< קֹהֶלֶת 9 >
כִּ֣י אֶת־כָּל־זֶ֞ה נָתַ֤תִּי אֶל־לִבִּי֙ וְלָב֣וּר אֶת־כָּל־זֶ֔ה אֲשֶׁ֨ר הַצַּדִּיקִ֧ים וְהַחֲכָמִ֛ים וַעֲבָדֵיהֶ֖ם בְּיַ֣ד הָאֱלֹהִ֑ים גַּֽם־אַהֲבָ֣ה גַם־שִׂנְאָ֗ה אֵ֤ין יוֹדֵ֙עַ֙ הָֽאָדָ֔ם הַכֹּ֖ל לִפְנֵיהֶֽם׃ | 1 |
೧ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
הַכֹּ֞ל כַּאֲשֶׁ֣ר לַכֹּ֗ל מִקְרֶ֨ה אֶחָ֜ד לַצַּדִּ֤יק וְלָרָשָׁע֙ לַטּוֹב֙ וְלָרַע וְלַטָּה֣וֹר וְלַטָּמֵ֔א וְלַזֹּבֵ֔חַ וְלַאֲשֶׁ֖ר אֵינֶ֣נּוּ זֹבֵ֑חַ כַּטּוֹב֙ כַּֽחֹטֶ֔א הַנִּשְׁבָּ֕ע כַּאֲשֶׁ֖ר שְׁבוּעָ֥ה יָרֵֽא׃ | 2 |
೨ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.
זֶ֣ה ׀ רָ֗ע בְּכֹ֤ל אֲשֶֽׁר־נַעֲשָׂה֙ תַּ֣חַת הַשֶּׁ֔מֶשׁ כִּֽי־מִקְרֶ֥ה אֶחָ֖ד לַכֹּ֑ל וְגַ֣ם לֵ֣ב בְּֽנֵי־הָ֠אָדָם מָלֵא־רָ֨ע וְהוֹלֵל֤וֹת בִּלְבָבָם֙ בְּחַיֵּיהֶ֔ם וְאַחֲרָ֖יו אֶל־הַמֵּתִֽים׃ | 3 |
೩ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.
כִּי־מִי֙ אֲשֶׁ֣ר יְחֻבַּ֔ר אֶ֥ל כָּל־הַחַיִּ֖ים יֵ֣שׁ בִּטָּח֑וֹן כִּֽי־לְכֶ֤לֶב חַי֙ ה֣וּא ט֔וֹב מִן־הָאַרְיֵ֖ה הַמֵּֽת׃ | 4 |
೪ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
כִּ֧י הַֽחַיִּ֛ים יוֹדְעִ֖ים שֶׁיָּמֻ֑תוּ וְהַמֵּתִ֞ים אֵינָ֧ם יוֹדְעִ֣ים מְא֗וּמָה וְאֵֽין־ע֤וֹד לָהֶם֙ שָׂכָ֔ר כִּ֥י נִשְׁכַּ֖ח זִכְרָֽם׃ | 5 |
೫ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.
גַּ֣ם אַהֲבָתָ֧ם גַּם־שִׂנְאָתָ֛ם גַּם־קִנְאָתָ֖ם כְּבָ֣ר אָבָ֑דָה וְחֵ֨לֶק אֵין־לָהֶ֥ם עוֹד֙ לְעוֹלָ֔ם בְּכֹ֥ל אֲשֶֽׁר־נַעֲשָׂ֖ה תַּ֥חַת הַשָּֽׁמֶשׁ׃ | 6 |
೬ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.
לֵ֣ךְ אֱכֹ֤ל בְּשִׂמְחָה֙ לַחְמֶ֔ךָ וּֽשֲׁתֵ֥ה בְלֶב־ט֖וֹב יֵינֶ֑ךָ כִּ֣י כְבָ֔ר רָצָ֥ה הָאֱלֹהִ֖ים אֶֽת־מַעֲשֶֽׂיךָ׃ | 7 |
೭ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
בְּכָל־עֵ֕ת יִהְי֥וּ בְגָדֶ֖יךָ לְבָנִ֑ים וְשֶׁ֖מֶן עַל־רֹאשְׁךָ֥ אַל־יֶחְסָֽר׃ | 8 |
೮ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.
רְאֵ֨ה חַיִּ֜ים עִם־אִשָּׁ֣ה אֲשֶׁר־אָהַ֗בְתָּ כָּל־יְמֵי֙ חַיֵּ֣י הֶבְלֶ֔ךָ אֲשֶׁ֤ר נָֽתַן־לְךָ֙ תַּ֣חַת הַשֶּׁ֔מֶשׁ כֹּ֖ל יְמֵ֣י הֶבְלֶ֑ךָ כִּ֣י ה֤וּא חֶלְקְךָ֙ בַּֽחַיִּ֔ים וּבַעֲמָ֣לְךָ֔ אֲשֶׁר־אַתָּ֥ה עָמֵ֖ל תַּ֥חַת הַשָּֽׁמֶשׁ׃ | 9 |
೯ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
כֹּ֠ל אֲשֶׁ֨ר תִּמְצָ֧א יָֽדְךָ֛ לַעֲשׂ֥וֹת בְּכֹחֲךָ֖ עֲשֵׂ֑ה כִּי֩ אֵ֨ין מַעֲשֶׂ֤ה וְחֶשְׁבּוֹן֙ וְדַ֣עַת וְחָכְמָ֔ה בִּשְׁא֕וֹל אֲשֶׁ֥ר אַתָּ֖ה הֹלֵ֥ךְ שָֽׁמָּה׃ ס (Sheol ) | 10 |
೧೦ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ. (Sheol )
שַׁ֜בְתִּי וְרָאֹ֣ה תַֽחַת־הַשֶּׁ֗מֶשׁ כִּ֣י לֹא֩ לַקַּלִּ֨ים הַמֵּר֜וֹץ וְלֹ֧א לַגִּבּוֹרִ֣ים הַמִּלְחָמָ֗ה וְ֠גַם לֹ֣א לַחֲכָמִ֥ים לֶ֙חֶם֙ וְגַ֨ם לֹ֤א לַנְּבֹנִים֙ עֹ֔שֶׁר וְגַ֛ם לֹ֥א לַיֹּדְעִ֖ים חֵ֑ן כִּי־עֵ֥ת וָפֶ֖גַע יִקְרֶ֥ה אֶת־כֻּלָּֽם׃ | 11 |
೧೧ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
כִּ֡י גַּם֩ לֹֽא־יֵדַ֨ע הָאָדָ֜ם אֶת־עִתּ֗וֹ כַּדָּגִים֙ שֶׁנֶּֽאֱחָזִים֙ בִּמְצוֹדָ֣ה רָעָ֔ה וְכַ֨צִּפֳּרִ֔ים הָאֲחֻז֖וֹת בַּפָּ֑ח כָּהֵ֗ם יֽוּקָשִׁים֙ בְּנֵ֣י הָֽאָדָ֔ם לְעֵ֣ת רָעָ֔ה כְּשֶׁתִּפּ֥וֹל עֲלֵיהֶ֖ם פִּתְאֹֽם׃ | 12 |
೧೨ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.
גַּם־זֹ֛ה רָאִ֥יתִי חָכְמָ֖ה תַּ֣חַת הַשָּׁ֑מֶשׁ וּגְדוֹלָ֥ה הִ֖יא אֵלָֽי׃ | 13 |
೧೩ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು.
עִ֣יר קְטַנָּ֔ה וַאֲנָשִׁ֥ים בָּ֖הּ מְעָ֑ט וּבָֽא־אֵלֶ֜יהָ מֶ֤לֶךְ גָּדוֹל֙ וְסָבַ֣ב אֹתָ֔הּ וּבָנָ֥ה עָלֶ֖יהָ מְצוֹדִ֥ים גְּדֹלִֽים׃ | 14 |
೧೪ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.
וּמָ֣צָא בָ֗הּ אִ֤ישׁ מִסְכֵּן֙ חָכָ֔ם וּמִלַּט־ה֥וּא אֶת־הָעִ֖יר בְּחָכְמָת֑וֹ וְאָדָם֙ לֹ֣א זָכַ֔ר אֶת־הָאִ֥ישׁ הַמִּסְכֵּ֖ן הַהּֽוּא׃ | 15 |
೧೫ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.
וְאָמַ֣רְתִּי אָ֔נִי טוֹבָ֥ה חָכְמָ֖ה מִגְּבוּרָ֑ה וְחָכְמַ֤ת הַמִּסְכֵּן֙ בְּזוּיָ֔ה וּדְבָרָ֖יו אֵינָ֥ם נִשְׁמָעִֽים׃ | 16 |
೧೬ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
דִּבְרֵ֣י חֲכָמִ֔ים בְּנַ֖חַת נִשְׁמָעִ֑ים מִזַּעֲקַ֥ת מוֹשֵׁ֖ל בַּכְּסִילִֽים׃ | 17 |
೧೭ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.
טוֹבָ֥ה חָכְמָ֖ה מִכְּלֵ֣י קְרָ֑ב וְחוֹטֶ֣א אֶחָ֔ד יְאַבֵּ֥ד טוֹבָ֥ה הַרְבֵּֽה׃ | 18 |
೧೮ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.