< प्रेरितों के काम 12 >
1 उसी समय राजा हेरोदेस ने कलीसिया के कुछ लोगों को सताने के उद्देश्य से बंदी बना लिया
೧ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.
2 और तलवार से योहन के भाई याकोब की हत्या करवा दी.
೨ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
3 जब उसने यह देखा कि उसके ऐसा करने से यहूदी प्रसन्न होते हैं, उसने पेतरॉस को भी बंदी बनाने का निश्चय किया. यह अखमीरी रोटी के पर्व का अवसर था.
೩ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.
4 पेतरॉस को बंदी बनाकर उसने उन पर चार-चार सैनिकों के चार दलों का पहरा लगा दिया कि फ़सह पर्व समाप्त हो जाने पर वह उन पर मुकद्दमा चलाए.
೪ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
5 पेतरॉस को कारागार में रखा गया किंतु कलीसिया उनके लिए एक मन से प्रार्थना कर रही थी.
೫ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.
6 उन पर मुकद्दमा चलाए जाने से एक रात पहले पेतरॉस दो सैनिकों के मध्य बेड़ियों से बंधे सोए हुए थे. और द्वार के सामने भी चौकीदार पहरा दे रहे थे.
೬ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
7 प्रभु का एक दूत एकाएक वहां प्रकट हुआ और वह कमरा ज्योति से भर गया. स्वर्गदूत ने पेतरॉस को थपथपा कर जगाया और कहा, “जल्दी उठिए!” तत्काल ही पेतरॉस की हथकड़ियां गिर पड़ीं.
೭ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
8 स्वर्गदूत ने पेतरॉस से कहा, “वस्त्र और जूतियां पहन लीजिए” पेतरॉस ने ऐसा ही किया. तब स्वर्गदूत ने उन्हें आज्ञा दी, “अब ऊपरी कपड़ा ओढ़ कर मेरे पीछे-पीछे आ जाइए.”
೮ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.
9 पेतरॉस उसके पीछे कारागार से बाहर आ गए किंतु वह यह समझ नहीं पा रहे थे कि जो कुछ स्वर्गदूत द्वारा किया जा रहा था, वह सच्चाई थी या सिर्फ़ सपना.
೯ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು.
10 जब वे पहले और दूसरे पहरे को पार करके उस लोहे के दरवाज़े पर पहुंचे, जो नगर में खुलता है, वह द्वार अपने आप खुल गया और वे बाहर निकल गए. जब वे गली पार कर चुके तो अचानक स्वर्गदूत उन्हें छोड़कर चला गया.
೧೦ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.
11 तब पेतरॉस की सुध-बुध लौटी और वह कह उठे, “अब मुझे सच्चाई का अहसास हो रहा है कि प्रभु ने ही अपने स्वर्गदूत को भेजकर मुझे हेरोदेस से और यहूदी लोगों की सारी उम्मीदों से छुड़ा लिया है.”
೧೧ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.
12 यह जानकर वह योहन अर्थात् मार्कास की माता मरियम के घर पहुंचे, जहां अनेक शिष्य इकट्ठा होकर प्रार्थना कर रहे थे.
೧೨ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.
13 उनके खटखटाने पर रोदा नामक दासी द्वार पर आई.
೧೩ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.
14 पेतरॉस का शब्द पहचानकर, आनंद में द्वार खोले बिना ही उसने अंदर जाकर बताया कि पेतरॉस बाहर द्वार पर खड़े हैं.
೧೪ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು.
15 वे उससे कहने लगे, “तेरी तो मति मारी गई है!” किंतु जब वह अपनी बात पर अटल रही तो वे कहने लगे, “वह पेतरॉस का स्वर्गदूत होगा.”
೧೫ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.
16 उधर पेतरॉस द्वार खटखटाते रहे. आखिरकार जब उन्होंने द्वार खोला, वे पेतरॉस को देखकर हक्का-बक्का रह गए.
೧೬ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
17 पेतरॉस ने हाथ से शांत रहने का संकेत देते हुए उन्हें बताया कि प्रभु ने किस प्रकार उन्हें कारागार से बाहर निकाला. पेतरॉस ने उनसे कहा कि वे याकोब और अन्य भाई बहिनों को इस विषय में बता दें. तब वह स्वयं दूसरी जगह चले गए.
೧೭ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
18 अगले दिन सुबह सैनिकों में बड़ी खलबली मच गई कि पेतरॉस का क्या हुआ?
೧೮ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು.
19 हेरोदेस ने उनकी बहुत खोज करवाई और उन्हें कहीं भी न पाकर उसने पहरेदारों की जांच की और उन सबके लिए मृत्यु दंड का आदेश दे दिया. फिर हेरोदेस कुछ समय के लिए यहूदिया प्रदेश से कयसरिया नगर चला गया और वहां रहा.
೧೯ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.
20 हेरोदेस सोर और सीदोनवासियों से बहुत नाराज़ था. ये लोग राजा के घर की देखभाल करनेवाले ब्लास्तॉस की सहानुभूति प्राप्त कर एक मत होकर मेल-मिलाप का प्रस्ताव लेकर राजा के पास आए थे क्योंकि अनाज की पूर्ति के लिए वे राजा के क्षेत्र पर ही निर्भर थे.
೨೦ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.
21 हेरोदेस ने नियत दिन अपने राजसी वस्त्र धारण कर सिंहासन पर विराजमान हो प्रजा को संबोधित करना प्रारंभ किया.
೨೧ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.
22 भीड़ चिल्लाती रही, “यह मानव का नहीं, देवता का शब्द है.”
೨೨ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.
23 उसी क्षण प्रभु के एक दूत ने हेरोदेस पर वार किया क्योंकि उसने परमेश्वर को महिमा नहीं दी थी. उसके शरीर में कीड़े पड़ गए और उसकी मृत्यु हो गई.
೨೩ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
24 प्रभु का वचन बढ़ता और फैलता चला गया.
೨೪ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂದಿತು.
25 बारनबास और शाऊल येरूशलेम में अपनी सेवा समाप्त कर वहां से लौट गए. उन्होंने योहन को, जो मार्कास नाम से भी प्रसिद्ध हैं, अपने साथ ले लिया था.
೨೫ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.