< 2 शमूएल 24 >

1 इस्राएल के विरुद्ध याहवेह का क्रोध एक बार फिर भड़क उठा. उन्होंने दावीद को ही इस्राएल के विरुद्ध कर दिया. उन्होंने दावीद को उकसाया, “इस्राएल और यहूदिया की गिनती करो.”
ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.
2 तब राजा ने सेना के आदेशक योआब और उनके सहयोगियों को आदेश दिया, “दान से लेकर बेअरशेबा तक जाकर इस्राएल के सारे गोत्रों की जनगणना करो, कि मुझे जनसंख्या का पता चल सके.”
ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.
3 मगर योआब ने राजा से कहा, “जब तक आपकी आंखों में ज्योति है, याहवेह आपके परमेश्वर वर्तमान जनसंख्या की सौ गुणा वृद्धि करें, मगर महाराज, मेरे स्वामी, ऐसा करना क्यों चाह रहे हैं?”
ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.
4 मगर राजा के आदेश के आगे योआब और अन्य प्रधानों का तर्क विफल ही रहा. तब योआब और सेना के प्रधान संसद भवन से निकलकर इस्राएल की जनगणना के लिए चल पड़े.
ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
5 उन्होंने यरदन नदी पार कर अरोअर नामक स्थान पर शिविर डाले. यह स्थान याज़र की ओर, गाद की तराई के बीच में है.
ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.
6 इसके बाद वे गिलआद आ गए, और हित्तियों के क्षेत्र के कादेश में तब वे दान यअन पहुंचे. दान यअन के बाद वे सीदोन के निकट जा पहुंचे.
ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.
7 फिर वे सोर के गढ़ पहुंचे, जहां से उन्होंने हिव्वियों और कनानियों के सभी नगरों में गिनती पूरी की. इसके बाद वे बेअरशेबा में यहूदिया के नेगेव पहुंचे.
ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.
8 जब वे संपूर्ण देश में गिनती का काम पूरा कर चुके, वे येरूशलेम आ गए. अब तक नौ महीने और बीस दिन पूरे हो चुके थे.
ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
9 योआब ने राजा के सामने राज्य की जनगणना का लेखा प्रस्तुत किया: इस्राएल में आठ लाख वीर योद्धा थे, और यहूदिया में पांच लाख, जिनमें तलवार के कौशल की क्षमता थी.
ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.
10 जनगणना के परिणाम स्पष्ट होते ही दावीद का मन उन्हें कचोटने लगा. सुबह जागने पर दावीद ने याहवेह से कहा, “यह करके मैंने घोर पाप किया है. मगर याहवेह, अपने सेवक का अपराध दूर कर दीजिए, क्योंकि यह मेरी बड़ी मूर्खता थी.”
ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.
11 सुबह जागने पर दावीद को याहवेह का यह संदेश भविष्यद्वक्ता गाद को भेज दिया गया. वह दावीद के लिए नियुक्त दर्शी थे:
ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,
12 “जाओ और दावीद से यह कहो, ‘याहवेह का यह संदेश है, मैं तुम्हारे सामने तीन विकल्प प्रस्तुत कर रहा हूं. इनमें से तुम एक चुन लो, कि मैं उसे तुम पर इस्तेमाल कर सकूं.’”
“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.
13 तब गाद दावीद के सामने आए और उनसे यह कहा, “क्या तुम्हारे देश में तीन वर्ष के लिए अकाल भेजा जाए? या तुम तीन महीने तक उन शत्रुओं से बचकर भागते रहो, जो तुम्हारा पीछा कर रहे थे? या क्या देश में तीन दिन की महामारी हो? अब विचार करके निर्णय करो कि मैं अपने भेजनेवाले को उत्तर दे सकूं.”
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.
14 तब दावीद ने गाद को उत्तर दिया, “मैं बड़ी मुसीबत में हूं. हमें याहवेह के हाथ से दिया गया दंड ही सहने दीजिए, क्योंकि अपार है उनकी कृपा. मुझे किसी मनुष्य के हाथ में न पड़ने दें.”
ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.
15 तब याहवेह ने उस समय से तय अवधि तक के लिए इस्राएल देश पर महामारी भेज दी. दान से बेअरशेबा तक 70,000 व्यक्तियों की मृत्यु हो गई.
ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
16 जब विनाशक स्वर्गदूत ने येरूशलेम को ध्वस्त करने के उद्देश्य से उसकी ओर हाथ बढ़ाया, याहवेह ने विनाश का विचार त्याग दिया. उन्होंने उस स्वर्गदूत को, जो मनुष्यों को मार रहा था, कहा, “बस करो अब! अपना हाथ रोक दो!” इस समय स्वर्गदूत यबूसी औरनन के खलिहान के निकट था.
ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.
17 जब दावीद ने मनुष्यों का संहार कर रहे स्वर्गदूत को देखा, उन्होंने याहवेह को संबोधित कर कहा, “पाप सिर्फ मैंने किया है. सिर्फ मैं ही हूं अपराधी; मगर ये भेड़ें; क्या दोष है उनका? आपका यह दंड देता हुआ हाथ मुझ पर और मेरे पिता के परिवार के विरुद्ध उठने दीजिए.”
ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.
18 तब गाद उसी दिन दावीद के पास पहुंचे और उन्हें आदेश दिया, “यबूसी औरनन के खलिहान में जाकर याहवेह के लिए वेदी बनाओ.”
ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.
19 दावीद ने गाद का आदेश पालन कर वैसा ही किया, जैसा याहवेह ने उन्हें आदेश दिया था.
ಆಗ ದಾವೀದನು ಗಾದನ ಮುಖಾಂತರವಾಗಿ ತನಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಹೋದನು.
20 जब औरनन ने दृष्टि की, तो यह देखा कि राजा और उनके सेवक उसी की ओर बढ़ते चले आ रहे थे. औरनन ने जाकर दंडवत हो उनको नमस्कार किया.
ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.
21 औरनन ने विनती की, “क्या कारण है कि महाराज, मेरे स्वामी को इस सेवक के यहां आने की आवश्यकता हुई है?” दावीद ने उत्तर दिया, “तुमसे खलिहान खरीदने, कि मैं याहवेह के लिये वेदी बना सकूं. तब बीमारी रुक जायेगी.”
ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.
22 यह सुन औरनन ने दावीद से कहा, “महाराज, मेरे स्वामी को जो कुछ सही लगे, ले लें और भेंट चढ़ा दें. अग्निबलि के लिए ये बैल हैं, और बलि के लिए आवश्यक लकड़ी के लिए भूसी निकालने के ये हथियार और जूआ प्रस्तुत हैं.
ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು.
23 महाराज, यह सब औरनन महाराज को भेंट में प्रस्तुत कर रहा है.” औरनन ने राजा से यह भी कहा, “याहवेह, आपके परमेश्वर, आपको स्वीकार करें.”
ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು.
24 मगर राजा ने औरनन को उत्तर दिया, “नहीं, मैं तुम्हें इनका मूल्य देकर ही इन्हें स्वीकार करूंगा. मैं, याहवेह मेरे परमेश्वर को ऐसी भेंट नहीं चढ़ा सकता, जिसका मैंने मूल्य नहीं चुका दिया है.” दावीद ने चांदी के पचास मुद्राएं देकर खलिहान और बैल मोल ले लिए.
ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.
25 दावीद ने वहां याहवेह के निमित्त वेदी बनाई और उस पर अग्निबलि और मेल बलियां चढ़ाईं. तब याहवेह ने देश के लिए इस प्रार्थना को स्वीकार किया जिससे इस्राएल देश से महामारी जाती रही.
ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.

< 2 शमूएल 24 >