< 2 इतिहास 19 >
1 यहूदिया का राजा यहोशाफ़ात सुरक्षित येरूशलेम में अपने घर को पहुंचा किंतु येहू, जो दर्शी हनानी का पुत्र था,
೧ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು.
2 उससे भेंट करने गया और राजा यहोशाफ़ात से कहा: क्या सही है कि आप दुष्टों की सहायता करें और याहवेह के शत्रुओं से प्रेम करें और याहवेह की ओर से अपने आप पर परमेश्वर का क्रोध ले आएं?
೨ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.
3 मगर आप में कुछ अच्छी बातें ज़रूर है आपने देश में से अशेरा के खंभे हटा दिए है और आपने अपना हृदय परमेश्वर की खोज करने की ओर लगाया है.
೩ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.
4 यहोशाफ़ात येरूशलेम में रहता रहा. उसने प्रजा में घूमना शुरू कर दिया. बेअरशेबा से लेकर एफ्राईम के पहाड़ी इलाके तक और उसकी कोशिशों से लोग अपने पूर्वजों के परमेश्वर याहवेह की ओर हो गए.
೪ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.
5 यहूदिया देश के हर एक नगर में उसने न्यायाध्यक्ष ठहरा दिए.
೫ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.
6 न्यायाध्यक्षों से उसने कहा था, सोचो की क्या जवाबदारी है तुम्हारी. क्योंकि जब तुम न्याय करते हो, तुम किसी मनुष्य के लिए नहीं, याहवेह के लिए न्याय करते हो, वो तुम्हारे साथ बने रहते हैं.
೬ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.
7 तुममें याहवेह के प्रति श्रद्धा और भय की भावना बनी रहे. अपने काम के विषय बहुत ही सावधान रहो, क्योंकि कुटिलता में या पक्षपात में या घूस लेने में याहवेह हमारे परमेश्वर का कोई काम नहीं हुआ करता.
೭ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.
8 येरूशलेम में भी उसने कुछ लेवियों, पुरोहितों और इस्राएल के पितरों के गोत्रों के कुछ प्रमुखों को याहवेह की ओर से येरूशलेम में विवादों के न्याय देने के लिए चुना.
೮ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.
9 राजा ने उन्हें आदेश दिया, तुम्हारी जवाबदारी याहवेह के प्रति श्रद्धा और भय की भावना में, सच्चाई और पूरे मन से हो.
೯ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,
10 जब कभी प्रजाजनों की ओर से तुम्हारे सामने खून खराबा, नियम तोड़ने से संबंधित मुकद्दमा लाया जाए, तब तुम उन्हें निर्देश देना. उन्हें चेतावनी देना है कि वे याहवेह के सामने दोषी साबित न हों और तुम पर और तुम्हारे भाइयों पर परमेश्वर का क्रोध न उतरे. इस तरह की प्रक्रिया से तुम दोषी नहीं पाए जाओगे.
೧೦ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.
11 “देखो, याहवेह से संबंधित हर एक विषय में प्रमुख पुरोहित अमरियाह ज़िम्मेदार होगा और राजा से संबंधित विषयों के लिए इशमाएल का पुत्र ज़ेबादिया, जो यहूदाह गोत्र का प्रशासक है. लेवी तुम्हारे लिए निर्णयों के लेने का काम पूरा करेंगे. हिम्मत बांधकर काम में जुट जाओ. भले लोगों के लिए याहवेह का साथ हमेशा रहेगा.”
೧೧ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.