־לֹ֖ו שָׂרִֽיד׃ | 11 |
೧೧ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.
וַיָּ֙קָם֙ וַיָּבֹ֔א וַיֵּ֖לֶךְ שֹׁמְרֹ֑ון ה֛וּא בֵּֽית־עֵ֥קֶד הָרֹעִ֖ים בַּדָּֽרֶךְ׃ | 12 |
೧೨ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,
וְיֵה֗וּא מָצָא֙ אֶת־אֲחֵי֙ אֲחַזְיָ֣הוּ מֶֽלֶךְ־יְהוּדָ֔ה וַיֹּ֖אמֶר מִ֣י אַתֶּ֑ם וַיֹּאמְר֗וּ אֲחֵ֤י אֲחַזְיָ֙הוּ֙ אֲנַ֔חְנוּ וַנֵּ֛רֶד לִשְׁלֹ֥ום בְּנֵֽי־הַמֶּ֖לֶךְ וּבְנֵ֥י הַגְּבִירָֽה׃ | 13 |
೧೩ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.
וַיֹּ֙אמֶר֙ תִּפְשׂ֣וּם חַיִּ֔ים וַֽיִּתְפְּשׂ֖וּם חַיִּ֑ים וַֽיִּשְׁחָט֞וּם אֶל־בֹּ֣ור בֵּֽית־עֵ֗קֶד אַרְבָּעִ֤ים וּשְׁנַ֙יִם֙ אִ֔ישׁ וְלֹֽא־הִשְׁאִ֥יר אִ֖ישׁ מֵהֶֽם׃ ס | 14 |
೧೪ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.
וַיֵּ֣לֶךְ מִשָּׁ֡ם וַיִּמְצָ֣א אֶת־יְהֹונָדָב֩ בֶּן־רֵכָ֨ב לִקְרָאתֹ֜ו וַֽיְבָרְכֵ֗הוּ וַיֹּ֨אמֶר אֵלָ֜יו הֲיֵ֧שׁ אֶת־לְבָבְךָ֣ יָשָׁ֗ר כַּאֲשֶׁ֤ר לְבָבִי֙ עִם־לְבָבֶ֔ךָ וַיֹּ֨אמֶר יְהֹונָדָ֥ב יֵ֛שׁ וָיֵ֖שׁ תְּנָ֣ה אֶת־יָדֶ֑ךָ וַיִּתֵּ֣ן יָדֹ֔ו וַיַּעֲלֵ֥הוּ אֵלָ֖יו אֶל־הַמֶּרְכָּבָֽה׃ | 15 |
೧೫ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
וַיֹּ֙אמֶר֙ לְכָ֣ה אִתִּ֔י וּרְאֵ֖ה בְּקִנְאָתִ֣י לַיהוָ֑ה וַיַּרְכִּ֥בוּ אֹתֹ֖ו בְּרִכְבֹּֽו׃ | 16 |
೧೬ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.
וַיָּבֹא֙ שֹֽׁמְרֹ֔ון וַ֠יַּךְ אֶת־כָּל־הַנִּשְׁאָרִ֧ים לְאַחְאָ֛ב בְּשֹׁמְרֹ֖ון עַד־הִשְׁמִידֹ֑ו כִּדְבַ֣ר יְהוָ֔ה אֲשֶׁ֥ר דִּבֶּ֖ר אֶל־אֵלִיָּֽהוּ׃ פ | 17 |
೧೭ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
וַיִּקְבֹּ֤ץ יֵהוּא֙ אֶת־כָּל־הָעָ֔ם וַיֹּ֣אמֶר אֲלֵהֶ֔ם אַחְאָ֕ב עָבַ֥ד אֶת־הַבַּ֖עַל מְעָ֑ט יֵה֖וּא יַעַבְדֶ֥נּוּ הַרְבֵּֽה׃ | 18 |
೧೮ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.
וְעַתָּ֣ה כָל־נְבִיאֵ֣י הַבַּ֡עַל כָּל־עֹבְדָ֣יו וְכָל־כֹּהֲנָיו֩ קִרְא֨וּ אֵלַ֜י אִ֣ישׁ אַל־יִפָּקֵ֗ד כִּי֩ זֶ֨בַח גָּדֹ֥ול לִי֙ לַבַּ֔עַל כֹּ֥ל אֲשֶׁר־יִפָּקֵ֖ד לֹ֣א יִֽחְיֶ֑ה וְיֵהוּא֙ עָשָׂ֣ה בְעָקְבָּ֔ה לְמַ֥עַן הַאֲבִ֖יד אֶת־עֹבְדֵ֥י הַבָּֽעַל׃ | 19 |
೧೯ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.
וַיֹּ֣אמֶר יֵה֗וּא קַדְּשׁ֧וּ עֲצָרָ֛ה לַבַּ֖עַל וַיִּקְרָֽאוּ׃ | 20 |
೨೦ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.
וַיִּשְׁלַ֤ח יֵהוּא֙ בְּכָל־יִשְׂרָאֵ֔ל וַיָּבֹ֙אוּ֙ כָּל־עֹבְדֵ֣י הַבַּ֔עַל וְלֹֽא־נִשְׁאַ֥ר אִ֖ישׁ אֲשֶׁ֣ר לֹֽא־בָ֑א וַיָּבֹ֙אוּ֙ בֵּ֣ית הַבַּ֔עַל וַיִּמָּלֵ֥א בֵית־הַבַּ֖עַל פֶּ֥ה לָפֶֽה׃ | 21 |
೨೧ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು.
וַיֹּ֗אמֶר לַֽאֲשֶׁר֙ עַל־הַמֶּלְתָּחָ֔ה הֹוצֵ֣א לְב֔וּשׁ לְכֹ֖ל עֹבְדֵ֣י הַבָּ֑עַל וַיֹּצֵ֥א לָהֶ֖ם הַמַּלְבּֽוּשׁ׃ | 22 |
೨೨ಯೇಹುವು ವಸ್ತ್ರಗಾರದ ಅಧಿಪತಿಗೆ, “ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು” ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು.
וַיָּבֹ֥א יֵה֛וּא וִיהֹונָדָ֥ב בֶּן־רֵכָ֖ב בֵּ֣ית הַבָּ֑עַל וַיֹּ֜אמֶר לְעֹבְדֵ֣י הַבַּ֗עַל חַפְּשׂ֤וּ וּרְאוּ֙ פֶּן־יֶשׁ־פֹּ֤ה עִמָּכֶם֙ מֵעַבְדֵ֣י יְהוָ֔ה כִּ֛י אִם־עֹבְדֵ֥י הַבַּ֖עַל לְבַדָּֽם׃ | 23 |
೨೩ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು.
וַיָּבֹ֕אוּ לַעֲשֹׂ֖ות זְבָחִ֣ים וְעֹלֹ֑ות וְיֵה֞וּא שָׂם־לֹ֤ו בַחוּץ֙ שְׁמֹנִ֣ים אִ֔ישׁ וַיֹּ֗אמֶר הָאִ֤ישׁ אֲשֶׁר־יִמָּלֵט֙ מִן־הָאֲנָשִׁ֗ים אֲשֶׁ֤ר אֲנִי֙ מֵבִ֣יא עַל־יְדֵיכֶ֔ם נַפְשֹׁ֖ו תַּ֥חַת נַפְשֹֽׁו׃ | 24 |
೨೪ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು” ಎಂಬುದಾಗಿ ಆಜ್ಞಾಪಿಸಿದ್ದನು.
וַיְהִ֞י כְּכַלֹּתֹ֣ו ׀ לַעֲשֹׂ֣ות הָעֹלָ֗ה וַיֹּ֣אמֶר יֵ֠הוּא לָרָצִ֨ים וְלַשָּׁלִשִׁ֜ים בֹּ֤אוּ הַכּוּם֙ אִ֣ישׁ אַל־יֵצֵ֔א וַיַּכּ֖וּם לְפִי־חָ֑רֶב וַיַּשְׁלִ֗כוּ הָֽרָצִים֙ וְהַשָּׁ֣לִשִׁ֔ים וַיֵּלְכ֖וּ עַד־עִ֥יר בֵּית־הַבָּֽעַל׃ | 25 |
೨೫ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.
וַיֹּצִ֛אוּ אֶת־מַצְּבֹ֥ות בֵּית־הַבַּ֖עַל וַֽיִּשְׂרְפֽוּהָ׃ | 26 |
೨೬ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.
וַֽיִּתְּצ֔וּ אֵ֖ת מַצְּבַ֣ת הַבָּ֑עַל וַֽיִּתְּצוּ֙ אֶת־בֵּ֣ית הַבַּ֔עַל וַיְשִׂמֻ֥הוּ לְמַחֲרָאֹות (לְמֹֽוצָאֹ֖ות) עַד־הַיֹּֽום׃ | 27 |
೨೭ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.
וַיַּשְׁמֵ֥ד יֵה֛וּא אֶת־הַבַּ֖עַל מִיִּשְׂרָאֵֽל׃ | 28 |
೨೮ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳ್ ದೇವತೆಯ ಪೂಜೆಯನ್ನು ನಿಲ್ಲಿಸಿದನು.
רַ֠ק חֲטָאֵ֞י יָרָבְעָ֤ם בֶּן־נְבָט֙ אֲשֶׁ֣ר הֶחֱטִ֣יא אֶת־יִשְׂרָאֵ֔ל לֹֽא־סָ֥ר יֵה֖וּא מֵאַֽחֲרֵיהֶ֑ם עֶגְלֵי֙ הַזָּהָ֔ב אֲשֶׁ֥ר בֵּֽית־אֵ֖ל וַאֲשֶׁ֥ר בְּדָֽן׃ ס | 29 |
೨೯ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
וַיֹּ֨אמֶר יְהוָ֜ה אֶל־יֵה֗וּא יַ֤עַן אֲשֶׁר־הֱטִיבֹ֙תָ֙ לַעֲשֹׂ֤ות הַיָּשָׁר֙ בְּעֵינַ֔י כְּכֹל֙ אֲשֶׁ֣ר בִּלְבָבִ֔י עָשִׂ֖יתָ לְבֵ֣ית אַחְאָ֑ב בְּנֵ֣י רְבִעִ֔ים יֵשְׁב֥וּ לְךָ֖ עַל־כִּסֵּ֥א יִשְׂרָאֵֽל׃ | 30 |
೩೦ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.
וְיֵה֗וּא לֹ֥א שָׁמַ֛ר לָלֶ֛כֶת בְּתֹֽורַת־יְהוָ֥ה אֱלֹהֵֽי־יִשְׂרָאֵ֖ל בְּכָל־לְבָבֹ֑ו לֹ֣א סָ֗ר מֵעַל֙ חַטֹּ֣אות יָֽרָבְעָ֔ם אֲשֶׁ֥ר הֶחֱטִ֖יא אֶת־יִשְׂרָאֵֽל׃ | 31 |
೩೧ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
בַּיָּמִ֣ים הָהֵ֔ם הֵחֵ֣ל יְהוָ֔ה לְקַצֹּ֖ות בְּיִשְׂרָאֵ֑ל וַיַּכֵּ֥ם חֲזָאֵ֖ל בְּכָל־גְּב֥וּל יִשְׂרָאֵֽל׃ | 32 |
೩೨ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.
מִן־הַיַּרְדֵּן֙ מִזְרַ֣ח הַשֶּׁ֔מֶשׁ אֵ֚ת כָּל־אֶ֣רֶץ הַגִּלְעָ֔ד הַגָּדִ֥י וְהָרֻאובֵנִ֖י וְהַֽמְנַשִּׁ֑י מֵעֲרֹעֵר֙ אֲשֶׁ֣ר עַל־נַ֣חַל אַרְנֹ֔ן וְהַגִּלְעָ֖ד וְהַבָּשָֽׁן׃ | 33 |
೩೩ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.
וְיֶ֨תֶר דִּבְרֵ֥י יֵה֛וּא וְכָל־אֲשֶׁ֥ר עָשָׂ֖ה וְכָל־גְּבוּרָתֹ֑ו הֲלֹֽוא־הֵ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יִשְׂרָאֵֽל׃ | 34 |
೩೪ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
וַיִּשְׁכַּ֤ב יֵהוּא֙ עִם־אֲבֹתָ֔יו וַיִּקְבְּר֥וּ אֹתֹ֖ו בְּשֹׁמְרֹ֑ון וַיִּמְלֹ֛ךְ יְהֹואָחָ֥ז בְּנֹ֖ו תַּחְתָּֽיו׃ | 35 |
೩೫ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.
וְהַיָּמִ֗ים אֲשֶׁ֨ר מָלַ֤ךְ יֵהוּא֙ עַל־יִשְׂרָאֵ֔ל עֶשְׂרִ֥ים וּשְׁמֹנֶֽה־שָׁנָ֖ה בְּשֹׁמְרֹֽון׃ פ | 36 |
೩೬ಯೇಹುವು ಸಮಾರ್ಯ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೆಂಟು ವರ್ಷಗಳ ಕಾಲ ಆಳಿದನು.