< חַגַּי 2 >
בַּשְּׁבִיעִ֕י בְּעֶשְׂרִ֥ים וְאֶחָ֖ד לַחֹ֑דֶשׁ הָיָה֙ דְּבַר־יְהוָ֔ה בְּיַד־חַגַּ֥י הַנָּבִ֖יא לֵאמֹֽר׃ | 1 |
೧ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು,
אֱמָר־נָ֗א אֶל־זְרֻבָּבֶ֤ל בֶּן־שַׁלְתִּיאֵל֙ פַּחַ֣ת יְהוּדָ֔ה וְאֶל־יְהֹושֻׁ֥עַ בֶּן־יְהֹוצָדָ֖ק הַכֹּהֵ֣ן הַגָּדֹ֑ול וְאֶל־שְׁאֵרִ֥ית הָעָ֖ם לֵאמֹֽר׃ | 2 |
೨“ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
מִ֤י בָכֶם֙ הַנִּשְׁאָ֔ר אֲשֶׁ֤ר רָאָה֙ אֶת־הַבַּ֣יִת הַזֶּ֔ה בִּכְבֹודֹ֖ו הָרִאשֹׁ֑ון וּמָ֨ה אַתֶּ֜ם רֹאִ֤ים אֹתֹו֙ עַ֔תָּה הֲלֹ֥וא כָמֹ֛הוּ כְּאַ֖יִן בְּעֵינֵיכֶֽם׃ | 3 |
೩‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’
וְעַתָּ֣ה חֲזַ֣ק זְרֻבָּבֶ֣ל ׀ נְאֻם־יְהוָ֡ה וַחֲזַ֣ק יְהֹושֻׁ֣עַ בֶּן־יְהֹוצָדָק֩ הַכֹּהֵ֨ן הַגָּדֹ֜ול וַחֲזַ֨ק כָּל־עַ֥ם הָאָ֛רֶץ נְאֻם־יְהוָ֖ה וַֽעֲשׂ֑וּ כִּֽי־אֲנִ֣י אִתְּכֶ֔ם נְאֻ֖ם יְהוָ֥ה צְבָאֹֽות׃ | 4 |
೪ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
אֶֽת־הַדָּבָ֞ר אֲשֶׁר־כָּרַ֤תִּי אִתְּכֶם֙ בְּצֵאתְכֶ֣ם מִמִּצְרַ֔יִם וְרוּחִ֖י עֹמֶ֣דֶת בְּתֹוכְכֶ֑ם אַל־תִּירָֽאוּ׃ ס | 5 |
೫‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
כִּ֣י כֹ֤ה אָמַר֙ יְהוָ֣ה צְבָאֹ֔ות עֹ֥וד אַחַ֖ת מְעַ֣ט הִ֑יא וַאֲנִ֗י מַרְעִישׁ֙ אֶת־הַשָּׁמַ֣יִם וְאֶת־הָאָ֔רֶץ וְאֶת־הַיָּ֖ם וְאֶת־הֶחָרָבָֽה׃ | 6 |
೬ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
וְהִרְעַשְׁתִּי֙ אֶת־כָּל־הַגֹּויִ֔ם וּבָ֖אוּ חֶמְדַּ֣ת כָּל־הַגֹּויִ֑ם וּמִלֵּאתִ֞י אֶת־הַבַּ֤יִת הַזֶּה֙ כָּבֹ֔וד אָמַ֖ר יְהוָ֥ה צְבָאֹֽות׃ | 7 |
೭ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
לִ֥י הַכֶּ֖סֶף וְלִ֣י הַזָּהָ֑ב נְאֻ֖ם יְהוָ֥ה צְבָאֹֽות׃ | 8 |
೮‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
גָּדֹ֣ול יִֽהְיֶ֡ה כְּבֹוד֩ הַבַּ֨יִת הַזֶּ֤ה הָאַֽחֲרֹון֙ מִן־הָ֣רִאשֹׁ֔ון אָמַ֖ר יְהוָ֣ה צְבָאֹ֑ות וּבַמָּקֹ֤ום הַזֶּה֙ אֶתֵּ֣ן שָׁלֹ֔ום נְאֻ֖ם יְהוָ֥ה צְבָאֹֽות׃ פ | 9 |
೯‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
בְּעֶשְׂרִ֤ים וְאַרְבָּעָה֙ לַתְּשִׁיעִ֔י בִּשְׁנַ֥ת שְׁתַּ֖יִם לְדָרְיָ֑וֶשׁ הָיָה֙ דְּבַר־יְהוָ֔ה אֶל־חַגַּ֥י הַנָּבִ֖יא לֵאמֹֽר׃ | 10 |
೧೦ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.
כֹּ֥ה אָמַ֖ר יְהוָ֣ה צְבָאֹ֑ות שְׁאַל־נָ֧א אֶת־הַכֹּהֲנִ֛ים תֹּורָ֖ה לֵאמֹֽר׃ | 11 |
೧೧ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,
הֵ֣ן ׀ יִשָּׂא־אִ֨ישׁ בְּשַׂר־קֹ֜דֶשׁ בִּכְנַ֣ף בִּגְדֹ֗ו וְנָגַ֣ע בִּ֠כְנָפֹו אֶל־הַלֶּ֨חֶם וְאֶל־הַנָּזִ֜יד וְאֶל־הַיַּ֧יִן וְאֶל־שֶׁ֛מֶן וְאֶל־כָּל־מַאֲכָ֖ל הֲיִקְדָּ֑שׁ וַיַּעֲנ֧וּ הַכֹּהֲנִ֛ים וַיֹּאמְר֖וּ לֹֽא׃ | 12 |
೧೨ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
וַיֹּ֣אמֶר חַגַּ֔י אִם־יִגַּ֧ע טְמֵא־נֶ֛פֶשׁ בְּכָל־אֵ֖לֶּה הֲיִטְמָ֑א וַיַּעֲנ֧וּ הַכֹּהֲנִ֛ים וַיֹּאמְר֖וּ יִטְמָֽא׃ | 13 |
೧೩ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.
וַיַּ֨עַן חַגַּ֜י וַיֹּ֗אמֶר כֵּ֣ן הָֽעָם־הַ֠זֶּה וְכֵן־הַגֹּ֨וי הַזֶּ֤ה לְפָנַי֙ נְאֻם־יְהוָ֔ה וְכֵ֖ן כָּל־מַעֲשֵׂ֣ה יְדֵיהֶ֑ם וַאֲשֶׁ֥ר יַקְרִ֛יבוּ שָׁ֖ם טָמֵ֥א הֽוּא׃ | 14 |
೧೪ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
וְעַתָּה֙ שִֽׂימוּ־נָ֣א לְבַבְכֶ֔ם מִן־הַיֹּ֥ום הַזֶּ֖ה וָמָ֑עְלָה מִטֶּ֧רֶם שֽׂוּם־אֶ֛בֶן אֶל־אֶ֖בֶן בְּהֵיכַ֥ל יְהוָֽה׃ | 15 |
೧೫“ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;
מִֽהְיֹותָ֥ם בָּא֙ אֶל־עֲרֵמַ֣ת עֶשְׂרִ֔ים וְהָיְתָ֖ה עֲשָׂרָ֑ה בָּ֣א אֶל־הַיֶּ֗קֶב לַחְשֹׂף֙ חֲמִשִּׁ֣ים פּוּרָ֔ה וְהָיְתָ֖ה עֶשְׂרִֽים׃ | 16 |
೧೬ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.
הִכֵּ֨יתִי אֶתְכֶ֜ם בַּשִּׁדָּפֹ֤ון וּבַיֵּֽרָקֹון֙ וּבַבָּרָ֔ד אֵ֖ת כָּל־מַעֲשֵׂ֣ה יְדֵיכֶ֑ם וְאֵין־אֶתְכֶ֥ם אֵלַ֖י נְאֻם־יְהוָֽה׃ | 17 |
೧೭ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
שִׂימוּ־נָ֣א לְבַבְכֶ֔ם מִן־הַיֹּ֥ום הַזֶּ֖ה וָמָ֑עְלָה מִיֹּום֩ עֶשְׂרִ֨ים וְאַרְבָּעָ֜ה לַתְּשִׁיעִ֗י לְמִן־הַיֹּ֛ום אֲשֶׁר־יֻסַּ֥ד הֵֽיכַל־יְהוָ֖ה שִׂ֥ימוּ לְבַבְכֶֽם׃ | 18 |
೧೮“ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
הַעֹ֤וד הַזֶּ֙רַע֙ בַּמְּגוּרָ֔ה וְעַד־הַגֶּ֨פֶן וְהַתְּאֵנָ֧ה וְהָרִמֹּ֛ון וְעֵ֥ץ הַזַּ֖יִת לֹ֣א נָשָׂ֑א מִן־הַיֹּ֥ום הַזֶּ֖ה אֲבָרֵֽךְ׃ ס | 19 |
೧೯ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
וַיְהִ֨י דְבַר־יְהוָ֤ה ׀ שֵׁנִית֙ אֶל־חַגַּ֔י בְּעֶשְׂרִ֧ים וְאַרְבָּעָ֛ה לַחֹ֖דֶשׁ לֵאמֹֽר׃ | 20 |
೨೦ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,
אֱמֹ֕ר אֶל־זְרֻבָּבֶ֥ל פַּֽחַת־יְהוּדָ֖ה לֵאמֹ֑ר אֲנִ֣י מַרְעִ֔ישׁ אֶת־הַשָּׁמַ֖יִם וְאֶת־הָאָֽרֶץ׃ | 21 |
೨೧“ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
וְהָֽפַכְתִּי֙ כִּסֵּ֣א מַמְלָכֹ֔ות וְהִ֨שְׁמַדְתִּ֔י חֹ֖זֶק מַמְלְכֹ֣ות הַגֹּויִ֑ם וְהָפַכְתִּ֤י מֶרְכָּבָה֙ וְרֹ֣כְבֶ֔יהָ וְיָרְד֤וּ סוּסִים֙ וְרֹ֣כְבֵיהֶ֔ם אִ֖ישׁ בְּחֶ֥רֶב אָחִֽיו׃ | 22 |
೨೨ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”
בַּיֹּ֣ום הַה֣וּא נְאֻם־יְהוָ֣ה צְבָאֹ֡ות אֶ֠קָּחֲךָ זְרֻבָּבֶ֨ל בֶּן־שְׁאַלְתִּיאֵ֤ל עַבְדִּי֙ נְאֻם־יְהוָ֔ה וְשַׂמְתִּ֖יךָ כַּֽחֹותָ֑ם כִּֽי־בְךָ֣ בָחַ֔רְתִּי נְאֻ֖ם יְהוָ֥ה צְבָאֹֽות׃ | 23 |
೨೩ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.