< דָּנִיֵּאל 3 >

נְבוּכַדְנֶצַּ֣ר מַלְכָּ֗א עֲבַד֙ צְלֵ֣ם דִּֽי־דְהַ֔ב רוּמֵהּ֙ אַמִּ֣ין שִׁתִּ֔ין פְּתָיֵ֖הּ אַמִּ֣ין שִׁ֑ת אֲקִימֵהּ֙ בְּבִקְעַ֣ת דּוּרָ֔א בִּמְדִינַ֖ת בָּבֶֽל׃ 1
ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
וּנְבוּכַדְנֶצַּ֣ר מַלְכָּ֡א שְׁלַ֡ח לְמִכְנַ֣שׁ ׀ לַֽאֲחַשְׁדַּרְפְּנַיָּ֡א סִגְנַיָּ֣א וּֽפַחֲוָתָ֡א אֲדַרְגָּזְרַיָּא֩ גְדָ֨בְרַיָּ֤א דְּתָבְרַיָּא֙ תִּפְתָּיֵ֔א וְכֹ֖ל שִׁלְטֹנֵ֣י מְדִֽינָתָ֑א לְמֵתֵא֙ לַחֲנֻכַּ֣ת צַלְמָ֔א דִּ֥י הֲקֵ֖ים נְבוּכַדְנֶצַּ֥ר מַלְכָּֽא׃ 2
ಆಮೇಲೆ ನೆಬೂಕದ್ನೆಚ್ಚರನು ಉಪರಾಜರನ್ನೂ ರಾಜ್ಯಪಾಲರನ್ನೂ ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಖಜಾಂಚಿದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕರೆಯಿಸಿದನು.
בֵּאדַ֡יִן מִֽתְכַּנְּשִׁ֡ין אֲחַשְׁדַּרְפְּנַיָּ֡א סִגְנַיָּ֣א וּֽפַחֲוָתָ֡א אֲדַרְגָּזְרַיָּ֣א גְדָבְרַיָּא֩ דְּתָ֨בְרַיָּ֜א תִּפְתָּיֵ֗א וְכֹל֙ שִׁלְטֹנֵ֣י מְדִֽינָתָ֔א לַחֲנֻכַּ֣ת צַלְמָ֔א דִּ֥י הֲקֵ֖ים נְבוּכַדְנֶצַּ֣ר מַלְכָּ֑א וְקָֽיְמִין֙ לָקֳבֵ֣ל צַלְמָ֔א דִּ֥י הֲקֵ֖ים נְבוּכַדְנֶצַּֽר׃ 3
ಆಗ ಉಪರಾಜರು, ರಾಜ್ಯಪಾಲರು, ಅಧಿಕಾರಸ್ಥರು, ನ್ಯಾಯಾಧಿಪತಿಗಳು, ಖಜಾಂಚಿದವರು, ಸಲಹೆಗಾರರು, ಪಂಡಿತರು, ಎಲ್ಲಾ ಪ್ರಾಂತಗಳ ಅಧಿಕಾರಿಗಳು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕೂಡಿಬಂದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತರು.
וְכָרוֹזָ֖א קָרֵ֣א בְחָ֑יִל לְכ֤וֹן אָֽמְרִין֙ עַֽמְמַיָּ֔א אֻמַּיָּ֖א וְלִשָּׁנַיָּֽא׃ 4
ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ
בְּעִדָּנָ֡א דִּֽי־תִשְׁמְע֡וּן קָ֣ל קַרְנָ֣א מַ֠שְׁרוֹקִיתָא קַתְר֨וֹס סַבְּכָ֤א פְּסַנְתֵּרִין֙ סוּמְפֹּ֣נְיָ֔ה וְכֹ֖ל זְנֵ֣י זְמָרָ֑א תִּפְּל֤וּן וְתִסְגְּדוּן֙ לְצֶ֣לֶם דַּהֲבָ֔א דִּ֥י הֲקֵ֖ים נְבוּכַדְנֶצַּ֥ר מַלְכָּֽא׃ 5
ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
וּמַן־דִּי־לָ֥א יִפֵּ֖ל וְיִסְגֻּ֑ד בַּהּ־שַׁעֲתָ֣א יִתְרְמֵ֔א לְגֽוֹא־אַתּ֥וּן נוּרָ֖א יָקִֽדְתָּֽא׃ 6
ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.
כָּל־קֳבֵ֣ל דְּנָ֡ה בֵּהּ־זִמְנָ֡א כְּדִ֣י שָֽׁמְעִ֣ין כָּֽל־עַמְמַיָּ֡א קָ֣ל קַרְנָא֩ מַשְׁר֨וֹקִיתָ֜א קַתְר֤וֹס שַׂבְּכָא֙ פְּסַנְטֵרִ֔ין וְסוּפֹּ֣נְיָ֔ה וְכֹ֖ל זְנֵ֣י זְמָרָ֑א נָֽפְלִ֨ין כָּֽל־עַֽמְמַיָּ֜א אֻמַיָּ֣א וְלִשָּׁנַיָּ֗א סָֽגְדִין֙ לְצֶ֣לֶם דַּהֲבָ֔א דִּ֥י הֲקֵ֖ים נְבוּכַדְנֶצַּ֥ר מַלְכָּֽא׃ 7
ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.
כָּל־קֳבֵ֤ל דְּנָה֙ בֵּהּ־זִמְנָ֔א קְרִ֖בוּ גֻּבְרִ֣ין כַּשְׂדָּאִ֑ין וַאֲכַ֥לוּ קַרְצֵיה֖וֹן דִּ֥י יְהוּדָיֵֽא׃ 8
ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು
עֲנוֹ֙ וְאָ֣מְרִ֔ין לִנְבוּכַדְנֶצַּ֖ר מַלְכָּ֑א מַלְכָּ֖א לְעָלְמִ֥ין חֱיִֽי׃ 9
ಅರಸನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.
אַ֣נְתְּ מַלְכָּא֮ שָׂ֣מְתָּ טְּעֵם֒ דִּ֣י כָל־אֱנָ֡שׁ דִּֽי־יִשְׁמַ֡ע קָ֣ל קַרְנָ֣א מַ֠שְׁרֹקִיתָא קַתְר֨וֹס שַׂבְּכָ֤א פְסַנְתֵּרִין֙ וְסוּפֹּ֣נְיָ֔ה וְכֹ֖ל זְנֵ֣י זְמָרָ֑א יִפֵּ֥ל וְיִסְגֻּ֖ד לְצֶ֥לֶם דַּהֲבָֽא׃ 10
ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ.
וּמַן־דִּי־לָ֥א יִפֵּ֖ל וְיִסְגֻּ֑ד יִתְרְמֵ֕א לְגֽוֹא־אַתּ֥וּן נוּרָ֖א יָקִֽדְתָּֽא׃ 11
ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ?
אִיתַ֞י גֻּבְרִ֣ין יְהוּדָאיִ֗ן דִּֽי־מַנִּ֤יתָ יָתְהוֹן֙ עַל־עֲבִידַת֙ מְדִינַ֣ת בָּבֶ֔ל שַׁדְרַ֥ךְ מֵישַׁ֖ךְ וַעֲבֵ֣ד נְג֑וֹ גֻּבְרַיָּ֣א אִלֵּ֗ךְ לָא־שָׂ֨מֽוּ עֲלָ֤ךְ מַלְכָּא֙ טְעֵ֔ם לֵֽאלָהָךְ֙ לָ֣א פָלְחִ֔ין וּלְצֶ֧לֶם דַּהֲבָ֛א דִּ֥י הֲקֵ֖ימְתָּ לָ֥א סָגְדִֽין׃ ס 12
ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು.
בֵּאדַ֤יִן נְבוּכַדְנֶצַּר֙ בִּרְגַ֣ז וַחֲמָ֔ה אֲמַר֙ לְהַיְתָיָ֔ה לְשַׁדְרַ֥ךְ מֵישַׁ֖ךְ וַעֲבֵ֣ד נְג֑וֹ בֵּאדַ֙יִן֙ גֻּבְרַיָּ֣א אִלֵּ֔ךְ הֵיתָ֖יוּ קֳדָ֥ם מַלְכָּֽא׃ 13
ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.
עָנֵ֤ה נְבֻֽכַדְנֶצַּר֙ וְאָמַ֣ר לְה֔וֹן הַצְדָּ֕א שַׁדְרַ֥ךְ מֵישַׁ֖ךְ וַעֲבֵ֣ד נְג֑וֹ לֵֽאלָהַ֗י לָ֤א אִֽיתֵיכוֹן֙ פָּֽלְחִ֔ין וּלְצֶ֧לֶם דַּהֲבָ֛א דִּ֥י הֲקֵ֖ימֶת לָ֥א סָֽגְדִֽין׃ 14
ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ?
כְּעַ֞ן הֵ֧ן אִֽיתֵיכ֣וֹן עֲתִידִ֗ין דִּ֣י בְעִדָּנָ֡א דִּֽי־תִשְׁמְע֡וּן קָ֣ל קַרְנָ֣א מַשְׁרוֹקִיתָ֣א קַתְר֣וֹס שַׂבְּכָ֡א פְּסַנְתֵּרִין֩ וְסוּמְפֹּ֨נְיָ֜ה וְכֹ֣ל ׀ זְנֵ֣י זְמָרָ֗א תִּפְּל֣וּן וְתִסְגְּדוּן֮ לְצַלְמָ֣א דִֽי־עַבְדֵת֒ וְהֵן֙ לָ֣א תִסְגְּד֔וּן בַּהּ־שַׁעֲתָ֣ה תִתְרְמ֔וֹן לְגֽוֹא־אַתּ֥וּן נוּרָ֖א יָקִֽדְתָּ֑א וּמַן־ה֣וּא אֱלָ֔הּ דֵּ֥י יְשֵֽׁיזְבִנְכ֖וֹן מִן־יְדָֽי׃ 15
ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.
עֲנ֗וֹ שַׁדְרַ֤ךְ מֵישַׁךְ֙ וַעֲבֵ֣ד נְג֔וֹ וְאָמְרִ֖ין לְמַלְכָּ֑א נְבֽוּכַדְנֶצַּ֔ר לָֽא־חַשְׁחִ֨ין אֲנַ֧חְנָה עַל־דְּנָ֛ה פִּתְגָ֖ם לַהֲתָבוּתָֽךְ׃ 16
ಆಗ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಅರಸನಿಗೆ ಉತ್ತರವಾಗಿ, “ನೆಬೂಕದ್ನೆಚ್ಚರನೇ, ಈ ವಿಷಯದ ಬಗ್ಗೆ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
הֵ֣ן אִיתַ֗י אֱלָהַ֙נָא֙ דִּֽי־אֲנַ֣חְנָא פָֽלְחִ֔ין יָכִ֖ל לְשֵׁיזָבוּתַ֑נָא מִן־אַתּ֨וּן נוּרָ֧א יָקִֽדְתָּ֛א וּמִן־יְדָ֥ךְ מַלְכָּ֖א יְשֵׁיזִֽב׃ 17
ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.
וְהֵ֣ן לָ֔א יְדִ֥יעַ לֶהֱוֵא־לָ֖ךְ מַלְכָּ֑א דִּ֤י לֵֽאלָהָךְ֙ לָא־אִיתַ֣נָא פָֽלְחִ֔ין וּלְצֶ֧לֶם דַּהֲבָ֛א דִּ֥י הֲקֵ֖ימְתָּ לָ֥א נִסְגֻּֽד׃ ס 18
ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.
בֵּאדַ֨יִן נְבוּכַדְנֶצַּ֜ר הִתְמְלִ֣י חֱמָ֗א וּצְלֵ֤ם אַנְפּ֙וֹהִי֙ אֶשְׁתַּנִּ֔י עַל־שַׁדְרַ֥ךְ מֵישַׁ֖ךְ וַעֲבֵ֣ד נְג֑וֹ עָנֵ֤ה וְאָמַר֙ לְמֵזֵ֣א לְאַתּוּנָ֔א חַ֨ד־שִׁבְעָ֔ה עַ֛ל דִּ֥י חֲזֵ֖ה לְמֵזְיֵֽהּ׃ 19
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.
וּלְגֻבְרִ֤ין גִּבָּֽרֵי־חַ֙יִל֙ דִּ֣י בְחַיְלֵ֔הּ אֲמַר֙ לְכַפָּתָ֔ה לְשַׁדְרַ֥ךְ מֵישַׁ֖ךְ וַעֲבֵ֣ד נְג֑וֹ לְמִרְמֵ֕א לְאַתּ֥וּן נוּרָ֖א יָקִֽדְתָּֽא׃ 20
ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
בֵּאדַ֜יִן גֻּבְרַיָּ֣א אִלֵּ֗ךְ כְּפִ֙תוּ֙ בְּסַרְבָּלֵיהוֹן֙ פַּטְּשֵׁיה֔וֹן וְכַרְבְּלָתְה֖וֹן וּלְבֻשֵׁיה֑וֹן וּרְמִ֕יו לְגֽוֹא־אַתּ֥וּן נוּרָ֖א יָקִֽדְתָּֽא׃ 21
ಆಗ ಆ ಮನುಷ್ಯರು ತಮ್ಮ ಶಲ್ಯ, ಇಜಾರು, ಮುಂಡಾಸ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡವರಾಗಿರುವಾಗ, ಧಗಧಗನೆ ಉರಿಯುವ ಬೆಂಕಿಯ ಕುಲುಮೆಯಲ್ಲಿ ಅವರನ್ನು ಹಾಕಿದರು.
כָּל־קֳבֵ֣ל דְּנָ֗ה מִן־דִּ֞י מִלַּ֤ת מַלְכָּא֙ מַחְצְפָ֔ה וְאַתּוּנָ֖א אֵזֵ֣ה יַתִּ֑ירָא גֻּבְרַיָּ֣א אִלֵּ֗ךְ דִּ֤י הַסִּ֙קוּ֙ לְשַׁדְרַ֤ךְ מֵישַׁךְ֙ וַעֲבֵ֣ד נְג֔וֹ קַטִּ֣ל הִמּ֔וֹן שְׁבִיבָ֖א דִּ֥י נוּרָֽא׃ 22
ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.
וְגֻבְרַיָּ֤א אִלֵּךְ֙ תְּלָ֣תֵּה֔וֹן שַׁדְרַ֥ךְ מֵישַׁ֖ךְ וַעֲבֵ֣ד נְג֑וֹ נְפַ֛לוּ לְגֽוֹא־אַתּוּן־נוּרָ֥א יָֽקִדְתָּ֖א מְכַפְּתִֽין׃ פ 23
ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು.
אֱדַ֙יִן֙ נְבוּכַדְנֶצַּ֣ר מַלְכָּ֔א תְּוַ֖הּ וְקָ֣ם בְּהִתְבְּהָלָ֑ה עָנֵ֨ה וְאָמַ֜ר לְהַדָּֽבְר֗וֹהִי הֲלָא֩ גֻבְרִ֨ין תְּלָתָ֜א רְמֵ֤ינָא לְגוֹא־נוּרָא֙ מְכַפְּתִ֔ין עָנַ֤יִן וְאָמְרִין֙ לְמַלְכָּ֔א יַצִּיבָ֖א מַלְכָּֽא׃ 24
ಆಗ ಅರಸನಾದ ನೆಬೂಕದ್ನೆಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು, ತನ್ನ ಆಲೋಚನಾಗಾರರ ಸಂಗಡ ಮಾತನಾಡಿ, “ನಾವು ಮೂವರು ಮನುಷ್ಯರನ್ನು ಕಟ್ಟಿ, ಬೆಂಕಿಯಲ್ಲಿ ಹಾಕಿದೆವಲ್ಲವೇ?” ಎಂದನು. ಆಗ ಅವರು ಅರಸನಿಗೆ, “ಅರಸನೇ, ಹೌದು ಸತ್ಯ,” ಎಂದು ಉತ್ತರಿಸಿದರು.
עָנֵ֣ה וְאָמַ֗ר הָֽא־אֲנָ֨ה חָזֵ֜ה גֻּבְרִ֣ין אַרְבְּעָ֗ה שְׁרַ֙יִן֙ מַהְלְכִ֣ין בְּגֽוֹא־נוּרָ֔א וַחֲבָ֖ל לָא־אִיתַ֣י בְּה֑וֹן וְרֵוֵהּ֙ דִּ֣י רְֽבִיעָאָ֔ה דָּמֵ֖ה לְבַר־אֱלָהִֽין׃ ס 25
ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.
בֵּאדַ֜יִן קְרֵ֣ב נְבוּכַדְנֶצַּ֗ר לִתְרַע֮ אַתּ֣וּן נוּרָ֣א יָקִֽדְתָּא֒ עָנֵ֣ה וְאָמַ֗ר שַׁדְרַ֨ךְ מֵישַׁ֧ךְ וַעֲבֵד־נְג֛וֹ עַבְד֛וֹהִי דִּֽי־אֱלָהָ֥א עִלָּאָ֖ה פֻּ֣קוּ וֶאֱת֑וֹ בֵּאדַ֣יִן נָֽפְקִ֗ין שַׁדְרַ֥ךְ מֵישַׁ֛ךְ וַעֲבֵ֥ד נְג֖וֹ מִן־גּ֥וֹא נוּרָֽא׃ 26
ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
וּ֠מִֽתְכַּנְּשִׁין אֲחַשְׁדַּרְפְּנַיָּ֞א סִגְנַיָּ֣א וּפַחֲוָתָא֮ וְהַדָּבְרֵ֣י מַלְכָּא֒ חָזַ֣יִן לְגֻבְרַיָּ֣א אִלֵּ֡ךְ דִּי֩ לָֽא־שְׁלֵ֨ט נוּרָ֜א בְּגֶשְׁמְה֗וֹן וּשְׂעַ֤ר רֵֽאשְׁהוֹן֙ לָ֣א הִתְחָרַ֔ךְ וְסָרְבָּלֵיה֖וֹן לָ֣א שְׁנ֑וֹ וְרֵ֣יחַ נ֔וּר לָ֥א עֲדָ֖ת בְּהֽוֹן׃ 27
ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು.
עָנֵ֨ה נְבֽוּכַדְנֶצַּ֜ר וְאָמַ֗ר בְּרִ֤יךְ אֱלָהֲהוֹן֙ דִּֽי־שַׁדְרַ֤ךְ מֵישַׁךְ֙ וַעֲבֵ֣ד נְג֔וֹ דִּֽי־שְׁלַ֤ח מַלְאֲכֵהּ֙ וְשֵׁיזִ֣ב לְעַבְד֔וֹהִי דִּ֥י הִתְרְחִ֖צוּ עֲל֑וֹהִי וּמִלַּ֤ת מַלְכָּא֙ שַׁנִּ֔יו וִיהַ֣בוּ גֶשְׁמְה֗וֹן דִּ֠י לָֽא־יִפְלְח֤וּן וְלָֽא־יִסְגְּדוּן֙ לְכָל־אֱלָ֔הּ לָהֵ֖ן לֵאלָֽהֲהֽוֹן׃ 28
ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.
וּמִנִּי֮ שִׂ֣ים טְעֵם֒ דִּי֩ כָל־עַ֨ם אֻמָּ֜ה וְלִשָּׁ֗ן דִּֽי־יֵאמַ֤ר שָׁלוּ֙ עַ֣ל אֱלָהֲה֗וֹן דִּֽי־שַׁדְרַ֤ךְ מֵישַׁךְ֙ וַעֲבֵ֣ד נְג֔וֹא הַדָּמִ֣ין יִתְעֲבֵ֔ד וּבַיְתֵ֖הּ נְוָלִ֣י יִשְׁתַּוֵּ֑ה כָּל־קֳבֵ֗ל דִּ֣י לָ֤א אִיתַי֙ אֱלָ֣ה אָחֳרָ֔ן דִּֽי־יִכֻּ֥ל לְהַצָּלָ֖ה כִּדְנָֽה׃ 29
ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.
בֵּאדַ֣יִן מַלְכָּ֗א הַצְלַ֛ח לְשַׁדְרַ֥ךְ מֵישַׁ֛ךְ וַעֲבֵ֥ד נְג֖וֹ בִּמְדִינַ֥ת בָּבֶֽל׃ פ 30
ಆಗ ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು.

< דָּנִיֵּאל 3 >