< यशायाह 2 >

1 यहूदिया और येरूशलेम के विषय में आमोज़ के पुत्र यशायाह ने दर्शन देखा:
ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.
2 कि अंत के दिनों में वह पर्वत और पहाड़ जिस पर याहवेह का भवन है; उसे दृढ़ और ऊंचा किया जायेगा, और सब जाति के लोग बहती हुई नदी के समान उस ओर आएंगे.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
3 और कहेंगे, “आओ, हम याहवेह के पर्वत, याकोब के परमेश्वर के भवन को चलें. कि वह हमें अपने नियम सिखाएं, और हम उनके मार्गों पर चलें.” क्योंकि ज़ियोन से व्यवस्था निकलेगी, और येरूशलेम से याहवेह का वचन आएगा.
ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
4 परमेश्वर राज्यों के बीच न्याय करेंगे और लोगों की परेशानियां दूर करेंगे. तब वे अपनी तलवारों को पीट-पीटकर हल के फाल तथा अपने भालों को हंसिया बना लेंगे. एक देश दूसरे के विरुद्ध तलवार नहीं उठायेगा, तथा उन्हें फिर कभी लड़ने के लिए तैयार नहीं किया जाएगा.
ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
5 याकोब के लोग आओ, हम याहवेह के प्रकाश में चलें.
ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.
6 याहवेह, ने तो अपनी प्रजा, याकोब के वंश को छोड़ दिया है. क्योंकि वे पूर्णतः पूर्वी लोगों के समान हो गये; और फिलिस्तीनियों के समान उनकी सोच और काम हो गया है.
ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.
7 उनका देश भी सोना और चांदी से भरा है; और उनके पास धन की कमी नहीं. और उनका देश घोड़ों और रथों से भरा है.
ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.
8 उनका देश मूर्तियों से भरा है; जो अपने हाथों से बनाया हुआ है.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
9 और मनुष्य उसके सामने झुकते और प्रणाम करते हैं, इसलिये उन्हें माफ नहीं किया जाएगा.
ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.
10 याहवेह के डर तथा उनके प्रताप के तेज के कारण चट्टान में चले जाओ और छिप जाओ!
೧೦ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.
11 मनुष्यों का घमंड नीचा करके; याहवेह को ऊंचा किया जायेगा.
೧೧ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
12 क्योंकि हर घमंडी एवं अहंकारी व्यक्ति के लिए सर्वशक्तिमान याहवेह ने दिन ठहराया है, उस दिन उनका घमंड तोड़ दिया जाएगा,
೧೨ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.
13 और लबानोन के समस्त ऊंचे देवदारों, तथा बाशान के सब बांज वृक्षों पर,
೧೩ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,
14 समस्त ऊंचे पहाडों और ऊंची पहाड़ियों पर,
೧೪ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ,
15 समस्त ऊंचे गुम्मटों और सब शहरपनाहों पर और,
೧೫ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ,
16 तरशीश के सब जहाजों तथा सब सुंदर चित्रकारी पर.
೧೬ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.
17 जो मनुष्य का घमंड और अहंकार है दूर किया जाएगा; और केवल याहवेह ही ऊंचे पर विराजमान होगा,
೧೭ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
18 सब मूर्तियां नष्ट कर दी जाएंगी.
೧೮ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.
19 जब याहवेह पृथ्वी को कंपित करने के लिए उठेंगे तब उनके भय तथा प्रताप के तेज के कारण मनुष्य चट्टानों की गुफाओं में तथा भूमि के गड्ढों में जा छिपेंगे.
೧೯ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.
20 उस दिन मनुष्य अपनी सोने-चांदी की मूर्तियां जिन्हें उन्होंने बनाई थी, उन्हें छछूंदरों और चमगादड़ों के सामने फेंक देंगे.
೨೦ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
21 जब याहवेह पृथ्वी को कंपित करने के लिए उठेंगे तब उनके भय तथा उनके प्रताप के तेज के कारण, मनुष्य चट्टानों की गुफाओं में तथा चट्टानों में जा छिपेंगे.
೨೧ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.
22 तुम मनुष्यों से दूर रहो, जिनका सांस कुछ पल का है. जिनका कोई महत्व नहीं.
೨೨ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.

< यशायाह 2 >