< 2 מְלָכִים 7 >
וַיֹּ֣אמֶר אֱלִישָׁ֔ע שִׁמְע֖וּ דְּבַר־יְהוָ֑ה כֹּ֣ה ׀ אָמַ֣ר יְהוָ֗ה כָּעֵ֤ת ׀ מָחָר֙ סְאָֽה־סֹ֣לֶת בְּשֶׁ֗קֶל וְסָאתַ֧יִם שְׂעֹרִ֛ים בְּשֶׁ֖קֶל בְּשַׁ֥עַר שֹׁמְרֽוֹן׃ | 1 |
೧ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.
וַיַּ֣עַן הַשָּׁלִ֡ישׁ אֲשֶׁר־לַמֶּלֶךְ֩ נִשְׁעָ֨ן עַל־יָד֜וֹ אֶת־אִ֣ישׁ הָאֱלֹהִים֮ וַיֹּאמַר֒ הִנֵּ֣ה יְהוָ֗ה עֹשֶׂ֤ה אֲרֻבּוֹת֙ בַּשָּׁמַ֔יִם הֲיִהְיֶ֖ה הַדָּבָ֣ר הַזֶּ֑ה וַיֹּ֗אמֶר הִנְּכָ֤ה רֹאֶה֙ בְּעֵינֶ֔יךָ וּמִשָּׁ֖ם לֹ֥א תֹאכֵֽל׃ ס | 2 |
೨ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.
וְאַרְבָּעָ֧ה אֲנָשִׁ֛ים הָי֥וּ מְצֹרָעִ֖ים פֶּ֣תַח הַשָּׁ֑עַר וַיֹּֽאמְרוּ֙ אִ֣ישׁ אֶל־רֵעֵ֔הוּ מָ֗ה אֲנַ֛חְנוּ יֹשְׁבִ֥ים פֹּ֖ה עַד־מָֽתְנוּ׃ | 3 |
೩ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?
אִם־אָמַרְנוּ֩ נָב֨וֹא הָעִ֜יר וְהָרָעָ֤ב בָּעִיר֙ וָמַ֣תְנוּ שָׁ֔ם וְאִם־יָשַׁ֥בְנוּ פֹ֖ה וָמָ֑תְנוּ וְעַתָּ֗ה לְכוּ֙ וְנִפְּלָה֙ אֶל־מַחֲנֵ֣ה אֲרָ֔ם אִם־יְחַיֻּ֣נוּ נִֽחְיֶ֔ה וְאִם־יְמִיתֻ֖נוּ וָמָֽתְנוּ׃ | 4 |
೪ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.
וַיָּק֣וּמוּ בַנֶּ֔שֶׁף לָב֖וֹא אֶל־מַחֲנֵ֣ה אֲרָ֑ם וַיָּבֹ֗אוּ עַד־קְצֵה֙ מַחֲנֵ֣ה אֲרָ֔ם וְהִנֵּ֥ה אֵֽין־שָׁ֖ם אִֽישׁ׃ | 5 |
೫ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.
וַאדֹנָ֞י הִשְׁמִ֣יעַ ׀ אֶת־מַחֲנֵ֣ה אֲרָ֗ם ק֥וֹל רֶ֙כֶב֙ ק֣וֹל ס֔וּס ק֖וֹל חַ֣יִל גָּד֑וֹל וַיֹּאמְר֞וּ אִ֣ישׁ אֶל־אָחִ֗יו הִנֵּ֣ה שָֽׂכַר־עָלֵינוּ֩ מֶ֨לֶךְ יִשְׂרָאֵ֜ל אֶת־מַלְכֵ֧י הַחִתִּ֛ים וְאֶת־מַלְכֵ֥י מִצְרַ֖יִם לָב֥וֹא עָלֵֽינוּ׃ | 6 |
೬ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
וַיָּקוּמוּ֮ וַיָּנ֣וּסוּ בַנֶּשֶׁף֒ וַיַּעַזְב֣וּ אֶת־אָהֳלֵיהֶ֗ם וְאֶת־סֽוּסֵיהֶם֙ וְאֶת־חֲמֹ֣רֵיהֶ֔ם הַֽמַּחֲנֶ֖ה כַּאֲשֶׁר־הִ֑יא וַיָּנֻ֖סוּ אֶל־נַפְשָֽׁם׃ | 7 |
೭ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.
וַיָּבֹאוּ֩ הַֽמְצֹרָעִ֨ים הָאֵ֜לֶּה עַד־קְצֵ֣ה הַֽמַּחֲנֶ֗ה וַיָּבֹ֜אוּ אֶל־אֹ֤הֶל אֶחָד֙ וַיֹּאכְל֣וּ וַיִּשְׁתּ֔וּ וַיִּשְׂא֣וּ מִשָּׁ֗ם כֶּ֤סֶף וְזָהָב֙ וּבְגָדִ֔ים וַיֵּלְכ֖וּ וַיַּטְמִ֑נוּ וַיָּשֻׁ֗בוּ וַיָּבֹ֙אוּ֙ אֶל־אֹ֣הֶל אַחֵ֔ר וַיִּשְׂא֣וּ מִשָּׁ֔ם וַיֵּלְכ֖וּ וַיַּטְמִֽנוּ׃ | 8 |
೮ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.
וַיֹּאמְרוּ֩ אִ֨ישׁ אֶל־רֵעֵ֜הוּ לֹֽא־כֵ֣ן ׀ אֲנַ֣חְנוּ עֹשִׂ֗ים הַיּ֤וֹם הַזֶּה֙ יוֹם־בְּשֹׂרָ֣ה ה֔וּא וַאֲנַ֣חְנוּ מַחְשִׁ֗ים וְחִכִּ֛ינוּ עַד־א֥וֹר הַבֹּ֖קֶר וּמְצָאָ֣נוּ עָו֑וֹן וְעַתָּה֙ לְכ֣וּ וְנָבֹ֔אָה וְנַגִּ֖ידָה בֵּ֥ית הַמֶּֽלֶךְ׃ | 9 |
೯ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.
וַיָּבֹ֗אוּ וַֽיִּקְרְאוּ֮ אֶל־שֹׁעֵ֣ר הָעִיר֒ וַיַּגִּ֤ידוּ לָהֶם֙ לֵאמֹ֔ר בָּ֚אנוּ אֶל־מַחֲנֵ֣ה אֲרָ֔ם וְהִנֵּ֥ה אֵֽין־שָׁ֛ם אִ֖ישׁ וְק֣וֹל אָדָ֑ם כִּ֣י אִם־הַסּ֤וּס אָסוּר֙ וְהַחֲמ֣וֹר אָס֔וּר וְאֹהָלִ֖ים כַּאֲשֶׁר־הֵֽמָּה׃ | 10 |
೧೦ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.
וַיִּקְרָ֖א הַשֹּֽׁעֲרִ֑ים וַיַּגִּ֕ידוּ בֵּ֥ית הַמֶּ֖לֶךְ פְּנִֽימָה׃ | 11 |
೧೧ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು.
וַיָּ֨קָם הַמֶּ֜לֶךְ לַ֗יְלָה וַיֹּ֙אמֶר֙ אֶל־עֲבָדָ֔יו אַגִּֽידָה־נָּ֣א לָכֶ֔ם אֵ֛ת אֲשֶׁר־עָ֥שׂוּ לָ֖נוּ אֲרָ֑ם יָדְע֞וּ כִּי־רְעֵבִ֣ים אֲנַ֗חְנוּ וַיֵּצְא֤וּ מִן־הַֽמַּחֲנֶה֙ לְהֵחָבֵ֤ה בַשָּׂדֶה֙ לֵאמֹ֔ר כִּֽי־יֵצְא֤וּ מִן־הָעִיר֙ וְנִתְפְּשֵׂ֣ם חַיִּ֔ים וְאֶל־הָעִ֖יר נָבֹֽא׃ | 12 |
೧೨ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ” ಎಂದನು.
וַיַּעַן֩ אֶחָ֨ד מֵעֲבָדָ֜יו וַיֹּ֗אמֶר וְיִקְחוּ־נָ֞א חֲמִשָּׁ֣ה מִן־הַסּוּסִים֮ הַֽנִּשְׁאָרִים֮ אֲשֶׁ֣ר נִשְׁאֲרוּ־בָהּ֒ הִנָּ֗ם כְּכָל־הֲמ֤וֹן יִשְׂרָאֵל֙ אֲשֶׁ֣ר נִשְׁאֲרוּ־בָ֔הּ הִנָּ֕ם כְּכָל־הֲמ֥וֹן יִשְׂרָאֵ֖ל אֲשֶׁר־תָּ֑מּוּ וְנִשְׁלְחָ֖ה וְנִרְאֶֽה׃ | 13 |
೧೩ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.
וַיִּקְח֕וּ שְׁנֵ֖י רֶ֣כֶב סוּסִ֑ים וַיִּשְׁלַ֨ח הַמֶּ֜לֶךְ אַחֲרֵ֧י מַחֲנֵֽה־אֲרָ֛ם לֵאמֹ֖ר לְכ֥וּ וּרְאֽוּ׃ | 14 |
೧೪ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.
וַיֵּלְכ֣וּ אַחֲרֵיהֶם֮ עַד־הַיַּרְדֵּן֒ וְהִנֵּ֣ה כָל־הַדֶּ֗רֶךְ מְלֵאָ֤ה בְגָדִים֙ וְכֵלִ֔ים אֲשֶׁר־הִשְׁלִ֥יכוּ אֲרָ֖ם בְּחָפְזָ֑ם וַיָּשֻׁ֙בוּ֙ הַמַּלְאָכִ֔ים וַיַּגִּ֖דוּ לַמֶּֽלֶךְ׃ | 15 |
೧೫ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
וַיֵּצֵ֣א הָעָ֔ם וַיָּבֹ֕זּוּ אֵ֖ת מַחֲנֵ֣ה אֲרָ֑ם וַיְהִ֨י סְאָה־סֹ֜לֶת בְּשֶׁ֗קֶל וְסָאתַ֧יִם שְׂעֹרִ֛ים בְּשֶׁ֖קֶל כִּדְבַ֥ר יְהוָֽה׃ | 16 |
೧೬ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.
וְהַמֶּלֶךְ֩ הִפְקִ֨יד אֶת־הַשָּׁלִ֜ישׁ אֲשֶׁר־נִשְׁעָ֤ן עַל־יָדוֹ֙ עַל־הַשַּׁ֔עַר וַיִּרְמְסֻ֧הוּ הָעָ֛ם בַּשַּׁ֖עַר וַיָּמֹ֑ת כַּאֲשֶׁ֤ר דִּבֶּר֙ אִ֣ישׁ הָאֱלֹהִ֔ים אֲשֶׁ֣ר דִּבֶּ֔ר בְּרֶ֥דֶת הַמֶּ֖לֶךְ אֵלָֽיו׃ | 17 |
೧೭ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
וַיְהִ֗י כְּדַבֵּר֙ אִ֣ישׁ הָאֱלֹהִ֔ים אֶל־הַמֶּ֖לֶךְ לֵאמֹ֑ר סָאתַ֨יִם שְׂעֹרִ֜ים בְּשֶׁ֗קֶל וּֽסְאָה־סֹ֙לֶת֙ בְּשֶׁ֔קֶל יִהְיֶה֙ כָּעֵ֣ת מָחָ֔ר בְּשַׁ֖עַר שֹׁמְרֽוֹן׃ | 18 |
೧೮ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು.
וַיַּ֨עַן הַשָּׁלִ֜ישׁ אֶת־אִ֣ישׁ הָאֱלֹהִים֮ וַיֹּאמַר֒ וְהִנֵּ֣ה יְהוָ֗ה עֹשֶׂ֤ה אֲרֻבּוֹת֙ בַּשָּׁמַ֔יִם הֲיִהְיֶ֖ה כַּדָּבָ֣ר הַזֶּ֑ה וַיֹּ֗אמֶר הִנְּךָ֤ רֹאֶה֙ בְּעֵינֶ֔יךָ וּמִשָּׁ֖ם לֹ֥א תֹאכֵֽל׃ | 19 |
೧೯ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು.
וַיְהִי־ל֖וֹ כֵּ֑ן וַיִּרְמְס֨וּ אֹת֥וֹ הָעָ֛ם בַּשַּׁ֖עַר וַיָּמֹֽת׃ ס | 20 |
೨೦ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.