< 2 इतिहास 28 >

1 शासन शुरू करते समय आहाज़ की उम्र बीस साल थी. येरूशलेम में उसने सोलह साल शासन किया. उसने वह नहीं किया जो याहवेह की दृष्टि में सही था, जैसा उसके पूर्वज दावीद ने किया था.
ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ.
2 वह इस्राएल के राजाओं की नीति का पालन करता रहा. उसने बाल देवताओं की मूर्तियां बनाईं.
ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದು, ಆರಾಧಿಸುವುದಕ್ಕಾಗಿ ಬಾಳನ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಸಿದನು.
3 इनके अलावा; वह बेन-हिन्‍नोम घाटी में धूप जलाता था और उसने अपने पुत्रों की अग्निबलि चढ़ाई. यह उन जनताओं की घृणित प्रथाएं थी, जिन्हें याहवेह ने इस्राएल वंशजों के सामने से दूर भगाया था.
ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.
4 वह पूजा स्थलों पर, पहाड़ियों पर और हर एक हरे वृक्ष के नीचे धूप जलाकर बलि चढ़ाता रहा.
ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
5 तब याहवेह उसके परमेश्वर ने उसे अराम के राजा के अधीन कर दिया. उन्होंने उसे हरा दिया और उनमें से बड़ी संख्या में बंदी बनाए और उन्हें दमेशेक ले गए. उसे इस्राएल के राजा के अधीन भी कर दिया गया. उसने उसे बुरी तरह से हराया.
ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.
6 इसलिये कि उन्होंने अपने पूर्वजों के परमेश्वर याहवेह को त्याग दिया था, रेमालियाह के पुत्र पेकाह ने एक ही दिन में यहूदिया के सभी एक लाख बीस हज़ार योद्धाओं को मार गिराया.
ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
7 एफ्राईमी ज़ीकरी ने राजपुत्र मआसेइयाह और गृह प्रशासक अज़रीकाम का वध कर दिया और राजा के बाद के सर्वोच्च अधिकारी एलकाना का भी.
ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
8 इस्राएली अपने ही भाइयों के राज्य में से दो लाख पत्नियां, पुत्र और पुत्रियां बंदी बनाकर अपने साथ ले गए. इनके अलावा वे वहां से बड़ी लूट इकट्ठा कर शमरिया ले गए.
ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.
9 मगर वहां याहवेह का एक भविष्यद्वक्ता था-ओदेद-वह शमरिया आई हुई सेना से भेंट करने चल पड़ा. उसने उन्हें कहा, “यह समझ लो: क्योंकि याहवेह, तुम्हारे पूर्वजों के परमेश्वर यहूदिया से गुस्सा थे, उन्होंने ही इन्हें तुम्हारे अधीन कर दिया है. तुमने क्रोध में उनका संहार ऐसी क्रूरता में किया है, कि यह बात परमेश्वर के ध्यान में आ गई है.
ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.
10 अब तुम यह विचार कर रहे हो, कि इनका दमन कर यहूदिया और येरूशलेम वासियों के पुरुष और स्त्री को दास बनाओ, क्या यह सच नहीं कि तुम भी याहवेह, तुम्हारे परमेश्वर के सामने अपराधी हो?
ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?
11 इसलिये अब मेरी सुनो और इन बंदियों को, जिन्हें तुम अपने ही भाइयों में से पकड़कर ले आए हो, लौट जाने दो; क्योंकि अब याहवेह का तेज क्रोध तुम्हारे विरुद्ध भड़क रहा है.”
ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.
12 तब एफ्राईम के वंशजों में के कुछ प्रमुख—येहोहानन का पुत्र अज़रियाह, मेशिल्लेमोथ का पुत्र बेरेखियाह, शल्लूम का पुत्र येहिज़किय्याह और हादलाई का पुत्र अमासा-उनके विरुद्ध हो गए, जो युद्ध से लौट रहे थे.
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು
13 इन्होंने उनसे कहा, “सही नहीं कि तुम बंदियों को यहां लाओ. इसके द्वारा तुम याहवेह के विरुद्ध हमारे पापों को बढ़ाना चाह रहे हो. हमारा दोष इतना बड़ा है कि इस्राएल के विरुद्ध याहवेह का क्रोध दहक रहा है.”
ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.
14 तब योद्धाओं ने लूट की सामग्री और बंदियों को अधिकारियों और सारी सभा के सामने लाकर छोड़ दिया.
ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು.
15 तब वे लोग, जिन्हें चुना गया था, उठे, नंगे बंदियों को लूट सामग्री से निकालकर कपड़े पहनाए उन्हें जूतियां दी, उन्हें वस्त्र पहनाकर उन्हें भोजन और पानी दिया, तेल से उनका अभिषेक किया, उनके दुर्बलों को गधों पर चढ़ाया और उन्हें खजूर नगर यानी येरीख़ो तक उनके भाइयों के पास छोड़ आए फिर वे शमरिया लौट गए.
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.
16 तब राजा आहाज़ ने अश्शूर के राजा से सहायता की विनती की.
ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.
17 एक बार फिर एदोमियों ने यहूदिया पर हमला किया और बहुतों को बंदी बना लिया.
ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು.
18 फिलिस्तीनियों ने भी तराई और यहूदिया के नेगेव पर चढ़ाई करके बेथ-शेमेश, अय्जालोन, गदेरोथ और सोकोह का उसके आस-पास के गांवों सहित, तिमनाह को उसके गांवों सहित और गिमज़ो को उसके गांवों सहित कब्जे में कर लिया और वे वहीं बस भी गए.
ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು.
19 याहवेह द्वारा यहूदिया को इस दयनीय स्थिति में डाले जाने के पीछे कारण थे यहूदिया के राजा आहाज़ की याहवेह के प्रति बड़ी विश्वासहीनता और उसके द्वारा यहूदिया में लाई गई दुष्टता.
ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.
20 तब अश्शूर का राजा तिगलथ-पलेसेर वहां आया ज़रूर, मगर उसने आहाज़ की सहायता करने की बजाय उसे सताया.
ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು.
21 यद्यपि आहाज़ ने याहवेह के भवन से, राजघराने से और प्रशासकों से धन लेकर अश्शूर के राजा को दे दी थी, इसका कोई लाभ न हुआ.
ಆಹಾಜನು ಯೆಹೋವ ದೇವರ ಆಲಯದಿಂದಲೂ, ಅರಮನೆಯಿಂದಲೂ, ಪ್ರಧಾನರಿಂದಲೂ ಆಸ್ತಿಯ ಒಂದು ಪಾಲನ್ನು ತೆಗೆದುಕೊಂಡು, ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕೊಟ್ಟನು, ಆದರೂ ಅವನು ಆಹಾಜನಿಗೆ ಸಹಾಯ ಮಾಡಲಿಲ್ಲ.
22 अपनी इस विपत्ति की स्थिति में यही राजा आहाज़ ने कई और बुरे पाप किये और याहवेह का और अधिक अविश्वासयोग्य बन गया.
ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.
23 क्योंकि अब वह दमेशेक के देवताओं को बलि चढ़ाने लगा था, जो वास्तव में उसकी हार के कारण थे. वह यह विचार करने लगा, “जब ये देवता अराम के राजा की सहायता कर सकते हैं तो, वे मेरी भी सहायता करेंगे.” मगर ये ही इस्राएल के पतन का कारण ठहरे.
ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.
24 इसके अलावा, आहाज़ ने परमेश्वर के भवन के सब बर्तनों को इकट्ठा करके उन पात्रों के टुकड़े-टुकड़े कर दिये और याहवेह के भवन का द्वार बंद करवा दिए. उसने येरूशलेम के कोने-कोने में अपने लिए वेदियां बनवा लीं.
ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
25 उसने यहूदिया के हर एक नगर में वेदियों को बनवाया, कि इन पर अन्य देवताओं के लिए धूप जलाई जा सके. इसके द्वारा उसने अपने पूर्वजों के परमेश्वर, याहवेह के क्रोध को भड़का दिया.
ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.
26 आहाज़ के बाकी कामों और उसकी सारी नीतियों का वर्णन शुरू से अंत तक, यहूदिया और इस्राएल के राजा की पुस्तक में किया गया है.
ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
27 तब आहाज़ हमेशा के लिए अपने पूर्वजों से जा मिला. उन्होंने उसे येरूशलेम नगर में ही गाड़ दिया. उन्होंने उसे इस्राएल के राजाओं के लिए ठहराई गई कब्रों में जगह नहीं दी. उसके स्थान पर उसका पुत्र हिज़किय्याह राजा हुआ.
ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.

< 2 इतिहास 28 >