< שמואל ב 24 >
וַיֹּסֶף אַף־יְהוָה לַחֲרוֹת בְּיִשְׂרָאֵל וַיָּסֶת אֶת־דָּוִד בָּהֶם לֵאמֹר לֵךְ מְנֵה אֶת־יִשְׂרָאֵל וְאֶת־יְהוּדָֽה׃ | 1 |
೧ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
וַיֹּאמֶר הַמֶּלֶךְ אֶל־יוֹאָב ׀ שַׂר־הַחַיִל אֲשֶׁר־אִתּוֹ שֽׁוּט־נָא בְּכָל־שִׁבְטֵי יִשְׂרָאֵל מִדָּן וְעַד־בְּאֵר שֶׁבַע וּפִקְדוּ אֶת־הָעָם וְיָדַעְתִּי אֵת מִסְפַּר הָעָֽם׃ | 2 |
೨ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.
וַיֹּאמֶר יוֹאָב אֶל־הַמֶּלֶךְ וְיוֹסֵף יְהוָה אֱלֹהֶיךָ אֶל־הָעָם כָּהֵם ׀ וְכָהֵם מֵאָה פְעָמִים וְעֵינֵי אֲדֹנִֽי־הַמֶּלֶךְ רֹאוֹת וַאדֹנִי הַמֶּלֶךְ לָמָּה חָפֵץ בַּדָּבָר הַזֶּֽה׃ | 3 |
೩ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.
וַיֶּחֱזַק דְּבַר־הַמֶּלֶךְ אֶל־יוֹאָב וְעַל שָׂרֵי הֶחָיִל וַיֵּצֵא יוֹאָב וְשָׂרֵי הַחַיִל לִפְנֵי הַמֶּלֶךְ לִפְקֹד אֶת־הָעָם אֶת־יִשְׂרָאֵֽל׃ | 4 |
೪ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.
וַיַּעַבְרוּ אֶת־הַיַּרְדֵּן וַיַּחֲנוּ בַעֲרוֹעֵר יְמִין הָעִיר אֲשֶׁר בְּתוֹךְ־הַנַּחַל הַגָּד וְאֶל־יַעְזֵֽר׃ | 5 |
೫ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,
וַיָּבֹאוּ הַגִּלְעָדָה וְאֶל־אֶרֶץ תַּחְתִּים חָדְשִׁי וַיָּבֹאוּ דָּנָה יַּעַן וְסָבִיב אֶל־צִידֽוֹן׃ | 6 |
೬ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.
וַיָּבֹאוּ מִבְצַר־צֹר וְכָל־עָרֵי הַחִוִּי וְהַֽכְּנַעֲנִי וַיֵּֽצְאוּ אֶל־נֶגֶב יְהוּדָה בְּאֵר שָֽׁבַע׃ | 7 |
೭ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.
וַיָּשֻׁטוּ בְּכָל־הָאָרֶץ וַיָּבֹאוּ מִקְצֵה תִשְׁעָה חֳדָשִׁים וְעֶשְׂרִים יוֹם יְרוּשָׁלָֽ͏ִם׃ | 8 |
೮ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.
וַיִּתֵּן יוֹאָב אֶת־מִסְפַּר מִפְקַד־הָעָם אֶל־הַמֶּלֶךְ וַתְּהִי יִשְׂרָאֵל שְׁמֹנֶה מֵאוֹת אֶלֶף אִֽישׁ־חַיִל שֹׁלֵֽף חֶרֶב וְאִישׁ יְהוּדָה חֲמֵשׁ־מֵאוֹת אֶלֶף אִֽישׁ׃ | 9 |
೯ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.
וַיַּךְ לֵב־דָּוִד אֹתוֹ אַחֲרֵי־כֵן סָפַר אֶת־הָעָם וַיֹּאמֶר דָּוִד אֶל־יְהוָה חָטָאתִי מְאֹד אֲשֶׁר עָשִׂיתִי וְעַתָּה יְהוָה הַֽעֲבֶר־נָא אֶת־עֲוֺן עַבְדְּךָ כִּי נִסְכַּלְתִּי מְאֹֽד׃ | 10 |
೧೦ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
וַיָּקָם דָּוִד בַּבֹּקֶר וּדְבַר־יְהוָה הָיָה אֶל־גָּד הַנָּבִיא חֹזֵה דָוִד לֵאמֹֽר׃ | 11 |
೧೧ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,
הָלוֹךְ וְדִבַּרְתָּ אֶל־דָּוִד כֹּה אָמַר יְהוָה שָׁלֹשׁ אָנֹכִי נוֹטֵל עָלֶיךָ בְּחַר־לְךָ אַֽחַת־מֵהֶם וְאֶֽעֱשֶׂה־לָּֽךְ׃ | 12 |
೧೨“ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು.
וַיָּבֹא־גָד אֶל־דָּוִד וַיַּגֶּד־לוֹ וַיֹּאמֶר לוֹ הֲתָבוֹא לְךָ שֶֽׁבַע שָׁנִים ׀ רָעָב ׀ בְּאַרְצֶךָ אִם־שְׁלֹשָׁה חֳדָשִׁים נֻסְךָ לִפְנֵֽי־צָרֶיךָ וְהוּא רֹדְפֶךָ וְאִם־הֱיוֹת שְׁלֹשֶׁת יָמִים דֶּבֶר בְּאַרְצֶךָ עַתָּה דַּע וּרְאֵה מָה־אָשִׁיב שֹׁלְחִי דָּבָֽר׃ | 13 |
೧೩ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.
וַיֹּאמֶר דָּוִד אֶל־גָּד צַר־לִי מְאֹד נִפְּלָה־נָּא בְיַד־יְהוָה כִּֽי־רַבִּים רחמו רַֽחֲמָיו וּבְיַד־אָדָם אַל־אֶפֹּֽלָה׃ | 14 |
೧೪ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.
וַיִּתֵּן יְהוָה דֶּבֶר בְּיִשְׂרָאֵל מֵהַבֹּקֶר וְעַד־עֵת מוֹעֵד וַיָּמָת מִן־הָעָם מִדָּן וְעַד־בְּאֵר שֶׁבַע שִׁבְעִים אֶלֶף אִֽישׁ׃ | 15 |
೧೫ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
וַיִּשְׁלַח יָדוֹ הַמַּלְאָךְ ׀ יְרֽוּשָׁלִַם לְשַׁחֲתָהּ וַיִּנָּחֶם יְהוָה אֶל־הָרָעָה וַיֹּאמֶר לַמַּלְאָךְ הַמַּשְׁחִית בָּעָם רַב עַתָּה הֶרֶף יָדֶךָ וּמַלְאַךְ יְהוָה הָיָה עִם־גֹּרֶן האורנה הָאֲרַוְנָה הַיְבֻסִֽי׃ | 16 |
೧೬ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
וַיֹּאמֶר דָּוִד אֶל־יְהוָה בִּרְאֹתוֹ ׀ אֶֽת־הַמַּלְאָךְ ׀ הַמַּכֶּה בָעָם וַיֹּאמֶר הִנֵּה אָנֹכִי חָטָאתִי וְאָנֹכִי הֶעֱוֵיתִי וְאֵלֶּה הַצֹּאן מֶה עָשׂוּ תְּהִי נָא יָדְךָ בִּי וּבְבֵית אָבִֽי׃ | 17 |
೧೭ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.
וַיָּבֹא־גָד אֶל־דָּוִד בַּיּוֹם הַהוּא וַיֹּאמֶר לוֹ עֲלֵה הָקֵם לַֽיהוָה מִזְבֵּחַ בְּגֹרֶן ארניה אֲרַוְנָה הַיְבֻסִֽי׃ | 18 |
೧೮ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
וַיַּעַל דָּוִד כִּדְבַר־גָּד כַּאֲשֶׁר צִוָּה יְהוָֽה׃ | 19 |
೧೯ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
וַיַּשְׁקֵף אֲרַוְנָה וַיַּרְא אֶת־הַמֶּלֶךְ וְאֶת־עֲבָדָיו עֹבְרִים עָלָיו וַיֵּצֵא אֲרַוְנָה וַיִּשְׁתַּחוּ לַמֶּלֶךְ אַפָּיו אָֽרְצָה׃ | 20 |
೨೦ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.
וַיֹּאמֶר אֲרַוְנָה מַדּוּעַ בָּא אֲדֹנִֽי־הַמֶּלֶךְ אֶל־עַבְדּוֹ וַיֹּאמֶר דָּוִד לִקְנוֹת מֵעִמְּךָ אֶת־הַגֹּרֶן לִבְנוֹת מִזְבֵּחַ לַֽיהוָה וְתֵעָצַר הַמַּגֵּפָה מֵעַל הָעָֽם׃ | 21 |
೨೧ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು.
וַיֹּאמֶר אֲרַוְנָה אֶל־דָּוִד יִקַּח וְיַעַל אֲדֹנִי הַמֶּלֶךְ הַטּוֹב בעינו בְּעֵינָיו רְאֵה הַבָּקָר לָעֹלָה וְהַמֹּרִגִּים וּכְלֵי הַבָּקָר לָעֵצִֽים׃ | 22 |
೨೨ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
הַכֹּל נָתַן אֲרַוְנָה הַמֶּלֶךְ לַמֶּלֶךְ וַיֹּאמֶר אֲרַוְנָה אֶל־הַמֶּלֶךְ יְהוָה אֱלֹהֶיךָ יִרְצֶֽךָ׃ | 23 |
೨೩ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು.
וַיֹּאמֶר הַמֶּלֶךְ אֶל־אֲרַוְנָה לֹא כִּֽי־קָנוֹ אֶקְנֶה מֵאֽוֹתְךָ בִּמְחִיר וְלֹא אַעֲלֶה לַיהוָה אֱלֹהַי עֹלוֹת חִנָּם וַיִּקֶן דָּוִד אֶת־הַגֹּרֶן וְאֶת־הַבָּקָר בְּכֶסֶף שְׁקָלִים חֲמִשִּֽׁים׃ | 24 |
೨೪ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.
וַיִּבֶן שָׁם דָּוִד מִזְבֵּחַ לַֽיהוָה וַיַּעַל עֹלוֹת וּשְׁלָמִים וַיֵּעָתֵר יְהוָה לָאָרֶץ וַתֵּעָצַר הַמַּגֵּפָה מֵעַל יִשְׂרָאֵֽל׃ 695 24 4 4 | 25 |
೨೫ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.