< יְשַׁעְיָהוּ 1 >
חֲזוֹן֙ יְשַֽׁעְיָ֣הוּ בֶן־אָמ֔וֹץ אֲשֶׁ֣ר חָזָ֔ה עַל־יְהוּדָ֖ה וִירוּשָׁלִָ֑ם בִּימֵ֨י עֻזִּיָּ֧הוּ יוֹתָ֛ם אָחָ֥ז יְחִזְקִיָּ֖הוּ מַלְכֵ֥י יְהוּדָֽה׃ | 1 |
೧ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
שִׁמְע֤וּ שָׁמַ֙יִם֙ וְהַאֲזִ֣ינִי אֶ֔רֶץ כִּ֥י יְהוָ֖ה דִּבֵּ֑ר בָּנִים֙ גִּדַּ֣לְתִּי וְרוֹמַ֔מְתִּי וְהֵ֖ם פָּ֥שְׁעוּ בִֽי׃ | 2 |
೨ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
יָדַ֥ע שׁוֹר֙ קֹנֵ֔הוּ וַחֲמ֖וֹר אֵב֣וּס בְּעָלָ֑יו יִשְׂרָאֵל֙ לֹ֣א יָדַ֔ע עַמִּ֖י לֹ֥א הִתְבּוֹנָֽן׃ | 3 |
೩ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
ה֣וֹי ׀ גּ֣וֹי חֹטֵ֗א עַ֚ם כֶּ֣בֶד עָוֺ֔ן זֶ֣רַע מְרֵעִ֔ים בָּנִ֖ים מַשְׁחִיתִ֑ים עָזְב֣וּ אֶת־יְהוָ֗ה נִֽאֲצ֛וּ אֶת־קְד֥וֹשׁ יִשְׂרָאֵ֖ל נָזֹ֥רוּ אָחֽוֹר׃ | 4 |
೪ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
עַ֣ל מֶ֥ה תֻכּ֛וּ ע֖וֹד תּוֹסִ֣יפוּ סָרָ֑ה כָּל־רֹ֣אשׁ לָחֳלִ֔י וְכָל־לֵבָ֖ב דַּוָּֽי׃ | 5 |
೫ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
מִכַּף־רֶ֤גֶל וְעַד־רֹאשׁ֙ אֵֽין־בּ֣וֹ מְתֹ֔ם פֶּ֥צַע וְחַבּוּרָ֖ה וּמַכָּ֣ה טְרִיָּ֑ה לֹא־זֹ֙רוּ֙ וְלֹ֣א חֻבָּ֔שׁוּ וְלֹ֥א רֻכְּכָ֖ה בַּשָּֽׁמֶן׃ | 6 |
೬ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
אַרְצְכֶ֣ם שְׁמָמָ֔ה עָרֵיכֶ֖ם שְׂרֻפ֣וֹת אֵ֑שׁ אַדְמַתְכֶ֗ם לְנֶגְדְּכֶם֙ זָרִים֙ אֹכְלִ֣ים אֹתָ֔הּ וּשְׁמָמָ֖ה כְּמַהְפֵּכַ֥ת זָרִֽים׃ | 7 |
೭ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
וְנוֹתְרָ֥ה בַת־צִיּ֖וֹן כְּסֻכָּ֣ה בְכָ֑רֶם כִּמְלוּנָ֥ה בְמִקְשָׁ֖ה כְּעִ֥יר נְצוּרָֽה׃ | 8 |
೮ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
לוּלֵי֙ יְהוָ֣ה צְבָא֔וֹת הוֹתִ֥יר לָ֛נוּ שָׂרִ֖יד כִּמְעָ֑ט כִּסְדֹ֣ם הָיִ֔ינוּ לַעֲמֹרָ֖ה דָּמִֽינוּ׃ ס | 9 |
೯ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
שִׁמְע֥וּ דְבַר־יְהוָ֖ה קְצִינֵ֣י סְדֹ֑ם הַאֲזִ֛ינוּ תּוֹרַ֥ת אֱלֹהֵ֖ינוּ עַ֥ם עֲמֹרָֽה׃ | 10 |
೧೦ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
לָמָּה־לִּ֤י רֹב־זִבְחֵיכֶם֙ יֹאמַ֣ר יְהוָ֔ה שָׂבַ֛עְתִּי עֹל֥וֹת אֵילִ֖ים וְחֵ֣לֶב מְרִיאִ֑ים וְדַ֨ם פָּרִ֧ים וּכְבָשִׂ֛ים וְעַתּוּדִ֖ים לֹ֥א חָפָֽצְתִּי׃ | 11 |
೧೧ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
כִּ֣י תָבֹ֔אוּ לֵרָא֖וֹת פָּנָ֑י מִי־בִקֵּ֥שׁ זֹ֛את מִיֶּדְכֶ֖ם רְמֹ֥ס חֲצֵרָֽי׃ | 12 |
೧೨ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
לֹ֣א תוֹסִ֗יפוּ הָבִיא֙ מִנְחַת־שָׁ֔וְא קְטֹ֧רֶת תּוֹעֵבָ֛ה הִ֖יא לִ֑י חֹ֤דֶשׁ וְשַׁבָּת֙ קְרֹ֣א מִקְרָ֔א לֹא־אוּכַ֥ל אָ֖וֶן וַעֲצָרָֽה׃ | 13 |
೧೩ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
חָדְשֵׁיכֶ֤ם וּמוֹעֲדֵיכֶם֙ שָׂנְאָ֣ה נַפְשִׁ֔י הָי֥וּ עָלַ֖י לָטֹ֑רַח נִלְאֵ֖יתִי נְשֹֽׂא׃ | 14 |
೧೪ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
וּבְפָרִשְׂכֶ֣ם כַּפֵּיכֶ֗ם אַעְלִ֤ים עֵינַי֙ מִכֶּ֔ם גַּ֛ם כִּֽי־תַרְבּ֥וּ תְפִלָּ֖ה אֵינֶ֣נִּי שֹׁמֵ֑עַ יְדֵיכֶ֖ם דָּמִ֥ים מָלֵֽאוּ׃ | 15 |
೧೫ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
רַחֲצוּ֙ הִזַּכּ֔וּ הָסִ֛ירוּ רֹ֥עַ מַעַלְלֵיכֶ֖ם מִנֶּ֣גֶד עֵינָ֑י חִדְל֖וּ הָרֵֽעַ׃ | 16 |
೧೬ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
לִמְד֥וּ הֵיטֵ֛ב דִּרְשׁ֥וּ מִשְׁפָּ֖ט אַשְּׁר֣וּ חָמ֑וֹץ שִׁפְט֣וּ יָת֔וֹם רִ֖יבוּ אַלְמָנָֽה׃ ס | 17 |
೧೭ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
לְכוּ־נָ֛א וְנִוָּֽכְחָ֖ה יֹאמַ֣ר יְהוָ֑ה אִם־יִֽהְי֨וּ חֲטָאֵיכֶ֤ם כַּשָּׁנִים֙ כַּשֶּׁ֣לֶג יַלְבִּ֔ינוּ אִם־יַאְדִּ֥ימוּ כַתּוֹלָ֖ע כַּצֶּ֥מֶר יִהְיֽוּ׃ | 18 |
೧೮“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
אִם־תֹּאב֖וּ וּשְׁמַעְתֶּ֑ם ט֥וּב הָאָ֖רֶץ תֹּאכֵֽלוּ׃ | 19 |
೧೯ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
וְאִם־תְּמָאֲנ֖וּ וּמְרִיתֶ֑ם חֶ֣רֶב תְּאֻכְּל֔וּ כִּ֛י פִּ֥י יְהוָ֖ה דִּבֵּֽר׃ ס | 20 |
೨೦ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
אֵיכָה֙ הָיְתָ֣ה לְזוֹנָ֔ה קִרְיָ֖ה נֶאֱמָנָ֑ה מְלֵאֲתִ֣י מִשְׁפָּ֗ט צֶ֛דֶק יָלִ֥ין בָּ֖הּ וְעַתָּ֥ה מְרַצְּחִֽים׃ | 21 |
೨೧ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
כַּסְפֵּ֖ךְ הָיָ֣ה לְסִיגִ֑ים סָבְאֵ֖ךְ מָה֥וּל בַּמָּֽיִם׃ | 22 |
೨೨ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.
שָׂרַ֣יִךְ סוֹרְרִ֗ים וְחַבְרֵי֙ גַּנָּבִ֔ים כֻּלּוֹ֙ אֹהֵ֣ב שֹׁ֔חַד וְרֹדֵ֖ף שַׁלְמֹנִ֑ים יָתוֹם֙ לֹ֣א יִשְׁפֹּ֔טוּ וְרִ֥יב אַלְמָנָ֖ה לֹֽא־יָב֥וֹא אֲלֵיהֶֽם׃ פ | 23 |
೨೩ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
לָכֵ֗ן נְאֻ֤ם הָֽאָדוֹן֙ יְהוָ֣ה צְבָא֔וֹת אֲבִ֖יר יִשְׂרָאֵ֑ל ה֚וֹי אֶנָּחֵ֣ם מִצָּרַ֔י וְאִנָּקְמָ֖ה מֵאוֹיְבָֽי׃ | 24 |
೨೪ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
וְאָשִׁ֤יבָה יָדִי֙ עָלַ֔יִךְ וְאֶצְרֹ֥ף כַּבֹּ֖ר סִיגָ֑יִךְ וְאָסִ֖ירָה כָּל־בְּדִילָֽיִךְ ׃ | 25 |
೨೫ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
וְאָשִׁ֤יבָה שֹׁפְטַ֙יִךְ֙ כְּבָרִ֣אשֹׁנָ֔ה וְיֹעֲצַ֖יִךְ כְּבַתְּחִלָּ֑ה אַחֲרֵי־כֵ֗ן יִקָּ֤רֵא לָךְ֙ עִ֣יר הַצֶּ֔דֶק קִרְיָ֖ה נֶאֱמָנָֽה׃ | 26 |
೨೬ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
צִיּ֖וֹן בְּמִשְׁפָּ֣ט תִּפָּדֶ֑ה וְשָׁבֶ֖יהָ בִּצְדָקָֽה׃ | 27 |
೨೭ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
וְשֶׁ֧בֶר פֹּשְׁעִ֛ים וְחַטָּאִ֖ים יַחְדָּ֑ו וְעֹזְבֵ֥י יְהוָ֖ה יִכְלֽוּ׃ | 28 |
೨೮ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.
כִּ֣י יֵבֹ֔שׁוּ מֵאֵילִ֖ים אֲשֶׁ֣ר חֲמַדְתֶּ֑ם וְתַ֨חְפְּר֔וּ מֵהַגַּנּ֖וֹת אֲשֶׁ֥ר בְּחַרְתֶּֽם׃ | 29 |
೨೯“ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
כִּ֣י תִֽהְי֔וּ כְּאֵלָ֖ה נֹבֶ֣לֶת עָלֶ֑הָ וּֽכְגַנָּ֔ה אֲשֶׁר־מַ֖יִם אֵ֥ין לָֽהּ׃ | 30 |
೩೦ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.
וְהָיָ֤ה הֶחָסֹן֙ לִנְעֹ֔רֶת וּפֹעֲל֖וֹ לְנִיצ֑וֹץ וּבָעֲר֧וּ שְׁנֵיהֶ֛ם יַחְדָּ֖ו וְאֵ֥ין מְכַבֶּֽה׃ ס | 31 |
೩೧ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”