< יְשַׁעְיָהוּ 31 >
ה֣וֹי הַיֹּרְדִ֤ים מִצְרַ֙יִם֙ לְעֶזְרָ֔ה עַל־סוּסִ֖ים יִשָּׁעֵ֑נוּ וַיִּבְטְח֨וּ עַל־רֶ֜כֶב כִּ֣י רָ֗ב וְעַ֤ל פָּֽרָשִׁים֙ כִּֽי־עָצְמ֣וּ מְאֹ֔ד וְלֹ֤א שָׁעוּ֙ עַל־קְד֣וֹשׁ יִשְׂרָאֵ֔ל וְאֶת־יְהוָ֖ה לֹ֥א דָרָֽשׁוּ׃ | 1 |
೧ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
וְגַם־ה֤וּא חָכָם֙ וַיָּ֣בֵא רָ֔ע וְאֶת־דְּבָרָ֖יו לֹ֣א הֵסִ֑יר וְקָם֙ עַל־בֵּ֣ית מְרֵעִ֔ים וְעַל־עֶזְרַ֖ת פֹּ֥עֲלֵי אָֽוֶן׃ | 2 |
೨ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
וּמִצְרַ֤יִם אָדָם֙ וְֽלֹא־אֵ֔ל וְסוּסֵיהֶ֥ם בָּשָׂ֖ר וְלֹא־ר֑וּחַ וַֽיהוָ֞ה יַטֶּ֣ה יָד֗וֹ וְכָשַׁ֤ל עוֹזֵר֙ וְנָפַ֣ל עָזֻ֔ר וְיַחְדָּ֖ו כֻּלָּ֥ם יִכְלָיֽוּן׃ ס | 3 |
೩ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
כִּ֣י כֹ֣ה אָֽמַר־יְהוָ֣ה ׀ אֵלַ֡י כַּאֲשֶׁ֣ר יֶהְגֶּה֩ הָאַרְיֵ֨ה וְהַכְּפִ֜יר עַל־טַרְפּ֗וֹ אֲשֶׁ֨ר יִקָּרֵ֤א עָלָיו֙ מְלֹ֣א רֹעִ֔ים מִקּוֹלָם֙ לֹ֣א יֵחָ֔ת וּמֵֽהֲמוֹנָ֖ם לֹ֣א יַֽעֲנֶ֑ה כֵּ֗ן יֵרֵד֙ יְהוָ֣ה צְבָא֔וֹת לִצְבֹּ֥א עַל־הַר־צִיּ֖וֹן וְעַל־גִּבְעָתָֽהּ׃ | 4 |
೪ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
כְּצִפֳּרִ֣ים עָפ֔וֹת כֵּ֗ן יָגֵ֛ן יְהוָ֥ה צְבָא֖וֹת עַל־יְרֽוּשָׁלִָ֑ם גָּנ֥וֹן וְהִצִּ֖יל פָּסֹ֥חַ וְהִמְלִֽיט׃ | 5 |
೫ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
שׁ֗וּבוּ לַאֲשֶׁ֛ר הֶעְמִ֥יקוּ סָרָ֖ה בְּנֵ֥י יִשְׂרָאֵֽל׃ | 6 |
೬“ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.
כִּ֚י בַּיּ֣וֹם הַה֔וּא יִמְאָס֗וּן אִ֚ישׁ אֱלִילֵ֣י כַסְפּ֔וֹ וֶאֱלִילֵ֖י זְהָב֑וֹ אֲשֶׁ֨ר עָשׂ֥וּ לָכֶ֛ם יְדֵיכֶ֖ם חֵֽטְא׃ | 7 |
೭ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.
וְנָפַ֤ל אַשּׁוּר֙ בְּחֶ֣רֶב לֹא־אִ֔ישׁ וְחֶ֥רֶב לֹֽא־אָדָ֖ם תֹּֽאכֲלֶ֑נּוּ וְנָ֥ס לוֹ֙ מִפְּנֵי־חֶ֔רֶב וּבַחוּרָ֖יו לָמַ֥ס יִהְיֽוּ׃ | 8 |
೮ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.
וְסַלְעוֹ֙ מִמָּג֣וֹר יַֽעֲב֔וֹר וְחַתּ֥וּ מִנֵּ֖ס שָׂרָ֑יו נְאֻם־יְהוָ֗ה אֲשֶׁר־א֥וּר לוֹ֙ בְּצִיּ֔וֹן וְתַנּ֥וּר ל֖וֹ בִּירוּשָׁלִָֽם׃ ס | 9 |
೯ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.