< 1 שְׁמוּאֵל 11 >
וַיַּ֗עַל נָחָשׁ֙ הָֽעַמּוֹנִ֔י וַיִּ֖חַן עַל־יָבֵ֣שׁ גִּלְעָ֑ד וַיֹּ֨אמְר֜וּ כָּל־אַנְשֵׁ֤י יָבֵישׁ֙ אֶל־נָחָ֔שׁ כְּרָת־לָ֥נוּ בְרִ֖ית וְנַעַבְדֶֽךָּ׃ | 1 |
೧ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
וַיֹּ֣אמֶר אֲלֵיהֶ֗ם נָחָשׁ֙ הָעַמּוֹנִ֔י בְּזֹאת֙ אֶכְרֹ֣ת לָכֶ֔ם בִּנְק֥וֹר לָכֶ֖ם כָּל־עֵ֣ין יָמִ֑ין וְשַׂמְתִּ֥יהָ חֶרְפָּ֖ה עַל־כָּל־יִשְׂרָאֵֽל׃ | 2 |
೨ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.
וַיֹּאמְר֨וּ אֵלָ֜יו זִקְנֵ֣י יָבֵ֗ישׁ הֶ֤רֶף לָ֙נוּ֙ שִׁבְעַ֣ת יָמִ֔ים וְנִשְׁלְחָה֙ מַלְאָכִ֔ים בְּכֹ֖ל גְּב֣וּל יִשְׂרָאֵ֑ל וְאִם־אֵ֥ין מוֹשִׁ֛יעַ אֹתָ֖נוּ וְיָצָ֥אנוּ אֵלֶֽיךָ׃ | 3 |
೩ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
וַיָּבֹ֤אוּ הַמַּלְאָכִים֙ גִּבְעַ֣ת שָׁא֔וּל וַיְדַבְּר֥וּ הַדְּבָרִ֖ים בְּאָזְנֵ֣י הָעָ֑ם וַיִּשְׂא֧וּ כָל־הָעָ֛ם אֶת־קוֹלָ֖ם וַיִּבְכּֽוּ׃ | 4 |
೪ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
וְהִנֵּ֣ה שָׁא֗וּל בָּ֣א אַחֲרֵ֤י הַבָּקָר֙ מִן־הַשָּׂדֶ֔ה וַיֹּ֣אמֶר שָׁא֔וּל מַה־לָּעָ֖ם כִּ֣י יִבְכּ֑וּ וַיְסַ֨פְּרוּ־ל֔וֹ אֶת־דִּבְרֵ֖י אַנְשֵׁ֥י יָבֵֽישׁ׃ | 5 |
೫ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
וַתִּצְלַ֤ח רֽוּחַ־אֱלֹהִים֙ עַל־שָׁא֔וּל כְּשָׁמְע֖וֹ אֶת־הַדְּבָרִ֣ים הָאֵ֑לֶּה וַיִּ֥חַר אַפּ֖וֹ מְאֹֽד׃ | 6 |
೬ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
וַיִּקַּח֩ צֶ֨מֶד בָּקָ֜ר וַֽיְנַתְּחֵ֗הוּ וַיְשַׁלַּ֞ח בְּכָל־גְּב֣וּל יִשְׂרָאֵל֮ בְּיַ֣ד הַמַּלְאָכִ֣ים ׀ לֵאמֹר֒ אֲשֶׁר֩ אֵינֶ֨נּוּ יֹצֵ֜א אַחֲרֵ֤י שָׁאוּל֙ וְאַחַ֣ר שְׁמוּאֵ֔ל כֹּ֥ה יֵעָשֶׂ֖ה לִבְקָר֑וֹ וַיִּפֹּ֤ל פַּֽחַד־יְהוָה֙ עַל־הָעָ֔ם וַיֵּצְא֖וּ כְּאִ֥ישׁ אֶחָֽד׃ | 7 |
೭ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.
וַֽיִּפְקְדֵ֖ם בְּבָ֑זֶק וַיִּהְי֤וּ בְנֵֽי־יִשְׂרָאֵל֙ שְׁלֹ֣שׁ מֵא֣וֹת אֶ֔לֶף וְאִ֥ישׁ יְהוּדָ֖ה שְׁלֹשִׁ֥ים אָֽלֶף׃ | 8 |
೮ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
וַיֹּאמְר֞וּ לַמַּלְאָכִ֣ים הַבָּאִ֗ים כֹּ֤ה תֹֽאמְרוּן֙ לְאִישׁ֙ יָבֵ֣ישׁ גִּלְעָ֔ד מָחָ֛ר תִּהְיֶֽה־לָכֶ֥ם תְּשׁוּעָ֖ה כְּחֹ֣ם הַשָּׁ֑מֶשׁ וַיָּבֹ֣אוּ הַמַּלְאָכִ֗ים וַיַּגִּ֛ידוּ לְאַנְשֵׁ֥י יָבֵ֖ישׁ וַיִּשְׂמָֽחוּ׃ | 9 |
೯ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
וַֽיֹּאמְרוּ֙ אַנְשֵׁ֣י יָבֵ֔ישׁ מָחָ֖ר נֵצֵ֣א אֲלֵיכֶ֑ם וַעֲשִׂיתֶ֣ם לָּ֔נוּ כְּכָל־הַטּ֖וֹב בְּעֵינֵיכֶֽם׃ ס | 10 |
೧೦ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
וַיְהִ֣י מִֽמָּחֳרָ֗ת וַיָּ֨שֶׂם שָׁא֣וּל אֶת־הָעָם֮ שְׁלֹשָׁ֣ה רָאשִׁים֒ וַיָּבֹ֤אוּ בְתוֹךְ־הַֽמַּחֲנֶה֙ בְּאַשְׁמֹ֣רֶת הַבֹּ֔קֶר וַיַּכּ֥וּ אֶת־עַמּ֖וֹן עַד־חֹ֣ם הַיּ֑וֹם וַיְהִ֤י הַנִּשְׁאָרִים֙ וַיָּפֻ֔צוּ וְלֹ֥א נִשְׁאֲרוּ־בָ֖ם שְׁנַ֥יִם יָֽחַד׃ | 11 |
೧೧ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
וַיֹּ֤אמֶר הָעָם֙ אֶל־שְׁמוּאֵ֔ל מִ֣י הָאֹמֵ֔ר שָׁא֖וּל יִמְלֹ֣ךְ עָלֵ֑ינוּ תְּנ֥וּ הָאֲנָשִׁ֖ים וּנְמִיתֵֽם׃ | 12 |
೧೨ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
וַיֹּ֣אמֶר שָׁא֔וּל לֹֽא־יוּמַ֥ת אִ֖ישׁ בַּיּ֣וֹם הַזֶּ֑ה כִּ֥י הַיּ֛וֹם עָשָֽׂה־יְהוָ֥ה תְּשׁוּעָ֖ה בְּיִשְׂרָאֵֽל׃ ס | 13 |
೧೩ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
וַיֹּ֤אמֶר שְׁמוּאֵל֙ אֶל־הָעָ֔ם לְכ֖וּ וְנֵלְכָ֣ה הַגִּלְגָּ֑ל וּנְחַדֵּ֥שׁ שָׁ֖ם הַמְּלוּכָֽה׃ | 14 |
೧೪ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು
וַיֵּלְכ֨וּ כָל־הָעָ֜ם הַגִּלְגָּ֗ל וַיַּמְלִכוּ֩ שָׁ֨ם אֶת־שָׁא֜וּל לִפְנֵ֤י יְהוָה֙ בַּגִּלְגָּ֔ל וַיִּזְבְּחוּ־שָׁ֛ם זְבָחִ֥ים שְׁלָמִ֖ים לִפְנֵ֣י יְהוָ֑ה וַיִּשְׂמַ֨ח שָׁ֥ם שָׁא֛וּל וְכָל־אַנְשֵׁ֥י יִשְׂרָאֵ֖ל עַד־מְאֹֽד׃ פ | 15 |
೧೫ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.