< 2 शमूएल 14 >
1 ज़ेरुइयाह के पुत्र योआब ने यह भांप लिया कि राजा का हृदय अबशालोम के लिए लालायित है.
ಅರಸನಾದ ದಾವೀದನ ಹೃದಯವು ಅಬ್ಷಾಲೋಮನ ಕಡೆಗೆ ಇರುವುದನ್ನು ಚೆರೂಯಳ ಮಗ ಯೋವಾಬನಿಗೆ ತಿಳಿಯಿತು.
2 योआब ने तकोआ नगर से एक विदुषी को बुलवाकर उसे ये निर्देश दिए, “विलाप-वस्त्र धारण कर कृपया आप एक विलाप करनेवाली का अभिनय कीजिए. आप किसी भी प्रकार का सौन्दर्य-प्रसाधन न कीजिए. आपके रोने का ढंग ऐसा हो मानो आप लंबे समय से किसी मृतक के लिए विलाप कर रही हों.
ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,
3 तब आप राजा की उपस्थिति में जाकर इस प्रकार कहिए.” और योआब ने उस स्त्री को समझा दिया कि उसे वहां क्या-क्या कहना होगा.
ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು,” ಎಂದು ಹೇಳಿ ಯೋವಾಬನು ಅವಳಿಗೆ ಕಲಿಸಿಕೊಟ್ಟನು.
4 जब तकोआ निवासी वह स्त्री राजा की उपस्थिति में आई, उसने भूमि पर मुख के बल गिरकर सम्मानपूर्वक राजा का अभिवादन किया और राजा के सामने अपनी यह विनती की, “महाराज मेरी रक्षा कीजिए!”
ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.
5 राजा ने उससे प्रश्न किया, “क्या है तुम्हारी व्यथा?” उसने उत्तर दिया, “मैं एक अभागी विधवा हूं क्योंकि मेरे पति की मृत्यु हो चुकी है.
ಅರಸನು ಅವಳಿಗೆ, “ನಿನಗೆ ಏನಾಯಿತು?” ಎಂದನು. ಅದಕ್ಕವಳು, “ನಾನು ನಿಶ್ಚಯವಾಗಿ ವಿಧವೆಯಾದ ಸ್ತ್ರೀಯು. ನನ್ನ ಗಂಡನು ಸತ್ತುಹೋಗಿದ್ದಾನೆ.
6 आपकी सेविका के दो पुत्र थे. जब वे खेत में थे, उनमें विवाद फूट पड़ा. वहां कोई भी न था, जो उनके बीच हस्तक्षेप करे. एक ने ऐसा वार किया कि दूसरे की मृत्यु हो गई.
ಆದರೆ ನಿನ್ನ ಸೇವಕಳಿಗೆ ಇಬ್ಬರು ಪುತ್ರರಿದ್ದರು. ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು. ಅವರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ, ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
7 अब सारे परिवार आपकी सेविका के विरुद्ध उठ खड़ा हुआ है. उनकी मांग है, ‘अपना वह पुत्र हमें सौंप दो, जिसने भाई की हत्या की है, कि हम उसके भाई की हत्या के लिए उसकी भी हत्या करे.’ यदि वे ऐसा करेंगे तो उत्तराधिकारी की संभावना ही समाप्त हो जाएगी. इससे तो वे उत्तराधिकारी ही समाप्त कर देंगे. इसमें तो वे मेरे शेष रह गए अंगार का ही शमन कर देंगे और तब पृथ्वी पर मेरे पति का न तो नाम रह जाएगा और न कोई उत्तराधिकारी.”
ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.
8 यह सुन राजा ने उस स्त्री से कहा, “तुम अपने घर जाओ. इस विषय में मैं आदेश प्रसारित करूंगा.”
ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು.
9 तकोआ निवासी उस स्त्री ने राजा से कहा, “महाराज, मेरे स्वामी, इसका दोष मुझ पर और मेरे पिता के वंश पर हो. महाराज और महाराज का सिंहासन इस विषय में निर्दोष रहेंगे.”
ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು.
10 राजा ने आगे यह भी कहा, “यदि कोई भी इस विषय में आपत्ति उठाए तो उसे मेरे यहां भेज देना. वह फिर कभी तुम्हें सताएगा नहीं.”
ಅದಕ್ಕೆ ಅರಸನು, “ಯಾವನಾದರೂ ನಿನಗೆ ಏನಾದರೂ ಹೇಳಿದರೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದೆ ಇರುವನು,” ಎಂದನು.
11 उस स्त्री ने तब यह भी कहा, “कृपया महाराज, याहवेह अपने परमेश्वर से यह विनती करें कि अब बदला लेनेवाला किसी की हत्या न करे और मेरा पुत्र जीवित रहे.” राजा ने आश्वासन दिया, “जीवन्त याहवेह की शपथ, तुम्हारे पुत्र का एक बाल भी भूमि पर न गिरेगा.”
ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು.
12 इसके बाद उस स्त्री ने दावीद से यह कहा, “कृपया अपनी दासी को महाराज, मेरे स्वामी, एक और विनती प्रस्तुत करने की आज्ञा दें.” “कहो,” राजा ने कहा.
ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. ಆಗ ಅವನು, “ಹೇಳು,” ಎಂದನು.
13 उसे स्त्री ने कहा, “क्या कारण है आपने परमेश्वर की प्रजा के लिए ऐसी युक्ति की है? आपने इस समय जो निर्णय दिया है, उसके द्वारा महाराज ने स्वयं अपने को ही दोषी घोषित कर दिया है, क्योंकि आपने अपने निकाले हुए को यहां नहीं लौटाया है.
ಆಗ ಆ ಸ್ತ್ರೀಯು, “ಹಾಗಾದರೆ, ಏಕೆ ದೇವಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನಡೆಸುವುದೇನು? ಅರಸನು ತಾನು ಬಹಿಷ್ಕರಿಸಿದ ಮಗನನ್ನು ತಿರುಗಿ ಸೇರಿಸಿಕೊಳ್ಳದೆ ಹೋದದ್ದರಿಂದ, ತನ್ನನ್ನು ತಾನೇ ಅಪರಾಧಿ ಎಂದು ತೀರ್ಪುಮಾಡಿದ ಹಾಗಾಯಿತು.
14 हम सभी की मृत्यु निश्चित है. हम सभी भूमि पर छलक चुके उस जल के समान हैं, जिसे दोबारा इकट्ठा करना संभव नहीं होता. मगर परमेश्वर जीवन नष्ट नहीं करते. वह ऐसी युक्ति करते हैं कि कोई भी निकाले हुए हमेशा उनकी उपस्थिति से दूर न रहे.
ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.
15 “यह कहने के लिए मैं महाराज के सम्मुख इसलिये आई हूं कि, लोगों की सुनकर मुझे भय लग रहा है. आपकी सेविका ने विचार किया, ‘अब मुझे महाराज से यह कहना ही होगा. संभव है, महाराज अपनी सेविका की विनती पूरी करें.
“ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು.
16 क्योंकि जब महाराज यह सुनेंगे, वही अपनी सेविका को उस व्यक्ति से सुरक्षा प्रदान करेंगे, जो मुझे और मेरे पुत्र को परमेश्वर के उत्तराधिकार से वंचित करने पर है.’
ಏಕೆಂದರೆ ಅರಸನು ಕೇಳಿ ನನ್ನನ್ನೂ, ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕೆಂದಿರುವ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು,’ ಎಂದುಕೊಂಡೆನು.
17 “आपकी सेविका ने यह भी विचार किया, ‘महाराज, मेरे स्वामी का आदेश ही मेरे मन को शांति दे सकता है, क्योंकि महाराज, मेरे स्वामी परमेश्वर के सदृश ही उचित-अनुचित भांप लेते हैं. याहवेह, आपके परमेश्वर आपके साथ रहें.’”
“ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”
18 यह सुन राजा ने उस स्त्री से कहा, “मुझसे कुछ न छिपाना; मैं तुमसे कुछ पूछने जा रहा हूं.” उस स्त्री ने उत्तर दिया, “महाराज, मेरे स्वामी मुझसे प्रश्न करें.”
ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು.
19 राजा ने पूछा, “इन सारी बातों में क्या तुम्हारे साथ योआब शामिल है?” आपके जीवन की शपथ, “महाराज मेरे स्वामी द्वारा पूछे गए प्रश्न का उत्तर निरे सत्य के अलावा कुछ और हो ही नहीं सकता. वह योआब ही थे, जिन्होंने मुझे यह सब करने का आदेश दिया था; यह सारे वक्तव्य आपकी सेविका को उन्हीं ने सुझाया था.
ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
20 आपके सेवक योआब ने यह सब इसलिये किया है, कि इस समय घटित हो रही घटनाओं की दिशा परिवर्तित की जा सके. मगर मेरे स्वामी में परमेश्वर के स्वर्गदूत के समान ऐसी बुद्धि है कि पृथ्वी के सारे विषयों को समझा जा सके.”
ಈ ಮಾತನ್ನು ರೂಪಕವಾಗಿ ತಿರುಗಿಸುವುದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿಯಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ದೇವದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ,” ಎಂದಳು.
21 तब राजा ने योआब को आदेश दिया, “सुनो, मैंने तुम्हारा यह प्रस्ताव स्वीकार किया. जाओ, उस युवा अबशालोम को यहां ले आओ.”
ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು.
22 योआब ने भूमि पर दंडवत होकर राजा का अभिवादन किया और उनसे यह प्रतिवेदन किया, “आज आपके सेवक को यह मालूम हो गया है, कि मुझ पर आपकी दया बनी है, क्योंकि महाराज, मेरे स्वामी ने मेरे प्रस्ताव को स्वीकार किया है.”
ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.
23 तब योआब गेशूर के लिए चले गए और अबशालोम को येरूशलेम ले आए.
ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.
24 राजा ने आदेश दिया, “सही होगा कि उसे उसी के घर में रहने दिया जाए; वह मेरी उपस्थिति में न आए.” इसलिये अबशालोम अपने घर चला गया, और राजा का चेहरा न देखा.
ಆದರೆ ಅರಸನು, “ಅವನು ತನ್ನ ಮನೆಗೆ ತಿರುಗಿ ಹೋಗಲಿ. ಅವನು ನನ್ನ ಮುಖವನ್ನು ನೋಡಬಾರದು,” ಎಂದನು. ಆದ್ದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿಹೋದನು.
25 सारे इस्राएल में सुंदरता में ऐसा कोई भी न था जो अबशालोम के समान प्रशंसनीय हो. सिर से लेकर पैरों तक उसमें कहीं भी कोई दोष न था.
ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
26 प्रति वर्ष जब उसके केश काटे जाते थे; क्योंकि उसके सिर के लिए वे बहुत भारी सिद्ध होते थे, तब राजा के तुलामान के अनुसार इन केशों का भार 200 शकेल होता था.
ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು.
27 अबशालोम के तीन पुत्र पैदा हुए और एक पुत्री, जिसका नाम था तामार. वह रूपवती स्त्री थी.
ಅಬ್ಷಾಲೋಮನಿಗೆ ಮೂರು ಮಂದಿ ಪುತ್ರರೂ, ತಾಮಾರ್ ಎಂಬ ಒಬ್ಬ ಪುತ್ರಿಯೂ ಹುಟ್ಟಿದರು. ತಾಮಾರಳು ಸೌಂದರ್ಯವುಳ್ಳ ಸ್ತ್ರೀ ಆಗಿದ್ದಳು.
28 अबशालोम को येरूशलेम में रहते हुए राजा की उपस्थिति में गए बिना दो साल बीत गए.
ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
29 तब अबशालोम ने योआब से विनती की कि उसे राजा की उपस्थिति में जाने दिया जाए, मगर योआब उससे भेंटकरने नहीं आए.
ಆದ್ದರಿಂದ ಅಬ್ಷಾಲೋಮನು ಅರಸನ ಬಳಿಗೆ ತನ್ನನ್ನು ಕಳುಹಿಸುವುದಕ್ಕೆ ಯೋವಾಬನನ್ನು ಕರೆಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲೊಲ್ಲದೆ ಹೋದನು. ಎರಡನೆಯ ಸಾರಿ ಅವನನ್ನು ಕರೆಕಳುಹಿಸಿದನು. ಅವನು ಬರಲೊಲ್ಲದೆ ಹೋದನು.
30 तब अबशालोम ने अपने सेवकों को आदेश दिया, “जाओ, योआब के खेत में आग लगा दो. यह देख लेना कि योआब का खेत मेरे खेत से लगा हुआ है और इसमें जौ की उपज खड़ी हुई है.” अबशालोम के सेवकों ने जाकर उस खेत में आग लगा दी.
ಆದ್ದರಿಂದ ಅವನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲಕ್ಕೆ ಸಮೀಪವಾಗಿ ಯೋವಾಬನ ಹೊಲವಿದೆ. ಅದರಲ್ಲಿ ಜವೆಗೋಧಿ ಇದೆ. ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ,” ಎಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
31 इस पर योआब ने अबशालोम के घर पर जाकर उससे पूछा, “तुम्हारे सेवकों ने मेरे खेत में आग क्यों लगाई?”
ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ, “ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟಿದ್ದೇಕೆ?” ಎಂದು ಕೇಳಿದನು.
32 अबशालोम ने योआब को उत्तर दिया, “याद है, मैंने आपसे विनती की थी, ‘आप यहां आएं, कि मैं आपको राजा की उपस्थिति में इस विनती के साथ भेजूं, “क्या लाभ हुआ मेरे गेशूर से यहां आने का? मेरे लिए अच्छा यही होता कि मैं वहीं ठहरा रहता!”’ अब तो मुझे राजा के दर्शन करने दीजिए. यदि मैं उनकी दृष्टि में अपराधी हूं, तो वही मुझे मृत्यु दंड दे दें.”
ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.
33 तब योआब ने जाकर राजा को यह सब बताया. राजा ने अबशालोम को बुलवाया. अबशालोम ने राजा की उपस्थिति में जाकर भूमि पर गिरकर उनको नमस्कार किया और राजा ने अबशालोम का चुंबन लिया.
ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ, ಅರಸನು ಅಬ್ಷಾಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರಮಾಡಿದನು. ಆಗ ಅರಸನು ಅಬ್ಷಾಲೋಮನಿಗೆ ಮುದ್ದಿಟ್ಟನು.