< אִיּוֹב 28 >

כִּ֤י יֵ֣שׁ לַכֶּ֣סֶף מֹוצָ֑א וּ֝מָקֹ֗ום לַזָּהָ֥ב יָזֹֽקּוּ׃ 1
ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.
בַּ֭רְזֶל מֵעָפָ֣ר יֻקָּ֑ח וְ֝אֶ֗בֶן יָצ֥וּק נְחוּשָֽׁה׃ 2
ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ.
קֵ֤ץ ׀ שָׂ֤ם לַחֹ֗שֶׁךְ וּֽלְכָל־תַּ֭כְלִית ה֣וּא חֹוקֵ֑ר אֶ֖בֶן אֹ֣פֶל וְצַלְמָֽוֶת׃ 3
ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ.
פָּ֤רַץ נַ֨חַל ׀ מֵֽעִם־גָּ֗ר הַֽנִּשְׁכָּחִ֥ים מִנִּי־רָ֑גֶל דַּ֖לּוּ מֵאֱנֹ֣ושׁ נָֽעוּ׃ 4
ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ.
אֶ֗רֶץ מִמֶּ֥נָּה יֵֽצֵא־לָ֑חֶם וְ֝תַחְתֶּ֗יהָ נֶהְפַּ֥ךְ כְּמֹו־אֵֽשׁ׃ 5
ಭೂಮಿ ಆಹಾರವನ್ನು ಕೊಡುತ್ತದೆ; ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು.
מְקֹום־סַפִּ֥יר אֲבָנֶ֑יהָ וְעַפְרֹ֖ת זָהָ֣ב לֹֽו׃ 6
ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ.
נָ֭תִיב לֹֽא־יְדָ֣עֹו עָ֑יִט וְלֹ֥א שְׁ֝זָפַ֗תּוּ עֵ֣ין אַיָּֽה׃ 7
ಆ ದಾರಿ ಯಾವ ಪಕ್ಷಿಗೂ ತಿಳಿಯದು; ಹದ್ದಿನ ಕಣ್ಣು ಸಹ ಅದನ್ನು ಕಂಡಿಲ್ಲ.
לֹֽא־הִדְרִיכֻ֥הוּ בְנֵי־שָׁ֑חַץ לֹֽא־עָדָ֖ה עָלָ֣יו שָֽׁחַל׃ 8
ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; ಸಿಂಹವು ಅದನ್ನು ದಾಟಲಿಲ್ಲ.
בַּֽ֭חַלָּמִישׁ שָׁלַ֣ח יָדֹ֑ו הָפַ֖ךְ מִשֹּׁ֣רֶשׁ הָרִֽים׃ 9
ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ; ಪರ್ವತಗಳ ಬುಡಗಳನ್ನು ಸಹ ಬರಿದಾಗಿ ಮಾಡುತ್ತವೆ.
בַּ֭צּוּרֹות יְאֹרִ֣ים בִּקֵּ֑עַ וְכָל־יְ֝קָ֗ר רָאֲתָ֥ה עֵינֹֽו׃ 10
ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ.
מִ֭בְּכִי נְהָרֹ֣ות חִבֵּ֑שׁ וְ֝תַעֲלֻמָ֗הּ יֹ֣צִא אֹֽור׃ פ 11
ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ.
וְֽ֭הַחָכְמָה מֵאַ֣יִן תִּמָּצֵ֑א וְאֵ֥י זֶ֝ה מְקֹ֣ום בִּינָֽה׃ 12
ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
לֹא־יָדַ֣ע אֱנֹ֣ושׁ עֶרְכָּ֑הּ וְלֹ֥א תִ֝מָּצֵ֗א בְּאֶ֣רֶץ הֽ͏ַחַיִּֽים׃ 13
ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
תְּהֹ֣ום אָ֭מַר לֹ֣א בִי־הִ֑יא וְיָ֥ם אָ֝מַ֗ר אֵ֣ין עִמָּדִֽי׃ 14
ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ.
לֹא־יֻתַּ֣ן סְגֹ֣ור תַּחְתֶּ֑יהָ וְלֹ֥א יִ֝שָּׁקֵ֗ל כֶּ֣סֶף מְחִירָֽהּ׃ 15
ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು.
לֹֽא־תְ֭סֻלֶּה בְּכֶ֣תֶם אֹופִ֑יר בְּשֹׁ֖הַם יָקָ֣ר וְסַפִּֽיר׃ 16
ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.
לֹא־יַעַרְכֶ֣נָּה זָ֭הָב וּזְכֹוכִ֑ית וּתְמ֖וּרָתָ֣הּ כְּלִי־פָֽז׃ 17
ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ.
רָאמֹ֣ות וְ֭גָבִישׁ לֹ֣א יִזָּכֵ֑ר וּמֶ֥שֶׁךְ חָ֝כְמָ֗ה מִפְּנִינִֽים׃ 18
ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!
לֹֽא־יַ֭עַרְכֶנָּה פִּטְדַת־כּ֑וּשׁ בְּכֶ֥תֶם טָ֝הֹ֗ור לֹ֣א תְסֻלֶּֽה׃ פ 19
ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು.
וְֽ֭הַחָכְמָה מֵאַ֣יִן תָּבֹ֑וא וְאֵ֥י זֶ֝֗ה מְקֹ֣ום בִּינָֽה׃ 20
ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ?
וְֽ֭נֶעֶלְמָה מֵעֵינֵ֣י כָל־חָ֑י וּמֵעֹ֖וף הַשָּׁמַ֣יִם נִסְתָּֽרָה׃ 21
ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.
אֲבַדֹּ֣ון וָ֭מָוֶת אָ֣מְר֑וּ בְּ֝אָזְנֵ֗ינוּ שָׁמַ֥עְנוּ שִׁמְעָֽהּ׃ 22
ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ.
אֱ֭לֹהִים הֵבִ֣ין דַּרְכָּ֑הּ וְ֝ה֗וּא יָדַ֥ע אֶת־מְקֹומָֽהּ׃ 23
ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.
כִּי־ה֖וּא לִקְצֹות־הָאָ֣רֶץ יַבִּ֑יט תַּ֖חַת כָּל־הַשָּׁמַ֣יִם יִרְאֶֽה׃ 24
ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ, ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವರಾಗಿದ್ದಾರೆ.
לַעֲשֹׂ֣ות לָר֣וּחַ מִשְׁקָ֑ל וּ֝מַ֗יִם תִּכֵּ֥ן בְּמִדָּֽה׃ 25
ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ,
בַּעֲשׂתֹ֣ו לַמָּטָ֣ר חֹ֑ק וְ֝דֶ֗רֶךְ לַחֲזִ֥יז קֹלֹֽות׃ 26
ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ
אָ֣ז רָ֭אָהּ וַֽיְסַפְּרָ֑הּ הֱ֝כִינָ֗הּ וְגַם־חֲקָרָֽהּ׃ 27
ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು.
וַיֹּ֤אמֶר ׀ לָֽאָדָ֗ם הֵ֤ן יִרְאַ֣ת אֲ֭דֹנָי הִ֣יא חָכְמָ֑ה וְס֖וּר מֵרָ֣ע בִּינָֽה׃ ס 28
ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.

< אִיּוֹב 28 >