< דָּנִיֵּאל 2 >

וּבִשְׁנַ֣ת שְׁתַּ֗יִם לְמַלְכוּת֙ נְבֻֽכַדְנֶצַּ֔ר חָלַ֥ם נְבֻֽכַדְנֶצַּ֖ר חֲלֹמ֑וֹת וַתִּתְפָּ֣עֶם רוּח֔וֹ וּשְׁנָת֖וֹ נִהְיְתָ֥ה עָלָֽיו׃ 1
ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.
וַיֹּ֣אמֶר הַ֠מֶּלֶךְ לִקְרֹ֨א לַֽחַרְטֻמִּ֜ים וְלָֽאַשָּׁפִ֗ים וְלַֽמְכַשְּׁפִים֙ וְלַכַּשְׂדִּ֔ים לְהַגִּ֥יד לַמֶּ֖לֶךְ חֲלֹמֹתָ֑יו וַיָּבֹ֕אוּ וַיַּֽעַמְד֖וּ לִפְנֵ֥י הַמֶּֽלֶךְ׃ 2
ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.
וַיֹּ֧אמֶר לָהֶ֛ם הַמֶּ֖לֶךְ חֲל֣וֹם חָלָ֑מְתִּי וַתִּפָּ֣עֶם רוּחִ֔י לָדַ֖עַת אֶֽת־הַחֲלֽוֹם׃ 3
ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.
וַֽיְדַבְּר֧וּ הַכַּשְׂדִּ֛ים לַמֶּ֖לֶךְ אֲרָמִ֑ית מַלְכָּא֙ לְעָלְמִ֣ין חֱיִ֔י אֱמַ֥ר חֶלְמָ֛א לְעַבְדָ֖ךְ וּפִשְׁרָ֥א נְחַוֵּֽא׃ 4
ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.
עָנֵ֤ה מַלְכָּא֙ וְאָמַ֣ר לְכַשְׂדָּאֵ֔י מִלְּתָ֖א מִנִּ֣י אַזְדָּ֑א הֵ֣ן לָ֤א תְהֽוֹדְעוּנַּ֙נִי֙ חֶלְמָ֣א וּפִשְׁרֵ֔הּ הַדָּמִין֙ תִּתְעַבְד֔וּן וּבָתֵּיכ֖וֹן נְוָלִ֥י יִתְּשָׂמֽוּן׃ 5
ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.
וְהֵ֨ן חֶלְמָ֤א וּפִשְׁרֵהּ֙ תְּֽהַחֲוֹ֔ן מַתְּנָ֤ן וּנְבִזְבָּה֙ וִיקָ֣ר שַׂגִּ֔יא תְּקַבְּל֖וּן מִן־קֳדָמָ֑י לָהֵ֕ן חֶלְמָ֥א וּפִשְׁרֵ֖הּ הַחֲוֹֽנִי׃ 6
ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.
עֲנ֥וֹ תִנְיָנ֖וּת וְאָמְרִ֑ין מַלְכָּ֕א חֶלְמָ֛א יֵאמַ֥ר לְעַבְד֖וֹהִי וּפִשְׁרָ֥ה נְהַחֲוֵֽה׃ 7
ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು.
עָנֵ֤ה מַלְכָּא֙ וְאָמַ֔ר מִן־יַצִּיב֙ יָדַ֣ע אֲנָ֔ה דִּ֥י עִדָּנָ֖א אַנְתּ֣וּן זָבְנִ֑ין כָּל־קֳבֵל֙ דִּ֣י חֲזֵית֔וֹן דִּ֥י אַזְדָּ֖א מִנִּ֥י מִלְּתָֽא׃ 8
ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು.
דִּ֣י הֵן־חֶלְמָא֩ לָ֨א תְהֽוֹדְעֻנַּ֜נִי חֲדָה־הִ֣יא דָֽתְכ֗וֹן וּמִלָּ֨ה כִדְבָ֤ה וּשְׁחִיתָה֙ הִזְדְּמִנְתּוּן֙ לְמֵאמַ֣ר קָֽדָמַ֔י עַ֛ד דִּ֥י עִדָּנָ֖א יִשְׁתַּנֵּ֑א לָהֵ֗ן חֶלְמָא֙ אֱמַ֣רוּ לִ֔י וְֽאִנְדַּ֕ע דִּ֥י פִשְׁרֵ֖הּ תְּהַחֲוֻנַּֽנִי׃ 9
ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.
עֲנ֨וֹ כַשְׂדָּאֵ֤י קֳדָם־מַלְכָּא֙ וְאָ֣מְרִ֔ין לָֽא־אִיתַ֤י אֲנָשׁ֙ עַל־יַבֶּשְׁתָּ֔א דִּ֚י מִלַּ֣ת מַלְכָּ֔א יוּכַ֖ל לְהַחֲוָיָ֑ה כָּל־קֳבֵ֗ל דִּ֚י כָּל־מֶ֙לֶךְ֙ רַ֣ב וְשַׁלִּ֔יט מִלָּ֤ה כִדְנָה֙ לָ֣א שְׁאֵ֔ל לְכָל־חַרְטֹּ֖ם וְאָשַׁ֥ף וְכַשְׂדָּֽי׃ 10
೧೦ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.
וּמִלְּתָ֨א דִֽי־מַלְכָּ֤ה שָׁאֵל֙ יַקִּירָ֔ה וְאָחֳרָן֙ לָ֣א אִיתַ֔י דִּ֥י יְחַוִּנַּ֖הּ קֳדָ֣ם מַלְכָּ֑א לָהֵ֣ן אֱלָהִ֔ין דִּ֚י מְדָ֣רְה֔וֹן עִם־בִּשְׂרָ֖א לָ֥א אִיתֽוֹהִי׃ 11
೧೧ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.
כָּל־קֳבֵ֣ל דְּנָ֔ה מַלְכָּ֕א בְּנַ֖ס וּקְצַ֣ף שַׂגִּ֑יא וַאֲמַר֙ לְה֣וֹבָדָ֔ה לְכֹ֖ל חַכִּימֵ֥י בָבֶֽל׃ 12
೧೨ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.
וְדָתָ֣א נֶפְקַ֔ת וְחַכִּֽימַיָּ֖א מִֽתְקַטְּלִ֑ין וּבְע֛וֹ דָּנִיֵּ֥אל וְחַבְר֖וֹהִי לְהִתְקְטָלָֽה׃ פ 13
೧೩ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.
בֵּאדַ֣יִן דָּנִיֵּ֗אל הֲתִיב֙ עֵטָ֣א וּטְעֵ֔ם לְאַרְי֕וֹךְ רַב־טַבָּחַיָּ֖א דִּ֣י מַלְכָּ֑א דִּ֚י נְפַ֣ק לְקַטָּלָ֔ה לְחַכִּימֵ֖י בָּבֶֽל׃ 14
೧೪ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,
עָנֵ֣ה וְאָמַ֗ר לְאַרְיוֹךְ֙ שַׁלִּיטָ֣א דִֽי־מַלְכָּ֔א עַל־מָ֥ה דָתָ֛א מְהַחְצְפָ֖ה מִן־קֳדָ֣ם מַלְכָּ֑א אֱדַ֣יִן מִלְּתָ֔א הוֹדַ֥ע אַרְי֖וֹךְ לְדָנִיֵּֽאל׃ 15
೧೫“ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.
וְדָ֣נִיֵּ֔אל עַ֖ל וּבְעָ֣ה מִן־מַלְכָּ֑א דִּ֚י זְמָ֣ן יִנְתֵּן־לֵ֔הּ וּפִשְׁרָ֖א לְהַֽחֲוָיָ֥ה לְמַלְכָּֽא׃ פ 16
೧೬ಆ ಮೇಲೆ ದಾನಿಯೇಲನು ಅರಮನೆಗೆ ಬಂದು, “ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು” ಎಂದು ಅರಿಕೆ ಮಾಡಿದನು.
אֱדַ֥יִן דָּֽנִיֵּ֖אל לְבַיְתֵ֣הּ אֲזַ֑ל וְ֠לַחֲנַנְיָה מִֽישָׁאֵ֧ל וַעֲזַרְיָ֛ה חַבְר֖וֹהִי מִלְּתָ֥א הוֹדַֽע׃ 17
೧೭ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,
וְרַחֲמִ֗ין לְמִבְעֵא֙ מִן־קֳדָם֙ אֱלָ֣הּ שְׁמַיָּ֔א עַל־רָזָ֖ה דְּנָ֑ה דִּ֣י לָ֤א יְהֹֽבְדוּן֙ דָּנִיֵּ֣אל וְחַבְר֔וֹהִי עִם־שְׁאָ֖ר חַכִּימֵ֥י בָבֶֽל׃ 18
೧೮“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.
אֱדַ֗יִן לְדָנִיֵּ֛אל בְּחֶזְוָ֥א דִֽי־לֵילְיָ֖א רָזָ֣ה גֲלִ֑י אֱדַ֙יִן֙ דָּֽנִיֵּ֔אל בָּרִ֖ךְ לֶאֱלָ֥הּ שְׁמַיָּֽא׃ 19
೧೯ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,
עָנֵ֤ה דָֽנִיֵּאל֙ וְאָמַ֔ר לֶהֱוֵ֨א שְׁמֵ֤הּ דִּֽי־אֱלָהָא֙ מְבָרַ֔ךְ מִן־עָלְמָ֖א וְעַ֣ד־עָלְמָ֑א דִּ֧י חָכְמְתָ֛א וּגְבוּרְתָ֖א דִּ֥י לֵֽהּ־הִֽיא׃ 20
೨೦“ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ.
וְ֠הוּא מְהַשְׁנֵ֤א עִדָּנַיָּא֙ וְזִמְנַיָּ֔א מְהַעְדֵּ֥ה מַלְכִ֖ין וּמְהָקֵ֣ים מַלְכִ֑ין יָהֵ֤ב חָכְמְתָא֙ לְחַכִּימִ֔ין וּמַנְדְּעָ֖א לְיָדְעֵ֥י בִינָֽה׃ 21
೨೧ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
ה֛וּא גָּלֵ֥א עַמִּיקָתָ֖א וּמְסַתְּרָתָ֑א יָדַע֙ מָ֣ה בַחֲשׁוֹכָ֔א וּנְהוֹרָ֖א עִמֵּ֥הּ שְׁרֵֽא׃ 22
೨೨ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.
לָ֣ךְ ׀ אֱלָ֣הּ אֲבָהָתִ֗י מְהוֹדֵ֤א וּמְשַׁבַּח֙ אֲנָ֔ה דִּ֧י חָכְמְתָ֛א וּגְבוּרְתָ֖א יְהַ֣בְתְּ לִ֑י וּכְעַ֤ן הֽוֹדַעְתַּ֙נִי֙ דִּֽי־בְעֵ֣ינָא מִנָּ֔ךְ דִּֽי־מִלַּ֥ת מַלְכָּ֖א הוֹדַעְתֶּֽנָא׃ 23
೨೩ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.
כָּל־קֳבֵ֣ל דְּנָ֗ה דָּֽנִיֵּאל֙ עַ֣ל עַל־אַרְי֔וֹךְ דִּ֚י מַנִּ֣י מַלְכָּ֔א לְהוֹבָדָ֖ה לְחַכִּימֵ֣י בָבֶ֑ל אֲזַ֣ל ׀ וְכֵ֣ן אֲמַר־לֵ֗הּ לְחַכִּימֵ֤י בָבֶל֙ אַל־תְּהוֹבֵ֔ד הַעֵ֙לְנִי֙ קֳדָ֣ם מַלְכָּ֔א וּפִשְׁרָ֖א לְמַלְכָּ֥א אֲחַוֵּֽא׃ ס 24
೨೪ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.
אֱדַ֤יִן אַרְיוֹךְ֙ בְּהִתְבְּהָלָ֔ה הַנְעֵ֥ל לְדָנִיֵּ֖אל קֳדָ֣ם מַלְכָּ֑א וְכֵ֣ן אֲמַר־לֵ֗הּ דִּֽי־הַשְׁכַּ֤חַת גְּבַר֙ מִן־בְּנֵ֤י גָֽלוּתָא֙ דִּ֣י יְה֔וּד דִּ֥י פִשְׁרָ֖א לְמַלְכָּ֥א יְהוֹדַֽע׃ 25
೨೫ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು.
עָנֵ֤ה מַלְכָּא֙ וְאָמַ֣ר לְדָנִיֵּ֔אל דִּ֥י שְׁמֵ֖הּ בֵּלְטְשַׁאצַּ֑ר הַֽאִיתָ֣ךְ כָּהֵ֗ל לְהוֹדָעֻתַ֛נִי חֶלְמָ֥א דִֽי־חֲזֵ֖ית וּפִשְׁרֵֽהּ׃ 26
೨೬ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು.
עָנֵ֧ה דָנִיֵּ֛אל קֳדָ֥ם מַלְכָּ֖א וְאָמַ֑ר רָזָה֙ דִּֽי־מַלְכָּ֣א שָׁאֵ֔ל לָ֧א חַכִּימִ֣ין אָֽשְׁפִ֗ין חַרְטֻמִּין֙ גָּזְרִ֔ין יָכְלִ֖ין לְהַֽחֲוָיָ֥ה לְמַלְכָּֽא׃ 27
೨೭ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.
בְּרַ֡ם אִיתַ֞י אֱלָ֤הּ בִּשְׁמַיָּא֙ גָּלֵ֣א רָזִ֔ין וְהוֹדַ֗ע לְמַלְכָּא֙ נְבֽוּכַדְנֶצַּ֔ר מָ֛ה דִּ֥י לֶהֱוֵ֖א בְּאַחֲרִ֣ית יוֹמַיָּ֑א חֶלְמָ֨ךְ וְחֶזְוֵ֥י רֵאשָׁ֛ךְ עַֽל־מִשְׁכְּבָ֖ךְ דְּנָ֥ה הֽוּא׃ פ 28
೨೮ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
אַ֣נְתְּ מַלְכָּ֗א רַעְיוֹנָךְ֙ עַל־מִשְׁכְּבָ֣ךְ סְלִ֔קוּ מָ֛ה דִּ֥י לֶהֱוֵ֖א אַחֲרֵ֣י דְנָ֑ה וְגָלֵ֧א רָזַיָּ֛א הוֹדְעָ֖ךְ מָה־דִ֥י לֶהֱוֵֽא׃ 29
೨೯“ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.
וַאֲנָ֗ה לָ֤א בְחָכְמָה֙ דִּֽי־אִיתַ֥י בִּי֙ מִן־כָּל־חַיַּיָּ֔א רָזָ֥א דְנָ֖ה גֱּלִ֣י לִ֑י לָהֵ֗ן עַל־דִּבְרַת֙ דִּ֤י פִשְׁרָא֙ לְמַלְכָּ֣א יְהוֹדְע֔וּן וְרַעְיוֹנֵ֥י לִבְבָ֖ךְ תִּנְדַּֽע׃ 30
೩೦ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.
אַ֣נְתְּ מַלְכָּ֗א חָזֵ֤ה הֲוַ֙יְתָ֙ וַאֲל֨וּ צְלֵ֥ם חַד֙ שַׂגִּ֔יא צַלְמָ֨א דִּכֵּ֥ן רַ֛ב וְזִיוֵ֥הּ יַתִּ֖יר קָאֵ֣ם לְקָבְלָ֑ךְ וְרֵוֵ֖הּ דְּחִֽיל׃ 31
೩೧“ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.
ה֣וּא צַלְמָ֗א רֵאשֵׁהּ֙ דִּֽי־דְהַ֣ב טָ֔ב חֲד֥וֹהִי וּדְרָע֖וֹהִי דִּ֣י כְסַ֑ף מְע֥וֹהִי וְיַרְכָתֵ֖הּ דִּ֥י נְחָֽשׁ׃ 32
೩೨ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,
שָׁק֖וֹהִי דִּ֣י פַרְזֶ֑ל רַגְל֕וֹהִי מִנְּהֵין֙ דִּ֣י פַרְזֶ֔ל וּמִנְּהֵ֖ין דִּ֥י חֲסַֽף׃ 33
೩೩ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು.
חָזֵ֣ה הֲוַ֗יְתָ עַ֠ד דִּ֣י הִתְגְּזֶ֤רֶת אֶ֙בֶן֙ דִּי־לָ֣א בִידַ֔יִן וּמְחָ֤ת לְצַלְמָא֙ עַל־רַגְל֔וֹהִי דִּ֥י פַרְזְלָ֖א וְחַסְפָּ֑א וְהַדֵּ֖קֶת הִמּֽוֹן׃ 34
೩೪“ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.
בֵּאדַ֣יִן דָּ֣קוּ כַחֲדָ֡ה פַּרְזְלָא֩ חַסְפָּ֨א נְחָשָׁ֜א כַּסְפָּ֣א וְדַהֲבָ֗א וַהֲווֹ֙ כְּע֣וּר מִן־אִדְּרֵי־קַ֔יִט וּנְשָׂ֤א הִמּוֹן֙ רוּחָ֔א וְכָל־אֲתַ֖ר לָא־הִשְׁתֲּכַ֣ח לְה֑וֹן וְאַבְנָ֣א ׀ דִּֽי־מְחָ֣ת לְצַלְמָ֗א הֲוָ֛ת לְט֥וּר רַ֖ב וּמְלָ֥ת כָּל־אַרְעָֽא׃ 35
೩೫ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.
דְּנָ֣ה חֶלְמָ֔א וּפִשְׁרֵ֖הּ נֵאמַ֥ר קֳדָם־מַלְכָּֽא׃ 36
೩೬“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.
אַ֣נְתְּ מַלְכָּ֔א מֶ֖לֶךְ מַלְכַיָּ֑א דִּ֚י אֱלָ֣הּ שְׁמַיָּ֔א מַלְכוּתָ֥א חִסְנָ֛א וְתָקְפָּ֥א וִֽיקָרָ֖א יְהַב־לָֽךְ׃ 37
೩೭ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.
וּבְכָל־דִּ֣י דָֽיְרִ֣ין בְּֽנֵי־אֲ֠נָשָׁא חֵיוַ֨ת בָּרָ֤א וְעוֹף־שְׁמַיָּא֙ יְהַ֣ב בִּידָ֔ךְ וְהַשְׁלְטָ֖ךְ בְּכָלְּה֑וֹן אַנְתְּ ה֔וּא רֵאשָׁ֖ה דִּ֥י דַהֲבָֽא׃ 38
೩೮ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.
וּבָתְרָ֗ךְ תְּק֛וּם מַלְכ֥וּ אָחֳרִ֖י אֲרַ֣עא מִנָּ֑ךְ וּמַלְכ֨וּ תְלִיתָאָ֤ה אָחֳרִי֙ דִּ֣י נְחָשָׁ֔א דִּ֥י תִשְׁלַ֖ט בְּכָל־אַרְעָֽא׃ 39
೩೯“ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.
וּמַלְכוּ֙ רְבִ֣יעָאָ֔ה תֶּהֱוֵ֥א תַקִּיפָ֖ה כְּפַרְזְלָ֑א כָּל־קֳבֵ֗ל דִּ֤י פַרְזְלָא֙ מְהַדֵּ֤ק וְחָשֵׁל֙ כֹּ֔לָּא וּֽכְפַרְזְלָ֛א דִּֽי־מְרָעַ֥ע כָּל־אִלֵּ֖ין תַּדִּ֥ק וְתֵרֹֽעַ׃ 40
೪೦“ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.
וְדִֽי־חֲזַ֜יְתָה רַגְלַיָּ֣א וְאֶצְבְּעָתָ֗א מִנְּהֵ֞ן חֲסַ֤ף דִּֽי־פֶחָר֙ וּמִנְּהֵ֣ין פַּרְזֶ֔ל מַלְכ֤וּ פְלִיגָה֙ תֶּהֱוֵ֔ה וּמִן־נִצְבְּתָ֥א דִ֥י פַרְזְלָ֖א לֶֽהֱוֵא־בַ֑הּ כָּל־קֳבֵל֙ דִּ֣י חֲזַ֔יְתָה פַּ֨רְזְלָ֔א מְעָרַ֖ב בַּחֲסַ֥ף טִינָֽא׃ 41
೪೧“ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.
וְאֶצְבְּעָת֙ רַגְלַיָּ֔א מִנְּהֵ֥ין פַּרְזֶ֖ל וּמִנְּהֵ֣ין חֲסַ֑ף מִן־קְצָ֤ת מַלְכוּתָא֙ תֶּהֱוֵ֣ה תַקִּיפָ֔ה וּמִנַּ֖הּ תֶּהֱוֵ֥ה תְבִירָֽה׃ 42
೪೨ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು.
וְדִ֣י חֲזַ֗יְתָ פַּרְזְלָא֙ מְעָרַב֙ בַּחֲסַ֣ף טִינָ֔א מִתְעָרְבִ֤ין לֶהֱוֹן֙ בִּזְרַ֣ע אֲנָשָׁ֔א וְלָֽא־לֶהֱוֹ֥ן דָּבְקִ֖ין דְּנָ֣ה עִם־דְּנָ֑ה הֵֽא־כְדִ֣י פַרְזְלָ֔א לָ֥א מִתְעָרַ֖ב עִם־חַסְפָּֽא׃ 43
೪೩ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ.
וּֽבְיוֹמֵיה֞וֹן דִּ֧י מַלְכַיָּ֣א אִנּ֗וּן יְקִים֩ אֱלָ֨הּ שְׁמַיָּ֤א מַלְכוּ֙ דִּ֤י לְעָלְמִין֙ לָ֣א תִתְחַבַּ֔ל וּמַ֨לְכוּתָ֔ה לְעַ֥ם אָחֳרָ֖ן לָ֣א תִשְׁתְּבִ֑ק תַּדִּ֤ק וְתָסֵיף֙ כָּל־אִלֵּ֣ין מַלְכְוָתָ֔א וְהִ֖יא תְּק֥וּם לְעָלְמַיָּֽא׃ 44
೪೪“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
כָּל־קֳבֵ֣ל דִּֽי־חֲזַ֡יְתָ דִּ֣י מִטּוּרָא֩ אִתְגְּזֶ֨רֶת אֶ֜בֶן דִּי־לָ֣א בִידַ֗יִן וְ֠הַדֶּקֶת פַּרְזְלָ֨א נְחָשָׁ֤א חַסְפָּא֙ כַּסְפָּ֣א וְדַהֲבָ֔א אֱלָ֥הּ רַב֙ הוֹדַ֣ע לְמַלְכָּ֔א מָ֛ה דִּ֥י לֶהֱוֵ֖א אַחֲרֵ֣י דְנָ֑ה וְיַצִּ֥יב חֶלְמָ֖א וּמְהֵימַ֥ן פִּשְׁרֵֽהּ׃ פ 45
೪೫ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
בֵּ֠אדַיִן מַלְכָּ֤א נְבֽוּכַדְנֶצַּר֙ נְפַ֣ל עַל־אַנְפּ֔וֹהִי וּלְדָנִיֵּ֖אל סְגִ֑ד וּמִנְחָה֙ וְנִ֣יחֹחִ֔ין אֲמַ֖ר לְנַסָּ֥כָה לֵֽהּ׃ 46
೪೬ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.
עָנֵה֩ מַלְכָּ֨א לְדָנִיֵּ֜אל וְאָמַ֗ר מִן־קְשֹׁט֙ דִּ֣י אֱלָהֲכ֗וֹן ה֣וּא אֱלָ֧הּ אֱלָהִ֛ין וּמָרֵ֥א מַלְכִ֖ין וְגָלֵ֣ה רָזִ֑ין דִּ֣י יְכֵ֔לְתָּ לְמִגְלֵ֖א רָזָ֥ה דְנָֽה׃ 47
೪೭ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.
אֱדַ֨יִן מַלְכָּ֜א לְדָנִיֵּ֣אל רַבִּ֗י וּמַתְּנָ֨ן רַבְרְבָ֤ן שַׂגִּיאָן֙ יְהַב־לֵ֔הּ וְהַ֨שְׁלְטֵ֔הּ עַ֖ל כָּל־מְדִינַ֣ת בָּבֶ֑ל וְרַב־סִגְנִ֔ין עַ֖ל כָּל־חַכִּימֵ֥י בָבֶֽל׃ 48
೪೮ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.
וְדָנִיֵּאל֙ בְּעָ֣א מִן־מַלְכָּ֔א וּמַנִּ֗י עַ֤ל עֲבִֽידְתָּא֙ דִּ֚י מְדִינַ֣ת בָּבֶ֔ל לְשַׁדְרַ֥ךְ מֵישַׁ֖ךְ וַעֲבֵ֣ד נְג֑וֹ וְדָנִיֵּ֖אל בִּתְרַ֥ע מַלְכָּֽא׃ פ 49
೪೯ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.

< דָּנִיֵּאל 2 >