< दानिय्येल 2 >
1 नबूकदनेज्ज़र ने अपने शासनकाल के दूसरे साल में स्वप्न देखे; जिससे उसका मन व्याकुल हो गया और वह सो न सका.
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.
2 इसलिये राजा ने आदेश दिया कि जादूगरों, टोन्हों, तांत्रिकों और ज्योतिषियों को बुलाया जाए कि वे राजा को उसका स्वप्न बताएं. जब वे आकर राजा के सामने खड़े हुए,
ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
3 तो राजा ने उनसे कहा, “मैंने एक स्वप्न देखा है जो मुझे व्याकुल कर रहा है और मैं जानना चाहता हूं कि इसका मतलब क्या है.”
ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.
4 तब ज्योतिषियों ने राजा को उत्तर दिया, “राजा चिरंजीवी हों! आप अपना स्वप्न अपने सेवकों को बताईये, और हम उसका अर्थ बताएंगे.”
ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.
5 राजा ने ज्योतिषियों को उत्तर दिया, “मैंने यह दृढ़ निश्चय किया है: यदि तुम लोग मुझे स्वप्न सहित उसका अर्थ नहीं बताओगे, तो मैं तुम्हें टुकड़े-टुकड़े कर दूंगा और तुम्हारे घरों को कचरे के ढेर में बदल दूंगा.
ಅರಸನು ಪಂಡಿತರಿಗೆ ಉತ್ತರವಾಗಿ, “ನನ್ನ ಈ ಮಾತು ಖಂಡಿತ. ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ, ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು. ನಿಮ್ಮ ಮನೆಗಳನ್ನು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
6 पर यदि तुम स्वप्न को बताकर उसका अर्थ भी बताते हो, तो तुमको उपहार और ईनाम और बहुत आदरमान दिया जाएगा. इसलिये तुम मुझे स्वप्न बताओ और उसका अर्थ भी बताओ.”
ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.
7 एक बार फिर उन्होंने उत्तर दिया, “राजा अपना स्वप्न अपने सेवकों को बताएं, और हम उसका अर्थ बताएंगे.”
ಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು.
8 राजा ने उत्तर दिया, “मुझे पूरा निश्चय हो गया है कि तुम लोग समय को टालने की कोशिश कर रहे हो, क्योंकि तुम समझ चुके हो कि मैंने यह दृढ़ निश्चय कर लिया है:
ಆಗ ಅರಸನು ಉತ್ತರವಾಗಿ, “ನಾನು ಇದನ್ನು ದೃಢವಾಗಿ ನಿರ್ಧರಿಸಿದ್ದೇನೆಂದು ಹೇಳಿದ್ದರಿಂದ ನೀವು ಸಮಯ ಉಳಿಸಿಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಿದ್ದೀರೆಂದು ನನಗೆ ನಿಶ್ಚಯವಾಗಿದೆ.
9 यदि तुम मुझे स्वप्न नहीं बताते हो, तो तुम्हारे लिये सिर्फ एक ही दंड है. यह आशा करते हुए कि परिस्थिति बदलेगी, तुम लोगों ने मुझसे झूठी और बुरी बातें कहने का षड़्यंत्र रचा है. इसलिये अब, तुम मुझे मेरा स्वप्न बताओ, और तब मैं जान लूंगा कि तुम मुझे उस स्वप्न का अर्थ भी बता सकते हो.”
ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.
10 ज्योतिषियों ने राजा को उत्तर दिया, “पृथ्वी पर ऐसा कोई व्यक्ति नहीं जो राजा के इस पूछे गये प्रश्न का उत्तर दे सके! पर तो भी न तो किसी बड़े और शक्तिशाली राजा ने किसी जादूगर या टोन्हा या ज्योतिषी से कभी इस प्रकार की कोई बात पूछी है.
ಆಗ ಪಂಡಿತರು ಅರಸನಿಗೆ ಉತ್ತರವಾಗಿ, “ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕದಲ್ಲಿಲ್ಲ! ಆದ್ದರಿಂದ ಯಾವ ಅರಸನಾದರೂ, ಯಾವ ಪ್ರಭುವಾದರೂ, ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ, ಜೋತಿಷ್ಯನಲ್ಲೂ, ಪಂಡಿತನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
11 राजा जो बात पूछ रहे हैं, वह बहुत कठिन है. देवताओं को छोड़, और कोई राजा को यह बात नहीं बता सकता, और देवता मानव प्राणी के बीच नहीं रहते.”
ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”
12 यह सुनकर राजा इतना क्रोधित और आग बबूला हो गया कि उसने बाबेल के सब बुद्धिमान लोगों को मार डालने की आज्ञा दे दी.
ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.
13 इसलिये सब बुद्धिमान लोगों को मार डालने का आदेश निकाला गया, और लोगों को दानिएल तथा उसके मित्रों के खोज में भेजा गया कि वे भी मार डाले जाएं.
ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
14 जब राजा के अंगरक्षकों का प्रधान आरिओख, बाबेल के बुद्धिमान लोगों को मार डालने के लिये निकला था, तो दानिएल ने उससे बुद्धिमानी और व्यवहार कुशलता से बात की.
ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.
15 उसने राजा के अधिकारी से पूछा, “राजा ने ऐसा कठोर आदेश क्यों निकाला है?” तब आरिओख ने दानिएल को वह बात बताई.
ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕನಿಗೆ ಉತ್ತರವಾಗಿ, “ಅರಸನಿಂದ ಇಂಥ ಕಠಿಣವಾದ ಆಜ್ಞೆ ಏಕೆ?” ಎಂದು ಕೇಳಲು, ಅರ್ಯೋಕನು ದಾನಿಯೇಲನಿಗೆ ಆ ಸಂಗತಿಯ ಬಗ್ಗೆ ವಿವರಿಸಿದನು.
16 यह जानकर दानिएल राजा के पास गया और कुछ समय देने की मांग की, ताकि वह राजा को उसके स्वप्न का अर्थ बता सके.
ಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
17 तब दानिएल अपने घर लौटा और उसने अपने मित्रों हननियाह, मिषाएल तथा अज़रियाह को इस विषय में बताया.
ಆಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ಮೀಶಾಯೇಲ್, ಅಜರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
18 उसने उनको उत्साहित किया कि वे स्वर्ग के परमेश्वर से इस रहस्य के बारे में कृपा करने की बिनती करें, ताकि वह और उसके मित्र बाबेल के बाकी बुद्धिमान लोगों के साथ न मार डाले जाएं.
ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
19 रात के समय वह रहस्य एक दर्शन के रूप में दानिएल पर प्रगट हुआ. तब दानिएल ने स्वर्ग के परमेश्वर की महिमा की
ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,
20 और कहा: “परमेश्वर के नाम की महिमा सदा-सर्वदा होती रहे; क्योंकि बुद्धि और शक्ति उसकी है.
ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.
21 वही हैं, जो समय एवं ऋतुओं को बदलते हैं; वे राजाओं को गद्दी से हटाते और दूसरों को गद्दी पर बैठाते हैं. वे बुद्धिमान को बुद्धि और समझदार को ज्ञान देते हैं.
ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.
22 वे गूढ़ और छिपी बातों को प्रगट करते हैं; वे जानते हैं कि अंधेरे में क्या रखा है, और उनके साथ प्रकाश बना रहता है.
ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.
23 हे मेरे पूर्वजों के परमेश्वर, मैं आपको धन्यवाद देता और आपकी प्रशंसा करता हूं: क्योंकि आपने मुझे बुद्धि एवं शक्ति दी है, आपने मुझे वह बात बताई है जो हमने आपसे पूछी, आपने हम पर राजा के स्वप्न को प्रगट किया है.”
ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”
24 तब दानिएल, आरिओख के पास गया जिसे राजा ने बाबेल के बुद्धिमान लोगों को मार डालने के लिये नियुक्त किया था, और उसने आरिओख से कहा, “बाबेल के बुद्धिमान लोगों को मार डालने का काम रोक दीजिए. मुझे राजा के पास ले चलिए, और मैं राजा को उनके स्वप्न का अर्थ बताऊंगा.”
ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು.
25 आरिओख तुरंत दानिएल को राजा के पास ले गया और उसने राजा से कहा, “यहूदिया से बंधुआई में आये लोगों के बीच मुझे एक ऐसा व्यक्ति मिला है, जो राजा को उसके स्वप्न का अर्थ बता सकता है.”
ಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು.
26 राजा ने दानिएल से पूछा (जिसे बैलशत्सर भी कहा जाता था), “क्या तुम इस योग्य हो कि मैंने स्वप्न में जो देखा है उसे और उसका अर्थ बता सको?”
ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.
27 दानिएल ने उत्तर दिया, “राजा जिस रहस्य के बारे में पूछ रहे हैं, उसके बारे में कोई भी बुद्धिमान व्यक्ति, ज्योतिषी, जादूगर या भविष्य बतानेवाला राजा को कुछ नहीं बता सकता,
ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
28 लेकिन स्वर्ग में एक परमेश्वर हैं, जो रहस्यों को प्रगट करते हैं. उन्होंने ने ही राजा नबूकदनेज्ज़र को दिखाया है कि आनेवाले दिनों में क्या होनेवाला है. जब आप अपने पलंग पर लेटे हुए थे, तब आपने जो स्वप्न और दर्शन देखे, वे ये हैं:
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.
29 “महाराज, जब आप अपने पलंग पर लेटे थे, तब आपका मन भविष्य में होनेवाली घटनाओं की ओर हो गया, और रहस्यों के प्रगट करनेवाले ने आपको दिखाया कि भविष्य में क्या होनेवाला है.
“ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.
30 जहां तक मेरी बात है, तो यह रहस्य मुझ पर इसलिये प्रकट नहीं किया गया कि मेरे पास किसी और जीवित व्यक्ति से ज्यादा बुद्धि है, पर इसलिये कि महाराज को रहस्य का अर्थ मालूम हो जाए और आप समझ जाएं कि आपके मन में क्या आया था.
ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.
31 “महाराज, आपने देखा कि आपके सामने एक बड़ी मूर्ति खड़ी थी—एक बहुत बड़ी, चौंधियानेवाली मूर्ति, दिखने में अद्भुत.
“ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು.
32 उस मूर्ति का सिर शुद्ध सोने से बना था, उसकी छाती और भुजाएं चांदी की, उसका पेट और जांघें कांसे की,
ಈ ಪ್ರತಿಮೆಯ ತಲೆಯು ಅಪ್ಪಟ ಬಂಗಾರದಿಂದಲೂ, ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ, ಅದರ ಹೊಟ್ಟೆಯು ಮತ್ತು ತೊಡೆಗಳು ಕಂಚಿನಿಂದಲೂ,
33 उसके टांगे लोहे की और उसके पांव कुछ लोहे के और कुछ सेंके गये मिट्टी के थे.
ಅದರ ಕಾಲುಗಳು ಕಬ್ಬಿಣದಿಂದಲೂ, ಅದರ ಪಾದಗಳು ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿತ್ತು.
34 जब आप देख रहे थे, तो एक चट्टान बिना किसी मानवीय प्रयास के अपने आप कटकर आई और उस मूर्ति के लोहे और मिट्टी के पांव को ऐसी ठोकर मारी कि वे चूर-चूर हो गए.
ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು.
35 तब लोहा, मिट्टी, कांसा, चांदी और सोना सब टूटकर टुकड़े-टुकड़े हो गए और ग्रीष्मकाल में खलिहान के भूंसे के समान हो गये. हवा उनको ऐसे उड़ा ले गई कि उनका कोई छोटा टुकड़ा भी न बचा. पर जिस चट्टान ने मूर्ति को ठोकर मारी थी, वह चट्टान एकाएक बहुत बड़ा पहाड़ बन गई और सारी पृथ्वी में फैल गई.
ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
36 “यही था आपका स्वप्न, और अब हम राजा को उसका अर्थ बताएंगे.
“ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ.
37 हे महाराज, आप तो राजाओं के राजा हैं. स्वर्ग के परमेश्वर ने आपको राज्य और अधिकार और शक्ति और महिमा दी है;
ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.
38 आपके अधीन, उन्होंने सब मानव प्राणी और भूमि के जानवर और आकाश के पक्षियों को कर दिया है. वे जहां कहीं भी रहते हैं, परमेश्वर ने आपको उनके ऊपर शासक ठहराया है. मूर्ति के सोने का वह सिर आप ही हैं.
ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.
39 “आपके बाद एक दूसरे राज्य का उदय होगा जो आपके राज्य से निचले स्तर का होगा. उसके बाद, एक तीसरे राज्य का उदय होगा, जो कांसे का प्रतिरूप होगा, जिसका शासन संपूर्ण पृथ्वी पर होगा.
“ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.
40 आखिरी में, एक चौथा राज्य होगा जो लोहे की तरह मजबूत होगा—क्योंकि लोहा सब चीज़ों को तोड़ता और चूर-चूर कर देता है—और जैसे कि लोहा चीज़ों को तोड़कर टुकड़े-टुकड़े कर देता है, वैसे ही यह राज्य भी दूसरे सभी राज्यों को कुचलकर टुकड़े कर देगा.
ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.
41 जैसा कि आपने देखा कि पांव और उंगलियां कुछ सेंके गये मिट्टी और कुछ लोहे की थीं, इसलिये यह एक विभाजित राज्य होगा; फिर भी इसमें कुछ लोहे का बल होगा, जैसा कि आपने लोहे को मिट्टी के साथ मिला हुआ देखा.
ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.
42 जैसे कि पांव की उंगलियां कुछ लोहा और कुछ मिट्टी की थी, इसलिये यह राज्य कुछ तो मजबूत और कुछ निर्बल होगा.
ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ, ಅರ್ಧ ಮಣ್ಣಿನಿಂದಲೂ ಮಾಡಿದ ಹಾಗೆ, ರಾಜ್ಯವು ಅರ್ಧ ಮುರಿದದ್ದಾಗಿಯೂ, ಅರ್ಧ ಬಲವಾದದ್ದಾಗಿಯೂ ಇರುವುದು.
43 और जैसा कि आपने लोहे को सेंके गये मिट्टी के साथ मिला हुआ देखा, वैसे ही लोगों का मिश्रण होगा और उनमें एकता न होगी, क्योंकि लोहा मिट्टी के साथ मेल नहीं खाता.
ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಮಿಶ್ರವಾಗಿರುವುದನ್ನು ನೋಡಿದ ಹಾಗೆ, ಜನರು ಮಿಶ್ರವಾಗಿರುವರು ಮತ್ತು ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ, ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವುದಿಲ್ಲ.
44 “उन राजाओं के समय में, स्वर्ग के परमेश्वर एक ऐसे राज्य को स्थापित करेंगे, जो कभी नष्ट न होगा और न ही इस पर किसी अन्य का शासन होगा. यह राज्य उन सब राज्यों को चूर-चूर कर देगा और उनका अंत कर देगा, पर यह स्वयं सदाकाल तक बना रहेगा.
“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.
45 यह उस चट्टान के दर्शन का अर्थ है जो मनुष्य के हाथों नहीं, किंतु अपने आप एक पहाड़ से टूटकर अलग हुई थी और जिसने लोहा, कांसा, मिट्टी, चांदी और सोना को टुकड़े-टुकड़े कर दिया था. “महान परमेश्वर ने राजा को दिखाया है कि भविष्य में क्या होनेवाला है. यह स्वप्न सत्य है तथा इसका अर्थ विश्वासयोग्य है.”
ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.
46 तब राजा नबूकदनेज्ज़र ने दानिएल को साष्टांग दंडवत किया और उसे आदर दिया और आज्ञा दी कि दानिएल को भेंट चढ़ाई जाय और उसके सामने सुगंधित धूप जलाया जाय.
ಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು.
47 राजा ने दानिएल से कहा, “निश्चित रूप से तुम्हारे परमेश्वर देवताओं के परमेश्वर और राजाओं के प्रभु और रहस्यों के प्रगटकर्ता हैं, क्योंकि तुम इस रहस्य का अर्थ बताने में योग्य ठहरे.”
ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.
48 तब राजा ने दानिएल को एक ऊंचे पद पर ठहराया और उसे बहुत सारे कीमती उपहार दिये. राजा ने उसे सारे बाबेल प्रदेश का शासक बनाया और बाबेल के सब बुद्धिमान लोगों के ऊपर उसे अधिकारी ठहराया.
ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.
49 और दानिएल के अनुरोध पर राजा ने शद्रख, मेशेख तथा अबेद-नगो को बाबेल प्रदेश पर प्रशासक नियुक्त कर दिया, परंतु दानिएल स्वयं राज-दरबार में बना रहा.
ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು.